Breaking News

ಜಿಲ್ಲೆ

ಕೋವಿಡ್ ಕಾರಣಕ್ಕೆ ಎಲ್ಲಾ ತಪ್ಪಿಗೂ ಕ್ಷಮೆ ಸಿಗದು: ಹೈಕೋರ್ಟ್

ಬೆಂಗಳೂರು: ಎಲ್ಲಾ ಲೋಪಕ್ಕೂ ಕೋವಿಡ್ ಕಾರಣ ನೀಡಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ನಿರೀಕ್ಷಣಾ ಜಾಮೀನು ಆದೇಶದಲ್ಲಿದ್ದ ನಿರ್ಬಂಧ ಸಡಿಲಿಕೆ ಕೋರಿದ್ದ ಅರ್ಜಿಯೊಂದನ್ನು ವಜಾಗೊಳಿಸಿದೆ. 10 ದಿನಗಳಲ್ಲಿ ಪೊಲೀಸ್ ಮುಂದೆ ಹಾಜರಾಗುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಮಂಡ್ಯ ನಿವಾಸಿ ದೇವರಾಜ್ ಎಂಬುವರ ವಿರುದ್ಧ ನಾಗಮಂಗಲ ಗ್ರಾಮಾಂತರ ಪೊಲೀಸರು ಸ್ಪೋಟಕ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು 2019ರ ನವೆಂಬರ್‌ 4ರಂದು ದಾಖಲಿಸಿದ್ದರು. ಟೈಫಾಯಿಡ್‌ನಿಂದ ಬಳಲುತ್ತಿದ್ದ ಕಾರಣ ನೀಡಿದ್ದಕ್ಕಾಗಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿತ್ತು. …

Read More »

ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

ಬೆಂಗಳೂರು: ಕೊರೊನಾ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇದೀಗ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಹೇಳಿದರು. ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ …

Read More »

ಪಚ್ಚೆ ನಂಜುಂಡಸ್ವಾಮಿ ಬರಹ – ಬಾಬಾಗೌಡರ ನೆನಪು| ಚಳವಳಿಕಾರನಾದ ಐಎಎಸ್ ಆಕಾಂಕ್ಷಿ

ಧಾರವಾಡ: ಐಎಎಸ್‌ ಅಧಿಕಾರಿಯಾಗಬೇಕು ಎಂಬ ಕನಸಿನೊಂದಿಗೆ ಅಧ್ಯಯನ ನಡೆಸುತ್ತಿದ್ದ ವ್ಯಕ್ತಿಯೊಳಗಿದ್ದ ಒಬ್ಬ ಚಳವಳಿಕಾರ ಹಾಗೂ ನಾಯಕ ಹೊರಜಗತ್ತಿಗೆ ಪರಿಚಯಗೊಂಡಿದ್ದೇ ರೈತ ಹೋರಾಟದ ಮೂಲಕ. ಅಂಥ ಒಬ್ಬ ಮೇರು ವ್ಯಕ್ತಿ ರೈತನಾಯಕನಾಗಿ, ಶಾಸಕನಾಗಿ, ಕೇಂದ್ರ ಸಚಿವರಗಿ ರೈತಕುಲಕ್ಕಾಗಿ ಮಾಡಿದ ಕೆಲಸ ಅನನ್ಯ. ಆದರೆ ಜನರ ಕಲ್ಯಾಣಕ್ಕಾಗಿ ಅವರ ಜ್ಞಾನವನ್ನು ಬಳಸಿಕೊಳ್ಳಬೇಕಾಗಿದ್ದ ರಾಜಕೀಯ ಪಕ್ಷಗಳು, ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದು ನಿಜಕ್ಕೂ ಬೇಸರ. ಆ ಅಪ್ರತಿಮ ಹೋರಾಟಗಾರ ಬಾಬಾಗೌಡ ಪಾಟೀಲ ಅವರು ಇಂದು ನಮ್ಮೊಂದಿಗೆ …

Read More »

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ಕಠಿಣ ನಿಯಮ: ಖಾಕಿಪಡೆ ಹೈ ಅಲರ್ಟ್, ಹಲವರು ವಶಕ್ಕೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರ ಅಬ್ಬರವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ನ್ನು ನಿನ್ನೆ ವಿಸ್ತರಿಸಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿತು. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮನೆಯ ಹತ್ತಿರದ ಅಂಗಡಿಗಳಿಗೆ, ಸ್ಥಳಗಳಿಗೆ ನಾಗರಿಕರಿಗೆ ಅಗತ್ಯ ಕೆಲಸಗಳಿಗೆ ಹೋಗಲು ಮಾತ್ರ ಸರ್ಕಾರ ಅವಕಾಶ ನೀಡಿದ್ದು ಅನಗತ್ಯವಾಗಿ ರಸ್ತೆಯಲ್ಲಿ ನಡೆದುಕೊಂಡು, ವಾಹನಗಳಲ್ಲಿ ಓಡಾಡುವವರನ್ನು ವಶಕ್ಕೆ ಪಡೆದು …

Read More »

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಹಿರಿಯ ಅಧಿಕಾರಿಗಳೇ ಕಾರ್ಯಾಚರಣೆಗಿಳಿದಿದ್ದಾರೆ.

ಬೆಳಗಾವಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಇಂದಿನಿಂದಲೇ ಕಠಿಣ ರೂಲ್ಸ್ ಗಳು ಜಾರಿಗೆ ಬಂದಿವೆ. ಕಟ್ಟುನಿಟ್ಟಿನ ಲಾಕ್ ಡೌನ್ ಗೆ ಸಿಎಂ ಯಡಿಯೂರಪ್ಪ ಸೂಚಿಸಿದ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳಗಾವಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಂಪೂರ್ಣ  ಲಾಕ್ ಡೌನ್ ಜಾರಿಯಾಗಿದ್ದು, ಹಾಲು, ಔಷಧ ಹೊರತುಪಡಿಸಿ ಬೇರೆ ಯಾವುದಕ್ಕೂ ಅವಕಾಸ ನೀಡಲಾಗಿಲ್ಲ. ಆಸ್ಪತ್ರೆಗೆ ತೆರಳುವವರು ಮಾತ್ರ ರಸ್ತೆಗೆ ಇಳಿಯಲು …

Read More »

ಸಂವಾದ ; ಕಣ್ಣೀರು ಹೇಡಿಯ ಅಸ್ತ್ರ ಎಂದ ಕಾಂಗ್ರೆಸ್‌

ಬೆಂಗಳೂರು, : ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, “ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ. ಎದುರಿಗಿದ್ದ ಕ್ಯಾಮೆರಾ ಹಾಗೂ ಟೆಲಿಪ್ರಾಂಪ್ಟರ್‌ ನೋಡಿಕೊಂಡು ಕಣ್ಣೀರು ಸುರಿಸುವುದು ಅದ್ಬುತ ನಟನಾ ಕೌಶಲ್ಯ! @narendramodi ಅವರೇ, ಜನತೆಗೆ ಬೇಕಿರುವುದು ನಿಮ್ಮ ಕಣ್ಣೀರಲ್ಲ””ಆಕ್ಸಿಜನ್, ಲಸಿಕೆ, ವೈದ್ಯಕೀಯ ವ್ಯವಸ್ಥೆ, ಚಿಕಿತ್ಸೆ, ಆರ್ಥಿಕ ನೆರವು. ಇದ್ಯಾವುದನ್ನೂ ನೀಡದೆ ಎರಡು …

Read More »

ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ

ಬೆಂಗಳೂರು: ದೇಶದ ಸಾರಿಗೆ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ. ರಾಜಶೇಖರ್ (78) ಶುಕ್ರವಾರ ನಿಧನರಾದರು. ಮಾಗಡಿ ಮೂಲದ ರಾಜಶೇಖರ್ ಅವರು ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದು ಎಂದೇ ಗುರುತಿಸಿಕೊಂಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆ ಸ್ಥಾಪಿಸಿದ್ದರು. ಇದಕ್ಕೂ ಮುನ್ನ ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದರು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ …

Read More »

ಶಾಲಾ, ಕಾಲೇಜು ಶುಲ್ಕ ಕಡಿತಗೊಳಿಸಿ- ಸಿಎಂ ಬಿಎಸ್‍ವೈಗೆ ನಟ ಕಿರಣ್ ರಾಜ್ ಮನವಿ

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿ ಇರುವುದರಿಂದ ಶಾಲಾ-ಕಾಲೇಜುಗಳ ಶುಲ್ಕವನ್ನು ಕಡಿಮೆಗೊಳಿಸುವಂತೆ ನಟ ಕಿರಣ್ ರಾಜ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೆ ಇದೀಗ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಪೋಷಕರು ಜೀವನ ನಡೆಸಲು ಕೂಡ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಮಕ್ಕಳ ಶಾಲಾ ಕಾಲೇಜಿನ ಪೂರ್ತಿ ಶುಲ್ಕವನ್ನು ಪಾವತಿಸಲು ಪೋಷಕರು ಕಷ್ಟಪಡುತ್ತಿದ್ದಾರೆ. ಅಲ್ಲದೆ ಶಾಲಾ ಆಡಳಿತ …

Read More »

ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ

ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ     ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …

Read More »

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.: B.S.Y.

ಬೆಂಗಳೂರು – ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ.

Read More »