Breaking News

ನವದೆಹಲಿ

ರಾಹುಲ್ ಗಾಂಧಿ ಬಳಿಕ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವಿಟರ್ ಖಾತೆ ಲಾಕ್!

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿಕ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವೀಟರ್ ಖಾತೆ ಲಾಕ್ ಮಾಡಲಾಗಿದೆ.   ರಾಹುಲ್ ಗಾಂಧಿ ಅವರ ಟ್ವಿಟರ್ ಲಾಕ್ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ನ ರಣದೀಪ್ ಸುರ್ಜೇವಾಲಾ, ಅಜಯ್ ಮಾಕೆನ್, ಸುಶ್ಮಿತಾ ದೇವ್ ಮತ್ತು ಮಾಣಿಕ್ ಕಮ್ ಠಾಗೋರ್ ಅವರ ಖಾತೆಗಳನ್ನು ‘ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ’ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.   ಆಗಸ್ಟ್ 4 ರಂದು ಮಾಡಿದ ಟ್ವೀಟ್ …

Read More »

ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಿಸಲು ಮನವಿ

ನವದೆಹಲಿ : ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ( ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ …

Read More »

ಬಿಜೆಪಿ ಸರ್ಕಾರ ಇನ್ನೂ ಭದ್ರವಾಗಿಲ್ಲ ದ್ವೇಷದ ರಾಜಕಾರಣ ಮಾಡುತ್ತಿದೆ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿಕಾರಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಳು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ನಮ್ಮ ಸರ್ಕಾರವಿದ್ದಾಗಿನ ಯೋಜನೆಗಳ ಹೆಸರು ಹಾಗೂ ಪ್ಲೇಟ್ ಬದಲಾವಣೆ ಮಾಡುವ ಮೂಲಕ ಅದು ನನ್ನ ಸಾಧನೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. …

Read More »

ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ಪರಿಗಣನೆಯ ಹಂತದಲ್ಲಿದೆ: ಸಂಸ್ಕೃತಿ ಖಾತೆ ಸಚಿವ

ನವದೆಹಲಿ: ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾವ ಪರಿಗಣನೆಯಲ್ಲಿದೆ ಎಂದು ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್‌ಮೇಘ್ವಾಲ್‌ ಲೋಕಸಭೆಗೆ ತಿಳಿಸಿದರು. ಲೋಕಸಭೆಯಲ್ಲಿ ಸೋಮವಾರ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿಯವರ ಪೂರಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ಕುರಿತು ಚರ್ಚಿಸಲು 8 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು. ‘ಇಲ್ಲಿಯವರೆಗೆ ತಮಿಳು, ತೆಲುಗು, ಸಂಸ್ಕೃತ, ಕನ್ನಡ, ಮಲಯಾಳ ಮತ್ತು ಒಡಿಯಾ ಭಾಷೆಗಳಿಗೆ …

Read More »

ಕಿಸಾನ್ ಸಮ್ಮಾನ್ ಕಂತು ಇಂದು ಜಮಾ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮುಂದಿನ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 9ರಂದು ಬಿಡುಗಡೆ ಮಾಡಲಿದ್ದಾರೆ. ಸೋಮವಾರ ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಬಿಡುಗಡೆ ಕಾರ್ಯ ನೆರವೇರಿಸಲಿದ್ದಾರೆ. 9.75 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 19,500 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವರ್ಗಾಯಿಸಿ, ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ವಾರ್ಷಿಕ 6000 ರೂಪಾಯಿ ನೆರವು ನೀಡುವ ಈ ಯೋಜನೆಯನ್ವಯ ಅರ್ಹ ಫಲಾನುಭವಿ ಕುಟುಂಬದ …

Read More »

ದಿಢೀರ್ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 30,549 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ:ಭಾರತದಲ್ಲಿ ದಿಢೀರ್ ಏರಿಕೆ ಕಂಡಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, 30,549 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಆಗಸ್ಟ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.   ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಸೋಂಕಿನಿಂದ 422 ಮಂದಿ ಸಾವನ್ನಪ್ಪಿದ್ದು, 38,887 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,17,26,507ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣ 4,25,195ಕ್ಕೆ ತಲುಪಿದೆ. …

Read More »

ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದರು. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ಬಳಿಕ ಸಂಜೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಲಿದ್ದು, ರಾತ್ರಿ ಅಥವಾ ನಾಳೆ ಬೆಳಿಗ್ಗೆ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ. ಬಿ.ಎಲ್ ಸಂತೋಷ್ ಹಾಗೂ ನಡ್ಡಾ ಭೇಟಿ ವೇಳೆ ಸಚಿವ …

Read More »

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳಿಗೆ ಪರವಾನಗಿ ನೀಡದಂತೆ ಸುಪ್ರೀಂಕೋರ್ಟ್​ ಆದೇಶ

ನವದೆಹಲಿ: ದೇಶಾದ್ಯಂತ ಕುಡಿದು ವಾಹನ ಚಲಾಯಿಸಿ ಅಪಘಾತಗಳು ಹೆಚ್ಚಾಗುತ್ತಿರುವ ಕಾರಣ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಇನ್ಮುಂದೆ ಹೊಸದಾಗಿ ಮದ್ಯದಂಗಡಿ ಓಪನ್ ಮಾಡಿ ಮದ್ಯ ಮಾರಾಟ ಮಾಡಲು ಪರವಾನಿಗಿ ನೀಡದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ.ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಿಗೆ ಇದು ಅನ್ವಯವಾಗಲಿದೆ. ಹೆದ್ದಾರಿಗಳಿಂದ 500 ಮೀಟರ್​ ಅಂತರದೊಳಗೆ ಯಾವುದೇ ರೀತಿಯ ಮದ್ಯದಂಗಡಿಗಳು ಇರುವಂತಿಲ್ಲ ಎಂದಿದೆ. ಇದರ ಜತೆಗೆ 20 ಸಾವಿರಕ್ಕಿಂತಲೂ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ಹೆದ್ದಾರಿ …

Read More »

ಅವರು ಸಿಪಿ ಯೋಗೇಶ್ವರ್ ಅಲ್ಲ… ಸಿಡಿ ಯೋಗೇಶ್ವರ್… ಸಿಡಿ ಇಟ್ಕೊಂಡೇ ಆಟ ಆಡ್ತಿದ್ದಾರೆ.: ಡಿ.ಕೆ ಸುರೇಶ್

ನವದೆಹಲಿ: ಅವರು ಸಿಪಿ ಯೋಗೇಶ್ವರ್ ಅಲ್ಲ… ಸಿಡಿ ಯೋಗೇಶ್ವರ್… ಸಿಡಿ ಇಟ್ಕೊಂಡೇ ಆಟ ಆಡ್ತಿದ್ದಾರೆ. ಇದು ಕರ್ನಾಟಕಕ್ಕೆ ಕಪ್ಪು ಚುಕ್ಕೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್ ನವದೆಹಲಿಯಲ್ಲಿ ಸಚಿವ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು. ರೇಣುಕಾಚಾರ್ಯ ಸಿಡಿ ಪ್ರಸ್ತಾಪ ಹಿನ್ನೆಲೆಯಲ್ಲಿ ಈ ಮಾತುಗಳನ್ನು ಆಡಿದರು. ಲಿಂಗಾಯತರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ವಿಚಾರವಾಗಿ ಹೈಕಮಾಂಡ್ ನಿರ್ದೇಶನವನ್ನು ನಾವು ಪಾಲಿಸುತ್ತೇವೆ. ಯಾವುದೇ ಸಮುದಾಯದ ಅಧ್ಯಕ್ಷ ಆದರೂ ನಾವು …

Read More »

ಪೆಟ್ರೋಲ್ ಬೆಲೆ ಏರಿಕೆ; ಸಂಸತ್​​ಗೆ ಸೈಕಲ್​​​ ತುಳಿದು ಬಂದು ಡಿ.ಕೆ ಸುರೇಶ್​​ ಪ್ರತಿಭಟನೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಇಡೀ ದೇಶಾದ್ಯಂತ ಸೈಕಲ್ ಜಾಥಾ ನಡೆಸುತ್ತಿದೆ. ಇದರ ಭಾಗವಾಗಿ ಇಂದು ಮುಂಗಾರು ಅಧಿವೇಶನ ಸಲುವಾಗಿ ದೆಹಲಿಗೆ ತೆರಳಿರುವ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್​​ ಸೈಕಲ್ ಜಾಥಾ ನಡೆಸಿದರು. ಕಾವೇರಿ ಅಪಾರ್ಟ್​ಮೆಂಟ್​​ನಲ್ಲಿರುವ ನಿವಾಸದಿಂದ ಸಂಸತ್​​ ಭವನದವರೆಗೂ ಸಂಸದ ಡಿ.ಕೆ ಸುರೇಶ್​​​ ನಡೆಸಿದ ಸೈಕಲ್​​​ ಜಾಥದಲ್ಲಿ ಹಲವು ಕಾಂಗ್ರೆಸ್​ ಮುಖಂಡರು ಭಾಗಿಯಾಗಿದ್ದರು. ಈ ಸೈಕಲ್​​​ ಜಾಥದಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ …

Read More »