ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …
Read More »ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?
ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …
Read More »ಯಾವುದೇ ಕಾರಣದಿಂದ ಈ ಬಾರಿ ಬೆಳಗಾವಿಯನ್ನು ಬಿಜೆಪಿಗೆ ಬಿಟ್ಟುಕೊಡಬಾರದು.: ಕಾಂಗ್ರೆಸ್
ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಈ ಕುರಿತು ತಂತ್ರಗಾರಿಕೆಗೆ ಗುರುವಾರ ರಾತ್ರಿ ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿತು. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ ಮೊದಲಾದವರು ಸಭೆಯಲ್ಲಿದ್ದರು. ಡಿ.ಕೆ.ಶಿವಕುಮಾರ ಬುಧವಾರ ರಾತ್ರಿಯಿಂದ ಬೆಳಗಾವಿಯಲ್ಲಿದ್ದು, ಹಲವಾರು ಗಣ್ಯರನ್ನು ಭೇಟಿ ಮಾಡಿದ್ದಾರೆ. …
Read More »ಅನ್ಯಾಯದ ಬ್ರಹ್ಮಾಸ್ತ್ರ ಬೇಡ: ಮಾತುಕತೆಗೆ ಮುಂದಾಗಿ -ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು: ‘ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಅನ್ಯಾಯದ ಬ್ರಹ್ಮಾಸ್ತ್ರದ ಮಾರ್ಗಗಳನ್ನು ಸರ್ಕಾರ ಅನುಸರಿಸುತ್ತಿದೆ. ಅದನ್ನು ಬಿಟ್ಟು ಮಾತುಕತೆಗೆ ಮುಂದಾಗಬೇಕು’ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ‘ಸಾರಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗುತ್ತಿದೆ. ತರಬೇತಿ ಮತ್ತು ಪ್ರೊಬೇಷನರಿ ಅವಧಿಯಲ್ಲಿರುವ ಸಿಬ್ಬಂದಿಯನ್ನು ವಜಾಗೊಳಿಸಲಾಗುತ್ತಿದೆ. ನಿಗಮ ನೀಡಿರುವ ಮನೆಗಳನ್ನು ಖಾಲಿ ಮಾಡಿಸುವ ಪ್ರಯತ್ನಗಳೂ ನಡೆಯುತ್ತಿವೆ. ನೌಕರರನ್ನು ಮನೆಗಳಿಂದ ದಬ್ಬುವ ಪ್ರಯತ್ನ ಸರಿಯಲ್ಲ. ಇವೆಲ್ಲವೂ ಪ್ರಜಾಪ್ರಭುತ್ವ ವಿರೋಧಿ ನಡೆಗಳು’ ಎಂದು ಗುರುವಾರ …
Read More »ಏಪ್ರಿಲ್ 10ರಿಂದ ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’: ಸಿಎಂ ಬಿಎಸ್ವೈ
ಬೆಂಗಳೂರು: ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕಾರಣ ರಾಜಧಾನಿ ಬೆಂಗಳೂರು ನಗರ ಸೇರಿ ರಾಜ್ಯದ ಏಳು ಜಿಲ್ಲಾ ಕೇಂದ್ರ ಮತ್ತು ಮಣಿಪಾಲದಲ್ಲಿ ಏ. 10ರಿಂದ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಗುರುವಾರ ಸಂಜೆ ವಿಡಿಯೊ ಸಂವಾದದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಬೆಂಗಳೂರು ನಗರ, ಮೈಸೂರು, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ ನಗರದ ಜೊತೆಗೆ …
Read More »Covid-19 Karnataka Update: 50 ಸಾವಿರ ದಾಟಿದ ಸಕ್ರಿಯ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ಆರು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 6,570 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ತಲುಪಿದೆ. ಕಳೆದ ತಿಂಗಳು ರಾಜ್ಯದಲ್ಲಿ ಈ ವೇಳೆ ಕೇವಲ 6,815 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಈಗ ಕೇವಲ ಮೂರು ದಿನಗಳ ಅವಧಿಯಲ್ಲಿಯೇ 19,941 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ರಾಜ್ಯದ …
Read More »ಏಪ್ರಿಲ್ 10 ರಂದು ‘ಬೆಂಗಳೂರು ವಿವಿ’ ಪದವಿ ಪರೀಕ್ಷೆ ನಿಗದಿ
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ 1 ಮತ್ತು ಮೂರನೇ ವರ್ಷದ ಸ್ನಾತಕ ಪದ್ದತಿಯ ಬಿಕಾಂ, ಬಿಎ. ಬಿಎಸ್ಸಿ, ಬಿಬಿಎಂ, ಬಿಬಿಎ, ಬಿ ಹೆಚ್ ಎಂ ಹಾಗೂ ದೂರ ಶಿಕ್ಷಣ ಪರೀಕ್ಷೆಗಳು ಇದೇ ತಿಂಗಳ 10 ರಂದು ನಡೆಯಲಿದೆ. ಈ ಬಗ್ಗೆ ಬೆಂಗಳೂರು ವಿವಿ ಕುಲಸಚಿವರು ( ಮೌಲ್ಯಮಾಪನ) ಪ್ರಕಟಣೆ ಹೊರಡಿಸಿದ್ದು, ಇದೇ 7 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸಾರಿಗೆ ನೌಕರರ ಮುಷ್ಕರ …
Read More »ಹೈಕಮಾಂಡ್ ಎಲ್ಲವನ್ನ ಗಮನಿಸುತ್ತಿದೆ: ಯತ್ನಾಳ್ ವಿರುದ್ಧ ರಾಘವೇಂದ್ರ ಕಿಡಿ
ಚಿಕ್ಕಮಗಳೂರು: ಯಡಿಯೂರಪ್ಪನವರು ನನ್ನ ತಂದೆ, ವಿಜಯೇಂದ್ರ ನನ್ನ ತಮ್ಮನೇ ಆಗಿದ್ದರೂ ಕೂಡ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು, ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಅಲ್ಲದಿದ್ರು ಪಕ್ಷಕ್ಕೆ ಮುಜಗರವಾಗುವಂತಹ ಕೆಲಸ-ಕಾರ್ಯಗಳು ನಡೆಯುತ್ತಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸಮಯ-ಸಂದರ್ಭ ಬಂದಾಗ ಯಾರು-ಯಾವ ತೀರ್ಮಾನ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ ಎಂದು ಯತ್ನಾಳ್ ವಿರುದ್ಧ ಶಿವಮೊಗ್ಗ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, …
Read More »ಬೆಳಗಾವಿ ಸಬ ರಿಜಿಸ್ಟರ್ ಕಚೇರಿಯಲ್ಲಿ ಮತ್ತೆ ಲಂಚದ ಹಾವಳಿ ಸಂಕನ್ ಗೌಡ ಹಟಾವೋ ವಿಷ್ಣು ತೀರ್ಥ ಬುಲಾವೋ ಎಂದ ಜನತೆ
ಬೆಳಗಾವಿ: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ವಕೀಲರು ಸಬ್ ರಿಜಿಸ್ಟ್ರಾರ್ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ದುಡ್ಡು ಕೊಟ್ಟರೆ ಮಾತ್ರ ಜನಸಾಮಾನ್ಯರಿಗೆ ಕೆಲಸ ಮಾಡಿಕೊಡಲಾಗುತ್ತಿದೆ. ಏಜೆಂಟ್ ಗಳ ಹಾವಳಿ ಮಿತಿ ಮೀರಿದ್ದು, ಅಧಿಕಾರಿಗಳು ವಕೀಲರಿಗೂ ಕ್ಯಾರೇ ಎನ್ನುತ್ತಿಲ್ಲ. 5-50 ಸಾವಿರ ರೂಪಾಯಿವರೆಗೆ ಲಂಚ ಪಡೆಯುತ್ತಿದ್ದಾರೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ವಿವಾಹವಾಗುವ ಜೋಡಿಗಳಿಗೂ ರಜಿಸ್ಟರ್ ಮಾಡಿಕೊಳ್ಳಲು 5 ಸಾವಿರ ಲಂಚಕ್ಕೆ …
Read More »ನಮಗೆ ಲಿಂಗಾಯತ, ಮರಾಠಾ ಸೇರಿದಂತೆ ಎಲ್ಲಾ ಸಮುದಾಯದವರು ಒಂದೆ..: ಡಿ ಕೆ ಶಿವಕುಮಾರ್
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ಜೊತೆಗೆ ಸಭೆ ಮಾಡುತ್ತೇನೆ. ಈಗಾಗಲೇ ರೈತ ನಾಯಕ ಬಾಬಾಗೌಡ ಪಾಟೀಲ್, ಸೇರಿದಂತೆ ಎಲ್ಲರಿಗೂ ಭೇಟಿ ಆಗುತ್ತಿದ್ದೇನೆ.. ಅನೇಕ ಧರ್ಮ ಪೀಠದ ಸ್ವಾಮೀಜಿಗಳಿಗೆ ಭೇಟಿ ಮಾಡಿದ್ದೇನೆ . ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.. ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ರೂ ಕೇಂದ್ರ ಸರ್ಕಾರ ಅವರು ಜೊತೆಗೆ ಮಾತನಾಡಿಲ್ಲ. ಹೀಗಾಗಿ ರೈತರ ಆಕ್ರೋಶ …
Read More »
Laxmi News 24×7