ಕಲಬುರಗಿ: ಒಂದು ವರ್ಷದಿಂದ ಸುಮ್ಮನೆ ಇದ್ದವರು ನನ್ನ ಮನೆಯಲ್ಲಿ ಕಾರ್ಯಕ್ರಮ ಇದ್ದಾಗಲೇ ನೋಟಿಸ್ ಕೊಡಲು ಬಂದಿದ್ದಾರೆ. ನನಗೆ ಚಳಿ ಯಾವುದು, ಮಳೆ ಯಾವುದು ಗೊತ್ತಿಲ್ಲ. ಎಲ್ಲವನ್ನೂ ಒಂದೇ ರೀತಿಯಾಗಿ ಅನುಭವಿಸಿದ್ದೇನೆ. ನನ್ನ ಮೇಲೆ ಎಫ್ಐಆರ್ ಹಾಕಿದ್ದೇ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಬಿಐ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮನೆಯಲ್ಲೆ ನನ್ನ ಮಗಳ ಎಂಗೆಜ್ಮೆಂಟ್ ಕಾರ್ಯಕ್ರಮ ಇದ್ದಾಗ ಮನೆ …
Read More »ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ
ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …
Read More »ರೋಷನ್ ಬೇಗ್ ಬಂಧನ ಬೆನ್ನಲ್ಲೇ ಮನ್ಸೂರ್ ಅಲಿಖಾನ್ ಸಿಬಿಐ ವಶಕ್ಕೆ
ಬೆಂಗಳೂರು: ಐಎಂಎಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಅಲಿಖಾನ್ ನನ್ನು ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರ ಬಂಧನದ ಬೆನ್ನಲ್ಲೇ ಮನ್ಸೂರ್ ಖಾನ್ ನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ತನ್ನ …
Read More »ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ
ಮೂಡಲಗಿ : ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ ಎಂದು ಗ್ರಾಪಂ ನೌಕರರ ಸಂಘದ ಸದಸ್ಯ ಕಿಶೋರ ಗಣಾಚಾರಿ ಕಿಡಿಕಾರಿದರು. ಸಮೀಪದ ಹಳ್ಳೂರ ಗ್ರಾಪಂ.ಸಭಾ ಭವನದಲ್ಲಿ ಆಯೋಜಿಸಲಾದ ಕೇಂದ್ರ-ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ಪತ್ರಿಭಟಿಸಿ ನ.26ರಂದು ಅಖಿಲ ಭಾರತ ಮುಷ್ಕರ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ರೈತರ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿರುವಾಗ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ಸುಗ್ರಿವಾಜ್ಞೆ …
Read More »ಬಿಜೆಪಿ ತೊರೆದು ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಕಾಂಗ್ರೆಸ್ಗೆ ಸೇರ್ಪಡೆಯಾದರು.
ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಅವರು ಬಿಜೆಪಿ ತೊರೆದು ಸಾವಿರಾರು ಬೆಂಬಲಿಗರ ಜೊತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಹಾಗೂ ಹಲವು ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು. ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸೇರ್ಪಡೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಆರ್.ಬಸನಗೌಡ ತುರ್ವಿಹಾಳ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ …
Read More »ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು:ಸತೀಶ್ ಜಾರಕಿಹೊಳಿ
ರಾಯಚೂರು: ಮಸ್ಕಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶ ಹಾಗೂ ಆರ್.ಬಸನಗೌಡ ಅವರ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವ ಮುಖಂಡರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ವೇದಿಕೆಗೆ ಕರೆತರಲಾಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ. ಮಸ್ಕಿ: ಪಕ್ಷದ ಗೆಲುವಿಗಾಗಿ ನೀವು ತೋರಿರುವ ಬೆಂಬಲ, ಪ್ರೀತಿ, ಉತ್ಸಾಹ, …
Read More »ಕಾಂಗ್ರೆಸ್ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ಗೆ ಬರುತ್ತಾರೆ:ಡಿ.ಕೆ.ಶಿವಕುಮಾರ್
ಕೊಪ್ಪಳ, ನ.23: ಬಿಜೆಪಿಯಿಂದಲೇ ಕಾಂಗ್ರೆಸ್ಗೆ ಸೇರ್ಪಡೆ ಆಗುವವರು ಬಹಳಷ್ಟು ಮಂದಿ ಇದ್ದಾರೆ. ಕಾಂಗ್ರೆಸ್ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ಗೆ ಬರುತ್ತಾರೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಮ್ಮ ಸರಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ …
Read More »ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ
ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್ಗಳನ್ನು ವಶಕ್ಕೆ ಪಡೆದು …
Read More »ಡಿಸೆಂಬರ್ವರೆಗೆ ಶಾಲೆ ಇಲ್ಲ:B.S.Y.
ಬೆಂಗಳೂರು: ಡಿಸೆಂಬರ್ವರೆಗೆ ಶಾಲೆ ಇಲ್ಲ. ಡಿಸೆಂಬರ್ ಕೊನೆಯಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಾಲಾ-ಕಾಲೇಜು ಪ್ರಾರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ತಜ್ಞರ ಅಭಿಪ್ರಾಯಗಳನ್ನು ಪಡೆಯಲಾಗಿದ್ದು, ಸದ್ಯಕ್ಕೆ ಶಾಲೆ ಪ್ರಾರಂಭ ಬೇಡ ಎಂದು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಪ್ರಾರಂಭ ಮಾಡಲಾಗುವುದಿಲ್ಲ ಎಂದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ.
Read More »ಜ್ವಾಗರ್ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಜ್ವಾಗರ್ ಕಾರ್ ಬೆಂಕಿಗಾಹುತಿ
ಬೆಂಗಳೂರು: ಜ್ವಾಗರ್ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ನಗರದ ಹೊರ ವಲಯದ ನೆಲಮಂಗಲದಲ್ಲಿ ನಡೆದಿದೆ. ಮಾದಾವರದ ಹಾಗೂ ಮಾದನಾಯಕನಹಳ್ಳಿ ಮಧ್ಯೆ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶ ಕೇಂದ್ರದ ಬಳಿ ಜ್ವಾಗರ್ ಕಾರ್ ಬೆಂಕಿಗಾಹುತಿಯಾಗಿದೆ. ಕಾರು ಚಲಿಸುತ್ತಿರುವಾಗ ಬಾನೆಟ್ನಿಂದ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಪರಿಶೀಲನೆ ಮಾಡಲು ಕೆಳಗಡೆ ಇಳಿದಿದ್ದು, ಬಾನೆಟ್ ಬಿಚ್ಚಿ ನೋಡಿದಾಗ ಬೆಂಕಿ ಹೊತ್ತಿಕೊಂಡಿರುವುದು ಕಂಡಿದೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದಿದ್ದಾರೆ. ಇದರಿಂದಾಗಿ …
Read More »
Laxmi News 24×7