Breaking News

ಜಿಲ್ಲೆ

ಬೆಳಗಾವಿ ಲೋಕಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಬಿಜೆಪಿ ನಾಯಕರೊಂದಿಗೆ ಆಗಮಿಸಿದ ಮಂಗಲಾ ಸುರೇಶ್ ಅಂಗಡಿ ಅವರು ಜಿಲ್ಲಾಧಿಕಾಆರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.   ಮಂಗಲಾ ಸುರೇಶ್ ಅಂಗಡಿಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಅಭಯ …

Read More »

ಸಿಡಿ ಪ್ರಕರಣ’ : ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೆ ಪರಿಗಣಿಸಬಾರದು : ಸಿಡಿಲೇಡಿ ಪೋಷಕರ ಮನವಿ

ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕೋರ್ಟ್ ಗೆ ಬಂದು ಹೇಳಿಕೆ ನೀಡುವಂತೆ 24 ನೇ ಎಸಿಎಂಎಂಕೋರ್ಟ್ ಅನುಮತಿ ನೀಡಿದೆ. ಆದರೆ ಯುವತಿ ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು ಎಂದು ಸಿಡಿ ಯುವತಿ ಪೋಷಕರು ಮನವಿ ಮಾಡಿಕೊಂಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪೋಷಕರು, ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಹೀಗಾಗಿ ನಮ್ಮ ಮಗಳು ಕೋರ್ಟ್ …

Read More »

ಕೆಎಎಸ್‌ ಅಧಿಕಾರಿಗಳ ಸಂಘಕ್ಕೆ ಎಲಿಷ ಆಂಡ್ರೂಸ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಎಲಿಷ ಆಂಡ್ರೂಸ್‌ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಜರುಗಿದ್ದು, ಉಪಾಧ್ಯಕ್ಷರಾಗಿ ಅನಿತಾಲಕ್ಷ್ಮಿ, ಕಾರ್ಯದರ್ಶಿಯಾಗಿ ಸಿ.ಎಲ್‌. ಶಿವಕುಮಾರ್‌, ಜಂಟಿ ಕಾರ್ಯದರ್ಶಿಯಾಗಿ ಬಿ.ಸಿ. ಶಿವಾನಂದಮೂರ್ತಿ ಮತ್ತು ಖಜಾಂಚಿಯಾಗಿ ಬಿ.ಎಸ್‌. ರಾಜೀವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ.ಎನ್‌. ವರಪ್ರಸಾದ್ ರೆಡ್ಡಿ, ಎ. ದೇವರಾಜ್‌, ನಾಗೇಂದ್ರ ಎಫ್‌. ಹೊನ್ನಳ್ಳಿ, ಎಚ್‌. …

Read More »

ಐವತ್ತು ಹಳೆಯ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನ

ಬೆಳಗಾವಿ- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನಡೆದಿವೆ. ಗೋಕಾಕ್ ಕ್ಷೇತ್ರದ ಜೆಡಿಎಸ್ ನಾಯಕ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಈಗ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿಯಾಗಿದ್ದು,ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬೆಳಗಾವಿ ವಿಧಾನಸಭಾ ಮತಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ …

Read More »

ಚಿಕ್ಕೋಡಿ ಕ್ಷೇತ್ರದಲ್ಲಿ ಶೈಕ್ಷಣಿಕ ಏಳಿಗೆಗೆ ಆದ್ಯತೆ

ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಕೊರೊನಾ ಸುರಕ್ಷತಾ ನಿಯಮವನ್ನು ಪಾಲಿಸಿ, ಈ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪುನರಾರಂಭಿಸಲು ಸೂಚಿಸಿದರು. ನಂತರ ಏಪ್ರಿಲ್ ತಿಂಗಳ ಆರಂಭದಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ …

Read More »

ಸಿಡಿ ಯುವತಿ ಪೋಷಕರ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?

ರಾಯಚೂರು : ಸಾಕ್ಷ್ಯಗಳಿದ್ರೆ ಪೊಲೀಸರಿಗೆ ನೀಡಲಿ ಯುವತಿ ಪೋಷಕರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದು ದಿಢೀರ್ ಮಾಧ್ಯಮಗಳ ಮುಂದೆ ಬಂದ ಯುವತಿ ಪೋಷಕರು, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ರಾಯಚೂರಿನ ಮುದಗಲ್ ನಲ್ಲಿ ಪೋಷಕರ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನನಗೂ ಸಿಡಿ ಲೇಡಿಗೂ ಸಂಬಂಧವಿಲ್ಲ. ಯಾರಬೇಕಾದರೂ ಏನು ಮಾಡಲಿ. ಒತ್ತಡದಲ್ಲಿರೋರು ಹೇಳಿಕೆಗೆ ಮತ್ತು ನನಗೂ ಸಂಬಂಧವಿಲ್ಲ. ಅವರ ಬಳಿ ದಾಖಲೆಗಳಿದ್ರೆ ಪೊಲೀಸರಿಗೆ …

Read More »

ಜಾರಕಿಹೊಳಿ ಟೀಂ ಹತ್ತಿಕ್ಕುವ ಯೋಜನೆ ಬಿಜೆಪಿಯದ್ದು, ಸಿಎಂ ಮೌನ ಮುರಿಯಲಿ: ಮೋಟಮ್ಮ, ಜಯಮಾಲ, ಉಮಾಶ್ರೀ ಆಗ್ರಹ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವರಾದ ಮೊಟಮ್ಮ, ಜಯಮಾಲ ಮತ್ತು ಉಮಾಶ್ರೀ, ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ ಸಂಬಂಧ ಸಿಎಂ ವಿರುದ್ಧ ಕಿಡಿಕಾರಿದ್ದಾರೆ. 27 ದಿನದ ಹಿಂದೆ ಸಿಡಿ ಕೇಸ್​ ಬೆಳಕಿಗೆ ಬಂತು. ಅಂದಿನಿಂದಲೂ ಸುದ್ದಿ ಆಗುತ್ತಿದೆ. ಆದ್ರೆ ಆ ಹೆಣ್ಣು ಮಗಳನ್ನು ರಕ್ಷಣೆ ಮಾಡಬೇಕಾದ ಸರ್ಕಾರ ಒಂದೇಒಂದು ಹೇಳಿಕೆಯನ್ನೂ ಕೊಡ್ತಿಲ್ಲ. ಸಿಎಂ ಯಡಿಯೂರಪ್ಪ ಮೌನ ವಹಿಸಿದ್ದಾರೆ. ಮಾತ್ತೆತ್ತಿದ್ರೆ ರಾಮರಾಜ್ಯ ಎಂದು ಹೇಳ್ತಾರೆ. ಆದ್ರೆ ಹೆಣ್ಣು …

Read More »

ಸಾರಿಗೆ ನೌಕರರು ಪ್ರತಿಭಟನೆ ಮಾಡಿದ್ರೆ ಖಾಸಗಿ ಬಸ್ ಬಳಕೆ ಮಾಡುತ್ತೇವೆ : ಡಿಸಿಎಂ

ಬೆಂಗಳೂರು: ಸಾರಿಗೆ ಇಲಾಖೆಗೆ ಬರುವ ಆದಾಯ ಇಂಧನ, ವೇತನಕ್ಕೆ ಸಾಲುತ್ತಿಲ್ಲ. ಇಂತಹ ಕಷ್ಟಕಾಲದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸದೇ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಇಲಾಖೆಯ ಹಣಕಾಸು ವೃದ್ಧಿಯಾಗುತ್ತಿದ್ದಂತೆಯೇ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ. ಏಪ್ರಿಲ್ 7 ರಿಂದ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುವುದಾಗಿ ಹೇಳಿದ್ದು, ಈ ಹಿನ್ನಲೆಯಲ್ಲಿಂದು ಸಚಿವ ಲಕ್ಷ್ಮಣ್ ಸವದಿ ಮುಖ್ಯಮಂತ್ರಿ …

Read More »

ಉಪ ಚುನಾವಣೆ ಹೊಸ್ತಿಲಲ್ಲಿ ಲಿಂಗಾಯತ ಮುಖಂಡನ ಸೆಳೆದ ಸತೀಶ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ಹಾಗೂ ಲಿಂಗಾಯತ ಸಮಾಜದ ಮುಖಂಡ ಅಶೋಕ ಪೂಜಾರಿ ಅವರನ್ನು ಪಕ್ಷದತ್ತ ಸೆಳೆಯುವಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಅವರು ನೀಡಿದ ಆಹ್ವಾನ ಮನ್ನಿಸಿರುವ ಪೂಜಾರಿ, ಕಾಂಗ್ರೆಸ್‌ ಸೇರ್ಪಡೆ ಆಗುವುದಾಗಿ ಪ್ರಕಟಿಸಿದ್ದಾರೆ. ಇಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚಿಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ …

Read More »

ಉಪಚುನಾವಣೆಯಿಂದ ದೂರ ಉಳಿಯುವರೇ ಸಿಡಿ ಭಯದಲ್ಲಿರುವ 6 ಸಚಿವರು..?

ಬೆಂಗಳೂರು,ಮಾ.29- ನ್ಯಾಯಾಲಯದಿಂದ ತಡೆ ತಂದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ ಕಾರಣ ಉಪಚುನಾವಣೆಯಲ್ಲಿ ಆರು ಸಚಿವರು ಪ್ರಚಾರದಿಂದ ದೂರ ಉಳಿಯುವ ಸಾಧ್ಯತೆ ಇದೆ. ಈ ಸಚಿವರು ಪ್ರಚಾರಕ್ಕೆ ಬಂದರೆ ಪ್ರತಿಪಕ್ಷಗಳು ಇದನ್ನೇ ಅಸ್ತ್ರ ಮಾಡಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಬಹುದೆಂಬ ಭೀತಿಯಿಂದಾಗಿ ಸದ್ಯಕ್ಕೆ ದೂರ ಉಳಿಯುವಂತೆ ಪಕ್ಷ ಸೂಚಿಸಿದೆ ಎನ್ನಲಾಗುತ್ತಿದೆ. ಸಚಿವರಾದ ಬಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಭೈರತಿ ಬಸವರಾಜ್ ಸೇರಿದಂತೆ ಒಟ್ಟು 6 ಸಚಿವರು ಪ್ರಚಾರದಿಂದ ದೂರ ಉಳಿಯಲಿದ್ದಾರೆ …

Read More »