ಬೆಳಗಾವಿ ಲೋಕಸಭೆ ಸೇರಿ ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಸಂಪೂರ್ಣ ಸಿದ್ಧ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ರಾಜ್ಯದಲ್ಲಿ ಏಪ್ರಿಲ್ 17ರಂದು ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ. ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಆಯ್ಕೆಗಾಗಿ ಹೈಕಮಾಂಡ್ಗೆ ಶಿಫಾರಸ್ಸು ಕಳುಹಿಸಲಾಗಿದ್ದು, ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ಉಪಚುನಾವಣೆ ಎದುರಿಸಲು ಸನ್ನದ್ಧವಾಗಿದೆ. ಬೆಳಗಾವಿ …
Read More »ಲೋಕಸಭೆ ಉಪಚುನಾವಣೆ ಸಿದ್ಧತೆ ಪೂರ್ಣ, ನಾಳೆಯಿಂದ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಹಿರೇಮಠ
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮಹತ್ವದ ಮಾಹಿತಿ ನೀಡಿದರು. ಏಪ್ರೀಲ್ 17ರಂದು ಚುನಾವಣೆ ಮತದಾನ ನಿಗದಿಯಾಗಿದ್ದು, ಮಾರ್ಚ್ 23ರಿಂದ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ತಿಳಿಸಿದರು. : ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಮಾಹಿತಿ ನೀಡಿದರು. ಏಪ್ರಿಲ್ 17ರಂದು ಉಪಚುನಾವಣೆ ಮತದಾನ ನಿಗದಿಯಾಗಿದ್ದು, ಮಾರ್ಚ್ 23ರಿಂದ ಗೆಜೆಟ್ ಪ್ರಕಟಣೆ ಮೂಲಕ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ. ನಾಮಪತ್ರ ಸಲ್ಲಿಸಲು …
Read More »ಭ್ರಷ್ಟ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವ ಬಿಜೆಪಿ ನಾಯಕರಿಗೆ ನೈತಿಕತೆ ಇದೆಯೇ?: ಕಾಂಗ್ರೆಸ್
ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ವ್ಯಕ್ತಿಯನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಬಿಜೆಪಿ ನಾಯಕರಿಗೆ ಭ್ರಷ್ಟಾಚಾರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿ.ಎಸ್. ಉಗ್ರಪ್ಪ ಕಿಡಿಕಾರಿದ್ದಾರೆ. ಮಾಜಿ ಸಚಿವ ಕೃಷ್ಣ ಭೈರೇಗೌಡ , ಮಾಜಿ ಸಂಸದ ಉಗ್ರಪ್ಪ ಮತ್ತು ಬ್ರಿಜೇಶ್ ಕಾಳಪ್ಪ ಅವರಿಂದ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ವಿ.ಎಸ್. ಉಗ್ರಪ್ಪ, “ಲೋಕಪಾಲ ಕಾಯ್ದೆ ಜಾರಿಗೆ ಬರಬೇಕು …
Read More »ವಿಜಯಪುರ : ಚಿಂದಿ ಆಯುವ ವಿವಾಹಿತೆ ಮೇಲೆ ಮೂವರಿಂದ ಅತ್ಯಾಚಾರಕ್ಕೆ ಯತ್ನ
ವಿಜಯಪುರ : ಚಿಂದಿ ಹಾಗೂ ಹಂದಿ ಗೊಬ್ಬರ ಸಂಗ್ರಹಿಸಿ ಜೀವನ ನಡರಸುತ್ತಿದ್ದ 23 ವರ್ಷದ ಗೃಹಿಣಿ ಮೇಲೆ ಮೂವರು ಕಾಮಾಂಧರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ವರದಿಯಾಗಿದೆ. ಮುದ್ದೇಬಿಹಾಳ ಪಟ್ಟಣದಲ್ಲಿ ಚಿಂದಿ, ಹಂದಿ ಗೊಬ್ಬರ ಆಯ್ದು ಜೀವನನಡೆಸುತ್ತಿರುವ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರನ್ನು ಗುರುತಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಅತ್ಯಾಚಾರಕ್ಕೆ ಯತ್ನಿಸಿದವರನ್ನು ಅಕ್ಬರ್ ಮಕಾನದಾರ, ಸಲೀಮ ನದಾಫ, ಸೋಯೆಲ್ ಹಡಗಲಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. …
Read More »ಸಂಸತ್ ಚುನಾವಣೆವರೆಗೂ ಹೋರಾಟ ಎಂದ ರೈತ ನಾಯಕ
ಇಂದು ನಡೆಯುತ್ತಿರುವ ರೈತರ ಹೋರಾಟ ಕೇವಲ ಕೇಂದ್ರ ಸರ್ಕಾರದ ವಿರುದ್ಧವಲ್ಲ, ಸರ್ಕಾರವನ್ನು ಪರೋಕ್ಷವಾಗಿ ನಡೆಸುತ್ತಿರುವ ಅದಾನಿ, ಅಂಬಾನಿಯಂತಹ ವ್ಯಕ್ತಿಗಳ ವಿರುದ್ಧವೂ ಆಗಿದೆ. ಹೌದು. ಬೇಡಿಕೆ ಈಡೇರದಿದ್ದರೆ ಮುಂದಿನ ಲೋಕಸಭಾ ಚುನಾವಣೆಯವರೆಗೂ ಸಾಗಲು ಸಿದ್ಧರಿದ್ದೇವೆ. ಈಗಷ್ಟೆ ಹೋರಾಟದ ಬೀಜ ಬಿತ್ತಿದ್ದೇವೆ. 10 ವರ್ಷವಾದರೂ ಗೊಬ್ಬರ ಹಾಕುತ್ತಲೇ ಇರುತ್ತೇವೆ’-ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ನಾಯಕತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಲ್ಲಿ ಪ್ರಮುಖರಾದ ರಾಕೇಶ್ ಟಿಕಾಯತ್ …
Read More »ಮಠ, ಮಂದಿರಗಳಿಗೆ ₹ 80 ಕೋಟಿ: ಪ್ರಭಾವಿ ಮಠಗಳು, ಸಮುದಾಯಗಳಿಗೆ ಮಣೆ
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ಅನುದಾನದ ಮೊತ್ತವನ್ನು ಕೋವಿಡ್ ಕಾರಣದಿಂದ ಕಡಿತಗೊಳಿಸಿದ್ದ ರಾಜ್ಯ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೂ ತಡೆ ವಿಧಿಸಿತ್ತು. ಆದರೆ, ಆರ್ಥಿಕ ವರ್ಷದ ಕೊನೆಯಲ್ಲಿ ವಿವಿಧ ಮಠ, ಮಂದಿರಗಳು ಮತ್ತು ಜಾತಿವಾರು ಸಂಘ ಸಂಸ್ಥೆಗಳಿಗೆ ಒಂದೇ ಕಂತಿನಲ್ಲಿ ₹ 80.25 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಮಾರ್ಚ್ 19ರಂದು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಾದ್ಯಂತ …
Read More »ಹೊಟ್ಟೆಯ ಕೊಬ್ಬನ್ನು ಕರಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್, ‘ಡೊಂಟ್ ಮಿಸ್’
ಹೊಟ್ಟೆಯ ಕೊಬ್ಬು ಹಠಮಾರಿ. ಉತ್ತಮ ಪ್ರಯತ್ನಗಳ ಹೊರತಾಗಿಯೂ ಅದು ಕಡಿಮೆಯಾಗಲು ನಿರಾಕರಿಸುತ್ತದೆ. ಯಾವುದೇ ಪ್ರಮಾಣದ ಆಹಾರ ಪದ್ಧತಿ ಸಹಾಯ ಮಾಡುವುದಿಲ್ಲ ಮತ್ತು ವ್ಯಾಯಾಮ ಕೂಡ ಹೊಟ್ಟೆ ಕರಗಿಸಲು ನೆರವಾಗುವುದಿಲ್ಲ. ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಅಸಾಧ್ಯವಾದ ಕೆಲಸವೆಂದು ತೋರುತ್ತದೆ ಇದಕ್ಕೆ ಕಾರಣ ತಪ್ಪು ಜೀವನಕ್ರಮ. ಹೊಟ್ಟೆಕೊಬ್ಬು ವೇಗವಾಗಿ ಕರಗಲು ಬಯಸಿದ್ದರೆ ಅದಕ್ಕಾಗಿ ನಿಖರವಾಗಿ ಏನು ಮಾಡಬೇಕೆಂದು ತಿಳಿದುಕೊಳ್ಳಬೇಕು. ಹೊಟ್ಟೆಯ ಕೊಬ್ಬನ್ನು ವೇಗವಾಗಿ ಕಳೆದುಕೊಳ್ಳಲು ಸಹಾಯ ಮಾಡುವ ಕೆಲವು ಅತ್ಯುತ್ತಮ ವರ್ಕ್ ಔಟ್ …
Read More »ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ವಿಜಯನಗರ ಜಿಲ್ಲೆಯನ್ನು ರಚಿಸಲಾಗಿದ್ದು, ಇದರೊಂದಿಗೆ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಶೀಘ್ರವೇ ರಾಜ್ಯದಲ್ಲಿ 3 -4 ಹೊಸ ಜಿಲ್ಲೆಗಳನ್ನು ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಯ ಶಿರಸಿ, ಬೀದರ್ ಜಿಲ್ಲೆಯ ಬಸವಕಲ್ಯಾಣ, ತುಮಕೂರು ಜಿಲ್ಲೆಯ ತಿಪಟೂರು ಅಥವಾ ಮಧುಗಿರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ಸಾರ್ವಜನಿಕರಿಗೆ …
Read More »ಸಿ.ಟಿ.ರವಿ, ನಟ ಶಿವಣ್ಣ ಹಾಗೂ ಲಲಿತಾ ನಾಯಕ್ ಹತ್ಯೆ ಮಾಡುವುದಾಗಿ ಬೆದರಿಕೆ ಪತ್ರ..!
ಬೆಂಗಳೂರು,ಮಾ.21- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಹಾಗೂ ನನ್ನನ್ನೂ ಸೇರಿದಂತೆ ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ. ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್ನಲ್ಲಿ ಮಾಜಿ ಸಚಿವ ರೇವಣ್ಣ ಅವರು ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇ 1ರಂದು ಪ್ರಮುಖರನ್ನು ಕೊಲೆ ಮಾಡುವ ಪತ್ರ ಬಂದಿದೆ. …
Read More »ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? : ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಮಾ.21. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದರು. ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ …
Read More »
Laxmi News 24×7