Breaking News

ಜಿಲ್ಲೆ

ಕೊರೊನಾ ಕೂಪವಾಯ್ತು ಬೆಂಗಳೂರು : ಇಂದು ಮತ್ತೆ ಕೊರೊನಾ ಬ್ಲಾಸ್ಟ್ Corona

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದೆ. ನಗರದ ಗಲ್ಲಿ ಗಲ್ಲಿಯಲ್ಲೂ ಕೊರೊನಾ ಕೇಸ್ ಗಳು ಪತ್ತೆಯಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಒಂದೇ ದಿನ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಮೆಟ್ರೋ ಮಂದಿಗೆ ಆಘಾತ ನೀಡಿದ್ದರೇ ಇಂದು ಮತ್ತೆ ಕೊರೊನಾ ಬ್ಲಾಸ್ಟ್ ಆಗುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ ಇಂದು 6574 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ಬೆಂಗಳೂರು ದಕ್ಷಿಣ ವಿಭಾಗದಲ್ಲೇ ಅತಿ ಹೆಚ್ಚು …

Read More »

”ಉತ್ತರ ಕರ್ನಾಟಕಕ್ಕೆ ಪ್ರಮುಖ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಕಾನೂನಾತ್ಮಕ ಹೋರಾಟ”

ಬೆಂಗಳೂರು, ಎ. 11: ಉತ್ತರ ಕರ್ನಾಟಕದ ಜನತೆಯ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಪ್ರಮುಖ ಇಲಾಖೆಯ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಬೇಕು. ಈ ಕುರಿತಂತೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ರೈತರ ಅಭಿವೃದ್ದಿ ಸಂಘದ ಅಧ್ಯಕ್ಷ ಯಾಸೀರ್ ಜವಳಿ, ನ್ಯಾಯವಾದಿ ಶೇಖ್ ಸೌದ್ ತಿಳಿಸಿದ್ದಾರೆ. ರವಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿಯೇ ರಾಜ್ಯ ಸರಕಾರ ಗೆಜೆಟ್ ಹೊರಡಿಸಿ ಅನೇಕ ಪ್ರಮುಖ ಇಲಾಖೆ ಕಚೇರಿಗಳನ್ನು …

Read More »

ಬಸವಕಲ್ಯಾಣದಲ್ಲಿ ಸಿಎಂ ಕಾರಿಗೆ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ

ಬೀದರ್ : ಉಪ ಚುನಾವಣೆ ಪ್ರಚಾರ ಹಿನ್ನೆಲೆ ಬಸವಕಲ್ಯಾಣ ನಗರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪ ಅವರ ಕಾರನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಹಾಗೂ ಕಾರ್ಯಕರ್ತರು ತಡೆದು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಈ ವೇಳೆ ಮುತ್ತಿಗೆ ತಡೆಯಲು ಪೊಲೀಸರು ಹರಸಾಹಸ ಪಟ್ಟರು. ನಗರಕ್ಕೆ ಸಿ.ಎಂ ಆಗಮಿಸುತ್ತಿದಂತೆ ಮಲ್ಲಿಕಾರ್ಜುನ ಖೂಬಾ ನಿವಾಸದ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ಸಿ‌ಎಂ ಸಂಚರಿಸುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಸಿ.ಎಂ …

Read More »

ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು: ಸಿಡಿ ಯುವತಿ?

ಬೆಂಗಳೂರು: ಇಂದು ಎಸ್‍ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಲು ಮುಂದಾದ ಸಿಡಿ ಯುವತಿ ಇದೀಗ ಮತ್ತೆ ಸಮಯಾವಕಾಶ ಕೇಳಿದ್ದಾರೆ. ಹೌದು. ಇದ್ದಕ್ಕಿದ್ದಂತೆ ಇಂದು ಸಿಡಿ ಯುವತಿ ಎಸ್‍ಐಟಿ ಅಧಿಕಾರಿಗಳ ಮುಂದೆ ಬಂದು, ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಹೇಳಿಕೆ ನೀಡಲು ಕೂಡ ಸಮಯವನ್ನು ಸಿಡಿ ಯುವತಿ ಕೇಳಿದ್ದಾರೆ. ವಕೀಲರು ಬಂದು ಹೇಳಿಕೆ …

Read More »

ಹನಿ ಟ್ರ್ಯಾಪ್ಗೆ ಬಳಸಿ ಕೊಳ್ಳಲಾಗಿದೆ ಎಂದುಉಲ್ಟಾ ಹೊಡೆದ್ರ ಸಿಡಿ ಲೇಡಿ.?

;ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬೀಗ್ ಟ್ವಿಸ್ಟ್ ಸಿಕ್ಕಿದೆ. ಯುವತಿ ಹೇಳಿಕೆಯಿಂದ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಸಿಡಿ ಲೇಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೊಡೆದಿದ್ದಾಳೆ. ಮತ್ತೊಮ್ಮೆ ಜಡ್ಜ್ ಮುಂದೆ ಹಾಜರು ಪಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ನನ್ನನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಂಡು ಈ ರೀತಿ ಕೃತ್ಯ ಎಸಲಾಗಿದ್ದು, ನರೇಶ್ ಗೌಡ , ಶ್ರವಣ್ ಅವರೇ ಕಾರಣ ಎಂದು ನೇರ ಆರೋಪ …

Read More »

ಶಮಂತ್ ಬದಲು ವೈಜಯಂತಿ ಮನೆಯಿಂದ ಹೊರಕ್ಕೆ- ಕಿಚ್ಚನ ಖಡಕ್ ಎಚ್ಚರಿಕೆ

ಬೆಂಗಳೂರು: ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದ ವೈಜಯಂತಿ ಅಡಿಗ ಈ ವಾರ ಎಲಿಮಿನೇಟ್ ಆಗಿದ್ದು, ಈ ಮೂಲಕ ಶಮಂತ್ ಸೇವ್ ಆಗಿದ್ದಾರೆ. ಕೇವಲ ನಾಲ್ಕೇ ದಿನಕ್ಕೆ ವೈಜಯಂತಿ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿರುವುದು ಅಚ್ಚರಿ ಮೂಡಿಸಿದ್ದು, ಇನ್ನೂ ಆಶ್ಚರ್ಯವೆಂಬಂತೆ ವೈಜಯಂತಿ ಈ ವಾರ ಮನೆಯಿಂದ ಎಲಿಮಿನೇಟ್ ಆಗಲು ನಾಮಿನೇಟ್ ಸಹ ಆಗಿರಲಿಲ್ಲ. ಹೀಗಿರುವಾಗ ತಾವೇ ಮನೆಯಿಂದ ಹೊರ ಬರುವ ನಿರ್ಧಾರವನ್ನು ವೈಜಯಂತಿ ಮಾಡಿದ್ದಾರೆ ಇದರಿಂದ …

Read More »

ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಅಂಟಿಕೊಂಡ ಸೋಂಕು!

ರಾಯಚೂರು : ರಾಜ್ಯದ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಸದ್ಯ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು. ಆದರೂ ಅವರಿಗೆ ಸೋಂಕು ಮೆತ್ತಿಕೊಂಡಿದೆ. ನನಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ …

Read More »

ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕರಾದ ಯು.ಟಿ. ಖಾದರ್ ಮತ್ತಿತರ ಮುಖಂಡರ ವಿರುದ್ಧ ಬಿಜೆಪಿ ವತಿಯಿಂದ ಇಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಸವಕಲ್ಯಾಣದ ಗಾಂಧಿವೃತ್ತದಲ್ಲಿ ಭಾಷಣ ಮಾಡುವ ವೇಳೆ “ನಗರ ಮತ್ತು ಗ್ರಾಮೀಣ ವಾಸಿಗಳ ಪ್ರತಿ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡುತ್ತೇನೆ” ಎಂದು ಮತದಾರರಿಗೆ ಆಮಿಷ ತೋರಿರುತ್ತಾರೆ. ಇದು ಚುನಾವಣಾ …

Read More »

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಾರಿಗೆ ನೌಕರರು : ಇಂದು ಡಿಸಿ, ತಹಶೀಲ್ದಾರ್ ಕಚೇರಿ ಮುಂದೆ ತಟ್ಟೆ, ಜಾಗಟೆ ಬಡಿದು ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ನಾ ಕೊಡೆ, ನಾ ಬಿಡೆ ಎನ್ನುವ ಸಂಘರ್ಷ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಿರತರನ್ನು ಮನವೊಲಿಸೋ ಪ್ರಯತ್ನಕ್ಕೆ ಇಳಿದಯಂತ ರಾಜ್ಯ ಸರ್ಕಾರ, ವಿವಿಧ ತಂತ್ರಗಾರಿಕೆ ಮೂಲಕ ನೌಕರರನ್ನು ಮುಷ್ಕರದಿಂದ ಸೇವೆಗೆ ಮರಳೋದಕ್ಕೆ ಪ್ರಯತ್ನಕ್ಕಿಳಿದಿದೆ. ಇದರ ಮಧ್ಯೆ ಇಂದಿನಿಂದ ರಾಜ್ಯ ಸರ್ಕಾರ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತೆ ತೀವ್ರಗೊಳಿಸಿದ್ದಾರೆ. ಇಂದಿನಿಂದ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿ …

Read More »

ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆ

ಬೆಳಗಾವಿ –  ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆಯನ್ನು ವಿಧಿಸಿ, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ|| ಕೆ. ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುವರ್ಣ ವಿಧಾನ ಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ, ಚಿಕ್ಕಪುಟ್ಟ ವಿಷಯಗಳಿಗೆ …

Read More »