Breaking News

ಜಿಲ್ಲೆ

ಬೆಳಗಾವಿ ಲೋಕಸಭೆ ಚುನಾವಣೆ, ಕಾಂಗ್ರೇಸ್ ಹಾಗೂ ಬಿಜೆಪಿ ಅಭ್ಯರ್ಥಿ ಗಳು ಯಾರು… ?

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಇನ್ನು 2 ತಿಂಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಚಟುವಟಿಕೆ ತೀವ್ರಗೊಂಡಿದೆ. ಭಾರತೀಯ ಜನತಾ ಪಾರ್ಟಿಯಲ್ಲಿ ಮೂವರು ಮಾಜಿ ಸಂಸದರು ಸರಿದಂತೆ ಹಲವರು ಕಣಕ್ಕಿಳಿಯುವ ಆಸಕ್ತಿ ತೋರಿಸುತ್ತಿದ್ದಾರೆ. ನಿತ್ಯ ಆಕಾಂಕ್ಷಿಗಳಿಂದ ಬರುವ ಫೋನ್ ಕರೆಗೆ ಸಂಘಪರಿವಾರದ ಮುಖಂಡರು ಬೇಸತ್ತಿದ್ದಾರೆ. ಆಕಾಂಕ್ಷಿಗಳು ಸಂಘಪರಿವಾರದ ಮುಖಂಡರಲ್ಲದೆ, ಬೆಂಗಳೂರು, ದೆಹಲಿಯ ಬಿಜೆಪಿ ನಾಯಕರ ಮನೆಯ ಕದವನ್ನೂ ತಟ್ಟುತ್ತಿದ್ದಾರೆ. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೇಂದ್ರ ರೈಲ್ವೆ ಖಾತೆ ಸಚಿವರಾಗಿದ್ದ ಸುರೇಶ …

Read More »

ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಕಮೀಷನರೆಟ್ ವ್ಯಾಪ್ತಿಯಲ್ಲಿನ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ ಆವರಣದಿಂದ 500 ಮೀಟರ್ ಸುತ್ತಳತೆಯಲ್ಲಿ ಹಾಗೂ ಬೆಳಗಾವಿ ತಾಲ್ಲೂಕಿನಾದ್ಯಂತ ಡಿಸೆಂಬರ್ 30 ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಡಿಸೆಂಬರ್ 31 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಿ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಆದೇಶಿಸಿದ್ದಾರೆ. ಬೆಳಗಾವಿ ನಗರದ ಬಿ.ಕೆ ಮಾಡೆಲ್ ಶಾಲೆಯ ಸುತ್ತಲಿನ …

Read More »

ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ

ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …

Read More »

ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?

ಗ್ರಾಮ‌ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು …

Read More »

ಬ್ರಿಟನ್ ದೇಶದಿಂದ ಭಾರತಕ್ಕೆ ಮರಳಿರುವ ಜನರ ಪೈಕಿ ಆರು ಮಂದಿಯಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್

ಬೆಂಗಳೂರು(ಡಿ. 29): ಬ್ರಿಟನ್ ದೇಶದಿಂದ ಭಾರತಕ್ಕೆ ಮರಳಿರುವ ಜನರ ಪೈಕಿ ಆರು ಮಂದಿಯಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಮೂವರು ಮಂದಿ ಇದ್ದಾರೆ. ಹೈದರಾಬಾದ್​ನ ಇಬ್ಬರು ಹಾಗೂ ಪುಣೆಯ ಒಬ್ಬರೂ ಇದರಲ್ಲಿ ಸೇರಿದ್ದಾರೆ. ಬೆಂಗಳೂರಿನ ಮೂವರಲ್ಲಿ ನೂತನ ವೈರಸ್ ಮ್ಯೂಟೆಂಟ್ ಪತ್ತೆಯಾಗಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ. ಅಧಿಕೃತ ಮಾಹಿತಿ ಪ್ರಕಾರ ಬ್ರಿಟನ್ ದೇಶದಿಂದ ಡಿಸೆಂಬರ್ 1ರಿಂದ 21ರವರೆಗೆ ಬೆಂಗಳೂರಿಗೆ ಬಂದವರ ಸಂಖ್ಯೆ 1,594 ಇದೆ. …

Read More »

ನಮ್ಮಂಥ ರಾಜಕಾರಣಿಗಳ ತೆವಲುಗಳಿಗೆ ಧರ್ಮೇಗೌಡರು ಬಲಿ: ಕುಮಾರಸ್ವಾಮಿ ವಿಷಾದ

ಬೆಂಗಳೂರು(ಡಿ. 29): ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಉಪಸಭಾಪತಿ ಎಸ್ ಎಲ್ ಧರ್ಮೇಗೌಡರ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರ ನೋವು ವ್ಯಕ್ತಪಡಿಸಿದರು. ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮೇಗೌಡರ ಸಾವು ಬರೀ ಸಾವಲ್ಲ, ಇವತ್ತಿನ ರಾಜಕಾರಣದ ಕೊಲೆ ಎಂದು ವಿಷಾದಿಸಿದರು. ನಮ್ಮಂಥ ರಾಜಕಾರಣಿಗಳ ತೆವಲುಗಳಿಗೆ ಸಜ್ಜನ ವ್ಯಕ್ತಿತ್ವದ ಧರ್ಮೇಗೌಡರು ಬಲಿಯಾಗಿದ್ಧಾರೆ ಎಂದೂ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಂಡಿದ್ದು, ಇವತ್ತಿನ ಎಲ್ಲಾ ರಾಜಕಾರಣಿಗಳೂ ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಕರೆ …

Read More »

ಕೊರೆಯುವ ಚಳಿಯಲ್ಲೂ ರಾತ್ರಿಯಿಡೀ ಕನ್ನಡ ಧ್ವಜ ಕಾವಲು ಮಾಡಿದ ಕನ್ನಡ ಪರ ಹೋರಾಟಗಾರರು

  ಬೆಳಗಾವಿ: ಮಹಾನಗರ ಪಾಲಿಕೆ ಪ್ರವೇಶ ದ್ವಾರ ಮುಂದೆ ಸೋಮವಾರ ಬೆಳಿಗ್ಗೆ ಸುಮಾರು11 ಗಂಟೆಗೆ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ನೇತೃತ್ವದಲ್ಲಿ ಧ್ವಜ ಸ್ತಂಭದ ಸಮೇತ ಕನ್ನಡ ಧ್ವಜ ಹಾರಿಸಿ ಕನ್ನಡ ಮಾತೆಗೆ ಜಯ ಘೋಷಣೆ ಕೂಗಿದರು. ಇನ್ನೊಂದು ಕಡೆ ಅದನ್ನು ತೆರವುಗೊಳಿಸುವಂತೆ ಪೊಲೀಸ್ ಅಧಿಕಾರಿಗಳ ಒತ್ತಡ ಹೇರಿದರು ಅದಕ್ಕೆ ಬಗ್ಗದ ಕನ್ನಡ ಪರ ಹೋರಾಟಗಾರರು ಅದನ್ನು ತೆರವುಗೊಳಿಸದಂತೆ ಇಡೀ ರಾತ್ರಿಯಲ್ಲ ಕೊರೆಯುವ ಚಳಿಯಲ್ಲೂ ಅದರ ಕಾವಲು ಮಾಡುವುದರ ಜೊತೆಗೆ …

Read More »

ಕನ್ನಡ ಧ್ವಜ ತೆರವಿಗೆ ಆಗ್ರಹಿಸಿ ಎಂಇಎಸ್ ಯುವ ಮೋರ್ಚಾ ಪ್ರತಿಭಟನೆ, ಪೊಲೀಸರೊಂದಿಗೆ ಜಟಾಪಟಿ

  ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿರುವ ಕನ್ನಡಪರ ಸಂಘಟನೆಗಳ ಹೋರಾಟಗಾರರು, ಧ್ವಜವನ್ನು ತೆರವುಗೊಳಿಸದೇ ಅಲ್ಲಿಯೇ ಮುಂದುವರಿಸಬೇಕು ಎಂದು ಧರಣಿ ಮುಂದುವರಿಸಿದ್ದಾರೆ.. ಆದರೆ ಇನ್ನೊಂದೆಡೆ ಎಂಇಎಸ್ ಯುವ ಸಂಘಟನೆಯವರು ಧ್ವಜ ತೆರವುಗೊಳಿಸಬೇಕು ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಧ್ವಜ ತೆರವುಗೊಳಿಸಿ ಇಲ್ಲವೇ ಪರಿಣಾಮ ಎದುರಿಸಿ ಎಂದು ಸವಾಲು ಎಸೆದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಪರ ಸಂಘಟನೆಗಳ …

Read More »

ಧರ್ಮೇಗೌಡರ ಹಠಾತ್ ನಿಧನ ; ಸಂತಾಪ ಸೂಚಿಸಿದ ಸಚಿವ ರಮೇಶ್ ಜಾರಕಿಹೊಳಿ‌

ಬೆಂಗಳೂರು : ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ ಎಸ್. ಎಲ್ ಧರ್ಮೇಗೌಡ ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಂತಾಪ …

Read More »

ಶಾಂಕಿಗ್ ನ್ಯೂಸ್‌ : ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾ‌ನಪರಿಷತ್ ಉಪಸಭಾಪತಿ !

ಚಿಕ್ಕಮಗಳೂರು : ಜೆಡಿಎಸ್ ದಿಂದ ವಿಧಾ‌ನ ಪರಿಷತ್ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲ್ಲೂಕಿನ ಗುಣಸಾಗರದ ಸಮೀಪ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ವರದಿಯಾಗಿದ್ದು, ನಾಡಿನ ಜನತೆಯನ್ನು ಬೆಚ್ಚಿ ಬಿಳುವಂತೆ ಮಾಡಿದೆ. ಈಚೆಗೆ ವಿಧಾನ ಪರಿಷತ್ ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತ ವೇಳೆ ಕಾಂಗ್ರೆಸ್ ನಾಯಕರು ಎಳೆದುಕೊಂಡು ಹೊರ ನಡೆದಿದ್ದರು. ಅಲ್ಲಿ ನಡೆದ ಗಲಾಟೆಯಿಂದ ನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತಿದ್ದರು ಖಚಿತ …

Read More »