Breaking News

ಜಿಲ್ಲೆ

ಮಹಾರಾಷ್ಟ್ರದ ಕೋಲ್ಹಾಪುರ ಮಹಾಲಕ್ಷ್ಮೀ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ

ಬೆಳಗಾವಿ: ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೆಂಪಲ್ ರನ್ ಶುರು ಮಾಡಿದ್ದು, ಮಹಾರಾಷ್ಟ್ರದ ಕೋಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಸಂತ್ರಸ್ತ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ಇದರಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದು, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ. …

Read More »

ಏ. 7ರಿಂದ ಸರ್ಕಾರಿ ಬಸ್ ಸಂಚಾರವಿಲ್ಲ; ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಮಾರ್ಚ್ 30; “ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಏಪ್ರಿಲ್ 1 ರಿಂದ 6ರ ತನಕ ಸಾರಿಗೆ ಸಂಸ್ಥೆಗಳ ನೌಕರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ” ಎಂದರು.   “ಏಪ್ರಿಲ್ 2ರಂದು …

Read More »

ಮನೆ ಇಲ್ಲದವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್: ಸಂತ್ರಸ್ತರೆಲ್ಲರಿಗೂ ಸೂರು ಒದಗಿಸುವ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಯಾರಿಗೆ ಅನುದಾನ ದೊರೆತಿಲ್ಲವೋ ಅವರೆಲ್ಲರಿಗೂ ಅನುದಾನ ಬಿಡುಗಡೆ ಮಾಡಲಾಗುವುದು. ಸರ್ಕಾರದ ಬೊಕ್ಕಸಕ್ಕೆ ತೊಂದರೆಯಾದರೂ ಚಿಂತೆಯಿಲ್ಲ. ಅತಿವೃಷ್ಟಿ ಸಂತ್ರಸ್ತರಿಗೆ ಸೂರು ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿಯ ಗಾಂಧಿಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಾತ್ರವಲ್ಲದೆ, ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದ ಎಲ್ಲರಿಗೂ ಮನೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ. ದಿ. ಸುರೇಶ್ ಅಂಗಡಿ ಬೆಳಗಾವಿಯಲ್ಲಿ ಪಕ್ಷವನ್ನು ಕಟ್ಟಿ ಮಾದರಿ …

Read More »

ರಮೇಶ್‌ ಪರ ಬ್ಯಾಟಿಂಗ್ ಮಾಡಿದ ಸಿಎಂ ಬಿಎಸ್ವೈ: ಯುವತಿಯ ಆರೋಪ ದುರುದ್ದೇಶ, ರಾಜಕೀಯ ಪ್ರೇರಿತ..!

ಬೆಳಗಾವಿ: ಸಿ.ಡಿ ಪ್ರಕರಣವು ಬೆಳಗಾವಿ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ. ಪ್ರಕರಣದ ಯುವತಿ ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿಆರೋಪ ಮಾಡುತ್ತಿದ್ದಾಳೆ ಎಂದು ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ ಹೇಳಿದ್ದಾರೆ. ಮಂಗಳಾ ಅಂಗಡಿಯವ್ರ ನಾಮಪತ್ರ ಸಲ್ಲಿಕೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ‘ಸಿ.ಡಿ ಯುವತಿ ಎಸ್‌ಐಟಿ‌ ಬಗ್ಗೆ ಆರೋಪ ಮಾತನಾಡ್ತಿರೋದು ಎಲ್ಲರಿಗೂ ಗೊತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವ್ರು ಎಸ್​​ಐಟಿ ಮೂಲಕ ನಿಷ್ಪಕ್ಷಪಾತ ತನಿಖೆ ಮಾಡಿಸಲಾಗ್ತಿದೆ. ತನಿಖೆ ಒಂದು ಹಂತದಲ್ಲಿ …

Read More »

ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ

ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ ನಡೆಸಲಾಯಿತು. ನಲ್ಲಾನಟ್ಟಿ, ಬಳೊಬಾಳ, ಬಸಲಗುದ್ದಿ, ಬಿರನಗಡ್ಡಿ, ಹುಣಶ್ಯಾಳ ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು. “ತಂದೆ ಸತೀಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದೇವು. ಗ್ರಾಮಸ್ಥರು ಸಹ ಮತ ನೀಡಿ, ಗೆಲ್ಲಿಸುವ ಭರವಸೆ ನೀಡಿದರು. ಇದೇ ವೇಳೆ ಯುವ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಅಪಾರ …

Read More »

‘ಸಿಡಿ ಯುವತಿ’ ‘ಎಸ್‌ಐಟಿ’ ವಶಕ್ಕೆ.?

ಬೆಂಗಳೂರು : 28 ದಿನಗಳ ಬಳಿಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದಂತ ರಾಸಲೀಲೆ ವೀಡಿಯೋದಲ್ಲಿನ ಲೇಡಿ, ಇಂದು ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ದಾಖಲಿಸಲು ಗೌಪ್ಯ ಸ್ಥಳದಲ್ಲಿ ಹಾಜರ್ ಆಗಿದ್ದಾರೆ. ಇಂತಹ ಸಿಡಿ ಯುವತಿಯ ಹೇಳಿಕೆ ಪಡೆದ ನಂತ್ರ, ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರಾಗಿ, ಸಿಡಿ ಸಂತ್ರಸ್ತ ಯುವತಿ ಗೌಪ್ಯ ಸ್ಥಳದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈಗಾಗಲೇ …

Read More »

ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಸಿಡಿ ಕೇಸ್ ಬಗ್ಗೆ ಸಿಜೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಲಿ. ಯುವತಿಯೇ ಸಿಜೆಗೆ ಪತ್ರ ಬರೆದಿದ್ದಾಳೆ. ಸಿಜೆ ಏನು ಮಾಡ್ತಾರೋ ನೋಡೋಣ. ಈ ಬಗ್ಗೆ ಕಾನೂನು ಹೋರಾಟಗಳು ನಡೆಯಲಿ. ಆದ್ರೆ ಕಲ್ಲು ಹೊಡೆಯೋದನ್ನು ಗೂಂಡಾಗಿರಿ ಅಂತಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. …

Read More »

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, ಯಾವ ನಗರದಲ್ಲಿ ಎಷ್ಟು?

ನವದೆಹಲಿ, ಮಾರ್ಚ್ 30: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮಂಗಳವಾರ (ಮಾರ್ಚ್ 30)ದಂದು ಬದಲಾವಣೆಯಾಗಿದೆ. ದೇಶದೆಲ್ಲೆಡೆ ಪೆಟ್ರೋಲ್ ಬೆಲೆ 19 ರಿಂದ 22 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 21 ರಿಂದ 23 ಪೈಸೆ ಪ್ರತಿ ಲೀಟರ್ ಇಳಿಕೆಯಾಗಿದೆ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿರಲಿಲ್ಲ. ನಂತರ ಸತತ ಎರಡು ದಿನ ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬೆಲೆ ಇಳಿಕೆ …

Read More »

ಯುವತಿ ಪೋಷಕರಿಂದ ನನ್ನ ವಿರುದ್ಧ ಆರೋಪ ಮಾಡಿಸಲಾಗುತ್ತಿದೆ :ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕಲಬುರಗಿ : ಸಿಡಿ ಪ್ರಕರಣದ ಬಗ್ಗೆ ಏನು ಮಾತಾಡಬೇಕೋ ಅದನ್ನು ವಿಧಾನಸಭೆಯಲ್ಲೇ ಮಾತನಾಡಿದ್ದೇನೆ. ನಾನು ಈಗ ಚುನಾವಣೆ‌ಗೋಸ್ಕರ ಬಂದಿದ್ದೇನೆ. ಅದರ ಬಗ್ಗೆ ಮಾತನಾಡಲ್ಲ ಎಂದು ಕಲಬುರಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬಿಜೆಪಿ ಸಂಸ್ಕೃತಿ ಸೇರಿದಂತೆ ಎಲ್ಲರ ಸಂಸ್ಕೃತಿಯನ್ನ ಜನ ಗಮನಿಸುತ್ತಿದ್ದಾರೆ. ಯುವತಿ ಪೋಷಕರಿಂದ ನನ್ನ ವಿರುದ್ಧ ಆರೋಪ ಮಾಡಿಸಲಾಗುತ್ತಿದೆ. ಅವರ ಸರ್ಕಾರ ಅವರ ಅನುಕೂಲಕ್ಕೆ ತಕ್ಕಂತೆ ಹೇಳಿಕೆ‌ ನೀಡಿಸುತ್ತಿರಬಹುದು. ಅವರು ಏನಾದರೂ ಹೇಳಿಕೆ ಕೊಡಲಿ, ನಾನು ತಲೆ ಕೆಡಿಸಿಕೊಳ್ಳಲ್ಲ. …

Read More »

ಸಿದ್ದರಾಮಯ್ಯ ಯಾರ ಗುಲಾಮರಾಗಿದ್ದಾರೆ ಎಂಬುದು ದೇಶಕ್ಕೇ ಗೊತ್ತಿದೆ’ : ಕಟೀಲ್

ಬೆಳಗಾವಿ,ಮಾ.30- ಸಿದ್ದರಾಮಯ್ಯನವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಅವರು ಯಾರ ಕಾಲು ಹಿಡಿದು ಮುಖ್ಯಮಂತ್ರಿಯಾಗಿದ್ದರು ಎಂಬುದೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಅವರು ಯಾರ ಗುಲಾಮರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.ಸಿ.ಡಿ ವಿಚಾರ ತನಿಖೆ ಹಂತದಲ್ಲಿದೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಸಿ.ಡಿಗಳು ಯಾವ ರೀತಿ ತನಿಖೆಯಾಗಿದೆ …

Read More »