ಬೆಂಗಳೂರು,ಜ.19- ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲ ಬಿಕ್ಕಟ್ಟು ನಿವಾರಣೆಯಾಗಿದೆ ಎನ್ನುವಷ್ಟರಲ್ಲೇ ಸಂಪುಟದಲ್ಲಿ ಸ್ಥಾನಮಾನ ಸಿಗದ ಅಸಮಾಧಾನಿತ ಶಾಸಕರು ದೆಹಲಿ ತೆರಳಿರುವುದು ಕಮಲ ಪಾಳೆಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಪ್ತ ಹಾಗೂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತು ಶಾಸಕ ಅರವಿಂದ್ ಬೆಲ್ಲದ್ ದಿಢೀರನೆ ರಾಷ್ಟ್ರೀಯ ನಾಯಕರ ಭೇಟಿಗೆ ತೆರಳಿರುವುದು ಕಮಲ ಪಾಳೆಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾಬೀತು ಮಾಡಿದೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಇಂದು ಮುಂಜಾನೆ ದಿಢೀರನೆ …
Read More »ಇತ್ತೀಚೆಗೆ ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದೀಗ ಮತ್ತೊಂದು ವಿವಾದ ಸೃಷ್ಟಿ!
ಮೈಸೂರು: ಇತ್ತೀಚೆಗೆ ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ರೈತರು ವೀಕ್ ಮೈಂಡ್ ಆದಾಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಾರೆ. ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣ ಎಂಬುದು ಸುಳ್ಳು. ಅವರ ದುರ್ಬಲ ಮನಸ್ಸೇ ರೈತರ ಆತ್ಮಹತ್ಯೆಗೆ …
Read More »ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ ಮಾಜಿ ಸಚಿವರ ಪುತ್ರ; ಡ್ರಗ್ ಪೂರೈಕೆ ಪ್ರಕರಣದಲ್ಲಿ ಮತ್ತೋರ್ವನ ಬಂಧನ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆಯನ್ನು ಸಿಸಿಬಿ ಚುರುಕುಗೊಳಿಸಿದೆ. ಈ ನಡುವೆ ಪ್ರಮುಖ ಆರೋಪಿಗಳಿಗೆ ಡಗ್ಸ್ ಪೂರೈಕೆ ಮಾಡ್ತಿದ್ದ ಫೆಡ್ಲರ್ ಗಳಿಗೂ ಬಿಸಿ ಮುಟ್ಟಿಸಲಾಗುತ್ತಿದೆ. ಲೂಮ್ ಪೆಪ್ಪರ್, ಬೆನಾಲ್ಡ್ ಅಲ್ಲದೇ ಮತ್ತೊಬ್ಬ ಪೆಡ್ಲರ್ ಈಗ ಅಂದರ್ ಆಗಿದ್ದಾನೆ. ಈ ನಡುವೆ ವಿರೇನ್ ಖನ್ನಾ ಶಿಷ್ಯನನ್ನು ಮತ್ತೆ ಬಾಡಿವಾರೆಂಟ್ ಪಡೆಯಲಾಗಿದೆ. ಹೌದು ಆದಿತ್ಯಾ ಆಳ್ವ ಬಂಧನ ಬೆನ್ನಲ್ಲೇ ಫೆಡ್ಲರ್ ಗಳಿಗೆ ಬಿಸಿ ಮುಟ್ಟಿಸಲು ಸಿಸಿಬಿ ಮುಂದಾಗಿದೆ. ಈ ನಡುವೆ ಹಲವು …
Read More »ಮಹಾರಾಷ್ಟ್ರ ಉದ್ಭವವಾಗಿದ್ದೆ ಕನ್ನಡ ನೆಲದಿಂದ’
ಬೆಳಗಾವಿ: ‘ಬೆಳಗಾವಿಯೂ ಐತಿಹಾಸಿಕ ಕಾಲದಿಂದಲೂ, ವರ್ತಮಾನದಲ್ಲೂ ಹಾಗೂ ಭವಿಷ್ಯದಲ್ಲೂ ಕನ್ನಡಿಗರದೆ. ಇದರಲ್ಲಿ ಯಾವುದೇ ಸಂಶಯ ಬೇಡ. ಹಾಗೆ ನೋಡಿದರೆ ಇಂದಿನ ಮಹಾರಾಷ್ಟ್ರವು ಹಿಂದೊಮ್ಮೆ ಕನ್ನಡ ನೆಲವಾಗಿತ್ತು’ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದ್ದಾರೆ. ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ’ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಪ್ರಕಟಣೆ ನೀಡಿರುವ ಅವರು, ‘ಮಹಾರಾಷ್ಟ್ರ ಹಾಗೂ ಮರಾಠಿ ಭಾಷೆ ಉದ್ಭವವಾಗಿದ್ದೆ ಕನ್ನಡ …
Read More »ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್ – ಬೇಡಿಕೆಗಳು ಏನು?
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜ.22 ರಂದು ಶಾಂತಿಯುತ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ 22 ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬಗ್ಗೆ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿ, ಈ ಬಂದ್ ಶಾಂತಿಯುತವಾಗಿ ಇರಲಿದೆ. ಯಾವುದೇ ರೀತಿ ಗುಂಪು ಮಾಡಿ ಪ್ರತಿಭಟನೆ ಇರುವುದಿಲ್ಲ. ಸ್ವಯಂಪ್ರೇರಿತವಾಗಿ ಬೆಂಗಳೂರಿನಲ್ಲಿ …
Read More »ರಥ ಸಪ್ತಮಿ ದಿನದಂದು ‘ಪೊಗರು’ ರಿಲೀಸ್
ಬೆಂಗಳೂರು: ಇದೇ ಫೆಬ್ರವರಿ 19ಕ್ಕೆ ಚಂದನವನದ ಬಹುನಿರೀಕ್ಷಿತ ಪೊಗರು ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಇನ್ಸ್ಟಾಗ್ರಾಂನಲ್ಲಿ ಲೈವ್ ಬಂದ ಅದ್ಧೂರಿ ಹುಡುಗ ಧ್ರುವ ಸರ್ಜಾ ಅಭಿಮಾನಿಗಳ ಜೊತೆ ಪೊಗರು ಚಿತ್ರದ ಬಗೆಗಿನ ಮಹತ್ವದ ವಿಷಯಗಳನ್ನು ಹಂಚಿಕೊಂಡರು. ಕಥೆ ಸಾಕಷ್ಟು ಶೇಡ್, ಸರ್ಪ್ರೈ ಸ್ ಹೊಂದಿದ್ದರಿಂದ ಬರೋಬ್ಬರಿ ಮೂರುವರೆ ವರ್ಷ ಸಿನಿಮಾ ಮಾಡಲಾಗಿದೆ. ಇದೊಂದು ಕೇವಲ ಮಾಸ್ ಸಿನಿಮಾ ಅಲ್ಲ. …
Read More »ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ನಡೆದರೆ ರಕ್ತಕ್ರಾಂತಿ ಆಗುತ್ತೆ : ವಾಟಾಳ್ ನಾಗರಾಜ್ ಎಚ್ಚರಿಕೆ
ಬೆಂಗಳೂರು : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ನಡೆದರೆ ರಕ್ತಕ್ರಾಂತಿ ಆಗುತ್ತೆ. ಸಿಎಂ ಯಡಿಯೂರಪ್ಪಗೆ ಶಕ್ತಿ, ಪ್ರೀತಿ, ಬದ್ಧತೆ ಇಲ್ಲ. ಬೆಳಗಾವಿ, ಕಾರವಾರದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ. ಬೆಳಗಾವಿ ಮಹಾರಾಷ್ಟ್ರ ಗಡಿ ಬಂದ್ ಆಗಲೇಬೇಕು. ಎಂಇಎಸ್ , ಶಿವಸೇನೆಯನ್ನು …
Read More »ಗಡಿ ವಿಚಾರದ ಬಗ್ಗೆ ಉದ್ಧವ್ ಠಾಕ್ರೆ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ : ಸತೀಶ್ ಜಾರಕಿಹೊಳಿ
ಬೆಳಗಾವಿ : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಉದ್ಧವ್ ಠಾಕ್ರೆ ಅವರು ಗಡಿ ವಿಚಾರದ ಬಗ್ಗೆ ಈ ಹಿಂದೆ ಕೂಡ ಮಾತನಾಡಿದ್ದರು. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಗಡಿ ವಿಚಾರ ಬಂದಾಗ ನಮ್ಮ ಪಕ್ಷದ ವತಿಯಿಂದ ಯಾವುದೇ …
Read More »ಎಂಇಎಸ್ಗೆ ಸರಿಯಾದ ಪೆಟ್ಟು ಕೊಟ್ಟಿದ್ರೆ ಈ ಮಾತುಗಳ ಬರ್ತಿರಲಿಲ್ಲ
ಬೆಂಗಳೂರು: ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಒಂದು ಬಾರಿ ಇತಿಹಾಸವನ್ನ ಅವಲೋಕಿಸಿದ್ರೆ ಯಾರು ಯಾರ ಭಾಗವನ್ನ ಅತಿಕ್ರಮಿಸಿಕೊಂಡಿದ್ದಾರೆ ಅನ್ನೋದು ಅರಿವಾಗಲಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ. ಒಮ್ಮೆ ಇತಿಹಾಸವನ್ನ ಅವಲೋಕಿಸಿ: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ …
Read More »ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »
Laxmi News 24×7