ಬೆಂಗಳೂರು: ನಿನ್ನೆ ರಾತ್ರಿ ಖಾಸಗಿ ಹೋಟೆಲ್ನಲ್ಲಿ ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆಗೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ‘ಈಗಲೂ ಕೂಡ ಅವರೆಲ್ಲರೂ ನನ್ನ ಸ್ನೇಹಿತರೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಂದೆ ಈ ರೀತಿ ಸಭೆಗಳು ನಡೆಯಬಾರದು. ಪ್ರತ್ಯೇಕ ಸಭೆಗಳನ್ನು ನಡೆಸುವುದಕ್ಕೆ ಕಡಿವಾಣ ಹಾಕಬೇಕು. ಇದರಿಂದ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಾನು ನಾಯಕ ಎಂದು ಎಲ್ಲಿಯೂ ಹೇಳಿಲ್ಲ. …
Read More »ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ
ಬೆಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ ಆಂಧ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಹಿಂದೂಪರ ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಮಂತ್ರಾಲಯದ ಒಟ್ಟು 208 ಎಕರೆ ಇನಾಮು ಭೂಮಿಯನ್ನು ಮಾರಾಟ ಮಾಡಲು ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಠಕ್ಕೆ ಸಂಬಂಧಿಸಿದ ವಡ್ಡೆಪಲ್ಲೆ, ಮಲದಕಲ್, ಧರೂರು ಮಂಡಲ ವ್ಯಾಪ್ತಿಯಲ್ಲಿ ಭೂಮಿ ಒತ್ತುವರಿಯಾಗಿದೆ ಎಂಬ ಕಾರಣಕ್ಕೆ ಮಾರಾಟ ಮಾಡಲು ಮಠವೇ ಸರ್ಕಾರಕ್ಕೆ ಪತ್ರ ಬರೆದಿತ್ತು. ಆದ ಕಾರಣ ಸರ್ಕಾರ ಪ್ರಕಟಣೆ ಹೊರಡಿಸಿದೆ. …
Read More »ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಮಂದಿಗೆ ಕೊರೊನಾ ಪಾಸಿಟಿವ್…!
ನವದೆಹಲಿ,ನ.28-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 93.51 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ನಿತ್ಯ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 41,322 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಹಲವಾರು ದಿನಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ದಾಟುವ ಸಾಧ್ಯತೆಗಳಿವೆ. ಅದಾಗ್ಯೂ ಚೇತರಿಕೆ ಪ್ರಮಾಣ ಶೇ.93.68ಕ್ಕೆ ಏರಿಕೆಯಾಗಿದೆ. ಇದುವರೆಗೂ 87,59,969 ಸೋಂಕಿತರು …
Read More »ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.: ಈಶ್ವರಪ್ಪ
ಬೆಳಗಾವಿ: ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರನ್ನು ನಂಬಿದವರಿಗೆ ಮಂತ್ರಿ ಸ್ಥಾನ ಕೊಡಿಸಲು ಲಾಭಿ ಮಾಡುವುದರಲ್ಲಿ ರಮೇಶ್ ಜಾರಕಿಹೊಳಿ ಅವರ ತಪ್ಪಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನಡೆಸಲು ಅವರು ಪ್ರಯತ್ನ ಮಾಡುವದರಲ್ಲಿ ತಪ್ಪಿಲ್ಲ, ಕೆಲವು ಶಾಸಕರು ಬಿಜೆಪಿಗೆ ಬಂದು ಸರ್ಕಾರ ರಚನೆಗೆ …
Read More »ಬೆಳಗಾವಿ: ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲು ಒತ್ತಾಯ
ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2ನೇ ಅತೀ ದೊಡ್ಡ ಮತದಾರರಾಗಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಲೋಕಸಭೆಯ ಟಿಕೆಟ್ ಕುರುಬ ಸಮುದಾಯದವರಿಗೆ ನೀಡಬೇಕು ಎಂದು ಕುರುಬ ಸಮುದಾಯದ ಮುಖಂಡ ರಾಜೇಂದ್ರ ಸಣ್ಣಕ್ಕಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಸಣ್ಣಕ್ಕಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಎರಡೂವರೆ ಲಕ್ಷ ಮತದಾರರಿದ್ದಾರೆ. …
Read More »ಬಾಲಕಿಯೊಂದಿಗೆ ಮದುವೆ ಮಾಡಿಕೊಡಲು ಒಪ್ಪದಿರುವ ಹುಡುಗಿಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ : ಪ್ರೀತಿಸಿದ ಬಾಲಕಿಯೊಂದಿಗೆ ಮದುವೆ ಮಾಡಿಕೊಡಲು ಒಪ್ಪದಿರುವ ಹುಡುಗಿಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಖಾನಾಪುರದ ಗಾಂಧಿನಗರದಲ್ಲಿ ನಡೆದಿದೆ. ಸಂತೋಷ ರಾಮು ವಡ್ಡರ(22) ಹುಡುಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಯುವಕ. ಹಲವು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದನು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪ್ರೀತಿಯ ವಿಷಯ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ಬಾಲಕಿಯ ಮನೆಯಲ್ಲಿ ವಿವಾಹಕ್ಕೆ ಒಪ್ಪಿರಲಿಲ್ಲ. ಇದರಿಂದ ಯುವಕ ಮದುವೆಯಾಗುವುದಾಗಿ ಪದೇ ಪದೆ ತೊಂದರೆ ನೀಡುತ್ತಿದ್ದನು. …
Read More »B.S.Y.ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Read More »ಖಾಸಗಿ ಶಾಲೆಗಳು ನಡೆಸುತ್ತಿರುವ ಆನ್ಲೈನ್ ಶಿಕ್ಷಣ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಅದು ಸ್ಥಗಿತಗೊಳ್ಳುವುದಿಲ್
ಬೆಂಗಳೂರು,ನ.27- ಖಾಸಗಿ ಶಾಲೆಗಳು ನಡೆಸುತ್ತಿರುವ ಆನ್ಲೈನ್ ಶಿಕ್ಷಣ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಅದು ಸ್ಥಗಿತಗೊಳ್ಳುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಭರವಸೆ ನೀಡಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಜತೆ ಇಂದು ಸಭೆ ನಡೆಸಿದ ಅವರು, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಮುಚ್ಚಿದ್ದು, ಖಾಸಗಿ ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಬೋಧನೆ ಮಾಡುತ್ತಿವೆ. ಶುಲ್ಕ ಕಟ್ಟದೇ ಇರುವ ವಿದ್ಯಾರ್ಥಿಗಳಿಗೆ …
Read More »ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …
Read More »ಯಡಿಯೂರಪ್ಪ ಮತ್ತೊಂದು ಅಧಿವಗೆ ಸಿಎಂ ಆಗುವ ಆಸೆ ಹೊಂದಿಲ್ಲ: ಪರಮಶಿವಯ್ಯ
ಬೆಂಗಳೂರು, ನ.27- ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೊಂದು ಅಧಿವಗೆ ಸಿಎಂ ಆಗುವ ಆಸೆ ಹೊಂದಿಲ್ಲ. ಹಾಗಾಗಿ ಅವರು ಓಲೈಕೆ ರಾಜಕಾರಣ ಮಾಡುವ ಅಗತ್ಯ ಇಲ್ಲ ಎಂದು ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀರ್ಘ ಅವಯವರೆಗೂ ಯಡಿಯೂರಪ್ಪ ರಾಜಕೀಯದಲ್ಲಿದ್ದಾರೆ. ಅಧಿಕಾರದ ಕೊನೆಯ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕು ಎಂಬ ಆಸೆ ಅವರದು. ಹಾಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಇದನ್ನು ಓಲೈಕೆ ರಾಜಕಾರಣ …
Read More »
Laxmi News 24×7