Breaking News

ಜಿಲ್ಲೆ

ಆಕೆ’ಗೆ ತಾಳಿ- ‘ಈಕೆ’ಗೆ ತಾಳಿ ಭರವಸೆ: ಶ್ರೀಮಂತನ ಠಾಣೆಗೆ ಬಂದಳು ಪ್ರಿಯತಮೆ…!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ ಹಸಿರಿರುವಾಗಲೇ ಮತ್ತೊಂದು ಠಾಣೆಯಲ್ಲಿ ಇಂತಹದ್ದೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ತನ್ನ ಹೆಸರಿನಲ್ಲೇ ‘ಶ್ರೀಮಂತ’ ಎಂದು ಕೊಳ್ಳುವ ಆಸಾಮಿಯೇ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಆಗಾಗ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ, ಆಕೆಯೊಂದಿಗೆ ಎಲ್ಲವನ್ನೂ ಮುಗಿಸಿ, ಈಗ ಕೈ ತೊಳೆದುಕೊಳ್ಳಲು ಮುಂದಾಗಿದ್ದಾನಂತೆ. ಈ ವಿಷಯ ಗೊತ್ತಾದ …

Read More »

“ಖಾಕಿ” ಭರ್ಜರಿ ಬೇಟೆ: 16 ಲಕ್ಷದ ಚಿನ್ನಾಭರಣ ದೋಚಿದ್ದ ಕಿಡಿಗೇಡಿಗಳು ಅರೆಸ್ಟ್..! ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ವಶ

ಬಾಗಲಕೋಟೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ, ಮೂವರು ಕಿಡಿಗೇಡಿಗಳನ್ನು ಮುಧೋಳ “ಖಾಕಿ” ಭರ್ಜರಿ ಭರ್ಜರಿ ಬೇಟೆಯಾಡಿದ್ದಾರೆ. ಸಿದ್ಧು, ಸಿದ್ದಪ್ಪ ಜಿಮ್ಮಿ, ಅಡಿವೆವ್ವ ಹಾದಿಮನಿ, ಕಲ್ಮೇಶ , ಮಟ್ಯಾ, ಪುಟ್ಯಾ, ಪುಟ್ಟು , ಪುಟ್ಯಾ, ದುರ್ಗಪ್ಪ ರಾನವ್ವಗೋಳ , ಜಾನಮಟ್ಟಿ, ಮುತ್ತಪ್ಪ ಯಮನಪ್ಪ ಪೂಜಾರಿ ಬಂಧಿತ ಆರೋಪಿಗಳು, ಮುಧೋಳ ತಾಲೂಕಿನ ಮಳಲಿ ಗ್ರಾಮದ ಎಂದು ತಿಳಿದು ಬಂದಿದೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ಹಾಗೂ …

Read More »

ಪ್ರಿಯಕರ ತೊಡೆಯ ಮೇಲೆ ಒದ್ದಾಡಿ ಪ್ರಾಣ ಬಿಟ್ಟ ಮಹಿಳೆ

ವಿಜಯಪುರ : ಮದುವೆಯಾದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಹೆಣವಾಗಿ ಬಿದ್ದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದ ರೇಣುಕಾ ಝಳಕಿ(36) ಮೃತ ಮಹಿಳೆ. ರೇಣುಕಾ ಹಾಗೂ ಹಡಲಗೇರಿ ಗ್ರಾಮದ 40ವರ್ಷದ ಬಸವರಾಜ್ ಕಿಲಾರಹಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ರೇಣುಕಾಗೆ 3 ಮಕ್ಕಳು, ಬಸವರಾಜ್ ಗೆ 6 ಮಕ್ಕಳು, ಇಬ್ಬರಿಗೂ ಮದುವೆಯಾಗಿದ್ದರೂ ಅನೈತಿಕ‌ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರೂ ಬಿದಕುಂದಿ ಗ್ರಾಮದ ಹೊರವಲಯದಲ್ಲಿ ಸೇರಿ …

Read More »

25 ಲಕ್ಷ ಮನೆಗಳಿಗೆ ನಲ್ಲಿಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಂಗಳೂರು: ಈ ವರ್ಷ ‘ಜಲಜೀವನ್‌ ಮಿಷನ್‌’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …

Read More »

ಯಾರನ್ನು ಯಾರು ಬೆತ್ತಲೆ ಮಾಡುತ್ತಾರೋ?: ಕಾರಜೋಳ ವ್ಯಂಗ್ಯ

ಬೆಳಗಾವಿ: ‘ಅವ್ರು ಗೆದ್ದು ಬರಬೇಕಲ್ಲ. ಗೆದ್ದರೂ ಒಂದಾಗಬೇಕಲ್ಲ? ಎಲ್ಲರೂ ಕುಸ್ತಿ ಅಖಾಡದಲ್ಲಿದ್ದಾರೆ. ಒಬ್ಬನ ಚಡ್ಡಿ ಇನ್ನೊಬ್ಬನ ಕೈಯಲ್ಲಿದೆ. ಯಾರು ಯಾರನ್ನು ಬೆತ್ತಲೆ ಮಾಡುತ್ತಾರೋ ಗೊತ್ತಿಲ್ಲ. ಕುಸ್ತಿಯನ್ನು ನೋಡೋಣ’. – ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ‘ಮುಂದಿನ ಮುಖ್ಯಮಂತ್ರಿ’ ಚರ್ಚೆ ಬಗ್ಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ-ಡಾ.ಜಿ. ಪರಮೇಶ್ವರ ಸೇರಿ ಮೂರು ಪ್ರಬಲ ಗುಂಪುಗಳಿವೆ. …

Read More »

ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ

ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …

Read More »

ಅಕ್ರಮ ಸಂಗ್ರಹ: 2261 ಚೀಲ ರಸಗೊಬ್ಬರ ಪತ್ತೆ

ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಕಮತಗಿಯಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ ₹11.05 ಲಕ್ಷ ಮೌಲ್ಯದ 2261 ಚೀಲ ವಿವಿಧ ಬಗೆಯ ರಸಗೊಬ್ಬರವನ್ನು ಕೃಷಿ ಇಲಾಖೆಯ ವಿಚಕ್ಷಣಾ ತಂಡದವರು ಸೋಮವಾರ ವಶಪಡಿಸಿಕೊಂಡಿದ್ದಾರೆ ಕಮತಗಿಯ ವಿನಾಯಕ ಕೃಷಿ ಕೇಂದ್ರ ಹಾಗೂ ಅನ್ನದಾನೇಶ್ವರಿ ಕೃಷಿ ಸೇವಾ ಕೇಂದ್ರಗಳ ಹೆಸರಿನ ಉಗ್ರಾಣಗಳಲ್ಲಿ ರಸಗೊಬ್ಬರದ ಚೀಲಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ವಿಚಕ್ಷಣಾ ತಂಡದ ಸಹಾಯಕ ನಿರ್ದೇಶಕರಾದ ಬಿ.ಜಿ.ಮಾಳೇದ, …

Read More »

ಶೀಲ ಶಂಕಿಸಿ ಪತ್ನಿ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದ್ದು, ಆರೋಪಿ ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ನಿನ್ನೆ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು …

Read More »

‘KPSC’ ಗೆ ಇಬ್ಬರು ಸದಸ್ಯರುಗಳನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಸದಸ್ಯರುಗಳ ಸ್ಥಾನಕ್ಕೆ ಇಬ್ಬರನ್ನು ನೇಮಿಸಿ ರಾಜ್ಯಪಾಲ ವಜೂಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಅಧಿಕಾರಿ ಸದಸ್ಯರಾಗಿ ಡಾ. ಶಾಂತಾ ಹೊಸಮನಿ, ರಕ್ತನಿಧಿ ವೈದ್ಯಾಧಿಕಾರಿ, ಕೆ ಸಿ ಜನರಲ್ ಆಸ್ಪತ್ರೆ ಇವರನ್ನು, ಅಧಿಕಾರೇತರ ಸದಸ್ಯರಾಗಿ ಡಾ. ಹೆಚ್ ಎಸ್ ನರೇಂದ್ರ ಇವರನ್ನು ನೇಮಕಗೊಳಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಡಾ, ಆನಂದ್ ಕೆ ಸುತ್ತೋಲೆ …

Read More »

ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್‌ನ ಕುತ್ತಿಗೆ ಸೀಳಿ ಬರ್ಬರ ಕೊಲೆ!

ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್‌ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್‌ ಇನ್ನೋರ್ಚ ರೌಡಿ ಅನೀಸ್ ಎಂಬಾತನ …

Read More »