Breaking News

ನವದೆಹಲಿ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜಯಂತಿ- ತಂದೆಯ ಬಗ್ಗೆ ರಾಹುಲ್ ಗಾಂಧಿ ಭಾವನಾತ್ಮಕ ಮಾತು

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜಯಂತಿ. ಈ ದಿನದಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಂದೆಯ ಬಗ್ಗೆ ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.ರಾಜೀವ್ ಗಾಂಧಿ ಅವರು ಓರ್ವ ದೂರ ದೃಷ್ಟಿಯುಳ್ಳ ನಾಯಕಾರಗಿದ್ದರು. ಭವಿಷ್ಯದ ದೃಷ್ಟಿಕೋನದಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ಇದೆಲ್ಲಕ್ಕಿಂತ ಮಿಗಿಲಾಗಿ ಉದಾರ ಮತ್ತು ಪ್ರೀತಿಯ ಸ್ನೇಹ ಜೀವಿಯಾಗಿದ್ದರು. ಅವರನ್ನ ತಂದೆಯಾಗಿ ಪಡೆದ ನಾನಯ ಅದೃಷ್ಟವಂತ ಹಾಗೂ ಹೆಮ್ಮೆ ಪಡುತ್ತೇನೆ. ಪ್ರತಿದಿನ …

Read More »

ದೇಶದಲ್ಲಿ ಕೊರೊನಾ ದಾಖಲೆ- ಒಂದೇ ದಿನ 69,652 ಮಂದಿಗೆ ಸೋಂಕು

-ಗುಣಮುಖ ಪ್ರಮಾಣ ಶೇ.73.90ಕ್ಕೆ ಏರಿಕೆ ನವದೆಹಲಿ: ದೇಶದಲ್ಲಿಂದು ಮಹಾಮಾರಿ ಕೊರೊನಾ ವೈರಸ್ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 69,952 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ. ಜೊತೆ ಕೊರೊನಾದಿಂದ ಗುಣಮುಖರಾಗುತ್ತಿರುವ ಪ್ರಮಾಣ ಶೇ.73.90ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಇದುವರೆಗೂ 20.96 ಲಕ್ಷ ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಕೊರೊನಾಗೆ 977 ಸಾವಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 53,866ಕ್ಕೆ ಏರಿಕೆ ಕಂಡಿದೆ.ಮಹಾರಾಷ್ಟ್ರ, ಆಂಧ್ರ …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಸದಿಲ್ಲಿ :ಕೊರೊನಾ ಸೋಂಕಿನಿಂದ ಕಳೆದ ವಾರವಷ್ಟೇ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. “ಅಮಿತ್ ಶಾ ಆಗಸ್ಟ್ 14ರಂದು ಕೊರೊನಾದಿಂದ ಗುಣಮುಖರಾಗಿದ್ದರು. ಶಾ ಅವರಿಗೆ ದಣಿವು ಹಾಗೂ ಮೈಕೈನೋವು ಕಾಣಿಸಿಕೊಂಡಿದೆ. ಅವರ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಕೋವಿಡ್‌ಗೆ ಸಂಬಂಧಿಸಿದ ಆರೈಕೆಗಾಗಿ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ತಮ್ಮ ಕೆಲಸವನ್ನು ಮುಂದುವರಿಸುತ್ತಿದ್ದಾರೆ” ಎಂದು ಏಮ್ಸ್ ಮಾಧ್ಯಮ ಹಾಗೂ ಶಿಷ್ಟಾಚಾರ ವಿಭಾಗದ …

Read More »

ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ,ದೆಹಲಿಗೆ ಬಂದು ಪಂಚತಾರಾ ಹೊಟೆಲ್ ನಲ್ಲಿ ಮಜಾ ಮಾಡುತ್ತಿಲ್ಲ:ರಮೇಶ್ ಜಾರಕಿಹೋಳಿ.

ಹೊಸದಿಲ್ಲಿ : ನಾನು ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ, ವರಿಷ್ಠರ ಮುಂದೆ ಡಿಸಿಎಂ ಸ್ಥಾನವನ್ನೂ ಕೇಳಿಲ್ಲ. ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್ ಅವರನ್ನ ಪರಿಷತ್ ಗೆ ನಾಮನಿರ್ದೇಶನ ಮಾಡಿದ ಹಿನ್ನೆಲೆ ಅವರ ಜೊತೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇವೆ. …

Read More »

ಅಮಿತ್ ಶಾಗೆ ಕೊರೊನಾ ನೆಗೆಟಿವ್

ನವದೆಹಲಿ: ಕೇಂದ್ರಗೃಹ ಮಂತ್ರಿ ಅಮಿತ್ ಶಾ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಅವರು ಇನ್ನಷ್ಟು ದಿನ ಮನೆಯಲ್ಲೇ ಉಳಿಯಲಿದ್ದಾರೆ.ಕಳೆದ ಅಗಸ್ಟ್ 2ರಂದು ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ತಮಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದರು. ಈಗ ಮತ್ತೆ ಟ್ವೀಟ್ ಮಾಡಿರುವ ಅವರು ನನ್ನ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.   ಮಾಡಿಸಿದ ನನ್ನ ಕೊರೊನಾ …

Read More »

ಪ್ರಶಾಂತ ಭೂಷನ್ ತಪ್ಪಿತಸ್ಥಎಂದು ಸುಪ್ರೀಂ ಕೋರ್ಟ್ ತೀರ್ಪು

ಹೊಸದಿಲ್ಲಿ: ನ್ಯಾಯಾಂಗ ನಿಂದನೆ ಕೇಸ್​ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆಐ ‌ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚಿಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕೊರೊನಾ ಲಾಕ್​ಡೌನ್ ವೇಳೆ ಸುಪ್ರೀಂಕೋರ್ಟ್ ಸಿಜೆಐ ಎಸ್.ಎ.ಬೋಬಡೆ ಅವರು ತಮ್ಮ ಸ್ವಂತ ಊರಾದ ಮಹಾರಾಷ್ಟ್ರದ ನಾಗಪುರದಲ್ಲಿದ್ದರು. ಆಗ ಹರ್ಲೆ ಡೇವಿಡ್‌ಸನ್ ಬೈಕ್ ಮೇಲೆ ಕುಳಿತು ಫೋಟೋಗೆ ಪೋಸ್ ನೀಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ …

Read More »

.74ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗ್ತಿದೆ ಇಡೀ ದೇಶ

ನವದೆಹಲಿ: ಆಗಸ್ಟ್ 15 ಅಂದರೆ ನಾಳಿನ 74ನೇ ಸ್ವಾತಂತ್ರೋತ್ಸವಕ್ಕೆ ಇಡೀ ದೇಶವೇ ಸಜ್ಜಾಗುತ್ತಿದೆ. ದೇಶಾದ್ಯಂತ ಭಾರೀ ಬಿಗಿ ಭದ್ರತೆ ಕೈಕೊಳ್ಳಲಾಗಿದೆದೆಹಲಿಯ ಕೆಂಪು ಕೋಟೆ ಪ್ರದೇಶದಲ್ಲಿ 300 ಕ್ಯಾಮೆರಾಗಳು, 4 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಕ್ಕಿಂತ ಮುಖ್ಯವಾಗಿ ಕೊರೊನಾ ಹೆಮ್ಮಾರಿ ಇರುವ ಕಾರಣ ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆಂಪುಕೋಟೆಯಲ್ಲಿ ಪ್ರತಿಬಾರಿ ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿಲ್ಲ. ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಗುರುವಾರವೂ ಕವಾಯತು ಪಡೆಗಳು …

Read More »

ತೆರಿಗೆ ವಂಚಿಸಬೇಡಿ, ಅಡ್ಡದಾರಿ ಹಿಡಿಬೇಡಿ : ಪ್ರಧಾನಿ ಮೋದಿ ಕಿವಿ ಮಾತು

ನವದೆಹಲಿ, ಆ.13-ತೆರಿಗೆ ಪಾವತಿಯಿಂದ ದೇಶದ ಅಭಿವೃದ್ದಿಗೆ ಸಹಕಾರಿಯಾಗುತ್ತದೆ ಎಂದು ಹೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಜನರು ತೆರಿಗೆ ವಂಚಿಸಬಾರದು ಮತ್ತು ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳಲು ಅಡ್ಡದಾರಿ ಹಿಡಿಯಬಾರದು ಎಂದು ಸಲಹೆ ಮಾಡಿದ್ದಾರೆ. ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗುತ್ತಿದ್ದು , ಇದರಲ್ಲಿ ಲಂಚ , ರುಷುವತ್ತುಗಳಿಗೆ ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ.ತೆರಿಗೆ ಪಾವತಿದಾರರನ್ನು ಸಮಸ್ಯೆಗಳಿಗೆ ಸಿಲುಕಿಸುವ ಪದ್ಧತಿಯನ್ನು ಹೋಗಲಾಡಿಸಿ ಇದರಲ್ಲಿರುವ ಎಲ್ಲಾ ತೊಡಕುಗಳನ್ನು ನಿವಾರಿಸಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು …

Read More »

ದೇಶದಲ್ಲಿ ಕೊರೊನಾ ಸ್ಫೋಟ- ಒಂದೇ ದಿನ 66,999 ಮಂದಿಗೆ ತಗುಲಿದ ಮಹಾಮಾರಿ

ನವದೆಹಲಿ: ದೇಶದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದ್ದು, ಒಂದೇ ದಿನ 66,999 ಮಂದಿಗೆ ಸೋಂಕು ತಗುಲಿದ್ದು, 942 ಜನರನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,96.638ಕ್ಕೆ ಏರಿಕೆಯಾಗಿದ್ದು, ಸದ್ಯ 6,53,622 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,95,982 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 47,033 ಸಾವುಗಳು ದಾಖಲಾಗಿವೆ. ಬುಧವಾರ ಒಂದೇ ದಿನ 8,30,391 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗಸ್ಟ್ 12, 2020ರವೆರೆಗೆ 2,68,45,688 ಜನರು ಕೊರೊನಾ …

Read More »

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್‍ಗೂ ಕೊರೊನಾ..!

ನವದೆಹಲಿ, ಆ.13- ಕೇಂದ್ರ ಆಯುಷ್ (ಆಯುರ್ವೇದ, ಯೋಗ, ಯುನಾನಿ ಮತ್ತು ಸಿದ್ಧ) ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ಯಸ್ಸೋ ನಾಯಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೇಂದ್ರ ಸಚಿವರು ಈಗ ಐಸೋಲೇಷನ್‍ನಲ್ಲಿ ಇದ್ದು, ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಐದನೇ ಸಚಿವರಿಗೆ ಕೋವಿಡ್-19 ತಗುಲಿದಂತಾಗಿದೆ.ಈ ಕುರಿತು ಟ್ವೀಟ್ ಮಾಡಿರುವ ಸಚಿವರು ನನಗೆ ಕೊರೊನಾ ಸೋಂಕು ದೃಢಪಟಿದೆ. …

Read More »