Breaking News

ಜಿಲ್ಲೆ

ರಾಜ್ಯದಲ್ಲಿರುವ ಬಾಂಗ್ಲಾ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು : B.S.Y.

ಬೆಂಗಳೂರು : ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇತ್ತೀಚೆಗೆ ರಾಜ್ಯದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ …

Read More »

ಕೋವಿಡ್-೧೯ ಸಾಂಕ್ರಾಮಿಕಕ್ಕೆ ಬಲಿಯಾದ ತಂದೆ-ತಾಯಿಯರ ಮಕ್ಕಳಿಗೆ ಶುಲ್ಕ ವಿನಾಯಿತಿ: R.C.U.

ಬೆಳಗಾವಿ –  ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಕೋವಿಡ್-೧೯ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕವು ಸೋಂಕಿತರ ನೆರವಿಗೆ ನಿಂತಿರುವುದು, ಜನಕಲ್ಯಾಣ ಟ್ರಸ್ಟ್‌ದೊಂದಿಗೆ ಕೋವಿಡ್ ಕೇರ್ ಸೆಂಟರ್ ನಡೆಸುವ ಉಪಕ್ರಮದಲ್ಲಿ ಭಾಗಿಯಾಗಿರುವುದಲ್ಲದೆ ವಿಶ್ವವಿದ್ಯಾಲಯದ ದೀನದಯಾಳ ಅಧ್ಯಯನ ಪೀಠದ ವತಿಯಿಂದ ಮೂರು ದತ್ತು ಗ್ರಾಮಗಳಲ್ಲಿ ಆಹಾರ ಕಿಟ್‌ಗಳನ್ನು ವಿತರಿಸುವುದರ ಮೂಲಕ ತನ್ನ ಕಾಳಜಿಯನ್ನು ವ್ಯಕ್ತಪಡಿಸಿದೆ. ಅಲ್ಲದೆ, ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಎನ್ನುವ …

Read More »

19 ಜಿಲ್ಲೆಗಳಲ್ಲಿ ನಾಳೆಯಿಂದ ಏನೆಲ್ಲ ಲಭ್ಯ, ಏನೆಲ್ಲ ಅಲಭ್ಯ ,ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. …

Read More »

CD ಕೇಸ್​​; ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನರೇಶ್​, ಶ್ರವಣ್​​ಗೆ SIT ನೋಟಿಸ್​​

ಬೆಂಗಳೂರು: ಸಿ.ಡಿ ಕೇಸ್​ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್​ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್​​ಐಟಿ ನೋಟಿಸ್ ನೀಡಿದೆ. ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್​ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್​​ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು …

Read More »

ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ,ಸೀಲ್ ಡೌನ್ ಮಾಡಿದ ಅಧಿಕಾರಿಗಳು

ಬೆಳಗಾವಿ:  ಇಲ್ಲಿಯ ಟಿಳಕವಾಡಿಯಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಟಿಳಕವಾಡಿಯ ರಾಯ್ ರೋಡ್ ನ ಶ್ರೀಗಂಧ ಅಪಾರ್ಟ್ ಮೆಂಟ್ ನಲ್ಲಿ 7 ಜನರು ಕೋವಿಡ್ ನಿಂದ ಬಳಲುತ್ತಿದ್ದಾರೆ. ಒಂದೇ ಮನೆಯಲ್ಲಿ ನಾಲ್ವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೆ, ಅಪಾರ್ಟ್ ಮೆಂಟ್ ನ ಮತ್ತೊಂದು ಮನೆಯ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇಡೀ ಅಪಾರ್ಟ್ ಮೆಂಟ್ …

Read More »

ಜೂಜಾಟ: 18 ಆರೋಪಿಗಳ ಬಂಧನ

ಬೆಳಗಾವಿ: ಇಲ್ಲಿನ ಖಂಜರ್‌ ಗಲ್ಲಿಯಲ್ಲಿ ಶನಿವಾರ ಮಧ್ಯರಾತ್ರಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅದೇ ಗಲ್ಲಿಯ ಜುಬೇರ ಸುಬೇದಾರ, ಆರೀಫ ಖೊತ್ವಾಲ್, ಅಯಾಜ್ ಖತೀಬ, ಅಬ್ದುಲ್ ಸಲಾಮ್ ಬಾಳೇಕುಂದ್ರಿ, ಸೊಹೆಲ್ ಮುಲ್ಲಾ, ಷರೀಪ ಮುಲ್ಲಾ, ಅಬುತಾಲಿಪ್ ಶೇಕ್‌, ಆಸೀಫ್‌ ಸೈಯದ್, ಆಯೂಬಖಾನ ಪಠಾಣ, ವಾಸಿಂ ಸೌದಾಗರ, ಇಮ್ರಾನ ಪಟೇಲ, ವಾಸಿಂ ಅಲವಾಡಕರ, ಮುಸ್ತಾಕ ತಹಶೀಲ್ದಾರ, ಇಕ್ಬಾಲ ನರೇಗಲ್‌, ಫಿರೋಜ ಪಠಾಣ, ರಫೀಕ ತಹಶೀಲ್ದಾರ, ಸಲೀಂ …

Read More »

ಶಿಕ್ಷಣ ಸಚಿವರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು; ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದುಗೊಳಿಸಿ; ಸರ್ಕಾರಕ್ಕೆ ಪೋಷಕರ ಡೆಡ್ ಲೈನ್

ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಿಂದಾಗಿ ಸರಿಯಾಗಿ ತರಗತಿಗಳೇ ನಡೆದಿಲ್ಲ. ಪಾಠವನ್ನೂ ಮಾಡಲಾಗಿಲ್ಲ. ಹೀಗಿರುವಾಗ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸುವುದಾದರೂ ಹೇಗೆ? ಎಲ್ಲಿಯೂ ನಡೆಯದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಸಚಿವರು ತಮ್ಮ ಸ್ವಪ್ರತಿಷ್ಠೆಗಾಗಿ ನಮ್ಮಲ್ಲಿ ನಡೆಸುತ್ತಿರುವುದಾದರೂ ಯಾಕೆ ಎಂದು ಪೋಷಕರು …

Read More »

ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.

ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ,  ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …

Read More »

ಅಥಣಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಗ್ರಾಪಂ. ಸದಸ್ಯ ಸಾವು

ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …

Read More »

ಜೂನ್ 14ರಿಂದಲೇ ಇತರ ಜಿಲ್ಲೆಗಳಂತೆ ಬೆಳಗಾವಿಯಲ್ಲೂ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಎಂದು ಮನವಿ

ಬೆಳಗಾವಿ – ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ. ಆದರೆ ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳು ಸೋಮವಾರ (ಜೂ.14) ದಿಂದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಅಲ್ಲದೆ ಯಾವ …

Read More »