Breaking News

ಜಿಲ್ಲೆ

ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಹೈಕೋರ್ಟ್ ಶಾಕ್

ಬೆಂಗಳೂರು: ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಶಾಕ್ ಹೈಕೋರ್ಟ್​​ ಶಾಕ್ ನೀಡಿದ್ದು, ಸರ್ಕಾರದ ಆದೇಶ ಅನುಷ್ಟಾನಗೊಳಿಸದಂತೆ ಹೈಕೋರ್ಟ್ ನಿರ್ಬಂಧ ಹೇರಿದೆ. ಆಗಸ್ಟ್ 31 ರಂದು ಶಾಸಕರು, ಸಂಸದರ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ 62 ಪ್ರಕರಣಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆಯೂ ಹೈಕೋರ್ಟ್​ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಿತ್ತು. ಅರ್ಜಿಯಲ್ಲಿ ಸರ್ಕಾರ ನಿಯಮಬಾಹಿರವಾಗಿ, ಅಭಿಯೋಜಕರ ಅಭಿಪ್ರಾಯವಿಲ್ಲದೇ ನಿರ್ಧಾರ ಕೈಗೊಂಡಿದೆ …

Read More »

ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ

ಬೆಂಗಳೂರು,ಡಿ.21- ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ.  ಮೊದಲ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‍ಗಳನ್ನು ಬಳಸಿಕೊಳ್ಳಲಾಗಿದೆ.  ಮತಗಟ್ಟೆಗಳಿಗೆ ಸಿಬ್ಬಂದಿ, ಮತಪೆಟ್ಟಿಗೆ ಮತ್ತಿತರ ಸಾಮಾಗ್ರಿಗಳನ್ನು ಕೊಂಡೊಯ್ಯಲು ಮತ್ತು ಮರಳಿ ಕರೆತರಲು ಬಸ್‍ಗಳನ್ನು ಬಳಸಿಕೊಳ್ಳಲಾಗುತ್ತಿದೆ. ದೈನಂದಿನ ಮಾರ್ಗಗಳಲ್ಲಿ ಸಂಚರಿಸುವ ಬಸ್‍ಗಳನ್ನು ಹೊರತುಪಡಿಸಿ ಹೆಚ್ಚುವರಿ ಬಸ್‍ಗಳನ್ನು ಒಪ್ಪಂದದ ಮೇರೆಗೆ ಗ್ರಾಪಂ ಚುನಾವಣಾ ಕಾರ್ಯಕ್ಕೆ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ  ಮೂಲಗಳು ತಿಳಿಸಿವೆ.  ನಿತ್ಯ …

Read More »

ಕೊರೊನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿಜಯ್ ಶಿರ್ಕೆ ಅವರ ನಿಧನ

ಮುಂಬೈ, ಡಿ.21- ಕೊರೊನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ವಿಜಯ್ ಶಿರ್ಕೆ ಅವರು ಚಿಕಿತ್ಸೆ ಫಲಿಸದೆ ಥಾಣೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಶಾಲಾ ಜೀವನದಲ್ಲೇ ಕ್ರಿಕೆಟ್‍ನತ್ತ ಒಲವು ತೋರಿದ್ದ ವಿಜಯ್ ಶಿರ್ಕೆ ಅವರು ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್‍ಗೆ ಆಪ್ತ ಗೆಳೆಯರಾಗಿದ್ದರಲ್ಲದೆ ಸಚಿನ್ ಹಾಗೂ ವಿನೋದ್ ಕಾಂಬ್ಳೆ ಅವರೊಂದಿಗೆ ಹಲವು ಪಂದ್ಯಗಳಲ್ಲಿ ಇನ್ನಿಂಗ್ಸ್ ಕಟ್ಟಿದ್ದರು. ಮುಂಬೈನ ಕಲ್ಯಾಣ್ ಪ್ರಾಂತ್ಯದಲ್ಲಿ ಜನಿಸಿದ ವಿಜಯ್ ಶಿರ್ಕೆ ಅವರು ಮುಂಬೈ ಕ್ರಿಕೆಟ್ ಅಸೋಸಿಯೇಷನ್‍ನ ತರಬೇತುದಾರರಾಗಿಯೂ ಕಾರ್ಯನಿರ್ವಹಿಸುವ ಮೂಲಕ …

Read More »

ಚುನಾವಣೆ ಯಾವುದೇ ಇರಲಿ, ಬೆರಳಿಗೆ ಇಂಕ್ ಹಚ್ಚುವುದು ಕಡ್ಡಾಯ. ಒಮ್ಮೆ ಹಚ್ಚಿದ ಇಂಕ್ ಎಷ್ಟೇ ಉಜ್ಜಿ, ತೀಡಿದರೂ ಅದು ಹೋಗಲ್ಲ.

(ಡಿಸೆಂಬರ್​.21): ಚುನಾವಣೆ ಯಾವುದೇ ಇರಲಿ, ಬೆರಳಿಗೆ ಇಂಕ್ ಹಚ್ಚುವುದು ಕಡ್ಡಾಯ. ಒಮ್ಮೆ ಹಚ್ಚಿದ ಇಂಕ್ ಎಷ್ಟೇ ಉಜ್ಜಿ, ತೀಡಿದರೂ ಅದು ಹೋಗಲ್ಲ. ಅಂತಹ ಅಳಿಸಲಾಗದ ಶಾಯಿಯನ್ನು ಜಗತ್ತಿನ ಹಲವು ರಾಷ್ಟ್ರಗಳಿಗೆ ಸರಬರಾಜು ಮಾಡುವುದು ನಮ್ಮ ಮೈಸೂರಿನ ಹೆಚ್ಚುಗಾರಿಕೆ. ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಇದೀಗ ಗ್ರಾಮ ಪಂಚಾಯಿತಿ ಚುನಾವಣೆಗೂ ಇಂಕ್ ಸರಬರಾಜು ಮಾಡಿದ್ದು, 1ನೇ ಹಂತದ ಚುನಾವಣೆಗೆ ಇಂಕ್ ತಲುಪಿಸಿದ್ರೆ, 2ನೇ ಹಂತದ ಚುನಾವಣೆಗೆ ಪ್ಯಾಕಿಂಗ್ ಕಾರ್ಯವು ಮುಗಿದಿದೆ. …

Read More »

ಕಾಂಗ್ರೆಸ್ ಪಕ್ಷವು ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ

ಬೆಂಗಳೂರು,ಡಿ.21- ಕಾಂಗ್ರೆಸ್ ಪಕ್ಷವು ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಆ ಕಾರಣಕ್ಕಾಗಿ ಅನಿವಾರ್ಯವಾಗಿ ಕೆಲವು ನಿರ್ಧಾರಗಳನ್ನು ಮಾಡಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್‍ನ ಕೆಲವು ನಾಯಕರು ಹಾಗೂ ಜೆಡಿಎಸ್‍ನಿಂದ ಹೋದವರೆ ಈಗ ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ನನ್ನ ನಿಜವಾದ ರಾಜಕಾರಣ ಶುರುವಾಗುವುದು 2023ಕ್ಕೆ ಇದುವರೆಗಿನ ರಾಜಕಾರಣ ತಾತ್ಕಾಲಿಕವಾಗಿ ಮಾಡಿದ್ದು, 2023ಕ್ಕೆ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಸುದ್ದಿಗಾರರಿಗೆ …

Read More »

ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ.

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ಟಾರ್ಚರ್ ವಿರೋಧಿಸಿ ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ. ಕೊರೋನಾದಿಂದಾಗಿ ಎಲ್ಲಾ ಕ್ಷೇತ್ರಗಳು ಆಎರ್ಹಿಕವಾಗಿ ಸಂಕಷ್ಟಕ್ಕೀಡಾಗಿವೆ. ಪೋಷಕರೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಆದರೆ ಪೋಷಕರು ಆರ್ಥಿಕವಾಗಿ ಶಕ್ತಿವಂತರಾಗಿದ್ದಾಗ ಇಂತದ್ದೇ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳು ಓದಬೇಕು ಎಂದು ಹಠಕ್ಕೆ ಬಿದ್ದು, ರಾತ್ರಿಯಿಡಿ ಶಾಲೆಗಳ ಮುಂದೆ ನಿಂತು ಅರ್ಜಿ ಪಡೆದರು. ತಮ್ಮ ಮಕ್ಕಳಿಗೆ ಅದೇ ಶಾಲೆಯಲ್ಲಿ …

Read More »

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ

ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಬಿಜೆಪಿ-ಜೆಡಿಎಸ್‌ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …

Read More »

ಸತೀಶ್ ಜಾರಕಿಹೊಳಿ ಅವರ್ ಜೊತೆ ಹೆಲಿಕಾಫ್ಟರ್ ನಲ್ಲಿ ಸುತ್ತಾಡುವ ಅವಕಾಶ ನಿಮಗೆ ಬೇಕಾ…?

ಬೆಳಗಾವಿ: ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ’ ಅವರ ಜಯಂತೋತ್ಸವ ನಿಮಿತ್ತ ಗೋಕಾಕ್​ ನಗರದಲ್ಲಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ವಿಜೇತರಾಗುವ 10 ಯುವಕರಿಗೆ ತಮ್ಮ ಹೆಲಿಕಾಪ್ಟರ್​ನಲ್ಲಿ ಓಡಾಡಲು ಅವಕಾಶ ಕಲ್ಪಿಸುವುದಾಗಿ ಶಾಸಕ ಸತೀಶ್​ ಜಾರಕಿಹೊಳಿ ನೇತೃತ್ವದ ಸಂಘಟನೆ ತಿಳಿಸಿದೆ. ಸತೀಶ್​ ಜಾರಕಿಹೊಳಿ ನೇತೃತ್ವದ ಮಾನವ ಬಂಧುತ್ವ ವೇದಿಕೆ ಸಂಘಟನೆ ‘ಸಾವಿತ್ರಿಬಾಯಿ ಫುಲೆ ಅವರ ಹೋರಾಟ’ ಮತ್ತು ‘ಮಹಿಳಾ ಶಿಕ್ಷಣಕ್ಕೆ ಅವರ ಕೊಡುಗೆ’ ಎಂಬ ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ …

Read More »

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ  ಘಟನೆ  ತಡರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ. ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ,  ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ …

Read More »