Breaking News

ಜಿಲ್ಲೆ

ರಾಜಕಾರಣದಲ್ಲಿ ಯಾವ ಶಾಪವೂ ತಟ್ಟುವುದಿಲ್ಲ: ಸಾರಾ ಮಹೇಶ್ ಗೆ ಸಚಿವ ರಮೇಶ್ ತಿರುಗೇಟು

ಬೆಳಗಾವಿ : ಎಚ್.ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಸಾ.ರಾ ಮಹೇಶ್ ಹೇಳಿಕೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಿರುಗೇಟು ನೀಡಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಶಾಪ ತಟ್ಟುವುದಿಲ್ಲ. ಎಚ್.ವಿಶ್ವನಾಥ್ ಅವರ ಹೈಕೋರ್ಟ್ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಪೀಲು ಸಲ್ಲಿಸುತ್ತೇವೆ ಎಂದಿದ್ದಾರೆ. ವಿಶ್ವನಾಥ್ ಅವರ ಜೊತೆಗೆ ನೂರಕ್ಕೆ ನೂರರಷ್ಟು 17 ಜನರು ಜೊತೆಗಿದ್ದೇವೆ. ಸುಪ್ರೀಂ ಕೋರ್ಟ್ ಬಾಗಿಲು ತಟ್ಟುತ್ತೇವೆ ಎನ್ನುವ …

Read More »

ಮಂತ್ರಾಲಯದಲ್ಲಿ ತೆಪ್ಪೋತ್ಸವ ಸಂಭ್ರಮ

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಇಂದು ತುಂಗಾರತಿ ಸಂಭ್ರಮ ಮನೆ ಮಾಡಿತ್ತು. ಕಾರ್ತಿಕ ಪೂರ್ಣಮೆ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ತೆಪ್ಪೋತ್ಸವ ನೆರವೇರಿಸಲಾಯಿತು. ಉತ್ಸವಮೂರ್ತಿ ಪ್ರಹ್ಲಾದ ರಾಜರಿಗೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತುಂಗಭದ್ರಾ ನದಿಯಲ್ಲಿ ಪ್ರಹ್ಲಾದರಾಜರ ತೆಪ್ಪೋತ್ಸವ ಜರುಗಿತು. ಕಾರ್ತಿಕ ಪೂರ್ಣಮೆ ಹಿನ್ನೆಲೆ ನದಿ ದಡದಲ್ಲಿ ಭಕ್ತರಿಂದ ದೀಪೋತ್ಸವ ನಡೆದಿದೆ. ಈ ವರ್ಷ ತುಂಗಭದ್ರಾ ನದಿಯಲ್ಲೆ ಪುಷ್ಕರ ಇರುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ …

Read More »

ಬೆಳಗಾವಿ ಜಿಲ್ಲೆಯ 14 ತಾಲ್ಲೂಕಿನಲ್ಲಿ ಡಿ.22, 27 ರಂದು ಎರಡು ಹಂತದಲ್ಲಿ ಮತದಾನ

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಪ್ರತಿ  ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ ಜಿಲ್ಲೆಯ 14 ತಾಲ್ಲೂಕಿನಲ್ಲಿ ಡಿ.22, 27 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೊಲದ ಹಂತದಲ್ಲಿ  ಬೆಳಗಾವಿ -57, ಖಾನಾಪುರ -51, ಹುಕ್ಕೇರಿ-52, ಬೈಲಹೊಂಗಲ-33, ಕಿತ್ತೂರು-16, ಗೋಕಾಕ-32, ಮೂಡಲಗಿ-32  ಒಟ್ಟು  261 ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ ಸವದತ್ತಿ-41, ರಾಮದುರ್ಗ-33, ಚಿಕ್ಕೋಡಿ-36, ನಿಪ್ಪಾಣಿ-27, ಅಥಣಿ-41, ಕಾಗವಾಡ-09, ರಾಯಬಾಗ-33 …

Read More »

ಡಿಕೆಶಿ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ ಆಪ್ತ ಸಂತೋಷ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಟಾಂಗ್ ನೀಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಇಂದು ಡಿಸ್ಚಾರ್ಜ್ ಆಗಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಪುಪಿರೋ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಡಿಕೆಶಿ ವಿರುದ್ಧ ಕಿಡಿಕಾರಿದರು. ಸುಖಾಸುಮ್ಮನೆ ಆರೋಪ ಮಾಡಿರುವ ಡಿಕೆಶಿ ಬಳಿ ಮನವಿ ಮಾಡಿಕೊಳ್ಳುತ್ತೇನೆ. …

Read More »

ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಕಸಿನ್ ಬ್ರದರ್ ಮದುವೆ ಇತ್ತು. ಆ ಮದುವೆಯಲ್ಲಿ ಊಟದಲ್ಲಿ ವ್ಯತ್ಯಾಸವಾಗಿ ನನಗೆ ಅಜೀರ್ಣವಾಗಿತ್ತು. ಆ ಸಮಯದಲ್ಲಿ ಯಾವುದೋ ಮಾತ್ರೆ ಬದಲಿಯಾಗಿ, ಇನ್ಯಾವುದೋ ಮಾತ್ರೆ ತೆಗೆದುಕೊಂಡು ಡೋಸೇಜ್ ಹೆಚ್ಚಿಗೆ ಆಗಿತ್ತು. ಇದನ್ನ ನೋಡಿದ ನನ್ನ ಪತ್ನಿ ಗಾಬರಿಯಾಗಿ ಆಸ್ಪತ್ರೆಗೆ ಕರೆದುಕೊಂಡು …

Read More »

ಕರ್ನಾಟಕ ಕಾನೂನು ಬಾಹಿರವಾಗಿ ಯಾವುದೇ ಕೆಲಸವನ್ನು ಮಾಡಿಲ್ಲ. ಕರ್ನಾಟಕ ಸಿಎಂ, ಗೋವಾ ಸಿಎಂ ಮಾತುಕತೆ ಅವಶ್ಯಕತೆ ಇಲ್ಲ

ಬೆಳಗಾವಿ: ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಪ್ರಮೋದ ಸಾವಂತ ಹೇಳಿಕೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಗೋವಾ ಸಿಎಂ ವಿರುದ್ಧ ಗರಂ ಆಗಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ಕಾನೂನು ಬಾಹಿರವಾಗಿ ನೀರು ಪಡೆದಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಅವರಿಗೆ ಬಹಿರಂಗ ಆಹ್ವಾನ ಕೋಡುತ್ತೇನೆ. ಕಳಸಾ ನಾಲಾಗೆ ನಿರ್ಮಾಣವಾಗಿರೋ ಗೋಡೆ ಮುಟ್ಟಿಲ್ಲ. ಒಂದು ವೇಳೆ ಅವರು ಮಾಡಿದ ಆರೋಪ ಸಾಬೀತು ಆದರೆ  ತಕ್ಷಣ ಸಚಿವ …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ …

Read More »

ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ

ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.ಭಾರತದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರವಗಲಿದೆ.

Read More »