ಬೆಂಗಳೂರು, ಮಾ.24: ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಶುಲ್ಕ ಸಂಗ್ರಹ ಹಾಗೂ ಟೋಲ್ಗಳಲ್ಲಿ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ತಪ್ಪಿಸುವ ಸಂಬಂಧ ಪರಿಶೀಲಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಬುಧವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳಗಾವಿಯ ಬಾಗವಾಡಿ ಟೋಲ್ನಲ್ಲಿ ರೈತರಿಗೆ ಸಮಸ್ಯೆ ಆಗುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಅಲ್ಲಿ ಬೈಪಾಸ್ ರಸ್ತೆ …
Read More »(ಬಿಜೆಪಿ) ಕೈಯಲ್ಲಿ ರಾಜ್ಯ ಸುರಕ್ಷಿತವಾಗಿರುವುದಿಲ್ಲ ಮತ್ತು ಆರ್ಥಿಕವಾಗಿ ದಿವಾಳಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಇವರ (ಬಿಜೆಪಿ) ಕೈಯಲ್ಲಿ ರಾಜ್ಯ ಸುರಕ್ಷಿತವಾಗಿರುವುದಿಲ್ಲ ಮತ್ತು ಆರ್ಥಿಕವಾಗಿ ದಿವಾಳಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉತ್ತರಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಇವರು ತುಪ್ಪನಾದ್ರೂ ತಿನ್ನಲಿ, ಬೆಣ್ಣೆನಾದ್ರೂ ತಿನ್ನಲಿ. ಅಂಕಿ-ಅಂಶ ನೋಡಿದರೆ ಗೊತ್ತಾಗುವುದಿಲ್ಲವೆ’ ಎಂದು ಪ್ರಶ್ನಿಸಿದರು. ‘ಬಜೆಟ್ ಮೇಲಿನ ನಮ್ಮ ಪ್ರಶ್ನೆಗಳಿಗೆ ಯಡಿಯೂರಪ್ಪ ಅವರು ತರಾತುರಿಯಲ್ಲಿ 24 …
Read More »ಪ್ರಮಾಣಪತ್ರ ಸಿಗದೆ ಭಾವೀ ವೈದ್ಯರ ಪರದಾಟ
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕೋ, ಬೇಡವೋ ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಯಾವುದೇ ಸೂಚನೆ ನೀಡುತ್ತಿಲ್ಲ. ಕೋರ್ಸ್ ಮುಗಿಸಿ ಒಂದೂವರೆ ತಿಂಗಳು ಕಳೆದರೂ ಪ್ರಮಾಣಪತ್ರಗಳನ್ನು ನೀಡುತ್ತಿಲ್ಲ ಎಂದು ಎಂಬಿಬಿಎಸ್ ವಿದ್ಯಾರ್ಥಿಗಳು ದೂರಿದ್ದಾರೆ. ‘ವೈದ್ಯಕೀಯ ಪದವಿ ವ್ಯಾಸಂಗ ಮುಗಿಸಿದವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ಬಗ್ಗೆ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದೊಂದಿಗೆ ಷರತ್ತುಬದ್ಧ ಒಪ್ಪಂದ ಮಾಡಿಕೊಳ್ಳಲಾಗುತ್ತಿತ್ತು. 2015ರ ಕಡ್ಡಾಯ ಸೇವಾ ತರಬೇತಿ ತಿದ್ದುಪಡಿ ಕಾಯ್ದೆಯನ್ವಯ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ …
Read More »ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಭಾರಿ ದಂಡದ ಬಿಸಿ ತಟ್ಟಲಿದೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2,298 ಜನರಲ್ಲಿ ಇಂದು ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹೊಸ ಮಾರ್ಗಸೂಚಿ ಜಾರಿ ಮಾಡಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಭಾರಿ ದಂಡದ ಬಿಸಿ ತಟ್ಟಲಿದೆ. ಸಭೆ, ಸಮಾರಂಭ, ರ್ಯಾಲಿ ಆಯೋಜಕರಿಗೆ ಹಾಗೂ ಹೋಟೆಲ್ ಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೆ 10,000 ರೂ ದಂಡ ವಿಧಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. * …
Read More »ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.
ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …
Read More »ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.
ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …
Read More »ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ
ಬೆಂಗಳೂರು: ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ ಮಾಡಿದರೆ, ಪ್ರತಿಪಕ್ಷಗಳಿಗೆ ತಾಕತ್ತಿದ್ದರೆ ತಮ್ಮ ತಮ್ಮ ಕುಟುಂಬ ಸದಸ್ಯರನ್ನು ಸದನಕ್ಕೆ ಕರೆ ತಂದು ಸಿಡಿ ಪ್ರಕರಣದ ಬಗ್ಗೆ ಚರ್ಚಿಸಲಿ ಎಂದು ಬಿಜೆಪಿಯ ತೇಜಸ್ವಿನಿಗೌಡ ಸವಾಲೆಸೆದರು. ವಿಧಾನ ಪರಿಷತ್ ಅಧಿವೇಶನ ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗುವ ಮುನ್ನ ಈ ಪ್ರಹಸನ ನಡೆಯಿತು. ಭೋಜನ ವಿರಾಮದ ಬಳಿಕ ಸದನ ಮತ್ತೆ ಸೇರುತ್ತಿದ್ದಂತೆಯೇ ಸಭಾಪತಿ ಪೀಠದ ಮುಂದೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ …
Read More »ಸುಧಾಕರ್ ಕಾಮಿಡಿ ಮಾಡ್ತಿದ್ದಾರಾ : ಸುಧಾಕರ್ ಗೆ ಸೌಮ್ಯ ರೆಡ್ಡಿ ಟಾಂಗ್
ಬೆಂಗಳೂರು : ಡಾ.ಕೆ.ಸುಧಾಕರ್ ಅವರಿಗೆ ಮಾಡೋಕೆ ಏನೂ ಕೆಲಸ ಇಲ್ವಾ. ಜನ ನಗ್ತಾ ಇದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಸೌಮ್ಯ ರೆಡ್ಡಿ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ಡಾ.ಕೆ.ಸುಧಾಕರ್, ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ …
Read More »ಕಂಡವರ ಹೆಂಡಿರ ಲೆಕ್ಕ ಹಾಕುವ ಮೊದಲು ಏರುತ್ತಿರುವ ಕೊರೊನಾ ಕೇಸ್ ಲೆಕ್ಕ ಹಾಕಿ
ಬೆಂಗಳೂರು, ಮಾರ್ಚ್ 24: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯ ಸಚಿವ ಡಾ.ಸುಧಾಕರ್ ಅವರ ‘ಏಕಪತ್ನೀವ್ರತಸ್ಥ’ ಹೇಳಿಕೆ ರಂಪ ರಾಮಾಯಣವಾಗಿ, ಕೊನೆಗೆ ಸಚಿವರು ಕ್ಷಮೆಯಾಚನೆ ಮಾಡಿದ್ದಾರೆ. “ನನ್ನ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮಗಳ ತೇಜೋವಧೆ ಮಾಡಲು …
Read More »ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ..?
ಬೆಂಗಳೂರು, ಮಾ.24- ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಮಸ್ಕಿಯಿಂದ ಮಾಜಿ ಶಾಸಕ ಪ್ರತಾಪ್ಗೌಡ ಪಾಟೀಲ್, ಬಸವ ಕಲ್ಯಾಣದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಖೂಬಾ, ಸೂರ್ಯವಂಶಿ ನಾಗಮಾರಪಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಚಿವ ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಇಲ್ಲವೆ ಅವರ ಪತ್ನಿ ಹೆಸರನ್ನು …
Read More »
Laxmi News 24×7