Breaking News

ಜಿಲ್ಲೆ

‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು.: B.S.Y

ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಶಿಸಿದರು. ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು. ‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ …

Read More »

ಗೋಕಾಕದಲ್ಲಿ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ

ಗೋಕಾಕದಲ್ಲಿ ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ‌ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ನಾಳೆ ದಿನ ಜನೆವರಿ 31 ರವಿವಾರದಂದು ಸ್ಥಳಿಯ ಪ್ರಾಥಮಿಕ …

Read More »

ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್

ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ  ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ …

Read More »

ಬಸವರಾಜ ಬೊಮ್ಮಾಯಿ ಗಡಿ ಉಸ್ತುವಾರಿ ಸಚಿವರಾಗಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪತ್ರೆ

ಬೆಳಗಾವಿ – ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …

Read More »

ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಹೋರಾಟ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಮಂಡ್ಯ: ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪುತ್ತಿದ್ದು, ಕನ್ನಡ ಶಾಲೆಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರು ಹೋರಾಟ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಶುಕ್ರವಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಪ್ರತಿಯೊಬ್ಬರು ನಿರಂತರವಾಗಿ ಪ್ರೀತಿಸಿ, ಪ್ರೋತ್ಸಾಹಿಸಬೇಕು. ರಾಜ್ಯ, ಹೊರ ರಾಜ್ಯಗಳಲ್ಲಿಯೂ ಕನ್ನಡ ಕ್ರಾಂತಿಯಾಗಬೇಕು. ನಾಡು, ನುಡಿ ವಿಷಯಕ್ಕೆ ಬಂದಾಗ ಪಕ್ಷಾತೀತ ಹೋರಾಟ …

Read More »

ಬೆಳಗಾವಿ TAPMS ನಿರ್ದೇಶಕ ಚುನಾವಣೆ: ಆಶಿಫ್ ಮುಲ್ಲಾಗೆ ಭರ್ಜರಿ ಜಯ

ಬೆಳಗಾವಿ: ತಾಲೂಕಾ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಮಿತಿ(ಟಿಎಪಿಎಂಎಸ್) ದಿಂದ ಎಂಪಿಎಂಸಿಯ ನಿರ್ದೇಶಕ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾರಿಹಾಳದ ಆಶಿಫ್ ಮುಲ್ಲಾ 9 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಪ್ರತಿ ಸ್ಪರ್ಧಿ ಶಿವನಗೌಡ ಪಾಟೀಲ್ 6 ಮತಗಳ ಪಡೆದು ಪರಾಭವಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಎಂ.ಎಸ್. ಗೌಡಪ್ಪಗೋಳ ಅವರು ಕಾರ್ಯನಿರ್ವಹಿಸಿದರು. ಚುನಾವಣೆ ಗೆಲುವಿಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಟಿಎಪಿಎಂಎಸ್ …

Read More »

ಮೇ.24 ರಿಂದ ಜೂ. 10ರವರೆಗೆ ದ್ವಿತಿಯ ಪಿಯುಸಿ ಪರೀಕ್ಷೆ !

ಬೆಂಗಳೂರು : ದ್ವಿತಿಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ.24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿವೆ. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1) ಮೇ 24: ಭೌತಶಾಸ್ತ್ರ, ಇತಿಹಾಸ 2) ಮೇ 25: ಮೈನಾರಿಟಿ ಲಾಂಗ್​ವೇಜಸ್​ 3) ಮೇ 26: …

Read More »

ಮುಂದಿನ ಸಿಎಂ ನಾನೇ: ಶಾಸಕ ಬಸನಗೌಡ ಯತ್ನಾಳ ಘೋಷಣೆ

  ದಾವಣೆಗರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದೆ. ನಾನು ಮಂತ್ರಿಯಾಗಬೇಕೆಂದು ಯಾರ ಕೈಕಾಲು ಹಿಡಿಯುವವನಲ್ಲ. ”ನಮಗೆ ಬರೋದಿದೆ ಸಿಎಂ ಕುರ್ಚಿ” ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರು. ಮುಖ್ಯಮಂತ್ರಿ ಆಗಿದ್ದವರು ಕೈಗಾರಿಕಾ ಮಂತ್ರಿಯಾಗಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ …

Read More »

ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕೆಲವಸ್ತುಗಳು …

Read More »

ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆ

  ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅರಭಾವಿಯ ಆನಂದ ಧರ್ಮಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಸಿಬಿ …

Read More »