Breaking News

ಜಿಲ್ಲೆ

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ

ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.   ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ …

Read More »

ಗ್ರಾಪಂ. ಚುನಾವಣೆ : ಅಧಿಕಾರಕ್ಕಾಗಿ ಸವದಿ-ಕುಮಠಳ್ಳಿ ಬೆಂಬಲಿಗರ ಫೈಟ್ !

ಬೆಳಗಾವಿ : ರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಪಂ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಮಹೇಶ ಕುಮಠಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. ಅಥಣಿ ತಾಲ್ಲೂಕಿನ 149 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್ 27 ಕ್ಕೆ ಚುನಾವಣೆ ನಿಗದಿಯಾಗಿದೆ. 56 ಸದಸ್ಯರನ್ನು ಹೊಂದಿರುವ ಸಂಕೋನಟ್ಟಿ ಪಂಚಾಯಿತಿಯಲ್ಲಿ ಬಹುಮತ ಸಾಧಿಸಲು ಬಿಜೆಪಿ ಎರಡೂ ಬಣಗಳು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ …

Read More »

29ರಂದು ಬಿಎಸ್‍ವೈ-ಷಾ ಭೇಟಿ, ಸಂಕ್ರಾಂತಿಗೆ ಸಂಪುಟಕ್ಕೆ ಸರ್ಜರಿ ಫಿಕ್ಸ್..?

ಬೆಂಗಳೂರು,ಡಿ.25- ಕಳೆದ ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುನ್ನೆಲೆಗೆ ಬಂದಿದ್ದು, ಸಂಕ್ರಾಂತಿ ಹಬ್ಬದ ನಂತರ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಕರ್ನಾಟಕದ ಬೆಳವಣಿಗೆಗಳ ಕುರಿತಂತೆ ವಿಜಯೇಂದ್ರ ಮಾತುಕತೆ …

Read More »

ಗೋಕಾಕ ಫಾಲ್ಸ್ ಅತೀ ಶೀಘ್ರದಲ್ಲಿ ದೊಡ್ಡ ಮಾದರಿಯ ಪ್ರವಾಸಿ ತಾಣ ವಾಗಲಿದೆ -. ರಮೇಶ್ ಜಾರಕಿಹೊಳಿ

: ಗೋಕಾಕ: ಗೋಕಾಕ ಅಭಿವೃದ್ಧಿ ಆಗುತ್ತಿದೆ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ ನಗರವನ್ನು ಫಾರಿನ್ ಮಾದರಿಯಲ್ಲಿ ನಿರ್ಮಾಣ ಮಾಡಲಿದ್ದೇವೆ ಎಂದು ಇಂದು ಸುದ್ದಿ ಗಾರ ರೊಂದಿಗೆ ಮಾತನಾಡಿದಾಗ ಹೇಳಿದರು, ಗೋಕಾಕ ಫಾಲ್ಸ್ ಬ್ರಿಡ್ಜ್ ಕಾಮಗಾರಿ ಪ್ರಗತಿ ಯಲ್ಲ್ಲಿದೆ ಇನ್ನು ಇದು ಒಂದು ವರೆ ವರ್ಷದಲ್ಲಿ ಮುಗಿಯ ಬಹುದು ಈಗಾಗಲೇ 300ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ, ಹರಿದ್ವಾರ ಮಾದರಿ ಘಾಟ ನಿರ್ಮಾಣ ಮಾಡಿ, ಪ್ರಯಾಣಿಕರಿಗೆ ಅನಕ್ಕೂಲಕ್ಕ ತಕ್ಕ ಹಾಗೆ …

Read More »

ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ: ಕಲಬುರ್ಗಿ  ಹೈಕೋರ್ಟ್

ಬೆಂಗಳೂರು : ಕರ್ತವ್ಯಲೋಪ ಎಸಗಿದ ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರಗಳ ತನಕ ರಸ್ತೆ ಸ್ವಚ್ಛಗೊಳಿಸುವ ಶಿಕ್ಷೆ ನೀಡಿ ಕಲಬುರ್ಗಿ  ಹೈಕೋರ್ಟ್ ವಿಭಾಗೀಯ ಪೀಠ (Kalburgi Bench) ಆದೇಶ ನೀಡಿದೆ. ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ತೆರಳಿದ ಮಹಿಳೆಯಿಂದ ದೂರು ಸ್ವೀಕರಿಸಲು ಮತ್ತು ತನಿಖೆ ನಡೆಸಲು ವಿಫಲವಾದ ಪೊಲೀಸ್ ಇನ್ಸ್ ಪೆಕ್ಟರ್ ಗೆ ರಾಜ್ಯ ಹೈಕೋರ್ಟ್ ಈ ಅಪರೂಪದ ಶಿಕ್ಷೆ ಪ್ರಕಟಿಸಿದೆ. ಮುಂದಿನ ಒಂದು ವಾರಗಳ ತನಕ ಠಾಣೆಯ …

Read More »

ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ನಿಶ್ಚಯವಾಗಿದ್ದು, ಡಿಸೆಂಬರ್ 28ರಂದು ವಿವಾಹ ನಡೆಯಲಿದೆ. ಮಗಳ ಮದುವೆ ತಯಾರಿಯಲ್ಲಿ ರಮೇಶ್ ಸಖತ್ ಬ್ಯುಸಿಯಾಗಿದ್ದು, ನಿಹಾರಿಕಾ ಅವರು ಅಕ್ಷಯ್ ಅವರನ್ನು ಕೈ ಹಿಡಿಯುತ್ತಿದ್ದಾರೆ. ಅಕ್ಷಯ್ ಸಿನಿಮಾ ಕ್ಷೇತ್ರದವರಲ್ಲ ಬದಲಿಗೆ ನಿಹಾರಿಕಾ ಅವರ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರು ನಿಶ್ಚಯಿಸಿ ವಿವಾಹ ಮಾಡುತ್ತಿದ್ದಾರೆ. ಕೊರೊನಾ ಹಿನ್ನೆಲೆ ಗ್ರ್ಯಾಂಡ್ ಆಗಿ ವಿವಾಹ ಮಾಡುತ್ತಿಲ್ಲ. ಹೆಚ್ಚು ಜನರು …

Read More »

ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು.

ಗೋಕಾಕ: ಹಿರಿಯ ಸಹಕಾರಿ, ಮಹಾಲಕ್ಷ್ಮೀ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಾಳಾಸಾಹೇಬ ಮಾಂಗಳೇಕರ ಅವರ ಮಾರ್ಗದರ್ಶನದಲ್ಲಿ ಮತ್ತು ಗ್ರಾಹಕರ ಸಹಕಾರದಿಂದ ನಮ್ಮ ಬ್ಯಾಂಕು ಪ್ರಸಕ್ತ ಸಾಲಿನಲ್ಲಿ 1.70 ಕೋಟಿ ರೂಗಳ ಲಾಭ ಗಳಿಸಿದೆ ಎಂದು ಇಲ್ಲಿನ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕಿನ ಉಪಾಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ಹೇಳಿದರು. ಬ್ಯಾಂಕಿನ 44ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಗ್ರಾಹಕರ ಹಿತಕ್ಕನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅತ್ತುತ್ತಮವಾದ ಸೇವೆಯನ್ನು …

Read More »

ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.

ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‍ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿಂದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.   ಗುರುವಾರದಂದು ಇಲ್ಲಿಯ ಕೆಎಮ್‍ಎಫ್ ಪ್ರಧಾನ ಕಛೇರಿಯಲ್ಲಿ ನಂದಿನಿ ಸಿಹಿ ಉತ್ಸವ …

Read More »

ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ.

ಬೆಂಗಳೂರು(ಡಿ.24): ನಾಳೆ ವೈಕುಂಠ ಏಕಾದಶಿ. ಕೊರೋನಾ ಬಂದಿಲ್ಲ ಎಂದಿದ್ದರೆ ಎಲ್ಲಾ ದೇವಾಲಯಗಳಲ್ಲೂ ಭಕ್ತರದ್ದೇ ಕಾರುಬಾರು ಇರುತ್ತಿತ್ತು. ಪ್ರತೀ ವರ್ಷ ಸಂಭ್ರಮದಿಂದ ಆಚರಿಸಲಾಗುತ್ತಿದ್ದ ವೈಕುಂಠ ಏಕಾದಶಿಯನ್ನು ಈ ವರ್ಷ ಆಚರಿಸಲು ಸಾಧ್ಯವಿಲ್ಲ. ಕಾರಣ ಮಹಾಮಾರಿ ಕೊರೋನಾ. ಹೌದು, ಈ ಕೊರೋನಾ ಕಾರಣದಿಂದಾಗಿ ನಾಳಿನ ವೈಕುಂಠ ಏಕಾದಶಿಯಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಬೆಂಗಳೂರಿನ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗುತ್ತದೆ ಎಂದು ತಿಳಿದು ಬಂದಿದೆ. ಕೋವಿಡ್-19 ಹಿನ್ನೆಲೆಯಲ್ಲಿ ದೇವಾಲಯಗಳಿಗೆ …

Read More »

ಸಾಂಸ್ಕೃತಿಕ ನಗರಿಯಲ್ಲಿ ಹೊಸವರ್ಷಕ್ಕಿಲ್ಲ ಸಂಭ್ರಮ; ಅರಮನೆ ದೀಪಾಲಂಕಾರದ ಜೊತೆ ಹಲವು ಕಾರ್ಯಕ್ರಮಗಳು ರದ್ದು

ಮೈಸೂರು: ಸಾಕಷ್ಟು ಕೆಟ್ಟ ಘಟನೆಗಳಿಂದ ಕಳೆದು ಹೋಗಿರುವ ಈ 2020ರನ್ನ ಕಳುಹಿಸಿ 2021ನ್ನು ಸಂಭ್ರಮದಿಂದ ಸ್ವಾಗತಿಸಲು ವಿಶ್ಚದಾದ್ಯಂತ ಜನರು ಸಜ್ಜಾಗಿದ್ದಾರೆ. ಆದರೆ, ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿಯಾಗಿರುವ  ಮೈಸೂರಿನಲ್ಲಿ ಈ ವರ್ಷ ಹೊಸ ವರ್ಷದ ಸಂಭ್ರಮಗಳಿಗೆ ಬ್ರೇಕ್‌ ಬಿದ್ದಿದೆ. ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಹೊಸವರ್ಷಾಚರಣೆ ಕಾರ್ಯಕ್ರಮಗಳು ಇರೋದಿಲ್ಲ,  ಮೈಸೂರು ಅರಮನೆ ದೀಪಾಲಂಕಾರ ಹಾಗೂ ಅರಮನೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಬಾಣಬಿರುಸು ಪ್ರದರ್ಶನದ ಮೂಲಕ ಹೊಸ ವರ್ಷ ಸ್ವಾಗತವು ಕೂಡ …

Read More »