ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್ ಸವಾರ ಸಂತೋಷ್ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.
ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ …
Read More »ಪೊಲೀಸರ ಮೇಲೂ ತಲವಾರು ಬೀಸಿದ ಬಂಟ್ವಾಳ ಹತ್ಯೆ ಪ್ರಕರಣದ ಆರೋಪಿ | ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಅವರನ್ನು ಬೆನ್ನಟ್ಟಿ ಹೋಗಿದ್ದು, ಗುಂಡ್ಯ ಸಮೀಪದಲ್ಲಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದಾನೆ ಎಂದು …
Read More »ರಾಜ್ಯದಲ್ಲಿ ಅಕ್ಟೋಬರ್ 27 ರವರೆಗೆ ಭಾರೀ ಮಳೆ,ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 27ರವರೆಗೆ ಭಾರೀ ಮಳೆಯಾಗುತ್ತದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಆಯ್ತು, ಈಗ ಬೆಂಗಳೂರು ಸರದಿ. ಮುಂಬೈ, ಹೈದರಾಬಾದ್ ರೀತಿ ಬೆಂಗಳೂರು ಕೂಡ ಮುಳುಗುತ್ತಾ ಎಂಬ ಆತಂಕ ಸದ್ಯ ಎದುರಾಗಿದೆ. ಅಕ್ಟೋಬರ್ ತಿಂಗಳ ಈ ಮಳೆ ಕಂಟಕ ಇನ್ನೆಷ್ಟು ದಿನ ಅನ್ನೋ ಪ್ರಶ್ನೆ ಮೂಡಿದೆ. ಈ ಮಧ್ಯೆ ಮಳೆ ಭವಿಷ್ಯದ ಮಾಹಿತಿ …
Read More »ರ್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ
ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ. ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್ಪಿಸಿ) ಸೆಕ್ಷನ್ 107ರ ಆಡಿ ಕೇಸ್ …
Read More »ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ.
ಶಿವಮೊಗ್ಗ: ನಗುನಗುತ್ತಾ ಎಲ್ಲ ಮಕ್ಕಳಂತೆ ಆಡಿ, ಕುಣಿದು ಬೆಳೆಯಬೇಕಿದ್ದ ಮಗು ಇದೀಗ ತಂದೆಯನ್ನು ಬಿಟ್ಟು ಇರದಂತಹ ಸ್ಥಿತಿಗೆ ಬಂದಿದೆ. ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ. ಸೊರಬ ತಾಲೂಕಿನ ಚಿಟ್ಟೂರು ಗ್ರಾಮದ ನಿವಾಸಿ ಗಿರೀಶ್ ಅವರ ಪುತ್ರ ಶರತ್ ಹುಟ್ಟಿದಾಗ ಎಲ್ಲರಂತೆ ಕಣ್ಣು ಚೆನ್ನಾಗಿಯೇ ಇತ್ತು. ಎಲ್ಲರ ಜೊತೆ ಆಡಿ ಕುಣಿದು ನಲಿಯುತ್ತಿದ್ದ. ಆದರೆ ಇದೀಗ ತಂದೆಯ ಆಶ್ರಯ ಇದ್ದರೆ ಮಾತ್ರ …
Read More »ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ.
ಬೆಂಗಳೂರು: ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ ಚಿತ್ತಾ ಮಳೆ ತನ್ನ ಕುರುಡಾಟ ಪ್ರದರ್ಶಿಸುತ್ತಿದೆ. ಯಾವಾಗಂದ್ರೆ ಆಗ ಮಳೆ ಸುರಿದು ನಾನಾ ಅವಾಂತರ ಸೃಷ್ಟಿ ಮಾಡುತ್ತಿದೆ. ಕುರುಡ ಚಿತ್ತನ ಆಟಕ್ಕೆ ಬೆಂಗಳೂರು ಮಂದಿ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಲ್ಲಿ ಬೆಳಗ್ಗೆಯಿಂದ ಸೂರ್ಯ ದರ್ಶನ ಆಗಿರಲಿಲ್ಲ. ಮಧ್ಯಾಹ್ನದವರೆಗೂ ನಗರದಲ್ಲಿ ಮೋಡಗಳ ಆಟ ಜೋರಿತ್ತು. ಆದರೆ ಆ ಬಳಿಕ ನಗರದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯಿತು. ಅದ್ರಲ್ಲೂ ಸಂಜೆ …
Read More ».ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದ ಸಚಿವ ಕೆ.ಎಸ್ ಈಶ್ವರಪ್ಪ
ದಾವಣಗೆರೆ: ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್ ಆರ್ ನಗರದಲ್ಲಿ ಬಿಜೆಪಿಯು ಕಾಂಗ್ರೆಸ್ ಅಭ್ಯರ್ಥಿ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ದೌರ್ಜನ್ಯ ಮಾಡ್ತಾ ಇದ್ದೀವಿ. ಅವರು ತಪಸ್ಸು ಮಾಡ್ತಾ ಇದ್ದಾರೆ ಪಾಪಾ. ಗೂಂಡಾಗಿರಿಗೆ ಮತ್ತೊಂದು ಹೆಸರೇ …
Read More »ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.
ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ …
Read More »ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು
ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್ ಸಾಹೇಬ್ರು, ಅಶೋಕಣ್ಣ ಮತ್ತು …
Read More »
Laxmi News 24×7