ಕಲಬುರಗಿ : ಸಿಡಿ ಪ್ರಕರಣದ ಬಗ್ಗೆ ಏನು ಮಾತಾಡಬೇಕೋ ಅದನ್ನು ವಿಧಾನಸಭೆಯಲ್ಲೇ ಮಾತನಾಡಿದ್ದೇನೆ. ನಾನು ಈಗ ಚುನಾವಣೆಗೋಸ್ಕರ ಬಂದಿದ್ದೇನೆ. ಅದರ ಬಗ್ಗೆ ಮಾತನಾಡಲ್ಲ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬಿಜೆಪಿ ಸಂಸ್ಕೃತಿ ಸೇರಿದಂತೆ ಎಲ್ಲರ ಸಂಸ್ಕೃತಿಯನ್ನ ಜನ ಗಮನಿಸುತ್ತಿದ್ದಾರೆ. ಯುವತಿ ಪೋಷಕರಿಂದ ನನ್ನ ವಿರುದ್ಧ ಆರೋಪ ಮಾಡಿಸಲಾಗುತ್ತಿದೆ. ಅವರ ಸರ್ಕಾರ ಅವರ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡಿಸುತ್ತಿರಬಹುದು. ಅವರು ಏನಾದರೂ ಹೇಳಿಕೆ ಕೊಡಲಿ, ನಾನು ತಲೆ ಕೆಡಿಸಿಕೊಳ್ಳಲ್ಲ. …
Read More »ಸಿದ್ದರಾಮಯ್ಯ ಯಾರ ಗುಲಾಮರಾಗಿದ್ದಾರೆ ಎಂಬುದು ದೇಶಕ್ಕೇ ಗೊತ್ತಿದೆ’ : ಕಟೀಲ್
ಬೆಳಗಾವಿ,ಮಾ.30- ಸಿದ್ದರಾಮಯ್ಯನವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಅವರು ಯಾರ ಕಾಲು ಹಿಡಿದು ಮುಖ್ಯಮಂತ್ರಿಯಾಗಿದ್ದರು ಎಂಬುದೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಅವರು ಯಾರ ಗುಲಾಮರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.ಸಿ.ಡಿ ವಿಚಾರ ತನಿಖೆ ಹಂತದಲ್ಲಿದೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಸಿ.ಡಿಗಳು ಯಾವ ರೀತಿ ತನಿಖೆಯಾಗಿದೆ …
Read More »ಉಸ್ತುವಾರಿ ಸಚಿವರನ್ನು ಬದಲಿಸಿ ಸಿಎಂ ಆದೇಶ, ಇಲ್ಲಿದೆ ಡೀಟೇಲ್ಸ್
ಬೆಂಗಳೂರು,ಮಾ.30-ಆಡಳಿತದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉಸ್ತುವಾರಿ ಸಚಿವರ ಜಿಲ್ಲೆಗಳನ್ನು ಬದಲಾಯಿಸಿ ಅಸೂಚನೆ ಹೊರಡಿಸಲಿದ್ದಾರೆ. ಇದೇ ಮೊದಲ ಬಾರಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಜಿಲ್ಲೆಗಳಿಗೆ ಬೇರೊಬ್ಬ ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಸಚಿವರು ಹಳೇಮೈಸೂರು ಭಾಗದ ಉಸ್ತುವಾರಿಯಾಗಿ ನೇಮಕ ಮಾಡಲಿದ್ದಾರೆ.ಹಳೆ ಮೈಸೂರು ಭಾಗದ ಸಚಿವರನ್ನು ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಭಾಗಕ್ಕೆ, ಕರಾವಳಿ ಭಾಗದ ಸಚಿವರನ್ನು …
Read More »D ಪ್ರಕರಣ ಬೆಳಗಾವಿಯಲ್ಲಿB.S.Y.ಹೇಳಿದ್ದೇನು…?
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲೋಕಸಭಾ ಉಪಚುನಾವಣೆ ಹಿನ್ನೆಲೆಯಯಲ್ಲಿ ಬೆಳಗಾವಿಗೆ ಆಗಮಿಸಿರುವ ಸಿಎಂ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ. ಗೃಹ ಸಚಿವರು ಸಿಡಿ ಪ್ರಕರಣದ ಜವಾಬ್ದಾರಿ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದರು. ಸುಮ್ಮನೇ …
Read More »ಇನ್ನೊಂದು ಗಂಟೆಯಲ್ಲಿ ಯುವತಿ ಹಾಜರು :ವಕೀಲ ಜಗದೀಶ್
ಬೆಂಗಳೂರು: ಯುವತಿ ಹಾಜರುಪಡಿಸುವ ವಿಚಾರದಲ್ಲಿ ನ್ಯಾಯಾಲಯದ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಯುವತಿ ಹಾಜರು ಪಡಿಸಲಾಗುವುದು ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ತಿಳಿಸಿದ್ದಾರೆ. ತಮ್ಮ ನಿವಾಸದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್, ಸಂತ್ರಸ್ತ ಯುವತಿ ಕೋರ್ಟ್ ಮುಂದೆ ಹಾಜರಾಗಿ ಸಿಆರ್ಪಿಸಿ 164 ರಡಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ. ಆದರೆ, ಎಲ್ಲಿ ಮತ್ತು ಯಾವ ಸಮಯದಲ್ಲಿ ಹಾಜರುಪಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರಲಿಲ್ಲ. ಹೀಗಾಗಿ ಕೋರ್ಟ್ಗೆ ತೆರಳುವುದಾಗಿ …
Read More »ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದೆನ್ನಲಾದ ಸಿಡಿ ಪ್ರಕರಣದಲ್ಲಿನ ಯುವತಿ ಇಂದು ಯಾವುದೇ ಕ್ಷಣದಲ್ಲೂ ಕೋರ್ಟ್ ಗೆ ಹಾಜರಾಗುವ ಸಾಧ್ಯತೆಯಿದೆ. ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕೋರ್ಟ್ ಅನುಮತಿ ನೀಡಿದ್ದು, ಯಾವುದೇ ಕ್ಷಣದಲ್ಲೂ ಹಾಜರಾಗಬಹುದು ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ. 24ನೇ ಎಪಿಎಂಸಿ ನ್ಯಾಯಾಲಯದಲ್ಲಿ ಇಂದು , ಎಸ್ ಐಟಿ ಮತ್ತು ತನಿಖಾಧಿಕಾರಿ ಮೇಲೆ ಯುವತಿಗೆ ಯಾವುದೇ ನಂಬಿಕೆಯಿಲ್ಲ ಎಂದು ಜಗದೀಶ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಮೊದಲು ಯುವತಿಯ ಹೇಳಿಕೆ …
Read More »BMTC’ ನೌಕರರಿಗೆ ಶುಭಸುದ್ದಿ : ಆರೋಗ್ಯ ವಿಮೆಗೆ ನೌಕರರ ಕುಟುಂಬ ಸೇರ್ಪಡೆ
ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಎಂಟಿಸಿ ನೌಕರರಿಗೆ ಆರೋಗ್ಯ ವಿಮೆ ಮಾಡಿಸುವುದರ ಜೊತೆ ಆರೋಗ್ಯ ವಿಮಾ ಕಾರ್ಡ್ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. 28 ಸಾವಿರಕ್ಕೂ ಹೆಚ್ಚಿನ ನೌಕರರಿಗೂ ಇದು ಅನ್ವಯವಾಗಲಿದ್ದು, ಸರ್ಕಾರಿ ನೌಕರರಿಗಿರುವಂತೆ ಆರೋಗ್ಯ ವಿಮೆ ಮಾಡಿಸಲಾಗುತ್ತದೆ. ವಿಮೆಯಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಅಧಿಕಾರಿ ಮತ್ತು ನೌಕರರು ಪತಿ/ಪತ್ನಿ 24 ವರ್ಷದೊಳಗಿನ ಮಕ್ಕಳು ತಂದೆ ಮತ್ತು ತಾಯಿಯ ವಿವರ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಬಿಜೆಪಿ ನಾಯಕರೊಂದಿಗೆ ಆಗಮಿಸಿದ ಮಂಗಲಾ ಸುರೇಶ್ ಅಂಗಡಿ ಅವರು ಜಿಲ್ಲಾಧಿಕಾಆರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಂಗಲಾ ಸುರೇಶ್ ಅಂಗಡಿಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಅಭಯ …
Read More »ಸಿಡಿ ಪ್ರಕರಣ’ : ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೆ ಪರಿಗಣಿಸಬಾರದು : ಸಿಡಿಲೇಡಿ ಪೋಷಕರ ಮನವಿ
ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕೋರ್ಟ್ ಗೆ ಬಂದು ಹೇಳಿಕೆ ನೀಡುವಂತೆ 24 ನೇ ಎಸಿಎಂಎಂಕೋರ್ಟ್ ಅನುಮತಿ ನೀಡಿದೆ. ಆದರೆ ಯುವತಿ ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು ಎಂದು ಸಿಡಿ ಯುವತಿ ಪೋಷಕರು ಮನವಿ ಮಾಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪೋಷಕರು, ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಹೀಗಾಗಿ ನಮ್ಮ ಮಗಳು ಕೋರ್ಟ್ …
Read More »ಕೆಎಎಸ್ ಅಧಿಕಾರಿಗಳ ಸಂಘಕ್ಕೆ ಎಲಿಷ ಆಂಡ್ರೂಸ್ ಅಧ್ಯಕ್ಷ
ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಎಲಿಷ ಆಂಡ್ರೂಸ್ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಜರುಗಿದ್ದು, ಉಪಾಧ್ಯಕ್ಷರಾಗಿ ಅನಿತಾಲಕ್ಷ್ಮಿ, ಕಾರ್ಯದರ್ಶಿಯಾಗಿ ಸಿ.ಎಲ್. ಶಿವಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಬಿ.ಸಿ. ಶಿವಾನಂದಮೂರ್ತಿ ಮತ್ತು ಖಜಾಂಚಿಯಾಗಿ ಬಿ.ಎಸ್. ರಾಜೀವ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ.ಎನ್. ವರಪ್ರಸಾದ್ ರೆಡ್ಡಿ, ಎ. ದೇವರಾಜ್, ನಾಗೇಂದ್ರ ಎಫ್. ಹೊನ್ನಳ್ಳಿ, ಎಚ್. …
Read More »
Laxmi News 24×7