Breaking News

ಜಿಲ್ಲೆ

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …

Read More »

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.

Read More »

ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ :  ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ  ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ದತ್ತು‌ ಪಡೆದು, ಮಾನವೀಯತೆ ಮೆರೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್‌ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ …

Read More »

ಅಸಲಿ-ನಕಲಿ ದೇಶಭಕ್ತರು ಯಾರು ಎಂಬುದ್ದನ್ನು ಜನರು ತೀರ್ಮಾನ ಮಾಡುತ್ತಾರೆ: ಸತೀಶ್ ಜಾರಕಿಹೊಳಿ

ಗೋಕಾಕ: ಇತಿಹಾಸದಲ್ಲಿ ಬಹಳಷ್ಟು ಘಟನೆಗಳು ನಡೆದಿವೆ. ಬಿಜೆಪಿ ಪಕ್ಷವು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿ ಸುತ್ತಿದೆ. ದೇಶದಲ್ಲಿರುವ ಪ್ರತಿಯೊಂದು ಸಮುದಾಯವು ಸಮಾನತೆ ಹಾಗೂ ಪ್ರೀತಿಯಿಂದ ಬಾಳುತ್ತಿದೆ. ಆದರೆ ಬಿಜೆಪಿಯು ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ದೇಶದಲ್ಲಿನ ಶಾಂತಿ ಕದಡಲು ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಗೋಕಾಕನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ : ಡಿ.ಕೆ.ಶಿ

ಬೆಂಗಳೂರು, – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕಫ್ರ್ಯೂ ಜಾರಿಗೆ ತರುವಾಗ ಯಾವ ಮಂತ್ರಿಯ ಮಾತನ್ನು ಕೇಳಿಲ್ಲ. ಒಬ್ಬ ಸಚಿವ ಹೇಳಿದ ಎಂಬ ಕಾರಣಕ್ಕೆ ಯಡಿಯೂರಪ್ಪ ಸಹಿ ಮಾಡಿದ್ದರು. ಕೊನೆಗೆ ಅವರದೇ ಸರ್ಕಾರದ ಸಚಿವರು, ಪಕ್ಷದವರು ಟೀಕಿಸಿದರೆ ಎಂಬ ಕಾರಣಕ್ಕೆ …

Read More »

ಪ್ರಧಾನಿ ಸಂವಾದದ ವೇಳೆ ನಿದ್ರೆಗೆ ಜಾರಿದ ಸಿಎಂ, B.S.Y.ಸದಾನಂದ ಗೌಡ,& ಕಾರಜೊಳ

ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನಿದ್ರೆಗೆ ಜಾರಿದ್ದರು. ಈ ಕುರಿತ ವೀಡಿಯೋ ಈಗ ವೈರಲ್ ಆಗಿದೆ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 6 ರಾಜ್ಯಗಳ ರೈತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬೆಂಗಳೂರಿನಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ಈ ಮೂವರೂ ಸಾಲಿನಲ್ಲಿ ಕುಳಿತು ನಿದ್ದೆಗೆ ಜಾರಿದ್ದರು.

Read More »

ಸಿಎಂ ಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ

ವಿಜಯಪುರ(ಡಿಸೆಂಬರ್​. 25): ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ, ಬದಲಾವಣೆಯಾಗುತ್ತೋ ಗೊತ್ತಿಲ್ಲ. ಮತ್ತೇನಾದರೂ ಆಗಬಹುದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸದಾಗಿ ರಾಜಕೀಯ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ಬಗ್ಗೆ ನೀವು ಮಾಧ್ಯಮದವರೇ ಅದನ್ನು ಎಬ್ಬಿಸಿದ್ದೀರಿ. ನೀವು ಯಾವಾಗ ಯಾರ ಪರವಾಗಿ ಸುದ್ದಿ ಬಿತ್ತರಿಸುತ್ತಿರೋ ಗೊತ್ತಿಲ್ಲ. ಎಲ್ಲವೂ …

Read More »

ಬೆಳಗಾವಿಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನಾಚರಣೆ, ಕಿಸಾನ್ ಸಮ್ಮಾನ ಕಾರ್ಯಕ್ರಮ

  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ, ನಗರ, ಗ್ರಾಮೀಣ ಮಂಡಳ ಘಟಕಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ ಮಾತನಾಡಿ, …

Read More »

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ

ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16ರಂದು ವಿಜಯಪುರಕ್ಕೆ ಆಗಮಿಸುತ್ತಿದ್ದಾರೆ ಸಂಪುಟ ವಿಸ್ತರಣೆಯಾಗುತ್ತೋ, ಇನ್ನೇನು ಆಗುತ್ತೋ ಎಂಬುದು ಗೊತ್ತಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಯತ್ನಾಳ್ ಓರ್ವ ಆರ್ಡಿನರಿ ಶಾಸಕ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಯತ್ನಾಳ್ ಪಕ್ಷದ ಅಧ್ಯಕ್ಷರಲ್ಲ, ಅವರೊಬ್ಬ ಆರ್ಡಿನರಿ ಶಾಸಕ. ಬೀದಿಯಲ್ಲಿ ನಿಂತು ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಪಕ್ಷದ ಚೌಕಟ್ಟಿನಲ್ಲಿ …

Read More »

ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು

ಗೋಕಾಕ: ಕಳೆದ ದಿ.22 ರಂದು ನಡೆದ ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆ ಕಾರ್ಯ ದಿ. 30 ರಂದು ನಗರದ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದ್ದು ಅದರ ನಿಮಿತ್ಯವಾಗಿ ಶುಕ್ರವಾರದಂದು ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಮತ ಏಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಏಣಿಕೆ ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗೆ ಒಂದು ದಿನದ ತರಬೇತಿಥಿಟಿಜಿಟಿu ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ನೀಡಲಾಯಿತು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು, ದಿ. …

Read More »