Breaking News

ಜಿಲ್ಲೆ

ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ…?

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ. ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಬೀದಿಗೆ ಇಳಿಯಲು ನೌಕರರು ನಿರ್ಧರಿಸಿದ್ದಾರೆ. ಅದೇ ರೀತಿ ರಾಜ್ಯದ ವಿವಿಧ ಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸರ್ಕಾರಕ್ಕೆ ನೀಡಿದ್ದ ಡೆಡ್ಲೈನ್ ಮುಗಿಯುತ್ತಿದ್ದಂತೆ ನೌಕರರು ಮತ್ತೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಗರಂ ಆಗಿದ್ದು ಮುಷ್ಕರಕ್ಕೆ ಮುಂದಾಗಿದ್ದಾರೆ. ಸಾರಿಗೆ …

Read More »

ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.

ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …

Read More »

ರಾಜ್ಯ ಹೆದ್ದಾರಿ ಕಾಮಗಾರಿ

ಗೋಕಾಕ: ಲೋಕೋಪಯೋಗಿ ಇಲಾಖೆಯು 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ನಗರದಲ್ಲಿ ರವಿವಾರದಂದು ಜಲಸಂಪನ್ಮೂಲ ಸಚಿವರೊಂದಿಗೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಈ ಪ್ರಸ್ತಾವನೆಯ ಅನುಮೋದನೆ ಪಡೆಯಲಾಗಿದ್ದು, …

Read More »

ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿದರು.

ಗೋಕಾಕ: ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮುಖಾಂತರ ಕಲೆ, ಸಾಹಿತ್ಯದ ಜೊತೆಗೆ ಕೃಷಿ, ಉದ್ದಿಮೆಗಳ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಯಮಕನಮರಡಿ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಸಂಜೆ ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಜರುಗಿದ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಖಂಡ ಗೋಕಾಕದ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕೃಷ್ಣಮೂರ್ತಿ ಪುರಾಣಿಕ, ಬಸವರಾಜ ಕಟ್ಟೀಮನಿ ಕಾಲದಿಂದಲೂ …

Read More »

ಗೋಕಾಕ: ಸಚಿವರ ಕಛೇರಿಯಲ್ಲಿ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನವನ್ನು ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.

ಗೋಕಾಕ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿರಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ತಮ್ಮ ಕಛೇರಿಯಲ್ಲಿ ತಾಲೂಕಿನ ಕೊಣ್ಣೂರ ಪುರಸಭೆಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅನುದಾನ ವಿತರಿಸಿ ಮಾತನಾಡಿದರು. ಸನ್ 2019-20 ಮತ್ತು 2020-21 ರ ಸಾಲಿನ ಎಸ್.ಎಫ್.ಸಿ ಅನುದಾನ ಶೇ 24.10% ರ ಯೋಜನೆಯಡಿಯಲ್ಲಿ ರೂ 2.42 ಲಕ್ಷಗಳ ಅನುದಾನದಲ್ಲಿ 5 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ವರ್ಗದ ಬಿ.ಇ …

Read More »

ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್ (ತಿನಿಸು ಮಾರುಕಟ್ಟೆ) ಆರಂಭಿಸಲಾಗಿದೆ. ಇಲ್ಲಿನ ಗೋವಾ ವೇಸ್ ಬಳಿ ರಾಣಿ ಚೆನ್ನಭೈರಾದೇವಿ ಮಹಿಳಾ ಬಜಾರ ಮತ್ತು ತಿನಿಸು ಕಟ್ಟೆ ಮಳಿಗೆಗಳನ್ನು ನಿರ್ಮಾಣಮಾಡಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮವನ್ನು ರವಿವಾರ ಸಂಜೆ: 5 ಗಂಟೆಗೆ  ರಾಜ್ಯಸಭಾ ಮಾಜಿ ಸದಸ್ಯ, ಕೆ.ಎಲ್‌.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನೆರವೇರಿಸಲಿದ್ದಾರೆ.

Read More »

ನಿವೃತ್ತ ಡಿಜಿ ಶಂಕರ್ ಬಿದರಿ ಇ-ಮೇಲ್ ಐಡಿ ಹ್ಯಾಕ್ : ಹಣಕ್ಕೆ ಡಿಮ್ಯಾಂಡ್ ಇಟ್ಟ ದುಷ್ಕರ್ಮಿಗಳು!

ಬೆಂಗಳೂರು : ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿ ಇ ಮೇಲ್ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಶಂಕರ್ ಬಿದರಿ ಅವರ ಇ ಮೇಲ್ ಐಡಿಯನ್ನು ಹ್ಯಾಕ್ ಮಾಡಿ ಬಿದರಿ ಸ್ನೇಹಿತರಿಗೆ ಮೆಸೇಜ್ ಮಾಡಿ ಹಣ ಕೇಳಿದ್ದಾರೆ. ಇದನ್ನು ನಂಬಿದ ಬಿದರಿ ಅವರ ಸ್ನೇಹಿತರೊಬ್ಬರು 25 ಸಾವಿರ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹಣ ವರ್ಗಾವಣೆ ಮಾಡಿದ ಬಳಿಕ ಶಂಕರ್ …

Read More »

ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು. ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ‌ ಅರಭಾವಿ‌‌ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು. ಕೆಎಂಎಫ್ನ ‌ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.

Read More »

ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಹೊರಟ್ಟಿಯವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಟ್ಟಡದಲ್ಲಿ ಒಟ್ಟಾರೆ 36 …

Read More »

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ನಿರ್ದೇಶಕ ಸನತ ಜಾರಕಿಹೊಳಿ.

ಗೋಕಾಕ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಕಲ್ಪನಾ ಹೇಳಿದರು. ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮಾನವನ ಬದುಕಿನಲ್ಲಿ ವಿಜ್ಞಾನ ಮಹತ್ವದ ಪಾತ್ರ ವಹಿಸುತ್ತಿದ್ದು, ವಿದ್ಯಾರ್ಥಿಗಳು ಸಂಶೋಧಕರಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು …

Read More »