Breaking News

ಜಿಲ್ಲೆ

ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ

ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಶಾಲೆಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರಕಾರ ಇಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಾಗೆಯೇ 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು. ತರಗತಿಗಳ ಅವಧಿ ಮತ್ತಿತರ ವಿಷಯಗಳ …

Read More »

ಟ್ವಿಟ್ಟರ್ ನಲ್ಲಿ ಸಿದ್ದು ವಿರುದ್ಧ ಕುಮ್ಮಿ ಕಿಡಿ….

ಬೆಂಗಳೂರು,ಡಿ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಒಳ ಒಪ್ಪಂದಗಳ ಜನಕ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರಾದೇಶಿಕ ಪಕ್ಷ ಕಟ್ಟಿ ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ.  ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತನಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ ಎಂಬುದು ಯಾವಾಗಲೋ ಸಾಬೀತಾಗಿದೆ. ಇನ್ನೆಂದೂ …

Read More »

ಖಡಕ್ ಸೂಚನೆ ಹಿನ್ನೆಲೆ, ಅಂಕಲಗಿ ಪುಡಾರಿ ರಾಜು ತಳವಾರ್ ಅರೆಸ್ಟ್

ಗೋಕಾಕ: ಬಿಜೆಪಿ ಮುಖಂಡ ರಾಜು ತಳವಾರ ಹಾಗೂ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕಲಗಿಯ ಬಿಜೆಪಿ ಮುಖಂಡ ರಾಜು ತಳವಾರನನ್ನ ಬಂಧಿಸಲಾಗಿದೆ. ಗೋಕಾಕ ಡಿವೈಎಸ್ಪಿ ನೇತೃತ್ವದ ತಂಡ ರಾಜು ತಳವಾರನನ್ನ ಹೆಡೆಮುರಿ ಕಟ್ಟಿದ್ದು, ರಾಜು ತಳವಾರನನ್ನ ಕೂಡಲೇ ಬಂಧಿಸುವಂತೆ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಕ್ಷುಲ್ಲಕ ಕಾರಣಕ್ಕೆ ಚಿಕ್ಕುಗೋಳ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರಾಜು ತಳವಾರ ಆಂಡ್ ಗ್ಯಾಂಗ್ …

Read More »

ಗೋಕಾಕ: ಅಧಿಕಾರಿಗಳಿಗೆ ದೂರು ನೀಡಿ ತಂಗಿ ಬಾಲ್ಯ ವಿವಾಹ ತಡೆದ ಅಣ್ಣ

ಗೋಕಾಕ : ಅಧಿಕಾರಿಗಳಿಗೆ ದೂರು ನೀಡಿ ಅಣ್ಣನೇ ತಂಗಿಯ ಬಾಲ್ಯ ವಿವಾಹವನ್ನು ತಡೆದಿರುವ ಘಟನೆ ಗೋಕಾಕ ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಅತ್ತೆ, ಮಾವ  ವಿದ್ಯಾಭ್ಯಾಸ ಕಲಿಸೋದಾಗಿ ಹೇಳಿ  ನನ್ನ ತಂಗಿ ರಾಧಿಕಾಳನ್ನು ಇಟ್ಟುಕೊಂಡಿದ್ದರು. ಒತ್ತಾಯ ಪೂರ್ವಕವಾಗಿ ತಂಗಿಗೆ  ಮದುವೆ ಮಾಡ್ತಿದ್ದರು ಎಂದು ರಾಧಿಕಾ ಅಣ್ಣ ರಾಜು ಮಗೆನ್ನವರ್ ಆರೋಪಿಸಿದ್ದಾನೆ. ರಮೇಶ್ ಕೆಂಪಣ್ಣ ಮೊದಗಿ  ಹಾಗೂ ರಾಧಿಕಾ ಮಲ್ಲೇಶ ಮಗೆನ್ನವರ್ ಅವರು, ರಮೇಶ್(24) ಹಾಗೂ ರಾಧಿಕಾಗೆ(16)ಗೆ ಮದುವೆಗೆ ಏರ್ಪಾಡು ಮಾಡಿದ್ದರು. ಈ …

Read More »

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು, ಜನರು ವಾಮಾಚಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 15-20 ವರ್ಷಗಳಿಂದ ರಾಜಕಾರಣ ನಡೆಸಿರುವವರು ಇಂಥ ವಾಮಾಚಾರ ಮಾಡಿಸಿದ್ದು, ಇಂಥ ರಾಜಕಾರಣದಿಂದ ಗ್ರಾಮದ …

Read More »

ನಾವಣೆ: ಬಿಜೆಪಿಯನ್ನು ಗೆಲ್ಲಿಸಲು ಸಚಿವ ರಮೇಶ್ ಜಾರಕಿಹೊಳಿ ಪಣ ಲೋಕಸಭೆಯ ನಂತರ ಸಚಿವರ ಮುಂದಿನ ಗುರಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಬೆಳಗಾವಿ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ‌ ಮತದಾನ‌ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತ್ತಷ್ಟು ಸುಭದ್ರ ಪಡಿಸಬೇಕು ಎಂದು ಸಚಿವರು ಕರೆ ನೀಡಿದರು. ಬೆಳಗಾವಿ ಜಿಲ್ಲೆಯಾದ್ಯಂತ ಬಿಜೆಪಿಯು …

Read More »

ಗೋಕಾಕ: ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಠಾಣಾಧಿಕಾರಿ ಸದಾನಂದ ಮೆಳವಂಕಿ ಅವರು ಚಾಲನೆ ನೀಡುತ್ತಿರುವುದು.

ಗೋಕಾಕ: ಆಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಸಕಾಲ ವ್ಯಾಪ್ತಿಯಲ್ಲಿ 5 ಸೇವೆಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಇಲ್ಲಿಯ ಆಗ್ನಿ ಶಾಮಕ ಠಾಣಾಧಿಕಾರಿ ಸದಾನಂದ ಮೆಳವಂಕಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಆಗ್ನಿಶಾಮಕ ಠಾಣೆಯಲ್ಲಿ ಸಕಾಲ ಸೇವಾ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಹುಮಹಡಿ ಕಟ್ಟಡಗಳಿಗೆ ನಿರ್ಮಾಣ ಪೂರ್ವದಲ್ಲಿ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪತ್ರ, ನಿರ್ಮಾಣದ ನಂತರ ಕ್ಲಿಯರೆನ್ಸ್ …

Read More »

ಅಥಣಿ ತಾಲೂಕಿನಲ್ಲಿ ಹೆಚ್ಚಿದ ಕಳ್ಳತನ ಪ್ರಕರಣಗಳು: ಪೊಲೀಸ್​ ಇಲಾಖೆ ವಿರುದ್ಧ ಜನರ ಅಸಮಾಧಾನ

ಅಥಣಿ: ತಾಲೂಕಿನಲ್ಲಿ ಕಳ್ಳತನ ಪ್ರಕರಣ ಹೆಚ್ಚುತ್ತಿವೆ. ಗುರುವಾರ ತಡರಾತ್ರಿ ನಂದಗಾವ್​​ ಗ್ರಾಮದಲ್ಲಿ ಕಳ್ಳರು ಕೈಚಳಕ ತೋರಿದ್ದು, ಎರಡು ದೇವಾಲಯ, ಆರು ಮನೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಎರಡು ದೇವಾಲಯ ಹಾಗೂ ಆರೂ ಮನೆಗಳಿಗೆ ಕನ್ನ ಹಾಕಿರುವ ಖದೀಮರು ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಜೈನ ಬಸದಿ, ಯಲ್ಲಮ್ಮ ದೇವಸ್ಥಾನದ ಬೀಗ ಮುರಿದು ಅಟ್ಟಹಾಸ ಮೆರೆದಿದ್ದಾರೆ. ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಥಣಿ ತಾಲೂಕಿನಲ್ಲಿ ಹೆಚ್ಚಿದ ಕಳ್ಳತನ ಪ್ರಕರಣಗಳು ಅಲ್ಲದೆ …

Read More »

ಕೊರೊನಾ ಹಿನ್ನೆಲೆ ಬಂದ್ ಮಾಡಲಾಗಿದ್ದ ಆಫ್‍ಲೈನ್ ಟಿಕೆಟ್‍ನ್ನು ಭಾರತೀಯ ಪುರಾತತ್ವ ಇಲಾಖೆ ಪುನರಾರಂಭಿಸಿದೆ.

ಬಳ್ಳಾರಿ: ಕೊರೊನಾ ಹಿನ್ನೆಲೆ ಬಂದ್ ಮಾಡಲಾಗಿದ್ದ ಆಫ್‍ಲೈನ್ ಟಿಕೆಟ್‍ನ್ನು ಭಾರತೀಯ ಪುರಾತತ್ವ ಇಲಾಖೆ ಪುನರಾರಂಭಿಸಿದೆ. ಈ ಮೂಲಕ ಪ್ರವಾಸಿಗರು ಆಫ್‍ಲೈನ್ ಹಾಗೂ ಆನ್‍ಲೈನ್ ಎರಡೂ ವಿಧಾನಗಳಿಂದ ಟಿಕೆಟ್ ಪಡೆಯಬಹುದಾಗಿದೆ. ಕರೊನಾ ಹಿನ್ನಲೆ ತನ್ನ ವ್ಯಾಪ್ತಿಯ ಸ್ಮಾರಕಗಳ ವೀಕ್ಷಣೆಗೆ ಆಫ್‍ಲೈನ್ ಟಿಕೆಟ್ ಬಂದ್ ಮಾಡಿ, ಆನ್‍ಲೈನ್ ನಲ್ಲಿ ಮಾತ್ರ ಟಿಕೆಟ್ ಪಡೆಯಲು ಭಾರತೀಯ ಪುರಾತತ್ವ ಇಲಾಖೆ ಅವಕಾಶ ಕಲ್ಪಿಸಿತ್ತು. ಆದರೆ ಡಿ.19 ರಿಂದ ಆಫ್‍ಲೈನ್‍ನಲ್ಲೂ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಿದೆ. ಇದರಿಂದ …

Read More »

ಸಿದ್ದರಾಮಯ್ಯನವರು ಗೋಸುಂಬೆ ರೀತಿ ಆಡಬಾರದು.: ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಏಕೆ ತಾಜ್ ವೆಸ್ಟ್ ಎಂಡ್ ಕಥೆ ತೆಗೆಯುತ್ತಿದ್ದಾರೆ, ತಾಜ್ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಾದ ಮೇಲೆ ತಾನೇ ಲೋಕಸಭೆ ಚುನಾವಣೆ ಒಟ್ಟಿಗೆ ಮಾಡಿದ್ದು, ಅಧಿಕಾರ ಹಂಚಿಕೊಂಡು ತನ್ನವರನ್ನ ಮಂತ್ರಿ ಮಾಡುವಾಗ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಿರಲಿಲ್ವಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹಳೇ …

Read More »