Breaking News

ಜಿಲ್ಲೆ

BPL’ ಕಾರ್ಡ್ : ಟ್ಯಾಕ್ಸಿ, ಟ್ರ್ಯಾಕ್ಟರ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ

ಬೆಂಗಳೂರು : ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದೆ.   ವಿಧಾನಪರಿಷತ್ ನಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಇರುವ ಕುಟುಂಬಸ್ಥರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಈ ಕುಟುಂಬಗಳು ಸಂಕಷ್ಟದಲ್ಲಿ …

Read More »

ಸಿಡಿ ವಿಚಾರದಲ್ಲಿ ನಾನೂ ಕೂಡಾ ಸದನದ ಚರ್ಚೆಯಲ್ಲಿ ಭಾಗವಹಿಸಬೇಕಿತ್ತು, ಆದರೆ ಹಿರಿಯರು ಬೇಡ ಎಂದಿದ್ದಕ್ಕೆ ಸುಮ್ಮನಾದೆ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಸಿಡಿ ವಿಚಾರದಲ್ಲಿ ನಾನೂ ಕೂಡಾ ಸದನದ ಚರ್ಚೆಯಲ್ಲಿ ಭಾಗವಹಿಸಬೇಕಿತ್ತು, ಆದರೆ ಹಿರಿಯರು ಬೇಡ ಎಂದಿದ್ದಕ್ಕೆ ಸುಮ್ಮನಾದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಆ ಹುಡುಗಿ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಆಕೆ ಒತ್ತಾಯದಿಂದ ಮಾತನಾಡಿದ್ದಾಳೋ, ಅಥವಾ ಸ್ವ-ಇಚ್ಛೆಯಿಂದ ಮಾತನಾಡಿದ್ದಾಳೋ ಗೊತ್ತಿಲ್ಲ. ಆದರೆ ಸಿಡಿಯಲ್ಲಿ ಇರುವ ದೃಶ್ಯ ಅಸಲಿಯೋ, ನಕಲಿಯೋ ಗೊತ್ತಿಲ್ಲ ಎಂದರು. ತನಿಖೆ ಆಗುವವರೆಗೂ ವಿರೋಧ ಪಕ್ಷ ಕೂಡ ಸಹಕರಿಸಬೇಕು. ಜನರ ಸಮಸ್ಯೆಗಳ …

Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿಗ್ನಲ್ ಆಯಪ್ ಬಳಸುತ್ತಿರುವ ಸಿಡಿ ಪ್ರಕರಣದ ಕಿಂಗ್‌ಪಿನ್‌ಗಳು!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಬಹಿರಂಗವಾದ ಬಂದ ಬಳಿಕ 20 ದಿನಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಿಂಗ್‌ಪಿನ್‌ಗಳು ಗೌಪ್ಯ ಸಂವಹನಕ್ಕೆ ‘ಸಿಗ್ನಲ್’ ಆಯಪ್ ಮೆಸೆಂಜರ್ ಬಳಸುತ್ತಿದ್ದಾರೆ ಎಂಬ ಸಂಗತಿ ವಿಶೇಷ ತನಿಖಾ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಿಡಿ ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾದ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರು ಮತ್ತು ವಿವಾದಿತ ಯುವತಿ ಎಸ್‌ಐಟಿ ಗಾಳಕ್ಕೆ ಸಿಲುಕದಂತೆ ಹೊರ ರಾಜ್ಯಗಳಲ್ಲಿ …

Read More »

ಸಿಡಿ ಲೀಕ್​ ಆದಾಗಿನಿಂದ ಊರೂರು ಸುತ್ತುತ್ತಿರುವ ಕಿಂಗ್​ಪಿನ್, ಹ್ಯಾಕರ್​, ಯುವತಿ ಸದ್ಯ ರಾಜಸ್ಥಾನದಲ್ಲಿದ್ದಾರೆ ಎನ್ನಲಾಗಿದೆ.?

ಬೆಂಗಳೂರು: ಬಗೆದಷ್ಟೂ ಆಳ ಎಂಬಂತೆ ತನಿಖೆ ಮುಂದುವರಿದಂತೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿ ಕೇಸ್​ನ ಲೀಕಾಸುರರ ಎಕ್ಸ್​ಕ್ಲೂಸಿವ್​ ಮಾಹಿತಿ ಲಭ್ಯವಾಗುತ್ತಲೇ ಇದೆ. ಸಿಡಿ ಲೀಕ್​ ಆದಾಗಿನಿಂದ ಊರೂರು ಸುತ್ತುತ್ತಿರುವ ಕಿಂಗ್​ಪಿನ್, ಹ್ಯಾಕರ್​, ಯುವತಿ ಸದ್ಯ ರಾಜಸ್ಥಾನದಲ್ಲಿದ್ದಾರೆ ಎನ್ನಲಾಗಿದೆ. ಇನ್ನು ಸಿಡಿ ಬಹಿರಂಗದ ಬಳಿಕ ಸಿಡಿ ಗ್ಯಾಂಗ್ ನಡೆಸಿದ್ದ ತಂತ್ರ ಏನು? ಹ್ಯಾಕರ್ ಶ್ರವಣ್ ಯಾವ ರೀತಿ ಪ್ಲಾನಿಂಗ್ ಮಾಡಿಕೊಂಡಿದ್ದ? ಅನ್ನೋದ್ರ ಕಂಪ್ಲೀಟ್​ ಡಿಟೇಲ್ಸ್ ಇಲ್ಲಿದೆ.  ಎಸ್‌ಐಟಿ …

Read More »

ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ : ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಮಾ.23) ನಡೆದ ತಹಶಿಲ್ದಾರರ ಜತೆಗಿನ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ …

Read More »

ಲೋಕಸಭಾ ಉಪ ಚುನಾವಣೆ ಮೊದಲ ದಿನವೇ 2 ನಾಮಪತ್ರ

ಬೆಳಗಾವಿ –  ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಇಂದು ಮೊದಲ ದಿನ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ. ವೆಂಕಟೇಶ್ವರ ಮಹಾಸ್ವಾಮೀಜಿ ಮತ್ತು ಶ್ರೀಕಾಂತ ಪಡಸಲಗಿ ಎನ್ನುವವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರಗಳನ್ನು ಸ್ವೀಕರಿಸಿದರು. ಏಪ್ರಿಲ್ 17ರಂದು ನಡೆಯಲಿರುವ ಚುನಾವಣೆಗೆ ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮಾ.30ರ ವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಈವರೆಗೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

Read More »

ಬಿಎಸ್ವೈ ಬೆನ್ನಿಗೆ ನಿಂತರೇ ಡಿಕೆಶಿ? ಏನಿದು ರಮೇಶ್ ಕುಮಾರ್ ಮಾತಿನ ಮರ್ಮ!

ಬೆಂಗಳೂರು ಮಾರ್ಚ್ 23: ಸೋಮವಾರ (ಮಾ 22) ವಿಧಾನಸಭೆಯ ಬಜೆಟ್ ಅಧಿವೇಶನದ ವೇಳೆ, ರಮೇಶ್ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಬೆಂಕಿಯುಂಡೆಯಂತಹ ಭಾಷಣ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು. ಇವರ ಅಬ್ಬರದ ಭಾಷಣದ ಮಧ್ಯೆ ಮಾಜಿ ಸ್ಪೀಕರ್, ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆಡಿದ ಮಾತು ಸದನವನ್ನು ನಗೆಗಡಲಲ್ಲಿ ತೇಲಿಸಿದ್ದು ಒಂದು ಕಡೆಯಾದರೆ, ಅವರ ಮಾತಿನ ಹಿಂದಿನ ಮರ್ಮವೇನು ಎನ್ನುವುದು ಸದ್ಯಕ್ಕೆ ಚರ್ಚೆಯ ವಿಷಯವಾಗಿದೆ.   …

Read More »

ಸಿದ್ದು-ಡಿಕೆಶಿ ಜತೆ ಲಕ್ಷ್ಮೀ ಏಕಾಂತ ಮಾತುಕತೆ! ಸಿಎಂಗೆ ಲಕ್ಷ್ಮೀ ಬ್ಲಾಕ್​ಮೇಲ್​ ಮಾಡ್ತಾರಾ..?

ಬೆಂಗಳೂರು: ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಹಾಗೂ 6 ಸಚಿವರು ಕೋರ್ಟ್​ಗೆ ಮೊರೆ ಹೋಗಿ ನಿರ್ಬಂಧಕಾಜ್ಞೆ ತಂದ ವಿಚಾರವಾಗಿ ಮೇಲ್ಮನೆಯಲ್ಲಿ ಸೋಮವಾರ ಪ್ರತಿಪಕ್ಷಗಳ ನಾಯಕರು ಆಕ್ಷೇಪಿಸಿದರು. ಎಸ್​ಐಟಿ ಸಿಡಿ ಪ್ರಚಾರಕರ ಬೆನ್ನುಹಿಂದೆ ಬಿದ್ದಿದೆ, ಸಂತ್ರಸ್ತ ಯುವತಿಗೆ ಅನ್ಯಾಯ ಆಗಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿಲ್ಲ. ಈ ಸಿಡಿ ಅಸಲಿಯೋ- ನಕಲಿಯೋ ಮೊದಲು ಆ ಬಗ್ಗೆ ತನಿಖೆ ಮಾಡಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ಮಾಜಿ ಸಿಂ …

Read More »

ಸತೀಶ್ ಜಾರಕಿಹೊಳಿ ಮೂಲೆಗುಂಪು ಮಾಡಲು ಪ್ರಯತ್ನ, ಬೆಂಬಲಿಗರ ಆಕ್ರೋಶ: ಬೈಎಲೆಕ್ಷನ್ ಸ್ಪರ್ಧೆಗೆ ವಿರೋಧ

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಏಪ್ರಿಲ್ 17 ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಶಾಸಕ ಸತೀಶ್ ಜಾರಕಿಹೊಳಿ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದು, ಸತೀಶ್ ಜಾರಕಿಹೊಳಿ ಅವರಿಗೆ ಒತ್ತಾಯದಿಂದ ಟಿಕೆಟ್ ನೀಡಿ ಕೇಂದ್ರಕ್ಕೆ ಕಳುಹಿಸಲು ಸಂಚು ನಡೆಸಲಾಗಿದೆ. ರಾಜ್ಯದಲ್ಲಿ ಸತೀಶ್ ಅವರಿಗೆ ಹಿಡಿತ ಇಲ್ಲದಂತೆ ಮಾಡಲು ಈ ಮೂಲಕ ಅವರನ್ನು ಮೂಲೆಗುಂಪು ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿಯಾಗಿ …

Read More »

‘ಸಿಡಿ ಹೆಸರು ಹೇಳಿದರೆ ಸಚಿವರು ಬೆಚ್ಚಿ ಬೀಳುತ್ತಾರೆ’

ಬೆಂಗಳೂರು, ಮಾ.23- ಸಿಡಿ ಹೆಸರು ಹೇಳಬೇಡಿ, ಈ ಸರ್ಕಾರದಲ್ಲಿನ ಸಚಿವರು ಬೆಚ್ಚಿ ಬೀಳುತ್ತಾರೆ ಎಂದು ಪ್ರತಿಪಕ್ಷದ ಸದಸ್ಯರು ಲೇವಡಿ ಮಾಡಿದ ಪ್ರಸಂಗ ವಿಧಾನಪರಿಷತ್‍ನಲ್ಲಿಂದು ನಡೆಯಿತು. ಶೂನ್ಯ ವೇಳೆಯಲ್ಲಿ ಸದಸ್ಯ ಶ್ರೀಕಾಂತ್ ಗೊಟ್ನೇಕರ್ ಅವರು ವಿಷಯ ಪ್ರಸ್ತಾಪಿಸುತ್ತ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬೀದರ್‍ನಲ್ಲಿ ಮುಖ್ಯಮಂತ್ರಿ ಭಾಷಣ ಮಾಡುವ ವೇಳೆ ಮರಾಠಿಗರಿಗೆ 3ಬಿ ಯಿಂದ 2ಬಿಗೆ ಮೀಸಲಾತಿ ಬದಲಾವಣೆ ಮಾಡುವ ಭರವಸೆ ನೀಡಿದ್ದರು. ಸಿಎಂ ಭಾಷಣದ ಸಿಡಿ ನನ್ನ ಬಳಿ ಇದೆ …

Read More »