ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ (75) ಸಾವನ್ನಪ್ಪಿದವರು. ನಿನ್ನೆ ರಾತ್ರಿ ಮುದ್ದೆ ಸಾರು ಸೇವನೆ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು ಘಟನೆ ಕುರಿತು …
Read More »ದರ್ಶನ್ ಸ್ನೇಹಿತರಿಂದಲೇ ನನಗೆ ಬೆದರಿಕೆ: ನಿರ್ಮಾಪಕ ಉಮಾಪತಿ ಬಾಂಬ್
25 ಕೋಟಿ ರೂ. ವಂಚನೆ ಯತ್ನ ಪ್ರಕರಣದಲ್ಲಿ ಪೊಲೀಸರ ಮುಂದೆ ಬಾಯಿ ಬಿಡದಂತೆ ನಟ ದರ್ಶನ್ ಸ್ನೇಹಿತರೇ ನನಗೆ ಬೆದರಿಕೆ ಒಡ್ಡಿದ್ದಾರೆ ಎಂದು ನಿರ್ಮಾಪಕ ಉಮಾಪತಿ ಬಾಂಬ್ ಸಿಡಿಸಿದ್ದಾರೆ. ದರ್ಶನ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದ ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ, ಪ್ರಕರಣದ ಕುರಿತು ಪೊಲೀಸರ ಮುಂದೆ ಹೇಳಿಕೆ ನೀಡದಂತೆ ದರ್ಶನ್ ಸ್ನೇಹಿತರಾದ ಹರ್ಷ, ರಾಕೇಶ್ ಮತ್ತು ಶರ್ಮ ಅವರಿಂದ ನನಗೆ ಬೆದರಿಕೆ ಇದೆ ಎಂದಿದ್ದಾರೆ. ಸ್ನೇಹಿತರಿಂದಲೇ …
Read More »ಹಳ್ಳಿಗರಿಗೂ ಲಸಿಕೆ ಕೊಡಿ : ದಾಸ್ತಾನು ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ
ರಾಜ್ಯದಲ್ಲಿ ದಾಸ್ತಾನು ಕೊರತೆಯಿಂದ ಶೇ. 50ರಷ್ಟು ಕೊರೊನಾ ಲಸಿಕೆ ಕೇಂದ್ರಗಳು ಸ್ಥಗಿತ ಗೊಂಡಿವೆ. ಬೇಡಿಕೆಯ ಶೇ. 20ರಷ್ಟು ಲಸಿಕೆಯೂ ಪೂರೈಕೆಯಾಗುತ್ತಿಲ್ಲ. ಲಸಿಕೆ ಬೇಕೆಂದರೆ ಆಸ್ಪತ್ರೆಗಳ ಮುಂದೆ ನಗರದ ಜನತೆ ಬೆಳಗ್ಗೆ 4ಕ್ಕೇ ಸರತಿಯಲ್ಲಿ ನಿಲ್ಲಬೇಕು. ಹಳ್ಳಿಯವರು ವಾರಗಟ್ಟಲೆ ಕಾಯಬೇಕು! ರಾಜ್ಯದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸರಕಾರಿ ವಲಯದಲ್ಲಿ 8,500 ಸಾವಿರ ಲಸಿಕೆ ಕೇಂದ್ರಗಳನ್ನು ಗುರುತಿಸಲಾಗಿದೆ. ಜೂ. 21ರಂದು ನಡೆದ ಲಸಿಕೆ ಮೇಳದಂದು 7,958 ಕೇಂದ್ರಗಳಲ್ಲಿ 24 ತಾಸುಗಳಲ್ಲಿ 11.6 ಲಕ್ಷ ಮಂದಿಗೆ …
Read More »ಎಚ್ಡಿಕೆ-ಸುಮಲತಾ ವಾಕ್ ಸಮರ ತಮಾಷೆಯಾಗಿದೆ ,ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ ಸವದಿ
ವಿಜಯಪುರ: ಮಂಡ್ಯ ಅಕ್ರಮ ಗಣಿಗಾರಿಕೆ ಹಾಗೂ ಕೆ ಆರ್ ಎಸ್ ಜಲಾಶಯದ ವಿಷಯದಲ್ಲಿ ಮಾಜಿ ಸಿ.ಎಂ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ಮಧ್ತೆ ನಡೆಯುತ್ತಿರುವ ವಾಕ್ಸಮರ ಜೋರಾಗಿದೆ. ಇಬ್ಬರ ಹೇಳಿಕಗಳು ಜನರಿಗೆ ನೋಡಲು, ಕೇಳಲು ತಮಾಷೆಯಾಗಿದ್ದರೂ ಕೇಳಲು ನಮಗೆ ಸಮಯವಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಇಬ್ಬರನ್ನೂ ಕುಟುಕಿದ್ದಾರೆ. ಶುಕ್ರವಾರ ಸಂಜೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೃಷ್ಣರಾಜ ಸಾಗರ ಜಲಾಶಯದ ಕುರಿತು ಮುಖ್ಯ ಅಭಿಯಂತರರಿಂದ ಸರ್ಕಾರ ಸ್ಪಷ್ಟಿಕರಣ …
Read More »ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’
ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದ್ದು, ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಬೇಕಾಗುತ್ತದೆ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಕೆಲವರು ಇನ್ನೂ ಸಹ ಆಧಾರ್ ನೋಂದಣಿ ಮಾಡದ ಕಾರಣ ಅನಾನುಕೂಲವಾಗಿದೆ. ಆಧಾರ್ ನೋಂದಣಿ ಮಾಡಿಸಲು ಅಥವಾ …
Read More »ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ : ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ
ನವದೆಹಲಿ: ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ ಎಂದು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಭಾವುಕರಾದರು. ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಖಚಿತವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ನಾರಾಯಣಸ್ವಾಮಿ ಆಗಮಿಸಿದ್ದರು. ನಿವಾಸದಿಂದ ಹೊರ ಬರುತ್ತಲೇ ಕೇಂದ್ರದ ಸಚಿವನಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಸ್ವಾಮಿ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಪಕ್ಷ ಅವಕಾಶ ನೀಡಿದೆ. ಸಿಕ್ಕ ಅವಕಾಶವನ್ನು …
Read More »ಗಡಿ ಜಿಲ್ಲೆಗಳಿಗೆ ಮಲಯಾಳಿ ಹೆಸರು: ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಾ. ಸಿ.ಸೋಮಶೇಖರ್; ಕೇರಳ ಸಿಎಂಗೆ ಸರ್ಕಾರ ಪತ್ರ
ಬೆಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದರು. ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಸೋಮವಾರ ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ …
Read More »12 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ ಶಿಕ್ಷಕ, ಗ್ರಾಮಸ್ಥರಿಂದ ಥಳಿತ
ನವದೆಹಲಿ: ತನ್ನ 12 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದಿದ್ದರಿಂದ ಶಾಲಾ ಶಿಕ್ಷಕನೊಬ್ಬನನ್ನು ಥಳಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮನ್ಪುರ್ ಗ್ರಾಮದಲ್ಲಿ ಶನಿವಾರ ನಡೆದಿದೆ.ವೈಭವ್ ನಾಯಕ್ ಎಂದು ಗುರುತಿಸಲ್ಪಟ್ಟ ಶಿಕ್ಷಕನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. “ಇಂದೋರ್ನ ಮನ್ಪುರ ಗ್ರಾಮದಲ್ಲಿ ವಾಸಿಸುತ್ತಿರುವ 12 ವರ್ಷದ ಬಾಲಕಿಗೆ ತನ್ನ ಸ್ವಂತ ಶಾಲಾ ಶಿಕ್ಷಕರಿಂದ ಪ್ರೇಮ ಪತ್ರವೊಂದನ್ನು ಕಳುಹಿಸಲಾಗಿದ್ದು, ಅದು ಬಾಲಕಿಯ ಕುಟುಂಬ ಮತ್ತು ಗ್ರಾಮಸ್ಥರ ಗಮನಕ್ಕೆ ಬಂದ …
Read More »ದೊಡ್ಡ ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ: ಸಚಿವ ನಿರಾಣಿ
ಕಲಬುರಗಿ: ಒಂದು ಕುಟುಂಬ ಎಂದ ಮೇಲೆ ಅಸಮಾಧಾನ ಇರುತ್ತದೆ. ಅದರಲ್ಲೂ ಬಿಜೆಪಿ ದೊಡ್ಡ ಕುಟುಂಬ. ಇಬ್ಬರು-ಮೂರು ಶಾಸಕರಿಗೆ ಅಸಮಾಧಾನ ಇರುವುದು ಸಾಮಾನ್ಯ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಮುಂಬೈ ಭೇಟಿ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ಮಾತನಾಡಲೂ ನಾನು ಹೋಗಲ್ಲ. ನಮ್ಮ ಹೈಕಮಾಂಡ್ ಸಮರ್ಥವಾಗಿದೆ. ಯಾವುದೇ ಸಮಸ್ಯೆ ಇದ್ದರೂ ಪರಿಹರಿಸುವ ಕೆಲಸ ಮಾಡುತ್ತಿದೆ ಎಂದರು. ಇತ್ತೀಚಿನ ಬೆಳವಣಿಗೆಗಳ …
Read More »ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್ನ ಕುತ್ತಿಗೆ ಸೀಳಿ ಬರ್ಬರ ಕೊಲೆ!
ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್ ಇನ್ನೋರ್ಚ ರೌಡಿ ಅನೀಸ್ ಎಂಬಾತನ …
Read More »
Laxmi News 24×7