Breaking News

ಜಿಲ್ಲೆ

ಕರ್ನಾಟಕದಲ್ಲಿ ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ: ಸಿಎಂ ಗೆ ರಾಜೀನಾಮೆ ಆಗ್ರಹ

ಬೆಂಗಳೂರು : ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿದೆ ಎಂದು ಆರೋಪಿಸಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಾಟಾಳ್ …

Read More »

ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿನಲ್ಲಿ ಕಣ್ಣೀರು

ಬೆಳಗಾವಿ: ಕುಟುಂಬದವರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಇದೀಗ ಜೈಲಿನಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಅವರು, ವಿಚಾರಣಾಧೀನ ಕೈದಿಯಾಗಿ ಹಿಂಡಲಗಾ ಕಾರಾಗೃಹದಲ್ಲಿ ಕಾಲ ಕಳೆಯುತ್ತಿದ್ದಾರೆ. ಧಾರವಾಡದ ತನ್ನ ಡೇರಿಯಲ್ಲಿ ಪ್ರತಿ ದೀಪಾವಳಿಯನ್ನೂ ಮನೆಯವರೊಂದಿಗೆ ಬೆರೆತು ಭರ್ಜರಿಯಾಗಿ ಆಚರಿಸುತ್ತಿದ್ದ ಸಂದರ್ಭ ನೆನೆದು ಶನಿವಾರ ರಾತ್ರಿ ಜೈಲು ಸಿಬ್ಬಂದಿ ಬಳಿ ಬೇಸರ ತೋಡಿಕೊಂಡಿದ್ದಾರೆ. ‘ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನನ್ನನ್ನು ನೋಡಲು ಕುಟುಂಬದವರು …

Read More »

ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು.

ಬೀದರ್: ಅದು ಐತಿಹಾಸಿಕ ದೇಗುಲ. ವರ್ಷದ ಹನ್ನೆರಡು ತಿಂಗಳು ಆ ದೇಗುಲದ ಗುಹೆಯಲ್ಲಿ ನೀರು ತುಂಬಿ ತುಳುಕುತ್ತಾ ಇತ್ತು. ನೀರಿದ್ರಷ್ಟೇ ಆ ದೇಗುಲದ ಒಳಗೆ ಹೋಗಿ ಭಕ್ತರು ದರ್ಶನ ಪಡೆಯಬಹುದು. ಆದ್ರೆ ಈಗ ದೇಗುಲಕ್ಕೆ ಜಲಕಂಟಕ ಎದುರಾಗಿದೆ. ಐತಿಹಾಸಿಕ ಉಗ್ರನರಸಿಂಹ ದೇವಸ್ಥಾನ. ಬೀದರ್ ಜಿಲ್ಲೆಯಲ್ಲಿರುವ ಈ ಐತಿಹಾಸಿಕ ದೇಗುಲ ಸುಮಾರು 1200ವರ್ಷಗಳಷ್ಟು ಹಳೆಯದಾದ ಪುರಾತನ ದೇವಸ್ಥಾನ. ಈ ದೇವಸ್ಥಾನದ ವಿಶೇಷ ಅಂದ್ರೆ ಸುಮಾರು ಮುನ್ನೂರು ಮೀಟರ್ ಉದ್ದದ ಎದೆ ಎತ್ತರದ …

Read More »

ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ.

ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ …

Read More »

ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…

    https://youtu.be/Dg6L9OFWlVU   ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ‌ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, …

Read More »

ರಾಜ್ಯ ಸರ್ಕಾರ ದಿಢೀರನೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ಪರ ಸಂಘಟನೆಗಳಿಂದಲ್ಲದೇ ವಿವಿಧ ಸ್ತರಗಳಿಂದಲೂ ತೀವ್ರ ವಿರೋಧ

ಬೆಂಗಳೂರು, : ರಾಜ್ಯ ಸರ್ಕಾರ ದಿಢೀರನೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಇದಕ್ಕೆ ರಾಜ್ಯದ ನಾನಾ ಭಾಗಗಳಲ್ಲಿ ಅಪಸ್ವರ ಕೇಳಿ ಬಂದಿದೆ.ಯಾವುದೇ ಮಾಹಿತಿಯನ್ನು ಕೊಡದೆ ಏಕಾಏಕಿ ಪ್ರಾಧಿಕಾರ ರಚನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಬಸವ ಕಲ್ಯಾಣದ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿರುವ ಸರ್ಕಾರದ ಧೋರಣೆಗೆ ಕನ್ನಡ ಪರ ಸಂಘಟನೆಗಳಿಂದಲ್ಲದೇ ವಿವಿಧ ಸ್ತರಗಳಿಂದಲೂ …

Read More »

ಭಾರತೀಯ ಚಿತ್ರರಂಗದ ಅಭಿನೇತ್ರ ಮತ್ತು ನಾಟಕಕಾರ ಸೌಮಿತ್ರ ಚಟರ್ಜಿ (85) ಇನ್ನಿಲ್ಲ.

ಭಾರತೀಯ ಚಿತ್ರರಂಗದ ಹಿರಿಯ ಅಭಿನೇತ್ರ ಮತ್ತು ನಾಟಕಕಾರ ಸೌಮಿತ್ರ ಚಟರ್ಜಿ (85) ಇನ್ನಿಲ್ಲ. ಒಂದು ತಿಂಗಳಿಗೂ ಹೆಚ್ಚು ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಚಟರ್ಜಿ ಇಂದು ಮಧ್ಯಾಹ್ನ 12.15ರ ಸಮಯದಲ್ಲಿ ವಯೋಸಹಜ ಬಹು ಅನಾರೋಗ್ಯದಿಂದ ಕೊನೆಯುಸಿರೆಳದರು. ಪತ್ನಿ, ಪುತ್ರ, ಪುತ್ರಿ ಮತ್ತು ಅಪಾರ ಅಭಿಮಾನಿಗಳನ್ನು ಸೌಮಿತ್ರ ಚಟರ್ಜಿ ಅಗಲಿದ್ದಾರೆ. ಕೋವಿಡ್ ವೈರಸ್ ಸೋಂಕಿನಿಂದಾಗಿ ಒಂದೂವರೆ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸೌಮಿತ್ರ ನಂತರ ಚೇತರಿಸಿಕೊಂಡರೂ ವಿವಿಧ ಅಂಗಾಂಗಗಳ ವೈಫಲ್ಯದಿಂದ ಕೊನೆಯುಸಿರೆಳೆದರು.

Read More »

ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್

ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶೀ ಕ್ಷೇತ್ರವೆಂದೇ ಪ್ರತೀತಿಯಾಗಿರೋ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇಗುಲ ಹಾಗೂ ಆವರಣದಲ್ಲಿ ಈ ಬಾರಿ ದೀಪ ಹಚ್ಚುವಂತಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ. ನಾಳೆ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಶ್ರೀಭೋಗನಂದೀಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕೊರೊನಾ ಭೀತಿ ಆತಂಕದಿಂದ …

Read More »

ಹಿಂಡಲಗಾ ಜೈಲಿನಲ್ಲಿ ನಾಳೆ ದೀಪಾವಳಿಯ ವಿಶೇಷ ಪೂಜೆ ಜೈಲಿನಿಂದಲೇ ಸಾರ್ವಜನಿಕರಿಗೆ ಶುಭಾಶಯ: ವಿನಯ್ ಕುಲಕರ್ಣಿ

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ದೀಪಾವಳಿ ಹಬ್ಬದ ಸಂಭ್ರಮವಿಲ್ಲ. ಆದರೂ ಜೈಲಿನಿಂದಲೇ ಸಾರ್ವಜನಿಕರಿಗೆ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಶನಿವಾರ ಬರೆದುಕೊಂಡಿರುವ ಅವರು, ದೀಪಾವಳಿಯ ದೀಪವು ನಮ್ಮೆಲ್ಲಾ ತೊಂದರೆಗಳನ್ನು, ಸಮಸ್ಯೆಗಳನ್ನು ಮತ್ತು ದುಃಖಗಳನ್ನು ಸುಡಲಿ. ಈ ಅದ್ಭುತ ದೀಪಾವಳಿಯಿಂದ ನಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಂಭ್ರಮ, ಸಡಗರ ಮನೆ ಮಾಡಲಿ. …

Read More »