Breaking News

ಜಿಲ್ಲೆ

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …

Read More »

ಸಚಿವ ಮುರುಗೇಶ್ ನಿರಾಣಿಗೆ ಬಂಪರ್ ಆಫರ್..!

ಬೆಂಗಳೂರು,ಜೂ.20- ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದ ಪ್ರಭಾವಿ ನಾಯಕನಾಗಿ ಹೊರಹೊಮ್ಮುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಸದ್ಯದಲ್ಲೇ ಮಹತ್ವದ ಹುದ್ದೆ ಲಭಿಸಲಿದೆ ಎನ್ನಲಾಗುತ್ತಿದೆ.ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ವರಿಷ್ಠರು ಕಳೆದ ಎರಡು ತಿಂಗಳಿನಿಂದ ಮುರುಗೇಶ್ ನಿರಾಣಿ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಸಂಘಪರಿವಾರದ ಪ್ರಮುಖರ …

Read More »

ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಅಧಿಸೂಚನೆ ಪ್ರಕಟ

ಬೆಂಗಳೂರು, ಜೂನ್ 19: ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್‌ ಘೋಷಣೆಯಾಗುತ್ತಿದ್ದಂತೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್ 21ರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಎಲ್ಲ ಸಿಬ್ಬಂದಿ ಸಂಪೂರ್ಣವಾಗಿ ಹಾಜರಾಗಲು ಆದೇಶಿಸಲಾಗಿದೆ. ಉಳಿದ ಇಲಾಖೆಗಳ ಎಲ್ಲ ಗ್ರೂಪ್ ಎ ಅಧಿಕಾರಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ …

Read More »

ದಿಗ್ಗಜನಿಲ್ಲದ SRS ಟ್ರಾವೆಲ್ಸ್ ವಾರಸುದಾರನಿಲ್ಲದೆ ಎದುರಾಯ್ತು ಸಂಕಷ್ಟ?

ಬೆಂಗಳೂರು, ಜೂನ್ 20: ಏಷ್ಯಾ ಖಂಡದಲ್ಲಿಯೇ ಅತಿ ದೂರ ಪ್ರಯಾಣ ಸೇವೆ ಒದಗಿಸಿದ ಹೆಮ್ಮೆಯ ಸಂಸ್ಥೆ ಒಬ್ಬ ಕನ್ನಡಿಗ ಕಟ್ಟಿದ ಎಸ್‌ಆರ್‌ಎಸ್‌ ಟ್ರಾವೆಲ್ಸ್ ದು. ದಕ್ಷಿಣ ಭಾರತದ ದೈತ್ಯ ಸಾರಿಗೆ ಸೇವೆಯ ಕಂಪನಿ ಎಸ್‌ಆರ್‌ಎಸ್‌. ಸಾಮಾನ್ಯ ಸೇವೆಯಿಂದ ಐಶರಾಮಿ ಸೇವೆ ಒದಗಿಸುವ ಎಸ್‌ಆರ್‌ಎಸ್ ಟ್ರಾವೆಲ್ಸ್ ದಿಗ್ಗಜ ಕಳೆದುಕೊಂಡ ಬಳಿಕ ವಾರಸುದಾರನಿಲ್ಲದೇ ಅನಾಥವಾಗುವ ಹಾದಿ ಹಿಡಿದಿದೆ. ಎಸ್‌ಆರ್‌ಎಸ್‌ ದೈತ್ಯ ಕಂಪನಿ ಹುಟ್ಟು ಹಾಕಿದ ಮಾಗಡಿ ಮೂಲದ ಕೆ.ಟಿ ರಾಜಶೇಖರ್ ಅವರನ್ನು ಕೊರೊನಾ …

Read More »

ಕುಂದಾನಗರಿ ಬೆಳಗಾವಿಯಲ್ಲಿ ಶತಕದ ಗಡಿ ದಾಟಿದ ಪೆಟ್ರೋಲ್ ದರ!

ಬೆಳಗಾವಿ: ಒಂದೂವರೆ ತಿಂಗಳ ಕಾಲ ಲಾಕ್ ಡೌನ್ ಗ್ರಹವಾಸ ಅನುಭವಿಸಿ ಇನ್ನೇನು ಅನ್ ಲಾಕ್ ಆಗಿ ವಾಹನ ತೆಗೆದುಕೊಂಡು ಹೊರ ಬರಬೇಕೆಂಬ ಖುಷಿಯಲ್ಲಿದ್ದ‌ ಜನರಿಗೆ ಪೆಟ್ರೋಲ್ ದರ ಶಾಕ್ ನೀಡಿದ್ದು, ರವಿವಾರ ಕುಂದಾನಗರಿ ಬೆಳಗಾವಿಯಲ್ಲಿ ಪೆಟ್ರೋಲ್ ದರ ಶತಕದ ಗಡಿ ದಾಟಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ರವಿವಾರ ಬೆಳಗ್ಗೆ 7:00 ಗಂಟೆಗೆ ಬೆಳಗಾವಿಯಲ್ಲಿ ಪ್ರಕಟವಾದ ಪೆಟ್ರೋಲ್ ದರ ಪಟ್ಟಿಯಲ್ಲಿ ನೂರರ ಗಡಿ ದಾಟಿದೆ. …

Read More »

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಕಾಡಪ್ಪ ಪ್ರದಾನಿ ರಂಗಾಪಪುರೆ(48), ಹೆಣ್ಣುಮಕ್ಕಳಾದ ಕೀರ್ತಿ(18) ಹಾಗೂ ಸ್ಪೂರ್ತಿ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾರದ ಹಿಂದೆ ಚೆನ್ನವ್ವ ರಂಗಾಪುರೆ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.   …

Read More »

ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆ

ಬೆಳಗಾವಿ: ಭಾರಿ ಮಳೆಯಿಂದ ಕಾಕತಿ ಬಳಿ ಮಾರ್ಕಾಂಡೇಯ ನದಿ ನೀರುಪಾಲಾಗಿದ್ದ ರೈತ ಶವವಾಗಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ದರ್ಗಾ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಮಾರ್ಕಾಂಡೇಯ ನದಿಗೆ ಕಾಕತಿ ಬಳಿ ನಿರ್ಮಿಸಿದ್ದ ಸೇತುವೆ ಬಳಿ ಕಾಲು ತೊಳೆಯಲೆಂದು ಹೋಗಿದ್ದ ರೈತ ಸಿದ್ರಾಯಿ ದೊಡ್ಡರಾಮ ಸುತಗಟ್ಟಿ ನೀರಿನ ರಭಸಕ್ಕೆ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ರೈತನಿಗಾಗಿ ಎರಡು ದಿನಗಳಿಂದ ಎನ್ ಡಿ ಆರ್ ಎಫ್ ತಂಡ …

Read More »

ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಬೆಂಬಲ ನೀಡುವ ಕಾರ್ಯಕ್ರಮ

ಬೆಳಗಾವಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರಬಂದು ಅವರು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳಿಗೆ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಎಲ್ಲಾ ರೀತಿಯ ಬೆಂಬಲಗಳನ್ನು ನೀಡಲು ಮುಂದೆ ಬರುವ ವ್ಯಕ್ತಿಗಳು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರಾಗಿ ಕಾರ್ಯದರ್ಶಿ ಕರು ಎಂದು …

Read More »

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯ

ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆಯಂಡ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆಯ ನಡೆಗೆ ಖಂಡನೆ ವ್ಯಕ್ತವಾಗಿದೆ. ಸಂಸ್ಥೆಯು ಆನ್‌ಲೈನ್ ಮೂಲಕ ಇದೇ 22ರಿಂದ 6 ವಿದೇಶಿ ಭಾಷೆಗಳು, 6 ದೇಶಿಯ ಭಾಷೆಗಳ ಕಲಿಕಾ ತರಬೇತಿಯನ್ನು ಪ್ರಾರಂಭಿಸುತ್ತಿದೆ. ಇದರಲ್ಲಿ ಸಂಸತ್ತಿನ ಸದಸ್ಯರು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಸಕರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ವಿದೇಶಿ ಭಾಷೆಗಳಾದ ಫ್ರೆಂಚ್, ಜರ್ಮನ್, ಜಪಾನೀಸ್, …

Read More »

ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್

ಪಣಜಿ : ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೆಯೇ ಬಿಜೆಪಿಗೆ ಸೇರಿರುವ 10 ಜನ ಶಾಸಕರಿಗೆ ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ಗೋವಾದ ಮಡಗಾಂವ ಹಾಗೂ ಪಣಜಿ ಸಮೀಪದ ಸಂತಾಕ್ರೂಜ್‍ನಲ್ಲಿ ಉಚಿತ ಸಸಿ ವಿತರಿಸಿದ ನಂತರ ಸುದ್ಧಿಗಾರರಿಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು. ಕಾಂಗ್ರೇಸ್ ಪಕ್ಷದಿಂದ ಬಿಜೆಪಿ ಸೇರಿರುವ …

Read More »