ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಬಿಎಂಟಿಸಿ ಬಸ್ ಸಂಚಾರ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು 10 ಲಕ್ಷ ಪರಿಹಾರ ಕೇಳಿ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಬಿಎಂಟಿಸಿ ಎಂಡಿ ಶಿಖಾ ಅವರಿಗೆ ನೋಟೀಸ್ ಜಾರಿ ಮಾಡಿದ್ದಾಳೆ. ಜೆ.ಎಸ್.ಎಸ್. ಅಕಾಡೆಮಿ ಆಫ್ ಟೆಕ್ನಿಕಲ್ …
Read More »ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!
ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳು ಮತ್ತು ಕಡುಬಡವರ ವಿರೋಧಿಯಾಗಿದ್ದು, ಅದನ್ನು ಕಿತ್ತೊಗೆಯಲು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮುತ್ಸದ್ದಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು. ಶುಕ್ರವಾರ ದಂದು ಬೆಳಗಾವಿಯ ಕಮ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ರೈತರು ಕಾರ್ಮಿಕರು …
Read More »ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ
ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ. ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ ಏಪ್ರಿಲ್ 10- ಎರಡನೇ …
Read More »ಪಾರ್ಶ್ವವಾಯುಗೆ ತುತ್ತಾಗಿದ್ದ ವಿದ್ಯಾರ್ಥಿನಿಗೆ ಚಿನ್ನದ ಪದಕ
ದಾವಣಗೆರೆ: ಬ್ರೈನ್ ಸ್ಟ್ರೋಕ್ (ಮೆದುಳಿನ ಪಾರ್ಶ್ವವಾಯು) ಆಗಿದ್ದ ವಿದ್ಯಾರ್ಥಿನಿ ಹಾಸಿಗೆಯಲ್ಲಿ ಮಲಗಿದ್ದರೂ ಛಲ ಬಿಡದೇ ಓದಿ ಸ್ನಾತಕೋತ್ತರ ಪದವಿಯಲ್ಲಿ (ಇಂಗ್ಲಿಷ್) ಚಿನ್ನದ ಪದಕ ಪಡೆದಿದ್ದಾರೆ. ದಾವಣಗೆರೆ ವಿದ್ಯಾನಗರದ ನಿಸರ್ಗ ಕೆ.ಪಿ. ಈ ಸಾಧಕ ವಿದ್ಯಾರ್ಥಿನಿ. ಸಿವಿಲ್ ಕಂಟ್ರಾಕ್ಟರ್ ಪಂಚಾಕ್ಷರಿ-ಬಸಮ್ಮ ದಂಪತಿಯ ಮಗಳಾಗಿರುವ ನಿಸರ್ಗ ಅವರಿಗೆ 2020ರ ಏಪ್ರಿಲ್ನಲ್ಲಿ ಬ್ರೈನ್ ಸ್ಟ್ರೋಕ್ ಆಗಿತ್ತು. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಕಾರಣದಿಂದ ತಡವಾಗಿ ಅಂದರೆ ಸೆಪ್ಟೆಂಬರ್ನಲ್ಲಿ ಪರೀಕ್ಷೆ …
Read More »ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ 7 ಲಕ್ಷಕ್ಕೂ ಹೆಚ್ಚಿನ ಮತಗಳು ಸಿಕ್ಕಿ ಗೆಲ್ಲುತ್ತೇನೆ.: ಸತೀಶ್ ಜಾರಕಿಹೊಳಿ
ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …
Read More »ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?
ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …
Read More »ಯಾವುದೇ ಕಾರಣದಿಂದ ಈ ಬಾರಿ ಬೆಳಗಾವಿಯನ್ನು ಬಿಜೆಪಿಗೆ ಬಿಟ್ಟುಕೊಡಬಾರದು.: ಕಾಂಗ್ರೆಸ್
ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಈ ಕುರಿತು ತಂತ್ರಗಾರಿಕೆಗೆ ಗುರುವಾರ ರಾತ್ರಿ ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿತು. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ ಮೊದಲಾದವರು ಸಭೆಯಲ್ಲಿದ್ದರು. ಡಿ.ಕೆ.ಶಿವಕುಮಾರ ಬುಧವಾರ ರಾತ್ರಿಯಿಂದ ಬೆಳಗಾವಿಯಲ್ಲಿದ್ದು, ಹಲವಾರು ಗಣ್ಯರನ್ನು ಭೇಟಿ ಮಾಡಿದ್ದಾರೆ. …
Read More »ಅನ್ಯಾಯದ ಬ್ರಹ್ಮಾಸ್ತ್ರ ಬೇಡ: ಮಾತುಕತೆಗೆ ಮುಂದಾಗಿ -ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು: ‘ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಅನ್ಯಾಯದ ಬ್ರಹ್ಮಾಸ್ತ್ರದ ಮಾರ್ಗಗಳನ್ನು ಸರ್ಕಾರ ಅನುಸರಿಸುತ್ತಿದೆ. ಅದನ್ನು ಬಿಟ್ಟು ಮಾತುಕತೆಗೆ ಮುಂದಾಗಬೇಕು’ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ‘ಸಾರಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗುತ್ತಿದೆ. ತರಬೇತಿ ಮತ್ತು ಪ್ರೊಬೇಷನರಿ ಅವಧಿಯಲ್ಲಿರುವ ಸಿಬ್ಬಂದಿಯನ್ನು ವಜಾಗೊಳಿಸಲಾಗುತ್ತಿದೆ. ನಿಗಮ ನೀಡಿರುವ ಮನೆಗಳನ್ನು ಖಾಲಿ ಮಾಡಿಸುವ ಪ್ರಯತ್ನಗಳೂ ನಡೆಯುತ್ತಿವೆ. ನೌಕರರನ್ನು ಮನೆಗಳಿಂದ ದಬ್ಬುವ ಪ್ರಯತ್ನ ಸರಿಯಲ್ಲ. ಇವೆಲ್ಲವೂ ಪ್ರಜಾಪ್ರಭುತ್ವ ವಿರೋಧಿ ನಡೆಗಳು’ ಎಂದು ಗುರುವಾರ …
Read More »ಏಪ್ರಿಲ್ 10ರಿಂದ ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’: ಸಿಎಂ ಬಿಎಸ್ವೈ
ಬೆಂಗಳೂರು: ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕಾರಣ ರಾಜಧಾನಿ ಬೆಂಗಳೂರು ನಗರ ಸೇರಿ ರಾಜ್ಯದ ಏಳು ಜಿಲ್ಲಾ ಕೇಂದ್ರ ಮತ್ತು ಮಣಿಪಾಲದಲ್ಲಿ ಏ. 10ರಿಂದ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಗುರುವಾರ ಸಂಜೆ ವಿಡಿಯೊ ಸಂವಾದದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಬೆಂಗಳೂರು ನಗರ, ಮೈಸೂರು, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ ನಗರದ ಜೊತೆಗೆ …
Read More »Covid-19 Karnataka Update: 50 ಸಾವಿರ ದಾಟಿದ ಸಕ್ರಿಯ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ಆರು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 6,570 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ತಲುಪಿದೆ. ಕಳೆದ ತಿಂಗಳು ರಾಜ್ಯದಲ್ಲಿ ಈ ವೇಳೆ ಕೇವಲ 6,815 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಈಗ ಕೇವಲ ಮೂರು ದಿನಗಳ ಅವಧಿಯಲ್ಲಿಯೇ 19,941 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ರಾಜ್ಯದ …
Read More »
Laxmi News 24×7