Breaking News
Home / ಜಿಲ್ಲೆ (page 9)

ಜಿಲ್ಲೆ

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವೆಯಾಗಿ ಹೆಚ್ಚು ಕಡಿಮೆ ಒಂದು ವರ್ಷ ಕಳೆಯುತ್ತಾ ಬಂದರೂ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಶುರುವಾಗಿಲ್ಲ:B.J.P.

ಬೆಳಗಾವಿ: ಜಿಲ್ಲೆಯ ಬಿಜೆಪಿ ಮುಖಂಡರು (BJP leaders)ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರ ವಿರುದ್ಧ ಒಂದು ವಿನೂತನ ಪ್ರತಿಭಟನೆ (protest) ನಡೆಸಿದರು. ಇದು ನಿಸ್ಸಂದೇಹವಾಗಿ ಎಲ್ಲರಿಗೂ ಮೆಚ್ಚಿಗೆಯಾಗುವ ರೀತಿಯ ಪ್ರತಿಭಟನೆ. ಗೌಜು ಗದ್ದಲ, ಧಿಕ್ಕಾರದ ಘೋಷಣೆ-ಮೊದಲಾವುಗಳಿಲ್ಲದ ಸರಳ ಮತ್ತು ಅತ್ಯಂತ ಪರಿಣಾಮಕಾರಿ ಪ್ರತಿಭಟನೆ. ತಮ್ಮ ಆಕ್ಷೇಪಣೆ, ದೂರು-ದುಮ್ಮಾನಗಳನ್ನು ಒಂದು ಮನವಿ ಪತ್ರದ ರೂಪದಲ್ಲ್ಲಿ ಅವರು ಸಲ್ಲಿಸಿದ್ದಾರೆ. ನಗರದಲ್ಲಿರುವ ಕಚೇರಿಗೆ ಬಿಜೆಪಿ ಮುಖಂಡರು ಬಂದಾಗ ಸಚಿವೆ …

Read More »

ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅದ್ದೂರಿ ರೊಟ್ಟಿ ಜಾತ್ರೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಯಲ್ಲಾಲಿಂಗೇಶ್ವರ ಮಠದ ಆವರಣದಲ್ಲಿ ಹತ್ತೂರು ಗ್ರಾಮದ ಸಾವಿರಾರು ಮಹಿಳೆಯರು ಎರಡು ವಾರಗಳ ಕಾಲ ರೊಟ್ಟಿ ಮಾಡಿ, ಬಳಿಕ ಮಠವೊಂದಕ್ಕೆ ಸಮರ್ಪಣೆ ಮಾಡಿದ್ದರು. ತಲೆ ಮೇಲಿನ ಬುತ್ತಿ ಗಂಟಿಗೆ ತಿರಂಗಾ ಧ್ವಜವನ್ನು ಹಾಕಿದ್ದು ವಿಶೇಷವಾಗಿತ್ತು. ಅಷ್ಟಕ್ಕೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರೊಟ್ಟಿ ಬುತ್ತಿ ಜಾತ್ರೆ ಮಾಡೋದ್ಯಾಕೆ? ಈ ರೊಟ್ಟಿ ಬುತ್ತಿ ಜಾತ್ರೆ ಸ್ಟೋರಿ ಇಲ್ಲಿದೆ.ತಲೆ ಮೇಲೆ ಬುತ್ತಿ ಹೊತ್ತು ಸಾಗುತ್ತಿರುವ ಮಹಿಳೆಯರು, ತ್ರಿವರ್ಣ …

Read More »

ಭಾವನೆ ಶುದ್ದವಾಗಿದ್ದರೆ ಭಾಗ್ಯಕ್ಕೆ ಕೊರತೆ ಇರುವುದಿಲ್ಲ: ನ್ಯಾಯಾಧೀಶರು ಎಂ.ಬಿ.ಕುಡವಕ್ಕಲಿಗೇರ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ ಉದ್ಘಾಟನಾ ಸಮಾರಂಭ   ಗೋಕಾಕ : ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯವಂತರಾಗಿರೆಂದು ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಬಿ.ಕುಡವಕ್ಕಲಿಗೇರ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ …

Read More »

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

ಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು ತೂಗಿ ಲೋಕಸಭಾ ಟಿಕೆಟ್ ನೀಡಲು ಮುಂದಾಗಿದೆ. ಚಿಕ್ಕೋಡಿ ಕ್ಷೇತ್ರಕ್ಕೆ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ‌ ಹಾಘೂ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರುಗಳು ಕೇಳಿ ಬಂದಿವೆ. ಬಿಜೆಪಿ ಪಕ್ಷದತ್ತ ವಾಲುತ್ತಿರುವ ಸವದಿಯನ್ನ ಪಕ್ಷದಲೇ ಉಳಿಸಿಕೊಳ್ಳಲು ಪುತ್ರನಿಗೆ ಟಿಕೆಟ್ ನೀಡಬಹುದು ಎನ್ನಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ …

Read More »

ಸವದತ್ತಿ: ತಾಲ್ಲೂಕಿನ ಹೂಲಿ ಅಜ್ಜನ ಅದ್ದೂರಿ ರಥೋತ್ಸವ

ಸವದತ್ತಿ: ತಾಲ್ಲೂಕಿನ ಹೂಲಿ ಗ್ರಾಮದ ಗುರು ಬಾಲಲೀಲಾ ಸಂಗಮೇಶ್ವರ ಸ್ವಾಮೀಜಿ 91ನೇ ಪುಣ್ಯ ಸ್ಮರಣೋತ್ಸವ ಹಾಗೂ ಹೂಲಿ ಅಜ್ಜನ ಮಠದ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ರಥೋತ್ಸವ ಜರುಗಿತು. ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಅಲಂಕೃತ ರಥದಲ್ಲಿ ಬಾಲಲೀಲಾ ಸಂಗಮೇಶ್ವರರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ, ವಿವಿಧ ವಾದ್ಯ ಮೇಳದೊಂದಿಗೆ ಅದ್ಧೂರಿ ರಥೋತ್ಸವ ಜರುಗಿತು. ಸುತ್ತಲಿನ ಗ್ರಾಮಗಳ ಅಜ್ಜನ ಭಕ್ತರು ಆಗಮಿಸಿದ್ದರು. ಇಷ್ಟಾರ್ಥ ಸಿದ್ಧಿಗಾಗಿ ಉತ್ತತ್ತಿ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ …

Read More »

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದ ಚರ್ಚ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಚರ್ಚ್ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನ ದಾನ ಮಾಡಿದ ಮರೆಪ್ಪ ಮರೆಪ್ಪಗೋಳ ದಂಪತಿ   ಮೂಡಲಗಿ- ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ಮೂಡಲಗಿಯಂತಹ ಪಟ್ಟಣ ಪ್ರದೇಶದಲ್ಲಿ ದುಡ್ಡು ನೀಡಿದರೂ ನಿವೇಶನಗಳು ಸಿಗದ ಇಂದಿನ ದಿನಗಳಲ್ಲಿ ಚರ್ಚ ನಿರ್ಮಾಣಕ್ಕೆ ೧೭ …

Read More »

ಮೋದಿ ಮತ್ತೇ ಪ್ರಧಾನಿಯಾದರೆ ಭಾರತ ಪ್ರಪಂಚದಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವಾಗಲಿದೆ

ಗೋಕಾಕದಲ್ಲಿಂದು ಜರುಗಿದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೋಮ್ಮೆ ನಮ್ಮ ರಾಷ್ಟ್ರದ ಪ್ರಧಾನಿಯಾಗಬೇಕು. ಮತ್ತೋಮ್ಮೆ ಮೋದಿಯವರಿಗಾಗಿ ಕಾರ್ಯಕರ್ತರು ಪ್ರತಿ ಮನೆ-ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ವಿವರಿಸಬೇಕು. ಬರುವ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು …

Read More »

ರಾಜ್ಯದಲ್ಲಿ ಅಪಘಾತಗಳಿಗೆ ನಿತ್ಯ 30 ಸಾವು

ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಸಂಭವಿಸುವ ನಾವು ನೋವುಗಳ ಶ್ರೀ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿವೆ. ರಾಜ್ಯದಲ್ಲಿ ಸರಾಸರಿ ನಿತ್ಯ 32 ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಇದರಲ್ಲಿ 30 ಮಂದಿ ಪ್ರಾಣ ಕಳೆದುಕೊಂಡರೆ, 96 ಮಂದಿ ಗಾಯಗೊಳ್ಳುತ್ತಿದ್ದಾರೆ.   ಬೆಂಗಳೂರಿನಲ್ಲಿ ದಿನಕ್ಕೆ 2- 3 ರಸ್ತೆ ಅಪಘಾಗತಗಳು ಸಾಮಾನ್ಯಎಂಬಂತಾಗಿದ್ದು, ಕನಿಷ್ಠ ಇಬ್ಬರು ಅಥವಾ ಮೂವರು ಸಾವನ್ನಪ್ಪುತ್ತಿದ್ದಾರೆ. ಇದು ರಾಜ್ಯ ಅಪರಾಧ ದಾಖಲಾತಿ ವಿಭಾಗ (ಎಸ್.ಸಿ.ಆ‌ರ್.ಐ) ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ …

Read More »

ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ

ಗೋಕಾಕ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಕರಕುಚ್ಚಿ ಗ್ರಾಮದಲ್ಲಿ ಮಾಡಿದರು. ವಿದ್ಯಾರ್ಥಿಗಳು ರೈತರಿಗೆ ಅಜೋಲಾ ಸಸ್ಯದ ಮಹತ್ವ ಹಾಗೂ ವಿವಿಧ ತಳಿಗಳು, ಬೆಳೆಯುವ ಹಂತಗಳು ಕುರಿತು ಮಾಹಿತಿಯನ್ನು ನೀಡಿದರು. ಪಶುವಿನ ಉತ್ತಮ ಹಾಲಿನ ಇಳುವರಿಗಾಗಿ ಪಶುಗಳಿಗೆ ಹಾಕುವ ಹಿಂಡಿಯೊಂದಿಗೆ ಅಜೋಲಾ ಮಿಶ್ರಣ ಮಾಡಿ ಉಪಯೋಗಿಸಬೇಕು.ಅಜೋಲಾ ಬೆಳೆಯುವ ವಿಧಾನ ಹಾಗೂ …

Read More »

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ

ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕ!! ಸ್ಥಿತಿ ಗಂಭೀರ!!! ಘಟಪ್ರಭಾ : ಚಲಿಸುತ್ತಿರುವ ರೈಲಿನಿಂದ ಜಿಗಿದ ಯುವಕನ ಸ್ಥಿತಿ ಗಂಭೀರ ವಾಗಿದ ಘಟನೆ ಘಟಪ್ರಭಾ ರೈಲು ನಿಲ್ದಾಣದ ಮೊದಲನೆಯ ಗೆಟ್ ಹತ್ತಿರ ಸಂಭವಿಸಿದೆ.   ಹೌದು ಬೆಳಗಾವಿ ಇಂದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲಿನಲ್ಲಿ ಘಟಪ್ರಭಾ ಕ್ಕೆ ಹೊರಟಿದ್ದ ಪಾಮಲದಿನ್ನಿ ಗ್ರಾಮದ ಯುವಕ ವಿಠ್ಠಲ್ ಗುಜನಟ್ಟಿ (18) ಎಂಬ ಯುವಕ ರೈಲಿನಲ್ಲಿ ನಿದ್ದೆಗೆ ಜಾರಿದ್ದು ಕಣ್ಣು ತೆಗೆಯುವಷ್ಟರಲ್ಲಿ ಘಟಪ್ರಭಾ ರೈಲುನಿಲ್ದಾಣ ದಿಂದ …

Read More »