Breaking News

ಜಿಲ್ಲೆ

ಕುರ್ಚಿ ದಾಹ ಬಿಡ್ರಿ, ಸರಿಯಾಗಿ ಕೆಲಸ ಮಾಡಿ: ಎಂ.ಬಿ.ಪಾಟೀಲ್ ಕಿಡಿ

ಹಾವೇರಿ: ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ನಿರ್ವಹಣೆ ಬಿಟ್ಟು ಅಧಿಕಾರ ದಾಹ ಪ್ರದರ್ಶನ ಮಾಡುತ್ತಿದ್ದಾರೆ. ಕುರ್ಚಿ ದಾಹ ಬಿಡ್ರಿ, ಸರಿಯಾಗಿ ಕೆಲಸ ಮಾಡಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ಮೇಳ ಇಲ್ಲ. ಸಿಎಂ ಬದಲಾವಣೆ ಮಾಡಬೇಕು ಅಂತಾರೆ. ಪರಸ್ಪರ ಸಹಕಾರವಿಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸೋ ಕೆಲಸ ಮಾಡಬೇಕು ಎಂದು ಎಂ.ಬಿ.ಪಾಟೀಲ್ ಅವರು ಸರ್ಕಾರದ ವಿರುದ್ಧ …

Read More »

ಸಹೋದರನ ಪುತ್ರನ ಹುಟ್ಟುಹಬ್ಬದ ಪ್ರಯುಕ್ತ ಹುಲಿ ದತ್ತು ಪಡೆದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ತಮ್ಮ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೋಮವಾರ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ. ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಅವರು ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು. ಲಾಕ್ ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, …

Read More »

ಹಾಸ್ಟೇಲಗಳಲ್ಲಿದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಮತ್ತು ಕೋವಿಡ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಮನವಿ 

  ವಿಜಯಪೂರ ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನಲ್ಲಿ ಇಂದು ಹಾಸ್ಟಲ್ ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಹಾಗೂ ಕೊವಿಡ್ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಹಶಿಲ್ದಾರರವರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಹುಲುಗಪ್ಪ ಚಲವಾದಿ 2020 ಮಾರ್ಚ ತಿಂಗಳಿಂದ ಇಲ್ಲಿಯವರೆಗೆ ವೇತನವನ್ನು ಪಾವತಿಸಬೇಕು ಸರ್ಕಾರವು ಈ ನೌಕರರಿಗೆ ಲಾಕಡೌನ …

Read More »

ನಾಳೆಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭ; ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ತಿಳಿಸಿದೆ.   ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂನ್ 15ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮಕ್ಕಳ ದಾಖಲಾತಿ ಆರಂಭಿಸಬೇಕು. ಜುಲೈ 30ರೊಳಗೆ ಮಕ್ಕಳ ದಾಖಲಾತಿ ಮುಗಿಸಬೇಕು ಹಾಗೂ ಜುಲೈ 1ರಿಂದ ಶಾಲೆಗಳನ್ನು …

Read More »

ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …

Read More »

ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ:

ಗೋಕಾಕ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಪೆಟ್ರೊಲ್ ಡೀಸೆಲ್ ಬೆಲೆಯನ್ನು ಏರಿಸುತ್ತಲೆ ಇದೆ ಇದಕ್ಕೆ ರಾಜ್ಯಾದ್ಯಂತ ಕಾಂಗ್ರೇಸ್ ಪಕ್ಷದ ನಾಯಕರು ಪ್ರತಿಭಟನೆ ಗಳನ್ನ ಮಾಡುತ್ತಾ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಂದು ಗೋಕಾಕ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿ ಕೊಂಡಿದ್ದು ಜನರು ಕೂಡ ಇದಕ್ಕೆ ಬೆಂಬಲ ನೀಡಿದ್ದಾರೆ. ಇನ್ನು ನರೇಂದ್ರ ಮೋದಿಯನ್ನ ವಿಭಿನ್ನ ರೀತಿಯಲ್ಲಿ ಟ್ರೊಲ್ ಕೂಡ ಮಾಡಿದ್ದಾರೆ. ಪೆಟ್ರೊಲ್ …

Read More »

ತಂದೆಗೆ ಕಾಡಿದ ಅನಾರೋಗ್ಯ.. ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಪುತ್ರನ ಬಂಧನ

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿದ್ದ ರೋಗಿಯ ಪುತ್ರನನ್ನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ತಂದೆ ಕೊರೊನಾ ಪಾಸಿಟಿವ್ ಬಂದು ಅಡ್ಮಿಟ್ ಆಗಿದ್ದರು. ಬಳಿಕ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಬಂದಿರುತ್ತದೆ. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶ್ವಾಸಕೋಶಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನ ಮುಂದುವರಿಸಿದ್ದರು. ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು, ರೋಗಿಯ ಕಂಡೀಷನ್ ಬಗ್ಗೆ ವಿವರಿಸುತ್ತಿದ್ದಾಗ ತಾಳ್ಮೆ ಕಳೆದುಕೊಂಡು ಹಲ್ಲೆ …

Read More »

ಹೃದಯ ತಜ್ಞ ಅಂತ್ಹೇಳಿ ಮಹಿಳೆಗೆ ಫೇಕ್​​ ಡಾಕ್ಟರ್​​ನಿಂದ ₹80 ಲಕ್ಷ ದೋಖಾ

ಬೆಂಗಳೂರು: ಹೃದಯ ತಜ್ಞ ಅಂತ ಮಹಿಳೆ ಮುಂದೆ ಪೋಸ್​​ ಕೊಟ್ಟಿದ್ದ ನಕಲಿ ವೈದ್ಯನೊಬ್ಬ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ದೋಖಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಬಿಸ್ ಹಾರ್ಮನ್ ಎಂಬಾತ ಮಹಿಳೆಗೆ ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಗಂಡನನ್ನು ಕಳೆದುಕೊಂಡಿದ್ದ 50 ವರ್ಷದ ಮಹಿಳೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂದರ್ಭದಲ್ಲಿ ಇನ್​​​ಸ್ಟಾಗ್ರಾಂನಲ್ಲಿ ಹೃದಯ ತಜ್ಞರ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಮಹಿಳೆಗೆ ವಂಚಕ ಮಾಬಿಸ್ ಹಾರ್ಮನ್ ಪ್ರೊಫೈಲ್ …

Read More »

ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಬೆಂಗಳೂರು: ನಟ ಸಂಚಾರಿ ವಿಜಯ್ ಅವರು ಕೋಮಾದಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಫುಲ್ ಲೈಫ್ ಸಪೋರ್ಟ್‍ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ. ಸಂಚಾರಿ ವಿಜಯ್ ಅವರ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ, ವಿಜಯ್ ಅವರಿಗೆ ರಾತ್ರಿ 11.45ರ ಸುಮಾರಿಗೆ ರಸ್ತೆ ಅಪಘಾತವಾಗಿದ್ದು, ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಿಕೊಂಡಾಗ ಪರಿಸ್ಥಿತಿ ತುಂಬಾ …

Read More »

ಬೆಳಗಾವಿ: ಪ್ರವಾಹ ಸಾಧ್ಯತೆ, ಹೋದ ವರ್ಷಕ್ಕಿಂತ ಹೆಚ್ಚು ಆತಂಕ!

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸಂಕಷ್ಟದ ನಡುವೆಯೇ ಪ್ರವಾಹ ಪರಿಸ್ಥಿತಿಯೂ ಜನರನ್ನು ಬಾಧಿಸುವ ಸಾಧ್ಯತೆಯನ್ನು ಜಿಲ್ಲಾಡಳಿತ ಅಂದಾಜಿಸಿದೆ. ಪ್ರವಾಹದಿಂದ 323 ಗ್ರಾಮಗಳ ಜನರಿಗೆ ತೊಂದರೆ ಆಗಬಹುದು ಎಂದು ಗುರುತಿಸಲಾಗಿತ್ತು. ಈ ಮುಂಗಾರಿನಲ್ಲಿ ಗ್ರಾಮಗಳ ಸಂಖ್ಯೆ ಹೆಚ್ಚಾಗಿದೆ. 377 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂಬ ವರದಿ ಬಂದಿದೆ. ಇದು ಸಾವಿರಾರು ಕುಟುಂಬಗಳು ಅತಂತ್ರವಾಗುವ ಆತಂಕವನ್ನೂ ತಂದೊಡ್ಡಿದೆ. 2019ರಲ್ಲಿ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಉಂಟಾಗಿದ್ದ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ 423 ಗ್ರಾಮ …

Read More »