Breaking News

ನವದೆಹಲಿ

ಲಿಂಗ ವಿವಾಹ.. ಇಂದು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕಾಯ್ದಿರಿಸಿರುವ ತನ್ನ ಬಹುನಿರೀಕ್ಷಿತ ತೀರ್ಪನ್ನು ಇಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ನಂತರ ಮೇ 11 ರಂದು ತೀರ್ಪು ಕಾಯ್ದಿರಿಸಿತ್ತು. ಮುುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ …

Read More »

ಗಾಂಧಿ ಜಯಂತಿ: ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ, ಖರ್ಗೆ

ನವದೆಹಲಿ: ದೇಶದೆಲ್ಲೆಡೆ ಇಂದು ಮಹಾತ್ಮ ಗಾಂಧೀಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿ ಮಹಾತ್ಮ ಗಾಂಧೀಜಿ ಅವರಿಗೆ ಪುಷ್ಪನಮನ ಸಲ್ಲಿಸಿದರು.       ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನ್​ಕರ್​, ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ …

Read More »

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ನೀಡಿದ್ದಾರೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು ವಾಸವಿರುವ ಪ್ರದೇಶ, ಚಿತ್ರಮಂದಿರ ಸೇರಿದಂತೆ ಸೂಕ್ಷ್ಮ ಹಾಗೂ …

Read More »

ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ.. 244 ಕೋಟಿ ರೂ. ಆದಾಯ ಸಂಗ್ರಹ

ಬೆಂಗಳೂರು : ಬುಧವಾರ ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ನೋಂದಣಿ- ದಸ್ತಾವೇಜು ಪ್ರಕ್ರಿಯೆ ನಡೆದಿರುವುದು ಹಾಗೂ ಗರಿಷ್ಠ ಶುಲ್ಕ ಸಂಗ್ರಹ ಆಗಿರುವುದು ಹೊಸ ದಾಖಲೆಯಾಗಿದೆ.   ಕಳೆದ ಸೋಮವಾರವಷ್ಟೇ 15936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 158.28 ಕೋಟಿ ರೂ. ಆದಾಯ …

Read More »

ಕೃಷ್ಣ ಜನ್ಮಭೂಮಿ – ಈದ್ಗಾ ಆವರಣದ ಸಮೀಕ್ಷೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ – ಈದ್ಗಾ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ನಿರ್ದೇಶನ ನೀಡುವಂತೆ ಕೋರಿ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.   ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠ, ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಸಿವಿಲ್ ಪ್ರೊಸೀಜರ್ ಕೋಡ್​ನ …

Read More »

ಬೆಳಗಾವಿಯ ಬಿಜೆಪಿಯಿಂದ ಅದ್ಧೂರಿ ವಿಜಯೋತ್ಸವ

ಸಂಸತ್ತಿನ ಹೊಸ ಕಟ್ಟಡದೊಂದಿಗೆ ದೇಶದ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ದೊಡ್ಡ ಹೆಜ್ಜೆ ಇಟ್ಟಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿದೆ. ಇಂದು ಬೆಳಗಾವಿಯಲ್ಲಿ ಐತಿಹಾಸಿಕ ನಿರ್ಧಾರವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಗರದ ಚನ್ನಮ್ಮ ವೃತ್ತದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸುವ ಮೂಲಕ …

Read More »

ದೆಹಲಿಯಲ್ಲಿ ಖಾಸಗಿ ಕಂಪನಿಯ​ ಹಿರಿಯ ಮ್ಯಾನೇಜರ್​ಗೆ ಗುಂಡಿಕ್ಕಿ ಹತ್ಯೆ

ನವದೆಹಲಿ: ಖಾಸಗಿ ಆನ್​ಲೈನ್​ ಶಾಪಿಂಗ್​ ವೆಬ್​ಸೈಟ್​ವೊಂದರ​ ಕಂಪನಿಯಲ್ಲಿ ಹಿರಿಯ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಹರ್​ಪ್ರೀತ್​ ಗಿಲ್​ (36) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಸಂಬಂಧಿ ಗೋವಿಂದ್​ ಸಿಂಗ್​ ಎಂಬುವವರು ಕೂಡ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಭಜನಪುರ ಪ್ರದೇಶದ ಸುಭಾಷ್ ವಿಹಾರ ಪ್ರದೇಶದಲ್ಲಿ ಕಳೆದ ರಾತ್ರಿ 11.20ರ ಸುಮಾರಿಗೆ ಐವರು ದುಷ್ಕರ್ಮಿಗಳ ತಂಡ …

Read More »

ವಿಶ್ವಕಪ್​ನಲ್ಲಿ ಬುಮ್ರಾ.. ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.

ನವದೆಹಲಿ: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿದ್ದಾರೆ. ಅವರು ಈ ವರ್ಷ ನ್ಯೂಜಿಲ್ಯಾಂಡ್​ಗೆ ಹೋಗಿ ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರ ನಂತರ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗಾಗಲೇ ಸಾಕಷ್ಟು ಚೇತರಿಸಿಕೊಂಡಿರುವಂತೆ ತೋರುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ. ನ್ಯೂಜಿಲ್ಯಾಂಡ್​​​​ನಲ್ಲಿ ಜಸ್ಪ್ರಿತ್ ಬುಮ್ರಾಗೆ ಸರ್ಜರಿ: ಈ ಕ್ರಮದಲ್ಲಿ ಟೀಂ ಇಂಡಿಯಾಗೆ ಶೀಘ್ರದಲ್ಲೇ …

Read More »

ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಲಡಾಕ್ ಹಾಗು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ

ನವದೆಹಲಿ : ಉತ್ತರ ಭಾರತದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇದುವರೆಗೂ ಸುಮಾರು 39ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ, ಭೂ ಕುಸಿತದಿಂದ ಅಪಾರ ಹಾನಿ ಉಂಟಾಗಿದೆ. ಉತ್ತರಾಖಂಡ್​ ಮತ್ತು ಹಿಮಾಚಲ ಪ್ರದೇಶದಲ್ಲಿ ಸೇರಿದಂತೆ ವಿವಿಧೆಡೆ ಭಾರತೀಯ ಸೇನೆ ಮತ್ತು ಎನ್​ಡಿಆರ್​ಎಫ್​ ತಂಡಗಳು ಭರದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ 2 ದಿನಗಳಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್​ ಮತ್ತು ಹರಿಯಾಣದಲ್ಲಿ ಒಟ್ಟು 9 …

Read More »

ಮಳೆ ಕೊರತೆ.. ಅಕ್ಕಿ ಬೆಲೆಯೂ ಆಗಲಿದೆ ದುಬಾರಿ

ನವದೆಹಲಿ: ದೇಶದಲ್ಲಿ ಈಗಾಗಲೇ ಟೊಮೆಟೊ ಬೆಲೆ ಗಗನಕ್ಕೆ ಏರಿದೆ. ಇದಕ್ಕೆ ಕಾರಣ ಹೆಚ್ಚಿದ ಮಾರುಕಟ್ಟೆ ಮತ್ತು ಕಡಿಮೆ ಪೂರೈಕೆ ಆಗಿದೆ. ಸದ್ಯ ಇದರ ಬೆನ್ನಲ್ಲೇ ಜನರು ಮತ್ತೊಂದು ಅಗತ್ಯ ಆಹಾರ ಸಾಮಗ್ರಿಯ ಬರ ಎದುರಿಸುವಂತೆ ಆಗಲಿದೆ. ಅಚ್ಚರಿ ಆದರೂ ಹೌದು, ಮಳೆ ಕೊರತೆ ಮತ್ತು ಕಡಿಮೆ ಬಿತ್ತನೆಯಿಂದಾಗಿ ಅಕ್ಕಿ ಇಳುವರಿ ಕಡಿಮೆಯಾಗಿದೆ. ಇದರ ಕೊರತೆ ಎದುರಾಗುವ ದಿನ ಸನ್ನಿಹಿತವಾಗಿದೆ ಎಂದು ಮೋತಿಲಾಲ್​ ಒಸ್ವಾಲ್​ ಫೈನಾನ್ಸ್​ ಸರ್ವೀಸ್​ ವರದಿಯಲ್ಲಿ ತಿಳಿಸಿದೆ. ಜಾಗತಿಕವಾಗಿ ಅಕ್ಕಿ …

Read More »