ಅಥಣಿ ತಾಲ್ಲೂಕಿನಾದ್ಯಂತ ಸತತವಾಗಿ ಮೂರು ದಿನದಿಂದ ಸುರಿದ ಮಳೆಯಿಂದ ಹಲವು ಕಡೆ ರೈತರು ಬೆಳೆದ ಕಬ್ಬು ,ಮೆಕ್ಕೆಜೋಳ, ಈರುಳ್ಳಿ ನೀರಿನಲ್ಲಿ ನಿಂತು ರೈತರಿಗೆ ತುಂಬಾ ನಷ್ಟವಾಗಿದೆ , ತಾಲ್ಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಹನುಮಂತ ಚಿತ್ರಟಿ ಇವರು ತಮ್ಮ ಜಮೀನಿನಲ್ಲಿ ಬೆಳೆದಂಥ ಈರುಳ್ಳಿ ಬೆಳೆದು ನೀರು ಪಾಲಾಗಿ ತುಂಬಾ ನಷ್ಟ ಅನುಭವಿಸಿದ್ದಾರೆ ಇದೇ ಸಂದರ್ಭದಲ್ಲಿ ಅವರು ಮಾತನಾಡಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಳೆಗೆ ಒಳ್ಳೆಯ ಬೆಲೆ ಇದೆ ಅಂತ ತಾವು ತಮ್ಮ ಎರಡು …
Read More »ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಸಲಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿ ಸತತ …
Read More »ಕರ್ನಾಟಕದ ಜಿಲ್ಲೆಗಳು ಕಲಬುರಗಿ ನಿಲ್ಲದ ಮಳೆ, ಬಾರದ ಜನಪ್ರತಿನಿಧಿ, ಕಲಬುರಗಿ ಜನ ಕಂಗಾಲು
ಕಳೆದ ಮೂರು ದಿನಗಳಿಂದ ಸತತವಾಗಿ ಮತ್ತು ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ , ಯಾದಗಿರಿ , ಬಾಗಲಕೋಟೆ , ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಬಹಳಷ್ಟು ಪ್ರದೇಶಗಳು ಜಲಾವೃತಗೊಂಡು ನಡುಗಡ್ಡೆಗಳಂತೆ ಗೋಚರಿಸುತ್ತಿವೆ . ಕುಂಭದ್ರೋಣದಿಂದ ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಪ್ರಭಾವಕ್ಕೊಳಗಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ . ಅನೇಕ ಕಡೆ ರಸ್ತೆ ಮತ್ತು ಸೇತುವೆಗಳು ಕೊಚ್ಚಿಹೋಗಿವೆ . ಕಮಲಾಪುರ ಹತ್ತಿರವಿರುವ ಜವಳಗಾ , ಸೇಡಂ ತಾಲುಕಿನಲ್ಲಿರುವ ಸಮಖೇಡ್ ತಾಂಡಾ …
Read More »ಕಲ್ಲು ಗಣಿಗಾರಿಕೆ ಮಾಫಿಯಾ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿ ಟ್ರಾನ್ಸ್ಫರ್!
ದಕ್ಷಿಣ ಕನ್ನಡ: ಭೂ ಮಾಫಿಯ ವಿರುದ್ಧ ತೊಡೆ ತಟ್ಟಿದ್ದ KAS ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಈ ಹಿಂದೆ ಕೇಳಿಬಂದಿತ್ತು. ಇದೀಗ, ಅಧಿಕಾರಿಯನ್ನು ವರ್ಗಾವಣೆ ಮಾಡಿಸಲು ಯತ್ನಿಸುತ್ತಿದ್ದ ಪ್ರಭಾವಿಗಳಿಗೆ ಕೋರ್ಟ್ನ ಆದೇಶವೊಂದು ಪರೋಕ್ಷವಾಗಿ ವರದಾನದಂತೆ ಪರಿಣಮಿಸಿದೆ ಎಂದು ಹೇಳಲಾಗಿದೆ. ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್ರನ್ನು ವರ್ಗಾವಣೆ ಮಾಡಲಾಗಿದೆ. ಮದನ್ ಇತ್ತೀಚೆಗೆ ನಗರದ ಮುಡಿಪು ಬಳಿ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದ್ದರು. ಈ ದಾಳಿ ಸಾಕಷ್ಟು …
Read More »ಶಾಂತವಾಗದ ವರುಣನ ಪ್ರತಾಪ, ಸೊಗಲ ಸೋಮೇಶ್ವರನಿಗೆ ವರುಣನ ದಿಗ್ಬಂಧನ
ಬೆಳಗಾವಿ: ವರುಣನ ರೌದ್ರಾವತಾರಕ್ಕೆ ಕರುನಾಡು ಕಂಗಾಲಾಗಿದೆ. ಕ್ಷಣ ಕ್ಷಣಕ್ಕೂ ವರುಣನ ಅವಾಂತರ ಹೆಚ್ಚಾಗ್ತಿದೆ. ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಸೊಗಲ ಸೋಮೇಶ್ವರ ದೇವಸ್ಥಾನ ಮುಳುಗಿದೆ. ಭಾರಿ ಮಳೆಯಿಂದಾಗಿ ನಿನ್ನೆ ಸಂಜೆ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿತ್ತು. ಅಪಾರ ಪ್ರಮಾಣದ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸೋಮೇಶ್ವರನ ಮೂರ್ತಿ ಕೂಡ ಭಾಗಶಃ ಜಲಾವೃತಗೊಂಡಿದೆ. ದೇವಸ್ಥಾನದ ಹೊರ ಭಾಗದಲ್ಲಿ ಮಳೆ ನೀರು ಝರಿಯಂತೆ ಉಕ್ಕಿ ಹರಿಯುತ್ತಿದೆ. ದೇವಸ್ಥಾನಕ್ಕೆ ನೀರು ನುಗ್ಗಿದ ದೃಶ್ಯ ಸಾಮಾಜಿಕ …
Read More »ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲ್ವೆ ಟಿಕೆಟ್ ಕೌಂಟರ್ ನಾಳೆಯಿಂದ ಕಾರ್ಯಾರಂಭ, ಎಲ್ಲೆಲ್ಲಿ?
ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೇ ವಿಭಾಗವು ಹೆಚ್ಚುವರಿ ಟಿಕೆಟ್ ಕಾಯ್ದಿರಿಸುವ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಿದೆ. ಇವೆಲ್ಲಾ ಕೇಂದ್ರಗಳು ನಾಳೆಯಿಂದ ಕಾರ್ಯಾರಂಭವಾಗಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಿಕ್ಕಬಾಣಾವರ, ಬಾಣಸವಾಡಿ, ಬೆಂಗಳೂರು ಪೂರ್ವ, ಕಾರ್ಮೆಲರಾಂ ಮತ್ತು ವೈಟ್ಫೀಲ್ಡ್ ರೈಲು ನಿಲ್ದಾಣಗಳಲ್ಲಿ ಈ ಹೆಚ್ಚುವರಿ ಕೌಂಟರ್ಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಜೊತೆಗೆ, ಕುಪ್ಪಂ, ಪೆನುಕೊಂಡ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು ಮತ್ತು ಮದ್ದೂರು ರೈಲ್ವೇ ನಿಲ್ದಾಣಗಳಲ್ಲಿ ಸಹ ಈ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಅಕ್ಟೋಬರ್ 20 ರಿಂದ ನವೆಂಬರ್ 30ರವರೆಗೆ …
Read More »ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್!
ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. …
Read More »ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಪ್ರತಿಭೆಗಳಿಗೆ ಮಾಡಲಾದ ಅವಮಾನವಾಗಿದೆ:ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರತಿಭಾವಂತ ಗೋಲ್ಡ್ ಮೆಡಲಿಸ್ಟ್ ಗಳಿಗೆ ಗೋಲ್ಡ್ ಮೆಡಲ್ ಗಳನ್ನು ನೀಡಿ ಗೌರವಿಸದೆ ವಿದ್ಯಾರ್ಥಿಗಳನ್ನು ತಿರಸ್ಕರಿಸಿ ಅವಮಾನಿಸಿದೆ ಎಂದು ಶಾಸಕರೂ, ಕೆಪಿಸಿಸಿ ರಾಜ್ಯ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜರುಗಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಂಟನೇಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಬೆಳಗಾವಿ ನಗರದ ನಿವಾಸಿ ಸೃಷ್ಟಿ ಗ್ಯಾನಿ ಎಂಬ ವಿದ್ಯಾರ್ಥಿನಿಯು ಇದೇ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗವನ್ನು ಮಾಡಿದ್ದು, …
Read More »ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.
ಬೆಂಗಳೂರು,ಅ.15- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು …
Read More »ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ.
ಚಿಕ್ಕೋಡಿ: ಬೆಳೆಗಳೆಲ್ಲವೂ ಭರಪೂರ ಬಂದಿದ್ದು, ಇನ್ನೇನು ಕಟಾವು ಮಾಡಬೇಕೆಂದು ಕೆಲ ರೈತರು ಯೋಚಿಸಿದರೆ, ಕೆಲ ರೈತರು ಫಸಲಿಗೆ ಬಂದ ಬೆಳೆಗಳನ್ನು ಕಟಾವು ಮಾಡಿ ರಾಶಿ ಮಾಡಲು ಮುಂದಾದ ಸಂದರ್ಭದಲ್ಲೇ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯೂ ಸಹಿತ ಜೋರಾಗಿ ಬೀಸುತ್ತಿರುವ ಪರಿಣಾಮ ಗೋವಿನ ಜೋಳ ಹಾಗೂ ಕಬ್ಬಿನ ಬೆಳೆ ನೆಲಸಮವಾಗಿವೆ. ಈ ಬಾರಿ ಮಳೆ …
Read More »
Laxmi News 24×7