Breaking News

ಜಿಲ್ಲೆ

ಒಂದು ಪರ್ಸೆಂಟ್ ಜನಕ್ಕೆ ವ್ಯಾಕ್ಸಿನ್ ಕೊಡಲು ಸಾಧ್ಯವಾಗಿಲ್ಲ ಯಾಕೆ?: ಹೈಕೋರ್ಟ್ ತರಾಟೆ

ಬೆಂಗಳೂರು, ಮೇ. 13: ರಾಜ್ಯದ ಜನತೆಗೆ ಯಾವಾಗ ವ್ಯಾಕ್ಸಿನ್ ಕೊಡ್ತೀರಿ ? 31 ಲಕ್ಷ ಮಂದಿಗೆ ಎರಡನೇ ಡೋಸ್ ವ್ಯಾಕ್ಸಿನ್ ಯಾವಾಗ ನೀಡ್ತೀರಾ? ನಿಮಗೆ ನೀಡಲು ಸಾಧ್ಯವಿಲ್ಲ ಎನ್ನುವುದಾದರೆ ಹೇಳಿ. ನಿಮ್ಮ ಹೇಳಿಕೆಯನ್ನು ಹಾಗೇ ನ್ಯಾಯಾಲಯ ದಾಖಲಿಸಿಕೊಳ್ಳುತ್ತದೆ ! ಕೊರೊನಾ ಎರಡನೇ ಅಲೆಗೆ ತುತ್ತಾಗಿರುವ ಜನರ ಆರೋಗ್ಯ ರಕ್ಷಣೆ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಎಡವಿದೆ. …

Read More »

ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ : ಕಾಂಗ್ರೆಸ್

ಬೆಂಗಳೂರು: ಕೊವೀಡ್ ನಿರ್ವಹಣೆಯ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಮಾಡುತ್ತಿರುವ ಟೀಕಾ ಪ್ರಹಾರವನ್ನು ಮುಂದುವರಿಸಿರುವ ಕಾಂಗ್ರೆಸ್ , ರಾಜ್ಯ ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು ಹಾಗೂ ಲಸಿಕೆ, ಆಮ್ಲಜನಕ ಮತ್ತು ಔಷಧಿಗಳ ಜೊತೆಗೆ ಕಾಣೆಯಾಗಿರುವ ಪ್ರಧಾನಿ ಎಂದು ಕಿಡಿಕಾರಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ” ಬಿಜೆಪಿಯಲ್ಲಿರುವುದು ತಿಕ್ಕಲು ಸಚಿವರು, ಪುಕ್ಕಲು ಸಂಸದರು, ತಿಕ್ಕಲು ಸಚಿವರಿಗೆ ಪರಿಜ್ಞಾನ, …

Read More »

ಮತ್ತೊಮ್ಮೆ ನಿರೀಕ್ಷೆ ಹುಸಿಯಾಗಿಸಿದ ಸರ್ಕಾರ; ವಿಶೇಷ ಪ್ಯಾಕೇಜ್ ಘೋಷಿಸದ ಸಿಎಂ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕಠಿಣ ಕ್ರಮಗಳಿಂದಾಗಿ ರಾಜ್ಯದಲ್ಲಿ ಹಲವರು ಸಂಕಷ್ಟಕ್ಕೀಡಾಗಿದ್ದು, ಬಡವರಿಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ನಿರೀಕ್ಷೆಯನ್ನು ಸರ್ಕಾರ ಮತ್ತೊಮ್ಮೆ ಹುಸಿಯಾಗಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಶೇಷ ಪ್ಯಾಕೇಜ್ ಬಗ್ಗೆ ಪರೋಕ್ಷವಾಗಿ ನಿರಾಕರಿಸಿದ್ದಾರೆ. ಯಾವುದೇ ಆರ್ಥಿಕ ಪ್ಯಾಕೇಜ್ ಪ್ರಸ್ತಾಪಿಸದ ಸಿಎಂ, ಕೊರೊನಾ ಹೆಚ್ಚಾಗುತ್ತಿರುವುದರಿಂದ ಸೋಂಕಿತರ ಜೀವ ಉಳಿಸುವುದು ಸರ್ಕಾರದ ಮೊದಲ ಆದ್ಯತೆ ಎಂದಿದ್ದಾರೆ. ಕಠಿಣ ಕ್ರಮ ಜಾರಿ ಮಾಡಿರುವುದರಿಂದ ಜನರು ತೊಂದರೆಗೀಡಾಗಿದ್ದಾರೆ ನಿಜ. …

Read More »

ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿ

ಬೆಂಗಳೂರು : ರಾಜ್ಯ ಮಾಡಿರುವ ಸಾಲದ ವಿಚಾರದಲ್ಲಿ ಬಿಜೆಪಿ ಸುಳ್ಳು ಅಭಿಪ್ರಾಯಗಳನ್ನು ರೂಪಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಸಾಲದ ಬಗ್ಗೆ ಅಂಕಿ-ಅಂಶ ಸಮೇತ ವಿವರ ನೀಡಿರುವ ಅವರು, ಹಿಂದಿನ ಮುಖ್ಯಮಂತ್ರಿಗಳು ಹೆಚ್ಚು ಸಾಲ ಮಾಡಿಬಿಟ್ಟಿದ್ದರು ಎಂದು ಅಪಪ್ರಚಾರ ನಿಲ್ಲಿಸಿ, ಬಡವರಿಗೆ ಕೂಡಲೇ ಆಹಾರ ಮತ್ತು ಆರ್ಥಿಕ ಪ್ಯಾಕೇಜು ಘೋಷಿಸಬೇಕೆಂದು ಮತ್ತು ರಾಜ್ಯದ ಆರ್ಥಿಕ ಸ್ಥಿತಿಯ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಮುಖ್ಯಮಂತ್ರಿ …

Read More »

ಇಂದು ಸಂಜೆ ಸಿಎಂ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಚೈನ್ ಲಿಂಕ್ ಕತ್ತರಿಸುವ ಸಲುವಾಗಿ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಆದರೆ ಈ ಲಾಕ್ ಡೌನ್ ಅವಧಿ ಮುಗಿಯುವ ಮೊದಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ವಿಷಯವನ್ನು ತಿಳಿಸಲಿದ್ದಾರೆ. ಹೌದು. ಇಂದು ಸಂಜೆ 5 ಗಂಟೆಗೆ ಬಿಎಸ್‍ವೈ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲ ಹುಟ್ಟಿಸಿದೆ. ಯಾಕಂದ್ರೆ ಲಾಕ್ ಡೌನ್ ಅವಧಿ ಪೂರ್ಣಗೊಳ್ಳುವ ಮೊದಲೇ ಸಿಎಂ ಸಚಿವರ ಜೊತೆ ಸಭೆ ನಡೆಸುತ್ತಿದ್ದಾರೆ. ಲಾಕ್ ಡೌನ್ …

Read More »

ರಾತ್ರಿ 2 ಗಂಟೆಗೆ ಆಕ್ಸಿಜನ್​ ತಂದುಕೊಟ್ಟ ರೇಣುಕಾಚಾರ್ಯ; 20 ರೋಗಿಗಳು ಅಪಾಯದಿಂದ ಪಾರು

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ವೈದ್ಯಕೀಯ ಆಕ್ಸಿಜನ್ ಖಾಲಿಯಾಗುವ ಹಂತ ತಲುಪಿದ್ದು, ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಂದ ರಾತ್ರಿ 2 ಗಂಟೆ ಸುಮಾರಿಗೆ ಆಕ್ಸಿಜನ್ ಪೂರೈಕೆ ಆಗಿದೆ. ಪಿಪಿಇ ಕಿಟ್ ಹಾಕಿಕೊಂಡು ವಾರ್ಡ್‌ಗೆ ಭೇಟಿ ನೀಡುವ ಸಲುವಾಗಿ ರೇಣುಕಾಚಾರ್ಯ ಆಸ್ಪತ್ರೆಗೆ ಬಂದಿದ್ದಾಗ ಮೆಡಿಕಲ್ ಆಕ್ಸಿಜನ್ ಖಾಲಿಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕೇವಲ 3 ಗಂಟೆಗಳಿಗೆ ಆಗುವಷ್ಟು ಆಕ್ಸಿಜನ್ ಮಾತ್ರ ಇದೆ, ಆಕ್ಸಿಜನ್ ಬೇಕೆಂದು ವೈದ್ಯರು ಶಾಸಕರಿಗೆ ತಿಳಿಸಿದ್ದರು. …

Read More »

ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು.: H.D.K.

ಬೆಂಗಳೂರು: ರಾಜ್ಯದಲ್ಲಿಯೂ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದ್ದು, ಕರ್ನಾಟಕಕ್ಕೆ 1,200 ಟನ್‌ ಆಮ್ಲಜನಕ ಪೂರೈಸುವಂತೆ ಕೋರ್ಟ್‌ ಈಗಾಗಲೇ ಆದೇಶಿಸಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ 120 ಟನ್‌ ಆಮ್ಲಜನಕ ಮಾತ್ರ ಪೂರೈಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ‘ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ?’ ಎಂದಿದ್ದಾರೆ.ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಕರ್ನಾಟಕಕ್ಕಿಂತ ಉತ್ತರ ಪ್ರದೇಶಕ್ಕೆ ಹೆಚ್ಚು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಯಾಗಿದೆ. …

Read More »

ಡಿಎಂಎಪ್ ನಿಧಿಯಲ್ಲಿ ಆಕ್ಸಿಜನ್ ಟ್ಯಾಂಕರ್ ಖರೀದಿ: ನಿರಾಣಿ ಕಾರ್ಯಶೈಲಿಗೆ ಕಟೀಲು ಮೆಚ್ಚುಗೆ

ಬೆಂಗಳೂರು: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು …

Read More »

ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಗಾಯದ ಮೇಲೆ ಬರೆ : ಕುರುಬೂರು ಶಾಂತಕುಮಾರ್

ಬೆಂಗಳೂರು : ರಸಗೊಬ್ಬರ ಬೆಲೆ ಏರಿಕೆ ಕೇಂದ್ರ ರಾಜ್ಯ ಸರ್ಕಾರಗಳ ಗೋಮುಖ ವ್ಯಾಘ್ರ ನಡವಳಿಕೆ. ಯಾವುದೇ ಕಾರಣಕ್ಕೂ ರಸಗೊಬ್ಬರ ಬೆಲೆ ಏರಿಕೆ ಮಾಡುವುದಿಲ್ಲ ಹಳೆಯ ದರದಲ್ಲಿಯೇ ರಸಗೊಬ್ಬರಗಳು ಮಾರಾಟವಾಗುತ್ತದೆ. ರೈತರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳುತ್ತಲೇ ಬೆಲೆ ಏರಿಕೆ ಮಾಡಿ ರೈತರನ್ನು ಮೋಸಗೊಳಿಸಿದ್ದಾರೆ. ಹೊಸ ದರ ನಿಗದಿಯಾಗಿದೆ ಡಿಎಪಿ ಪ್ರತಿ ಚೀಲಕ್ಕೆ 1200 ರಿಂದ ಏರಿಕೆ …

Read More »

ಕೊರೊನಾ ಸಂಕಷ್ಟದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ :ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು, ಮೇ 13-ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಸಂಬಂಧಿಸಿದ ಜಮೀನಿನ ರೈತರಿಗೆ ನೇರವಾಗಿ ಪರಿಹಾರ ಧನವನ್ನು ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಶಿವಮೊಗ್ಗ- ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ -13, ಮುಧುಗಿರಿ- ಆಂಧ್ರಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234, ಕೊಳ್ಳೆಗಾಲ- ಕೇರಳ …

Read More »