Breaking News

ಜಿಲ್ಲೆ

ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ವಾಪಸ್ ಪಡೆಯದಿದ್ದರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್

ಬೆಂಗಳೂರು : ಸರ್ಕಾರದಿಂಧ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ. ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಜೊತೆಗೆ ಮರಾಠಿ ಪ್ರಾಧಿಕಾರ ರಚನೆಯ ಹಿಂದೆ ಭಾರಿ ಪಿತೂರಿ …

Read More »

ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ

ಬೆಳಗಾವಿ; ಸರ್ಕಾರದಿಂದ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸರಕಾರದ ವಿರುದ್ಧ ಕರವೇ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ಈ ಆದೇಶವನ್ನು ಹಿಂಪಡೆಯಬೇಕು. ಆದೇಶ ಹಿಂಪಡೆಯದಿದ್ದರೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ …

Read More »

30 ಹಾಸಿಗೆಗಳ ತಾಯಿ ಮಕ್ಕಳ ‘ಸ್ಮಾರ್ಟ್’ ಆಸ್ಪತ್ರೆಯನ್ನು ಶಾಸಕ ಅನಿಲ್ ಬೆನಕೆ ಮಂಗಳವಾರ ಉದ್ಘಾಟಿಸಿದರು.

ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಶ್ರೀನಗರದ ವಂಟಮುರಿ ಕಾಲನಿಯಲ್ಲಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮಕ್ಕಳ ‘ಸ್ಮಾರ್ಟ್’ ಆಸ್ಪತ್ರೆಯನ್ನು ಶಾಸಕ ಅನಿಲ್ ಬೆನಕೆ ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಶ್ರೀನಗರದ ಡಬಲ್ ರಸ್ತೆಯಲ್ಲಿರುವ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ 2.75 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಇದರಿಂದ ಸ್ಥಳೀಯ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಲಭಿಸಲಿದೆ ಎಂದು ತಿಳಿಸಿದರು. ಸ್ಮಾರ್ಟ್ …

Read More »

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’ ವಿಜಯಪುರ: ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವ ಜನರು ತಮ್ಮ ಕಾರು, ಬೈಕ್ ಗಳ ಮೇಲೆ ಪ್ರೆಸ್ ಎಂದು‌ ಬರೆಸುವುದು ಸಾಮಾನ್ಯ. ಆದರೆ ವಿಜಯಪುರ ಜಿಲ್ಲೆಯಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಂಬಂಧ ಇಲ್ಲದವರೂ ಟಂಟಂ, ಆಟೋಗಳ ಮೇಲೂ ಪ್ರೆಸ್ ಸ್ಟಿಕ್ಕರ್ ಬಳಕೆ ಮಾಡುವುದು ಕಂಡುಬರುತ್ತಿದೆ‌. ವಿಜಯಪುರ ನಗರದಲ್ಲಿ ಆಟೋ ಮೇಲೆ ತ್ರಿಟಿವಿ ಬಂಜಾರಾ- ಪ್ರೆಸ್ (3 TV Banjara …

Read More »

ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ

ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ‌ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ. ಕಾರ್ತಿಕ್​ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್​ನ ಸದಸ್ಯರಂತೆ. ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. …

Read More »

ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ.

ಬೆಂಗಳೂರು: ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ. ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.

Read More »

ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ.

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ …

Read More »

ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ ಸಂಪತ್​ ರಾಜ್​​ ಕೊನೆಗೂ ನಿನ್ನೆ ಅರೆಸ್ಟ್​ ಆಗಿದ್ದಾರೆ.

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪ ಹೊತ್ತು, ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ ಸಂಪತ್​ ರಾಜ್​​ ಕೊನೆಗೂ ನಿನ್ನೆ ಅರೆಸ್ಟ್​ ಆಗಿದ್ದಾರೆ. ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಡಿಸ್ಚಾರ್ಜ್​​​ ಆದ ಬಳಿಕ ಸಣ್ಣ ಸುಳಿವು ಸಿಗದೆ ಸಂಪತ್​ ರಾಜ್ ಕಣ್ಮರೆಯಾಗಿದ್ದರು. ಅವರನ್ನ ಹುಡುಕಲು ಪೊಲೀಸರು ಒಂದು ತಿಂಗಳಿನಿಂದ ಪ್ರಯತ್ನಿಸಿದ್ದರು. ಸಂಪತ್ ರಾಜ್​ರನ್ನ ಹಿಡಿಯೋದಿರಲಿ, ಅವರ ಸುಳಿವು ಪತ್ತೆ ಮಾಡೋದ್ರಲ್ಲೇ ಹೈರಾಣಾಗಿದ್ದರು. ನಾಗರಹೊಳೆ, …

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನವೆಂಬರ್ 18 ರಿಂದ ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 18 ರಿಂದ 30 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 4 ರಿಂದ ಮೂರು ಹಂತದ ಕೌನ್ಸಲಿಂಗ್ ನಡೆಯಲಿದೆ. ಮಾರ್ಚ್ ಮಧ್ಯಂತರದ ವರೆಗೆ ಮುಂದುವರೆಯಲಿದೆ. ಈ ವರ್ಷ ಲಕ್ಷಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಲಿದ್ದಾರೆ. ಇವರಲ್ಲಿ ಶೇ. …

Read More »

ಸಂಗೊಳ್ಳಿ ರಾಯಣ್ಣನ ತಲೆಮೇಲೆ ಕಾಲಿಟ್ಟ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ. ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.         ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ …

Read More »