Breaking News

ಜಿಲ್ಲೆ

ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ …

Read More »

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ

ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ‌ ಪಟ್ಟಣದ ಅವರ …

Read More »

ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …

Read More »

ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …

Read More »

ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!

ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ರಾಯಬಾಗ ಬಳಿ ರೈಲ್ವೆ ಹಳಿ ಮೇಲೆ ನಾಲ್ವರ ಆತ್ಮಹತ್ಯೆ ತಂದೆ, ತಾಯಿ ಮಕ್ಕಳು

ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಒಂದೇ ಕುಟುಂಬದ 4 ಜನರು ರಾಯಬಾಗ ರೈಲ್ವೆ ಹಳಿ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಾಯಬಾಗ್ ತಾಲೂಕಿನ ಭಿರಡಿ ಗ್ರಾಮದ ಕಲ್ಲಪ್ಪ ಬಡಿಗೇರ ಮತ್ತು ಆತನ ಪತ್ನಿ ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾತಪ್ಪ ಅಣ್ಣಪ್ಪ ಸುತಾರ (60),ಮಹಾದೇವಿ ಸಾತಪ್ಪ ಸುತಾರ (50), ಸಂತೋಷ ಸಾತಪ್ಪ ಸುತಾರ (26), ದತ್ತಾತ್ರಯ ಸಾತಪ್ಪ ಸುತಾರ (28) ಆತ್ಮಹತ್ಯೆ ಮಾಡಿಕೊಂಡವರು. ತಂದೆ …

Read More »

ಆಟೋ ಚಾಲಕನ ಎಡವಟ್ಟಿನಿಂದ ನಡೀತು ಭೀಕರ ಸರಣಿ ಅಪಘಾತ

ಬೆಂಗಳೂರು: ಬೆಂಗಳೂರು: ಆಟೋ ಚಾಲಕ ಮಾಡಿದ ಎಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, , ಆಟೋ, ಫ್ಯಾಸಿನೋ ಮತ್ತು ಬೈಕ್​ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಮೂರು ವಾಹನ ನುಜ್ಜುಗುಜ್ಜಾಗಿವೆ. ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಅಂತ ತಿಳಿದು ಬಂದಿದೆ. https://www.facebook.com/105350550949710/posts/255497042601726/

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ; ಈ ಬಾರಿ 11 ವಿಧೇಯಕ ಮಂಡನೆ; ಸ್ಪೀಕರ್​ ಕಾಗೇರಿ

ಬೆಂಗಳೂರು (ಜ. 27): ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಅಂದರೆ ಜ. 28ರಿಂದ ಪ್ರಾರಂಭವಾಗಲಿದೆ. ಫೆ. 5ರವರೆಗೆ ಏಳು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಈ ಬಾರಿ 11 ವಿಧೇಯಕಗಳು ಮಂಡನೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅಧಿವೇಶನ ಹಿನ್ನಲೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನಕ್ಕೆ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ರಾಜ್ಯಪಾಲರರಾದ ವಾಜೂಭಾಯಿ ಅವರನ್ನು …

Read More »

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಿ …

Read More »

ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು

ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ. ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ …

Read More »