Breaking News

ಜಿಲ್ಲೆ

ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆ

ಬೆಂಗಳೂರು, ಏಪ್ರಿಲ್ 10: ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.ಆಸ್ಪತ್ರೆಯಿಂದ ಇಂದು 3350 ಮಂದಿ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 980519 ಮಂದಿ ಡಿಸ್ಚಾರ್ಜ್ ಆಗಿರುವುದುಆಗಿ ತಿಳಿಸಿದ್ದಾರೆ. ಒಂದೇ ದಿನ 36 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 12,849 ಮಂದಿ ಮೃತಪಟ್ಟಿದ್ದಾರೆ. 61653 ಸಕ್ರಿಯ ಪ್ರಕರಣಗಳಿವೆ, ಒಟ್ಟು 1055040 ಪ್ರಕರಣಗಳಿವೆ. 405 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಾಗಲಕೋಟೆ 44, ಬಳ್ಳಾರಿ 62, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ …

Read More »

ನಮ್ಮನ್ನು ಅಧಿಕಾರಕ್ಕೆ ತಂದರೆ ಒಂದೇ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ ಮನೆ: ಕುಮಾರಸ್ವಾಮಿ

ಬೀದರ್, ಎ.10: ಯಾರು ರೈತರ ಪರವಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೋ ಅಂತ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ತಮ್ಮೆಲ್ಲರ ಕರ್ತವ್ಯವೆಂದು ನಾನು ಭಾವಿಸಿದ್ದೇನೆ. ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಟ್ಟರೆ ನನಗೆ ಶಕ್ತಿ ಕೊಟ್ಟಂತೆಯಾಗುತ್ತದೆ. ಅದು ಮುಂದಿನ ಚುನಾವಣೆಯಲ್ಲಿ ನಮಗೆ ಸಹಾಯಕವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿರವರ ಪರವಾಗಿ ಕ್ಷೇತ್ರದ ಕೋಟಮಾಳ, ಹುಲಸೂರು, ಬೇಲೂರ, ನಾರಾಯಣಪುರ, …

Read More »

ಕಾನೂನು ಸುವ್ಯವಸ್ಥೆಗೆ 10 ಸ್ಕಾರ್ಪಿಯೊ

ಕಲಬುರ್ಗಿ: ದೆಹಲಿಯ ನಿರ್ಭಯಾ ಘಟನೆ ಬಳಿಕ ನಗರ ಪ್ರದೇಶದಲ್ಲಿ ಮಹಿಳಾ ಸುರಕ್ಷತೆ ಸೇರಿದಂತೆ ಸಂಭವ ನೀಯ ಅವಘಡಗಳನ್ನು ತಡೆಯಲು ಕಲಬುರ್ಗಿ ಕಮಿಷನರೇಟ್‌ಗೆ ಗೃಹ ಇಲಾಖೆ 10 ಸುಸಜ್ಜಿತ ಸ್ಕಾರ್ಪಿಯೊ ಜೀಪ್‌ಗಳನ್ನು ಮಂಜೂರು ಮಾಡಿದೆ. ಕೆಲವೇ ದಿನಗಳಲ್ಲಿ ಅವು ಸೇವೆಗೆ ಸೇರ್ಪಡೆಗೊಳ್ಳಲಿವೆ. ಈ ವಾಹನಕ್ಕೆ ಜಿಪಿಎಸ್‌ ವ್ಯವಸ್ಥೆ ಇರಲಿದ್ದು, 112 ಸಂಖ್ಯೆಗೆ ಯಾರಾದರೂ ಕರೆ ಮಾಡಿದರೆ ಅದರ ವಿವರಗಳು ಬೆಂಗಳೂರಿನ ಕಂಟ್ರೋಲ್‌ ರೂಮ್‌ಗೆ ಹೋಗಲಿದೆ. ಅಲ್ಲಿಂದ ಸಮೀಪದ ವಾಹನದಲ್ಲಿರುವ ಕಂಪ್ಯೂಟರ್‌ ಪರದೆಯ …

Read More »

ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »

ರಜಾ ದಿನವೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲು ಡಿಕೆಶಿ ಮನವಿ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ರಜಾದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ …

Read More »

ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳ ವ್ಯರ್ಥ- ಇಬ್ಬರು ಆರೋಗ್ಯ ಸಿಬ್ಬಂದಿ ಅಮಾನತು

ಬೆಂಗಳೂರು: ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಯಲಹಂಕ ವಲಯದ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡದೆ ಟೆಸ್ಟಿಂಗ್ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದರು. ಅಲ್ಲದೆ ಹೆಚ್ಚು ಟೆಸ್ಟ್ ಮಾಡಿದಂತೆ ಲೆಕ್ಕ ನೀಡುತ್ತಿದ್ದರು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ದೃಶ್ಯಾವಳಿ ಗಮನಿಸಿದ ಆಧಾರದ ಮೇಲೆ ಇಬ್ಬರು ಸ್ವಾಬ್ ಕಲೆಕ್ಟರ್ ಗಳನ್ನು …

Read More »

ಅನುಕಂಪದ ನೌಕರಿ ನಿಯಮ ತಿದ್ದುಪಡಿಗೆ ಅಧಿಸೂಚನೆ: ಏನಿದೆ ಹೊಸ ನಿಯಮದಲ್ಲಿ?

ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದವರು ಮೃತಪಟ್ಟರೆ, ಅನುಕಂಪದ ಆಧಾರದಲ್ಲಿ ಅವಲಂಬಿತರಿಗೆ ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಿದ್ದುಪಡಿ ನಿಯಮದ ಪ್ರಕಾರ, ಸರ್ಕಾರಿ ನೌಕರ ಮೃತಪಟ್ಟರೆ ಆತನ ಜೊತೆ ವಾಸವಿದ್ದ ವಿಧವಾ ಪತ್ನಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ಅರ್ಹರಾಗುತ್ತಾರೆ. ನೇಮಕಾತಿಗೆ ಆಕೆಗೆ ಅರ್ಹತೆ ಇಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ …

Read More »

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು.

ಬೈಲಹೊಂಗಲ: ಲಿಂಗಾಯತ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು. ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಯತ್ನಾಳ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಚನ್ನಮ್ಮನ ಪುತ್ಥಳಿಗೆ ಪುಷ್ಪ ಮಾಲೆ ಹಾಕಿ ಕೇಸರಿ ತಿಲಕ ಹಚ್ಚಿಕೊಂಡು ಬಿಳಿ ಬಣ್ಣದ ಕುದುರೆ ಏರಿದ ಯತ್ನಾಳ, ‘ಜೈ …

Read More »

ಕೋಡಿಹಳ್ಳಿ, ಸಾರಿಗೆ ಸಿಬ್ಬಂದಿ ವಶಕ್ಕೆ ಪಡೆದಿದ್ದನ್ನು ಖಂಡಿಸುತ್ತೇನೆ – ಡಿಕೆಶಿ

ಬೆಳಗಾವಿ: ಇದು ಪ್ರಜಾಪ್ರಭುತ್ವ, ರೈತ ಮುಖಂಡ ಇರಬಹುದು,ಕಾರ್ಮಿಕ ಮುಖಂಡ ಇರಬಹುದು, ರಾಜಕೀಯದವರು ನಾವೂ ಸಹ ಸರ್ಕಾರ ವಿರುದ್ಧವೇ ಪ್ರತಿಭಟನೆ ಮಾಡೋದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಸಿಬ್ಬಂದಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಅವರು ಮಾಡಿದ ತಪ್ಪು ಹೇಳುವುದು ನಮ್ಮ ಕೆಲಸ, ಅವರನ್ನು ಹೊಗಳಕ್ಕಾಗುತ್ತಾ(?) ಸಾರಿಗೆ ಸಿಬ್ಬಂದಿ ಹಕ್ಕು ಮೊಟಕು …

Read More »

ಕೋವಿಡ್ ಹಗಲಲ್ಲಿ ಹರಡಲ್ಲ, ರಾತ್ರಿ ಮಾತ್ರ ಹರಡುತ್ತೆ ಎಂದ ವಿಜ್ಞಾನಿಯ ಫೋಟೋ ಕೊಡಿ : ಡಿಕೆಶಿ

ಬೆಳಗಾವಿ : ಕೋವಿಡ್ ಹಗಲಲ್ಲಿ ಹರಡುವುದಿಲ್ಲ, ರಾತ್ರಿ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದರೂ ತಿಳಿಸಿದರೆ ಅವರ ಫೋಟೊವನ್ನು ನಾವೂ ಇಟ್ಟುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಶನಿವಾರ ವ್ಯಂಗ್ಯವಾಡಿದ್ದಾರೆ. ರಾತ್ರಿ ಕರ್ಫ್ಯೂ ಮಾಡಿ ಆರ್ಥಿಕತೆ ಹಾಳು ಮಾಡುತ್ತಿದ್ದಾರೆ. ರಾತ್ರಿ ಕರ್ಫ್ಯೂ ಇಂದ ಜನರನ್ನು ಮಾನಸಿಕವಾಗಿ ಕುಂದಿಸುತ್ತಿದ್ದಾರೆ. ಹಗಲಲ್ಲಿ ಕೋವಿಡ್ ಹರಡುವುದಿಲ್ಲವೇ? ಇವೆಲ್ಲ ಅವೈಜ್ಞಾನಿಕ ನಿರ್ಧಾರಗಳು ಎಂದು ಬಿಜೆಪಿ ವಿರುದ್ಧ ಡಿಕೆಶಿ ಕಿಡಿ ಕಾರಿದ್ದಾರೆ. ಪತ್ರಕರ್ತರ …

Read More »