Breaking News

ಜಿಲ್ಲೆ

ಬೈಕ್ ರೈಡರ್ಸ್ ಸಹೋದರರು ಇದೀಗ ಅಂಬುಲೆನ್ಸ್ ಡ್ರೈವರ್ಸ್

ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಜನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಕಷ್ಟವನ್ನು ನೋಡಲಾಗದೆ ನಗರದ ಇಬ್ಬರು ಹವ್ಯಾಸಿ ಬೈಕ್ ರೈಡರ್ಸ್ ಸಹೋದರರು ಅಂಬುಲೆನ್ಸ್ ಡ್ರೈವರ್‍ ಗಳಾಗಿ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಸಹೋದರರಾದ ಮುರ್ತಾಜಾ ಜುನೈದ್ ಮತ್ತು ಮುತೀಬ್ ಜೊಹೆಬ್ ಹವ್ಯಾಸಿ ಬೈಕ್ ರೈಡರ್ಸ್ ಆಗಿ ಹಲವು ಊರುಗಳನ್ನು ಸುತ್ತಿದ್ದಾರೆ. ಆದರೆ ಇದೀಗ ಕೊರೊನಾ ಎರಡನೇ ಅಲೆಯಿಂದ ಜನ ಅನುಭವಿಸುತ್ತಿರುವ ಕಷ್ಟವನ್ನು ನೋಡಿ ಜನರ ಸೇವೆ ಮಾಡಲು …

Read More »

ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪ್ಯಾಕೇಜ್ ಘೋಷಣೆ, ಕಳೆದ ವರ್ಷ ಘೋಷಣೆ ಮಾಡಿದ್ದೇ ಯಾರ ಕೈಸೇರಿಲ್ಲ: ಡಿಕೆಶಿ

ಬೆಂಗಳೂರು: ಕಳೆದ ಬಾರಿ ಹೀಗೆ ಲಾಕ್‍ಡೌನ್ ಪ್ಯಾಕೇಜ್ ಘೋಷಣೆ ಮಾಡಿದರು. ಸರಿಯಾಗಿ ಹಣ ಕೊಡಲಿಲ್ಲ. ಈಗ ಸರಿಯಾಗಿ ಪ್ಯಾಕೇಜ್ ಹಂಚಿಕೆ ಮಾಡ್ತಾರೆ ಅನ್ನೋ ಗ್ಯಾರಂಟಿ ಇಲ್ಲಾ ಎಂದು ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಸಾವಿರ ಪಂಚಾಯ್ತಿ ಮೂಲಕ ಕೊಡಬೇಕು. ಇದು ಕೊಡಬೇಕು ಅಂತ ಕೊಟ್ಟಿರೋದಲ್ಲ. ನಾವೆಲ್ಲಾ ಒತ್ತಾಯ ಮಾಡಿದೆವು ಅಂತ ಏನೋ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಡವರ ಬಗ್ಗೆ …

Read More »

ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್​ಪಿನ್ ಶಿವಕುಮಾರ್​​ ಕೊರೋನಾಗೆ ಬಲಿ

ತುಮಕೂರು: ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್‌ನಿಂದ ಮಂಗಳವಾರ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು, ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. 2011ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಈತನ ವಿರುದ್ಧ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್‌ …

Read More »

ತ್ಯಾಜ್ಯ ವಿಲೇವಾರಿಗೆ ನಿರ್ಲಕ್ಷ್ಯ

ಎಂ.ಕೆ. ಹುಬ್ಬಳ್ಳಿ : ಇಲ್ಲಿ ತ್ಯಾಜ್ಯ ವಿಲೇವಾರಿಗೆ ನಿರ್ಲಕ್ಷ್ಯ ವಹಿಸಿರುವುದು ನಿವಾಸಿಗಳಿಗೆ ತೊಂದರೆಯಾಗಿ ಪರಿಣಮಿಸಿದೆ. ತ್ಯಾಜ್ಯ ವಿಲೇವಾರಿ ಘಟಕ ಇಲ್ಲದಿರುವುದೂ ತೊಡಕಾಗಿದೆ. ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳು ಕಸದಿಂದ ತುಂಬಿವೆ. ಅದರಿಂದ ಹೊರಸೂಸುತ್ತಿರುವ ದುರ್ನಾತ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಬೆಳಗಾವಿಯಿಂದ ಧಾರವಾಡ ಕಡೆಯ 1, 2, 3 ಮತ್ತು 4ನೇ ವಾರ್ಡ್‌ಗೆ ಒಳಪಡುವ ಗಾಂಧಿ ನಗರ, ಬಸವ ನಗರ, ಚನ್ನಮ್ಮ …

Read More »

ಬೆಂಗಳೂರಿನಲ್ಲಿ ರೆಮ್‌ಡೆಸಿವಿರ್‌ ನ ಖಾಲಿ ಬಾಟಲಿಯಲ್ಲಿ ಗ್ಲುಕೋಸ್ ತುಂಬಿಸಿ ಮಾರಾಟ ಮಾಡುತ್ತಿದ್ದ ಓರ್ವ ವೈದ್ಯ ಸಹಿತ ವಾರ್ಡ್‍ಬಾಯ್ ಬಂಧನ

ಬೆಂಗಳೂರು – ನಗರದಲ್ಲಿ ನಕಲಿ ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ಮಾರಾಟ ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯ. ಡಾ.ಸಾಗರ ಮತ್ತು ವಾರ್ಡ್‍ಬಾಯ್ ಕೃಷ್ಣ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ‘ರೋಹಿತ್’ ಎಂಬ ಹೆಸರಿನಲ್ಲಿ ಸರಕಾರದಿಂದ ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ತರಿಸುತ್ತಿದ್ದರು ಮತ್ತು ಅವುಗಳಲ್ಲಿ ಅರ್ಧವನ್ನು ರೋಗಿಗಳಿಗಾಗಿ ಬಳಸಲಾಗುತ್ತಿತ್ತು ಮತ್ತು ಉಳಿದವುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ಅಷ್ಟೇ ಅಲ್ಲ, ಅವರು ಖಾಲಿ ರೆಮ್‌ಡೆಸಿವಿರ್‌ ಬಾಟಲಿಗಳಲ್ಲಿ ಗ್ಲೂಕೋಸ್ ಅನ್ನು ತುಂಬಿಸಿ ೨೦,೦೦೦ ರೂಪಾಯಿಗೂ ಹೆಚ್ಚು ದರದಲ್ಲಿ ಮಾರಾಟ …

Read More »

ರೆಮ್ಡಿಸಿವರ್​ ಕಾಳಸಂತೆ: ಖಾಸಗಿ ಆಸ್ಪತ್ರೆ ಸ್ಟಾಫ್ ನರ್ಸ್​ ಅರೆಸ್ಟ್​

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಬಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮನು (26) ಬಂಧಿತ ಆರೋಪಿ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್​ ಆಗಿ ಕೆಲಸ ಮಾಡ್ತಿದ್ದ ಆರೋಪಿ, ರೆಮ್ಡಿಸಿವರ್ ಒಂದು ಡೋಸ್​ಗೆ ₹25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿದ್ದು, ಇಂದು ನಗರದ ಫೇಮಸ್​​ ಖಾಸಗಿ ಆಸ್ಪತ್ರೆ ಬಳಿ ಮಾರಾಟ ಮಾಡುತ್ತಿದ್ದ ವೇಳೆ ರೆಡ್​ಹ್ಯಾಂಡ್​ ಆಗಿ …

Read More »

ರಕ್ತದಾನ ಮಹಾದಾನ’ – ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ ತರುಣ್ ಸುಧೀರ್

ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಲಸಿಕೆ ಅಭಿಯಾನವೂ ಶುರುವಾಗಿದೆ.. ಆದ್ರೆ ಲಸಿಕೆ ಪಡೆಯುವುದಕ್ಕೂ ಮುನ್ನ ರಕ್ತದಾನ …

Read More »

ಸುಧಾಕರ್ ಅಯೋಗ್ಯ ಮಂತ್ರಿ: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್

ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅಯೋಗ್ಯ ಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ತೀವ್ರ ಏರಿಕೆಯಾಗುತ್ತಿರುವ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ನೀಡಿತ್ತು. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಬಂದರೂ ನಿರ್ಲಕ್ಷಿಸಲಾಯಿತು ಎಂದು ದೂರಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿಲ್ಲ. ಸಮಯ ವ್ಯರ್ಥ ಮಾಡುತ್ತ ಕಾಲ ಕಳೆದರು. ಅವರೊಬ್ಬ ಅಯೋಗ್ಯ ಮಂತ್ರಿ …

Read More »

ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ. ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »