Breaking News

ಜಿಲ್ಲೆ

ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದ ಕಿಚ್ಚ ಸುದೀಪ್

ಬೆಂಗಳೂರು: ಮಂಡ್ಯದ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನ ಗದ್ದೆಯಲ್ಲಿ ಕೊಲೆಯಾಗಿದ್ದ ಅಪ್ರಾಪ್ತ ಬಾಲಕಿಯ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ಕಿಚ್ಚ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಿಚ್ಚ, ಈ ಪ್ರಕರಣದಲ್ಲಿ ಬಾಲಕಿಗೆ ನ್ಯಾಯ ಸಿಗುತ್ತದೆ ಮತ್ತು ತಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ ರೀತಿ ಮಾಡುವವರಿಗೆ ತೀವ್ರ ತರಹದ ಸಂದೇಶ ರವಾನೆಯಾಗಲಿದೆ ಎಂದು ಭಾವಿಸಿದ್ದೇನೆ. ಈ ಮೂಲಕ ಮುಂದೆ ಈ …

Read More »

ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

ಹಾವೇರಿ: ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಮೃತರನ್ನು ಕೆ.ಎನ್.ಹನುಮಂತಪ್ಪ ನಿಂಗಪ್ಪ (60), ಗೀತಮ್ಮ (50) ಮತ್ತು ಶಿವಾನಿ (11) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರೆಲ್ಲರೂ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದವರು ಎನ್ನಲಾಗಿದೆ.

Read More »

ಕರ್ನಾಟಕ ಬಂದ್‌ ಬಿಸಿಯೇ ಇಲ್ಲ- ಮಾರುಕಟ್ಟೆಯಲ್ಲಿ ಜನವೋ ಜನ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿರ್ಧಾರದಿಂದ ಹಿಂದೆ ಸರಿಯದ ಕರ್ನಾಟಕ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್‌ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ರಸ್ತೆಯಲ್ಲಿ ಎಂದಿನಂತೆ ಜನರು ಸಂಚರಿಸುತ್ತಿದ್ದು, ಬಿಎಂಟಿಸಿ ಬಸ್ಸುಗಳು ರಸ್ತೆಗೆ ಇಳಿದಿದೆ. ಕೆ.ಆರ್‌. ಮಾರುಕಟ್ಟೆಗೆ ಜನರು ಆಗಮಿಸಿ ಖರೀದಿಯಲ್ಲಿ ತೊಡಗಿದ್ದಾರೆ. ಅಂಗಡಿ, ಹೋಟೆಲ್‌ಗಳು ತೆರೆದಿದ್ದು ಗ್ರಾಹಕರು ಆಗಮಿಸುತ್ತಿದ್ದಾರೆ. ಕರ್ನಾಟಕ ಬಂದ್‌ಗೆ ಯಾವುದೇ ಅನುಮತಿ ಪಡೆದಿಲ್ಲ. ಹೀಗಾಗಿ ಯಾರೇ ಚೇಷ್ಟೆ ಮಾಡಿದರೂ ಕ್ರಮ …

Read More »

ಬಾಲಕಿ ಬೇರೊಬ್ಬನೊಂದಿಗೆ ವಿವಾಹವಾಗಲು ಮುಂದಾಗಿರುವ ವಿಷಯ ತಿಳಿದು ಆಕೆಯನ್ನು ಕಣಕುಂಬಿ ಅರಣ್ಯಕ್ಕೆ ಬೈಕ್ ನಲ್ಲಿ ಕರೆದೊಯ್ದು ಕೊಲೆ

ಬೆಳಗಾವಿ – 2019ರ ನವೆಂಬರ್ ತಿಂಗಳಲ್ಲಿ ಅಪಹರಣವಾಗಿದ್ದ ಅಪ್ರಾಪ್ತ ಬಾಲಕಿಯನ್ನು ನಂತರದಲ್ಲಿ ಕತ್ತು ಸೀಳಿ, ಕೊಲೆ ಮಾಡಿ ಕಣಕುಂಬಿ ಅರಣ್ಯದಲ್ಲಿ ಹೂತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಅಪಹರಿಸಲಾಗಿತ್ತು. ಈ ಕುರಿತು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು. ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಹಳ್ಳಿ ಎಂಬಾತ ಬಾಲಕಿಯೊಂದಿಗೆ ಸಲುಗೆಯಿಂದಿದ್ದ ಮಾಹಿತಿ ಅರಿತ ಪೊಲೀಸರು ತೀವ್ರ ತನಿಖೆ ನಡೆಸಿದಾಗ ಸಂಪೂರ್ಣ ವಿವರ ಹೊರಬಿದ್ದಿದೆ. …

Read More »

ಸಚಿವ ಸಂಪುಟ ಬಗ್ಗೆ ಯಾವುದೇ ಮಾತುಕತೆ ಇಲ್ಲ, ಶಾಸಕರಿಗೆ ಬಹಿರಂಗ ಹೇಳಿಕೆ ಕೊಡಲು ಅವಕಾಶ ಇಲ್ಲ,

ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಭಾರತೀಯ ಜನತಾಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕೋರ್ ಕಮಿಟಿ ಸಭೆ ನಡೆಯಿತು. ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಸೇರಿದಂತೆ ಕೋರ್ ಕಮಿಟಿ 14 ಸದಸ್ಯರು ಭಾಗವಹಿಸಿದ್ದರು. ಸಭೆಯ ಬಳಿಕ ಅರವಿಂದ ಲಿಂಬಾವಳಿ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ಶನಿವಾರ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಸಂಬಂಧ ಚರ್ಚಿಸಿ, ಲವ್ …

Read More »

ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿಸಂಪುಟ ವಿಸ್ತರಣೆತೀರ್ಮಾನ.:BSY

ಬೆಳಗಾವಿ :ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅವರ ಸಂದೇಶ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸಂಪುಟ ವಿಸ್ತರಣೆ ಸಂಬಂದ ಅರುಣ ಸಿಂಗ್ ಸಂದೇಶ ತಂದಿದ್ದಾರೆ.ಅವರ ಸಂದೇಶ ಏನಿದೆ ನೋಡಿ ವಿಸ್ತರಣೆ, ಪುನರ್ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ರಾಜ್ಯದ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ. ಬಿಬಿಎಂಪಿ ಚುನಾವಣಾ ಬಗ್ಗೆ ಹೈಕೋರ್ಟ್ ತೀರ್ಮಾನ. ಈ ಬಗ್ಗೆ ಮಾಹಿತಿ ಸಿಕ್ಕಿದೆ ನೋಡೊಣ ಎಂದು ಬೆಳಗಾವಿ ವಿಮಾನ …

Read More »

ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ: ಕಮಲ್ ಪಂಥ್

ಬೆಂಗಳೂರು: ನಾಳೆ ಕರ್ನಾಟಕ ಬಂದ್‍ಗೆ ಯಾರು ಪರ್ಮಿಷನ್ ಕೊಟ್ಟಿಲ್ಲ. ಈ ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂಬುದನ್ನು ಗಮನದಲ್ಲಿಟ್ಟುಕೊಂಡು ಸಾಕಷ್ಟು ಭದ್ರತೆಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಬೆಳಗ್ಗೆಯಿಂದ ಪೊಲೀಸ್ ಇಲಾಖೆ ಭದ್ರತೆಗಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 15 ಸಾವಿರಕ್ಕಿಂತ ಹೆಚ್ಚು ಪೊಲೀಸರು ನಾಳೆ ಕಾರ್ಯ ನಿರ್ವಹಿಸಲಿದ್ದಾರೆ. 5 …

Read More »

ಬೆಳಗಾವಿ ಉಪಚುನಾವಣೆ ಬಿಜೆಪಿ ಆಕಾಂಕ್ಷಿ ಪಟ್ಟಿಯಲ್ಲಿ ಮತ್ತೊಂದು ಹೆಸರು !

ಬೆಂಗಳೂರು : ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ಈಗ ಬಿಜೆಪಿಯಿಂದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಟಿಕೆಟ್ ನೀಡುವಂತೆ ಆಗ್ರಹ ಕೇಳಿ ಬಂದಿದೆ. ವಿವಿಧ ಹಿಂದೂಪರ ಸಂಘಟನೆಯ ಮುಖಂಡರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮುತಾಲಿಕ್ ಕೊಡುಗೆ ಬಹಳಷ್ಟಿದೆ. ಬೆಳಗಾವಿ ಜಿಲ್ಲೆಯಲ್ಲೇ ಮುತಾಲಿಕ್ …

Read More »

ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ.

ಬೆಂಗಳೂರು: ಡಿಸೆಂಬರ್ 5ರಂದು ಬಂದ್.. ಬಂದ್.. ಬಂದ್.. ಕರ್ನಾಟಕದ, ಕನ್ನಡದ, ಕನ್ನಡಿಗರ ಹಿತರಕ್ಷಣೆಗೆ ನಾವು ಬದ್ಧ. ಸರ್ಕಾರದ ಯಾವುದೇ ಬೆದರಿಕೆಗೆ ನಾವು ಬಗ್ಗಲ್ಲ. ಸರ್ಕಾರ ನಮ್ಮ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿದ್ರೂ ನಾವು ಸುಮ್ಮನಿರಲ್ಲ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ನಾವು ಬಂದ್ ಮಾಡೇ ಮಾಡ್ತೀವಿ ಅಂತಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದು, ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೆ …

Read More »

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …

Read More »