ಬೆಂಗಳೂರು : ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು. ವಿಡಿಯೋ ಕಾಲ್ ಮಾಡಿ ಬಾಂಗ್ಲಾದ ಸ್ನೇಹಿತರಿಗೆ ತೋರಿಸಿದ್ದ ಆರೋಪಿಗಳು..ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣದ ಮೊದಲ ಆರೋಪಿ ರಿದಾಯ್ ಬಾಬು …
Read More »ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು.
ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪ್ರೇಮಿಗಳ ವೈವಾಹಿಕ ಜೀವನ ದುರಂತ ಅಂತ್ಯ ಕಂಡಿದೆ. ಆತ್ಮಹತ್ಯೆಯಿಂದ ಪತ್ನಿ ಸಾವಿಗೀಡಾದ ಬೆನ್ನಿಗೇ ಪತಿಯೂ ನೇಣು ಹಾಕಿಕೊಂಡಿದ್ದಾನೆ. ಪತಿ ಪುನೀತ್ (21) ಹಾಗೂ ಹರ್ಷಿತಾ (19) ಮೃತಪಟ್ಟ ದಂಪತಿ. ಆತ್ಮಹತ್ಯೆ ಮಾಡಿಕೊಂಡಿರುವ ಸತಿ-ಪತಿ ಇಬ್ಬರೂ ಮಾಗಡಿ ಚೆನ್ನೇನಹಳ್ಳಿ ನಿವಾಸಿಗಳಾಗಿದ್ದು, ಮದುವೆ ಬಳಿಕ ಹೇರೋಹಳ್ಳಿಯಲ್ಲಿ ವಾಸವಾಗಿದ್ದರು. ಇಂದು ಸಂಜೆ ನಾಲ್ಕು ಗಂಟೆಗೆ ಪತಿ ಪುನೀತ್ ಮನೆಗೆ ಮರಳಿದಾಗ ಪತ್ನಿ ನೇಣು ಹಾಕಿಕೊಂಡಿದ್ದ ಸ್ಥಿತಿಯಲ್ಲಿ ಇರುವುದು …
Read More »ಜಿಂದಾಲ್ಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ: ಯತ್ನಾಳ್
ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ. ಪ್ರಧಾನಿ ಮೋದಿ ಸೇರಿ ಕೇಂದ್ರದ ನಾಯಕರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದೆವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ನಮ್ಮ ರಾಜ್ಯದ ನೆಲ ಜಲ ಮತ್ತು ನೈಸರ್ಗಿಕ ಸಂಪತ್ತು ಉಳಿಸಲು ನಾವು ಇತ್ತೀಚೆಗೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಸುಮಾರು 3660 ಎಕರೆ ಖನಿಜ ಸಂಪತ್ತು ಹೊಂದಿದ ಪ್ರತಿ ಎಕರೆಗೆ ಕೋಟ್ಯಂತರ ಬೆಲೆ …
Read More »ಲಕ್ಷ್ಮಿ ನಿವ್ಸ್ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿದ್ದಾರೆ, ಏನೇ ತಪ್ಪು ಸಂದೇಶ ಬಂದ್ರು ವಾಹಿನಿಯ ವೀಕ್ಷಕರು ತಪ್ಪು ತಿಳಿಯಬೇಡಿ…
ಎಲ್ಲಾ ಲಕ್ಷ್ಮಿ news ವೀಕ್ಷಕರಿಗೆ ನಮಸ್ಕಾರ .. ಒಂದು ವಿಷಾದದ ಸಂಗತಿ , ನಮ್ಮ ಹಾಗುವನಿಮ್ಮೆಲ್ಲರ್ ಗೋಕಾಕ ನ ಲಕ್ಷ್ಮಿ news ವಾಹಿನಿ ಫೇಸ್ಬುಕ್ ಪೇಜ ಅನ್ನ ಯಾರೋ ಕಿಡಿ ಗೆಡಿ ಗಳು ನಿನ್ನೆ ಹ್ಯಾಕ್ ಮಾಡಿದ್ದಾರೆ. ಹಾಗೂ ಅದರಲ್ಲಿ ಅಶ್ಲೀಲ ಚಿತ್ರ ಗಳನ್ನ ಹಾಕುತ್ತಿದ್ದಾರೆ, ದಯವಿಟ್ಟು ಯಾರು ವಾಹಿನಿಯ ಬಗ್ಗೆ ತಪ್ಪು ತಿಳುವಳಿಕೆ ಯನ್ನ ತಿಳಿಬೇಡಿ ಇದು ಯಾರೋ ಕುತಂತ್ರಿ ಗಳ ಕೆಲ್ಸ ಹಾಗೂ ತಾವು ಕಂಡಂತೆ ನಮ್ಮ …
Read More »ಯುವತಿಯ ಮೇಲೆ ಅತ್ಯಾಚಾರ,ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ಮೇ. 28: ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಗೆ ಚಿತ್ರಹಿಂಸೆ ನೀಡುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ. ಈ ಸಂಬಂಧ ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ರಾಮಮೂರ್ತಿನಗರದ ಎನ್ಆರ್ಐ ಬಡಾವಣೆಯಲ್ಲಿ ಕಳೆದ ಹತ್ತು ದಿನಗಳ ಹಿಂದೆ ಈ ಘಟನೆ ನಡೆದಿದೆ. …
Read More »ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ: ಒಂದು ಡೋಸ್ ಕೊರೊನಾ ಲಸಿಕೆಗೆ 200 ರೂ. ಸೇವಾ ಶುಲ್ಕ!
ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಿಸುವ ಖಾಸಗಿ ಆಸ್ಪತ್ರೆಗಳಲ್ಲಿ 200 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ಗುರುವಾರ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಲಸಿಕೆ ದರದ ಮೇಲೆ ಸೇವಾಶುಲ್ಕ ವಿಧಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರವು ಆರಂಭದಲ್ಲಿ 100 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಮಾತ್ರ ಅನುಮತಿ ನೀಡಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ …
Read More »ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ B.S.Y.
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಷಯದಲ್ಲಿ ಮೌನ ಕಾಪಾಡಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಈಗ ಮೌನ ಮುರಿದು ಕೊನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ವಿಧಾನ ಸೌಧದಲ್ಲಿ ಮಾತನಾಡಿದ ಅವರು, “ಪ್ರಸ್ತುತ, ನನ್ನ ಆದ್ಯತೆಗಳು COVID-19 ಸೋಂಕುಗಳ ನಿಯಂತ್ರಣದಲ್ಲಿದೆ. ಜನರ ಕಲ್ಯಾಣಕ್ಕೆ ಒತ್ತು ನೀಡುವುದು ನನ್ನ ಆದ್ಯತೆ. ಬೇರೆ ಯಾವುದೇ ಸಮಸ್ಯೆಗಳು ನನ್ನ ಮುಂದೆ ಇಲ್ಲ “ಎಂದು ಅವರು ಪ್ರತಿಕ್ರಿಯಿಸಿದರು. “ಯಾರು ದೆಹಲಿಗೆ ಹೋಗಿ ಹಿಂದಿರುಗಿದರೂ ಅವರು ತಮ್ಮ ಉತ್ತರಗಳನ್ನು ಪಡೆದಿದ್ದಾರೆ. COVID …
Read More »ಡಾ.ಪದ್ಮಜೀತ ಪಾಟೀಲ್ ಅಂಬ್ಯುಲೆನ್ಸ್ ಸೇವೆ: ಮನೆಯಿಂದ ಕೋವಿಡ್ ಕೇರ್ ಸೆಂಟರ್
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಯಾವದೇ ಆಸ್ಪತ್ರೆಗೆ ತೆರಳಲು ಉಚಿತ ಅಂಬ್ಯುಲೆನ್ಸ್ ಹಾಗು ಕೊರೊನಾದಿಂದ ಮೃತಪಟ್ಟ ಶವ ಸಾಗಿಸಲೂ ಪ್ರತ್ಯೇಕ ವಾಹನದ ಜೊತೆಗೆ ಆಕ್ಸಿಜನ್ ಸಹಿತ ವಾಹನವನ್ನೂ ಉಚಿತ ಸೇವೆ ಮಾಡಲು ಡಾ. ಪದ್ಮಜೀತ್ ನಾಡಗೌಡ ಪಾಟೀಲ ಫೌಂಡೇಶನ್ ಮುಂದಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಪದ್ಮಜೀತ್ ನಾಡಗೌಡ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತೇರದಾಳ ವಿಧಾನಸಭಾ ಕ್ಷೇತ್ರದ ಸರ್ವ ಜನತೆಗೆ ಉಚಿತವಾಗಿ …
Read More »ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ
ಬೆಂಗಳೂರು: ಜಿಂದಾಲ್ ಗೆ ಭೂಮಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಂದಾಲ್ ಗೆ ಭೂಮಿ ನೀಡುವ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ ಎಂದರು. ಜಿಂದಾಲ್ ಗೆ 3,667 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ಬಗ್ಗೆ …
Read More »ಜಿಂದಾಲ್ ಜಮೀನು : ಕೋರ್ಟ್ ತೀರ್ಪಿನ ನಂತರ ತೀರ್ಮಾನ : ಸಚಿವ ಬಸವರಾಜ್ ಬೊಮ್ಮಾಯಿ
ಬೆಂಗಳೂರು : ಜಿಂದಾಲ್ ಸಂಸ್ಥೆಗೆ ಜಮೀನು ನೀಡುವುದು ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನ, ಈ ಸಂಪುಟ ಒಪ್ಪಿಗೆ ನೀಡಿಲ್ಲ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತಾಡಿರುವ ಅವರು, ಜಿಂದಾಲ್ ಗೆ ಜಮೀನು ನೀಡಿರುವ ಕುರಿತು ಮುಂದೆ ಏನ್ ಆಗುತ್ತದೆ ಎನ್ನುವುದರ ಬಗ್ಗೆ ಗೊತ್ತಿಲ್ಲ. ಈ ಕುರಿತು ಹೈ ಕೋರ್ಟ್ ನಲ್ಲಿ ಪಿಐಎಲ್ ಇದೆ. ಸುಪ್ರೀಂ ಕೋರ್ಟ್ ನಲ್ಲಿಯೂ ಪ್ರಕರಣ ಇದೆ. ಅವತ್ತು ಕರ್ನಾಟಕ ಹೈಕೋರ್ಟ್ ಹೇಳಿತ್ತು. …
Read More »
Laxmi News 24×7