Breaking News

ಜಿಲ್ಲೆ

ಭಾರತ್ ಬಂದ್ ಕರೆಗೆ ಬೆಂಬಲ: ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ. ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು …

Read More »

ಮಗು ಸೇರಿ ಮೇಘನಾ ರಾಜ್‍ಗೆ ಕೊರೋನ ಪಾಸಿಟಿವ್!

ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಭೂಸುಧಾರಣೆ ಕಾಯ್ದೆ ತಿದ್ದುಪಡಿ: ಪರಿಷತ್‍ನಲ್ಲಿ ಕೋಲಾಹಲ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮಂಡಿಸಿದ ಪರಿಷ್ಕøತ ಮಸೂದೆ ವಿಧಾನ ಪರಿಷತ್‍ನಲ್ಲಿ ಮತ್ತೆ ಕೋಲಾಹಲಕ್ಕೆ ಕಾರಣವಾಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಸೋಮವಾರ ಆರಂಭವಾದ ಅಧಿವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮಸೂದೆಗೆ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದರು. …

Read More »

ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ

ಧಾರವಾಡ: ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ 14 ದಿನ  ನ್ಯಾಯಾಂಗ  ಬಂಧನ ವಿಧಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ  ಆದೇಶ ಹೊರಡಿಸಿದೆ. ಕೋರ್ಟ್ ಆದೇಶದಂತೆ ವಿನಯ ಕುಲಕರ್ಣಿ ಡಿ. 21ರವರೆಗೆ ಜೈಲು ಗತಿಯಾಗಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ  ಸಚಿವ ವಿನಯ ಅವರನ್ನು ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ನ್ಯಾಯಾಂಗ …

Read More »

ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ. ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ …

Read More »

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭಾನುವಾರ ಮನೆಯಲ್ಲಿ ಬಿದ್ದ ಪರಿಣಾಮ ತಿಮ್ಮಕ್ಕ ಅವರ ಸೊಂಟದ ಮೂಳೆ ಮುರಿದಿದೆ. ಈ ಹಿನ್ನೆಲೆ ವೃಕ್ಷ ಮಾತೆಯನ್ನ ಇಂದು ಅವರ ಮಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳವಾರ ಸಾಲುಮರದ ತಿಮ್ಮಕ್ಕ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದ್ಯ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಲು ಮರದ ತಿಮ್ಮಕ್ಕನವರು ನೆಟ್ಟ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿಕೆಶಿ ಚರ್ಚೆ

ಬೆಂಗಳೂರು: ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಈಶ್ವರ ಖಂಡ್ರೆ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ …

Read More »

ರಮೇಶ್ ಜಾರಕಿಹೊಳಿ ಮನಸು ಮಾಡಿದರೆ , ಗೋಕಾಕ್ ಜಿಲ್ಲೆ ಆಗಿಸಬಹುದು

ಗೋಕಾಕ : ಗ್ರಾ.ಪ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿನ್ನೆಯ ಮೇಲೆ ನಡೆಯುವುದಿಲ್ಲ. ಪರೋಕ್ಷವಾಗಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ. ಗೋಕಾಕ ನಲ್ಲಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಭಾರೀ ತಯಾರಿಗಳು ನಡೆದಿವೆ. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬೆಂಬಲಿತ …

Read More »

ಸುರೇಶ್ ಅಂಗಡಿಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು ಅಭಿಮಾನಿಗಳ ಒತ್ತಾಯ

ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ.ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು ಎನ್ನುವದು …

Read More »

ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳ ಸಭೆ

ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ‌ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …

Read More »