ಬೆಳಗಾವಿ, -: ಜಿಲ್ಲೆಯಲ್ಲಿ ಒಟ್ಟು ಕೋವಿಡ್-೧೯ ಸೋಂಕಿತರ ಪೈಕಿ ಶೇ.94 ರಷ್ಟು ಜನರು ಗುಣಮುಖರಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ಮರಣ ಪ್ರಮಾಣ ಶೇ.0.4 ಕ್ಕೆ ಇಳಿಮುಖಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಶನಿವಾರ(ಅ.24) ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ 24,039 ಜನರಿಗೆ ಕೋವಿಡ್-೧೯ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಒಟ್ಟು ಸೋಂಕಿತರ ಪೈಕಿ 23,020 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 961 ಸಕ್ರಿಯ ಪ್ರಕರಣಗಳಿವೆ.
Read More »ಮಟಕಾ ವಿರುದ್ಧ,ಬೆಳಗಾವಿ ಪೋಲೀಸರಿಂದ ಮಹಾ ಯುದ್ಧ…!
ಸಮರ್ಥ ನಗರದಲ್ಲಿ ಮಟಕಾ ದಾಳಿ… ಬೆಳಗಾವಿ- ರಾತ್ರಿ ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥನಗರದಲ್ಲಿ *ಮಟ್ಕಾ ದಾಳಿ* ಕೈಕಾಂಡಿದ್ದು, ಈ ಸಂದರ್ಭದಲ್ಲಿ *11 ಜನ* ಆರೋಪಿತರಾದ 1) ಸರ್ಫರಾಜ್ ಮಹಮ್ಮದಾಗೌಸ್ ಶಹಾಪಿರಿ ವಯಸ್ಸು 21, ಸಾ: ಕಾಕತಿ 2) ದಶರಥ ಭೀಮಶಿ ಕಾಂಬಳೆ ವಯಸ್ಸು 40, ಸಾ: ಉಪ್ಪಾರಗಲ್ಲಿ, ಖಾಸಬಾಗ 3)ಪ್ರಕಾಶ ಪಾಂಡುರಂಗ ಮಲಸೂರೆ ವಯಸ್ಸು 64, ಸಾ: ಮೀರಾಪೂರ ಗಲ್ಲಿ ಶಹಾಪೂರ 4) ಬಸವರಾಜ ಜ್ಯೋತಿಬಾ ಪಾಟೀಲ ವಯಸ್ಸು …
Read More »ರಾಜ್ಯದೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಅದರಲ್ಲೂ ಅರಮನೆ ನಗರಿಯಲ್ಲಿ ಅಬ್ಬರ ಜೋರಾಗಿದೆ.
ಮೈಸೂರು: ರಾಜ್ಯದೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಅದರಲ್ಲೂ ಅರಮನೆ ನಗರಿಯಲ್ಲಿ ಅಬ್ಬರ ಜೋರಾಗಿದೆ. ಇಂದು ಆಯುಧ ಪೂಜೆ ನಡೆದ್ರೆ, ನಾಳೆ ಜಂಬೂ ಸವಾರಿ ನಡೆಯಲಿದೆ. ಬೆಳಗ್ಗೆಯಿಂದಲೇ ಅರಮನೆಯಲ್ಲಿ ಪೂಜಾ ಕೈಂಕರ್ಯಗಳು ಶುರುವಾಗಿವೆ. ಮೈಸೂರು ಅರಮನೆಯಲ್ಲಿ ಸರಳ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6.15ಕ್ಕೆ ಅರಮನೆಯಲ್ಲಿ ಚಂಡಿ ಹೋಮದಿಂದ ಇಂದಿನ ಕಾರ್ಯಗಳು ಆರಂಭವಾಗಿದೆ. ಬೆಳಗ್ಗೆ 6.28ಕ್ಕೆ ಅರಮನೆ ಆವರಣದ ಕೋಡಿ ಸೋಮೇಶ್ವರ ದೇಗುಲಕ್ಕೆ ಆಯುಧಗಳನ್ನು ರವಾನಿಸಲಾಗುತ್ತೆ. ಸುಮಾರು ಒಂದು …
Read More »ಆ ಶಾಲಾ ಆವರಣಕ್ಕೆ ನಿತ್ಯ ಬಾಲಕರ ದಂಡು ಆಟ ಆಡೋಕೆ ಹೋಗ್ತಿತ್ತು. ಆದ್ರೆ ಅಲ್ಲಿ ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುಂಡಿಗಳನ್ನ ತೆಗೆಯಲಾಗಿತ್ತು.
ಹಾವೇರಿ: ಆ ಶಾಲಾ ಆವರಣಕ್ಕೆ ನಿತ್ಯ ಬಾಲಕರ ದಂಡು ಆಟ ಆಡೋಕೆ ಹೋಗ್ತಿತ್ತು. ಆದ್ರೆ ಅಲ್ಲಿ ಹೊಸದಾಗಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುಂಡಿಗಳನ್ನ ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಈಗ ಆ ಗುಂಡಿಗಳೇ ಆ ಬಾಲಕರ ಪಾಲಿಗೆ ಮೃತ್ಯುಕೂಪವಾಗಿದ್ದು, ಮೂರು ಜೀವವನ್ನ ಪಡೆದಿವೆ. ಶಾಲಾ ಆವರಣದಲ್ಲಿರುವ ಗುಂಡಿಗಳಲ್ಲಿ ತುಂಬಿರೋ ನೀರು. ನೀರಿನಿಂದ ಬಾಲಕರ ಮೃತದೇಹ ಹೊರತೆಗಿತಿರೋ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು. ಗುಂಡಿಯಲ್ಲಿನ ನೀರು ಹೊರಹಾಕ್ತಿರೋ …
Read More »ಮಾಸ್ಕ್ ಧರಿಸದ್ದಕ್ಕೆ ದಂಡ ಹಾಕುತ್ತಿದ್ದ ಸಿಬ್ಬಂದಿ ಮೇಲೆ ಹಲ್ಲೆ
ತುಮಕೂರು: ಕೊರೊನಾ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗುತ್ತಿವೆ. ಜನ ಸಹ ಮತ್ತಷ್ಟು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಹೀಗೆ ಮಾಸ್ಕ್ ಹಾಕದೆ ಓಡಾಡುತ್ತಿದ್ದವರಿಗೆ ನಗರ ಸಭೆ ಸಿಬ್ಬಂದಿ ದಂಡ ವಿಧಿಸಿದ್ದು, ಇದರಿಂದ ಕೋಪಿತಗೊಂಡ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಜಿಲ್ಲೆಯ ತಿಪಟೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಧರಿಸಿದ್ದಕ್ಕೆ ದಂಡ ಹಾಕುತಿದ್ದ ನಗರ ಸಭೆ ಸಿಬ್ಬಂದಿ ವೆಂಕಟೇಶ ಅವರ ಮೇಲೆ ಹಲ್ಲೆ ವ್ಯಕ್ತಿ ಹಲ್ಲೆ …
Read More »ಡಿಕೆಶಿಯವರದ್ದು ಯಾವಾಗಲೂ ಗೂಂಡಾ ರಾಜಕಾರಣ- ಶೋಭಾ ಕರಂದ್ಲಾಜೆ
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರದ್ದು ಯಾವಾಗಲೂ ಗೂಂಡಾ ರಾಜಕಾರಣ. ಆರ್.ಆರ್ ನಗರ ಚುನಾವಣೆಯಲ್ಲೂ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ ಎಂದು ಸಂಸದೆ ಶೋಭ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ ಡಿಕೆಶಿ ಸಹೋದರ ಡಿಕೆ ಸುರೇಶ್ ಅವರೇ ಸಂಸದರು. ಎಲ್ಲ ಗೂಂಡಾಗಳನ್ನು ಬಳಸಿಕೊಂಡು ಕಾನೂನು ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ. ಚುನಾವಣೆ …
Read More »ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ.
ಹಾಸನ: ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ 10:45 ರ ಸುಮಾರಿಗೆ ವ್ಯಕ್ತಿಯೊಬ್ಬರು ಎಂಜಿ ರಸ್ತೆಗೆ ಕುಟುಂಬದವರ ಜೊತೆಗೆ ಹಬ್ಬಕ್ಕೆ ದಿನಸಿ ಖರೀದಿಸಲು ಬಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿದರೂ ಸುಮಾರು ಅರ್ಧ ಗಂಟೆ ಆಂಬುಲೆನ್ಸ್ ತಡವಾಗಿ ಬಂದಿದೆ. ಅಷ್ಟರಲ್ಲಾಗಲೇ ವ್ಯಕ್ತಿಯ …
Read More »ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲಾಗುವುದು:ಡಾ. ಅಶ್ವತ್ಥ್ ನಾರಾಯಣ
ಬೆಳಗಾವಿ: ರಾಜ್ಯದಲ್ಲಿನ ಜನರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಹೇಳಿದರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಹೇಳಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಸಮರ್ಥಿಸಿಕೊಂಡರು. ಬಿಹಾರದಲ್ಲಿ ಲಸಿಕೆ ಕೊಡಲು ನಾವು ಸಿದ್ಧರಿದ್ದೇವೆ ಎಂದು ಆಶ್ವಾಸನೆ ನೀಡಿದ್ದೇವೆ. ಅದರಲ್ಲಿ ತಪ್ಪೇನಿಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ …
Read More »ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …
Read More »ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. DG&IGPಗೆ ರಾಜೀನಾಮೆ ಸಲ್ಲಿಸಿದ Dy. SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್ನಲ್ಲಿ ಬರೆದುಕೊಂಡಿದ್ದಾರೆ. ಏನಿದು ರಾಜೀನಾಮೆ ಪ್ರಕರಣ? ಹಂಪಿ ಸುತ್ತಮುತ್ತ …
Read More »
Laxmi News 24×7