ದೆಹಲಿ: ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಗುರುವಾರ ಮೋದಿ ಸಂಪುಟ ತ್ಯಜಿಸಿದ್ದಾರೆ. ಕೇಂದ್ರದ ರೈತ ವಿರೋಧಿ ಕ್ರಮವನ್ನು ವಿರೋಧಿಸಿ ಸಚಿವೆ ಹರ್ಸಿಮ್ರತ್ ಕೌರ್ ಸಂಪುಟವನ್ನು ತೊರೆಯುವುದಾಗಿ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಲೋಕಸಭೆಯಲ್ಲಿ ಘೋಷಿಸಿದ ಬೆನ್ನಲ್ಲೇ ಹರ್ಸಿಮ್ರತ್ ಕೌರ್ ತಮ್ಮ ರಾಜೀನಾಮೆಯನ್ನು ಮೋದಿ ಅವರಿಗೆ ಸಲ್ಲಿಸಿದ್ದಾರೆ. ಪಕ್ಷದ ವಕ್ತಾರ ಹರ್ಚರಣ್ ಬೈನ್ಸ್ ಅವರು ಈ ವಿಚಾರವನ್ನೂ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕೇಂದ್ರವು …
Read More »ಮೇಕೆದಾಟು ಅಧಿಸೂಚನೆ: ಕೇಂದ್ರಕ್ಕೆ ಜಾರಕಿಹೊಳಿ ಮನವಿ
ಬೆಂಗಳೂರು : ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಅವರು ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಚರ್ಚಿಸಿದರು. ಇದೇ ವೇಳೆ ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿಅಣೆಕಟ್ಟು ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು. ಮೇಕೆದಾಟು ಡ್ಯಾಂಗೆ ತಮಿಳುನಾಡು ಕ್ಯಾತೆ! …
Read More »ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚಾಗ್ತಿರುವ ಬೆನ್ನಲ್ಲೆ ಭಾರತಕ್ಕೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ.
ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚಾಗ್ತಿರುವ ಬೆನ್ನಲ್ಲೆ ಭಾರತಕ್ಕೆ ನೆಮ್ಮದಿ ಸುದ್ದಿಯೊಂದು ಸಿಕ್ಕಿದೆ. ಕೊರೊನಾ ಗೆದ್ದು ಬಂದ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ವಿಷ್ಯದಲ್ಲಿ ಭಾರತ ಬ್ರೆಜಿಲ್ ಹಿಂದಿಕ್ಕಿ ವಿಶ್ವದ ಅಗ್ರ ಸ್ಥಾನವನ್ನು ತಲುಪಿದೆ. ಇಲ್ಲಿಯವರೆಗೆ ಭಾರತದಲ್ಲಿ 38 ಲಕ್ಷ 59 ಸಾವಿರ 399 ರೋಗಿಗಳು ಕೊರೊನಾ ಸೋಲಿಸಿದ್ದಾರೆ. ಅಮೆರಿಕದ ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಪ್ರಕಾರ, ಬ್ರೆಜಿಲ್ ನಲ್ಲಿ 37 ಲಕ್ಷ 23 ಸಾವಿರ 206 ಸೋಂಕಿತರು ಗುಣಮುಖರಾಗಿದ್ದಾರೆ. ಬ್ರೆಜಿಲ್ …
Read More »ನಿರ್ಮಲಾ ಸೀತಾರಾಮನ್ ಅವರು 2.35 ಲಕ್ಷ ಕೋಟಿ ರೂ.ಗಳ ಖರ್ಚಿನ ಅಗತ್ಯತೆಯ ಹೆಚ್ಚುವರಿ ಬೇಡಿಕೆ
ನವದೆಹಲಿ,ಸೆ.14- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2.35 ಲಕ್ಷ ಕೋಟಿ ರೂ.ಗಳ ಖರ್ಚಿನ ಅಗತ್ಯತೆಯ ಹೆಚ್ಚುವರಿ ಬೇಡಿಕೆಗಾಗಿ ಸಂಸತ್ನ ಒಪ್ಪಿಗೆ ಕೋರಿದ್ದಾರೆ. ಇಂದಿನಿಂದ ಆರಂಭವಾಗಿರುವ ಸಂಸತ್ ಅಧಿವೇಶನದ ಮೊದಲ ದಿನದ ಕಲಾಪದ ವೇಳೆ ಲೋಕಸಭೆಯಲ್ಲಿ ಈ ಮನವಿ ಮಾಡಿದ ಅವರು, 2,35,853,87 ಕೋಟಿ ರೂ.ಗಳ ಖರ್ಚಿನ ಬೇಡಿಕೆಗೆ ಸಮ್ಮತಿ ನೀಡುವಂತೆ ಮನವಿ ಮಾಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 40 ಸಾವಿರ ಕೋಟಿ ರೂ.ಗಳು ಸೇರಿದಂತೆ …
Read More »ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ನವದೆಹಲಿ – ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನಿನ್ನೆಯಷ್ಟೆ ಬೆಳಗಾವಿಯಿಂದ ದೆಹಲಿಗೆ ತೆರಳಿರುವ ಅವರು ಅಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ರೋಗ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ಅವರು ವಿನಂತಿಸಿದ್ದಾರೆ. ಸುರೇಶ ಅಂಗಡಿ ಬೆಳಗಾವಿಯಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದರು. ಅಲ್ಲದೆ ಅವರು …
Read More »ಪಠಾಣ್ ಕೋಟ್ ದಾಳಿ ರೂವಾರಿ ವಿರುದ್ಧ ಕ್ರಮ ತೆಗೆದುಕೊಳ್ಳಿ: ಪಾಕ್ ಗೆ ಭಾರತ, ಅಮೆರಿಕ
ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿ ಹಾಗೂ ಪಠಾಣ್ ಕೋಟ್ ಉಗ್ರ ದಾಳಿಯ ಹಿಂದಿನ ರೂವಾರಿಗಳ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕೆಂದು ಭಾರತ ಮತ್ತು ಅಮೆರಿಕ ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಮ್ಮ ನೆಲದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಅವಕಾಶ ಇಲ್ಲ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ. ಭಾರತ, ಅಮೆರಿಕ ಭಯೋತ್ಪಾದಕ ನಿಗ್ರಹ ಕಾರ್ಯಪಡೆ ಜಂಟಿಯಾಗಿ ನೀಡಿರುವ ಪ್ರಕಟಣೆಯಲ್ಲಿ, ತಮ್ಮ ನೆಲದಲ್ಲಿ ಭಯೋತ್ಪಾದಕರಿಗೆ ಯಾವುದೇ ಅವಕಾಶ ಇಲ್ಲ ಎಂಬುದನ್ಉ ಸಾಬೀತುಪಡಿಸಲು …
Read More »ಇಡಿ ಅಧಿಕಾರಿಗಳ ಶಾಕ್ಆನಂದ್ ಅಪ್ಪುಗೋಳಆಸ್ತಿ ವಶಕ್ಕೆ
ನವದೆಹಲಿ: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ನಿರ್ಮಾಪಕ ಆನಂದ್ ಅಪ್ಪುಗೋಳಗೆ ನೀಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯಲ್ಲಿ ಆನಂದ್ ಅಪ್ಪುಗೋಳ ಒಡೆತನದಲ್ಲಿರುವ ಹನುಮಾನ್ ನಗರದ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿರುವ ಖಾಲಿ ನಿವೇಶನ, ಬಿ.ಕೆ ಬಾಳೆಕುಂದ್ರಿಯಲ್ಲಿನ ಮನೆ ಹಾಗೂ ನೆಹರು ನಗರದಲ್ಲಿರುವ ಕಚೇರಿ, ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿ ಒಟ್ಟು 31.35 …
Read More »ನಿರುದ್ಯೋಗ ದಿಂದಾಗಿ ಆತ್ಮ ಹತ್ಯೆ ಮಾಡಿಕೊಂಡ ಜನ ನಮ್ಮ ಕರ್ನಾಟಕದವರೇ ಹೆಚ್ಚು……!
ಹೊಸದಿಲ್ಲಿ: ದೇಶದಲ್ಲಿ ನಿರುದ್ಯೋಗದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಸಂಖ್ಯೆಯೂ ಹೆಚ್ಚುಚಾಗುತ್ತಿದ್ದು, ಕಳೆದ ವರ್ಷದ ನಿರುದ್ಯೋಗದಿಂದ 2,851 ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2019ರಲ್ಲಿ ದೇಶದಾದ್ಯಂತ 1,39,123 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 3.4ರಷ್ಟು ಅಧಿಕ. 2018ರಲ್ಲಿ ಒಟ್ಟು 1,34,516 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2017ರಲ್ಲಿ ನಿರುದ್ಯೋಗ ಕಾರಣದಿಂದ 2,741 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಒಟ್ಟು ಆತ್ಮಹತ್ಯೆಯ ಶೇಕಡ 2ರಷ್ಟಾಗಿದೆ. ಇನ್ನೂ ದೇಶದಲ್ಲಿಯೇ ಮಹಾರಾಷ್ಟ್ರ ಅಗ್ರಸ್ಥಾನಿಯಾಗಿದೆ. ನಿರುದ್ಯೋಗ …
Read More »ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ……….
ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ …
Read More »ಸೆ.17ಕ್ಕೆ 70 ವಸಂತಗಳನ್ನು ಪೂರೈಸಲಿರುವ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಸೇವಾ ಸಪ್ತಾಹ ಆಚರಣೆ
ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 17ಕ್ಕೆ 70 ವರ್ಷಗಳನ್ನು ಪೂರೈಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಂದು ವಿಶೇಷ ದಿನ. ಈ ದಿನವನ್ನು ವಿಶೇಷವಾಗಿ ಮಹತ್ವಪೂರ್ಣವಾಗಿ ಆಚರಿಸಲು ಉದ್ದೇಶಿಸಿರುವ ಭಾರತೀಯ ಜನತಾ ಪಾರ್ಟಿ ಸೆಪ್ಟೆಂಬರ್ 14ರಿಂದ 20ರವರೆಗೆ ಸೇವಾ ಸಪ್ತಾಹವನ್ನು ಆಚರಿಸಲು ನಿರ್ಧರಿಸಿದೆ. ನರೇಂದ್ರ ದಾಮೋದರದಾಸ್ ಮೋದಿ ಸೆಪ್ಟೆಂಬರ್ 17, 1950ರಂದು ಗುಜರಾತ್ ನ ವಡಾನಗರದಲ್ಲಿ ಜನಿಸಿದ್ದರು. ಆ ಸಮಯದಲ್ಲಿ ಅದು ಬಾಂಬೆ ಪ್ರಾಂತ್ಯಕ್ಕೆ ಸೇರಿತ್ತು. ನಂತರ …
Read More »
Laxmi News 24×7