ನವದೆಹಲಿ: ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಲೈಂಗಿಕ ಕಾರ್ಯಕರ್ತೆಯರ ಮಕ್ಕಳನ್ನು ಆರ್ಥಿಕವಾಗಿ ಪೋಷಣೆ ಮಾಡಲು ಮುಂದಾಗಿದ್ದಾರೆ. ಹೌದು..ರಾಷ್ಟ್ರ ರಾಜಧಾನಿಯ ಜಿಬಿ ರಸ್ತೆ ಪ್ರದೇಶಯಲ್ಲಿರುವ ಲೈಂಗಿಕ ಕಾರ್ಯಕರ್ತೆಯರ 25 ಮಕ್ಕಳ ಪೋಷಣೆಗೆ ಗೌತಮ್ ಗಂಭೀರ್ ಮುಂದಾಗಿದ್ದಾರೆ. ಅಂದರೆ 25 ಮಕ್ಕಳ ಶಾಲೆಯ ಶುಲ್ಕ, ಆರೋಗ್ಯ, ಆಹಾರ, ಔಷಧಿ ಮತ್ತು ಇತರ ವಿವಿಧ ವೆಚ್ಚಗಳನ್ನು ಭರಿಸುತ್ತಾರೆ. ಗೌತಮ್ ಗಂಭೀರ್ ತಮ್ಮ ಈ ಕಾರ್ಯಕ್ಕೆ “PANKH” (ರೆಕ್ಕೆಗಳು) ಎಂದು ಕರೆದಿದ್ದಾರೆ. ಸಂಸದರು …
Read More »ಸೈಕ್ಲಿಸ್ಟ್ ಕನಸು ಕಂಡ ವಿದ್ಯಾರ್ಥಿಗೆ ರಾಷ್ಟ್ರಪತಿಯಿಂದ ರೇಸಿಂಗ್ ಸೈಕಲ್ ಗಿಫ್ಟ್
ನವದೆಹಲಿ: ತಾನೊಬ್ಬ ಖ್ಯಾತ ಸೈಕ್ಲಿಸ್ಟ್ ಆಗಬೇಕು ಎಂದು ಕನಸು ಕಾಣುತ್ತಿರೋ ಬಡ ವಿದ್ಯಾರ್ಥಿಗೆ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಸೈಕಲ್ ಗಿಫ್ಟ್ ಮಾಡಿ ಸಾಧನೆಗೆ ಉತ್ತೇಜನ ನೀಡಿದ್ದಾರೆ. ಹೌದು. ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಯೊಂದರಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ರಿಯಾಜ್ ಇಂದು ರಾಷ್ಟ್ರಪತಿಯವರಿಂದ ಉಡುಗೊರೆ ಪಡೆದ ವಿದ್ಯಾರ್ಥಿ. ಈದ್ ಮಿಲಾದ್ ಹಬ್ಬದಂದೇ ಗಿಫ್ಟ್ ನೀಡಿರುವ ರಾಷ್ಟ್ರಪತಿಗಳು ವಿಶ್ವಮಟ್ಟದ ಸೈಕ್ಲಿಸ್ಟ್ ಆಗಿ ಮಿಂಚಬೇಕು ಎಂದು ಶುಭಹಾರೈಸಿದ್ದಾರೆ. ಮೂಲತಃ ಬಿಹಾರದ ಮಧುಬಾನಿ …
Read More »ನಾಳೆ ಪ್ರಧಾನಿ ನರೇಂದ್ರ ಮೋದಿ ಭಾಷಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉದ್ದೇಶಿಸಿ ಸಂಜೆ 4.30ಕ್ಕೆ ಮಾತನಾಡಲಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಮಾತನಾಡಲಿದ್ದಾರೆ ಎಂದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ. ಅಲ್ಲದೇ ಕೊರೊನಾ ಅನ್ಲಾಕ್ 3.0 ನಾಳೆಯಿಂದ ಜಾರಿ ಆಗಲಿದೆ. ಈ ವೇಳೆಯಲ್ಲೇ ಪ್ರಧಾನಿಗಳು ಭಾಷಣ ಮಾಡುತ್ತಿರುವುದು ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.ಮಾತೃಭಾಷೆಯಲ್ಲೇ …
Read More »50ಕ್ಕೂ ಹೆಚ್ಚು ಜನರನ್ನ ಕೊಲೆಗೈದ ಆರೋಪದಲ್ಲಿ ಆಯುರ್ವೇದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸದಿಲ್ಲಿ: ದಿಲ್ಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಜನರನ್ನ ಕೊಲೆಗೈದ ಆರೋಪದಲ್ಲಿ ಆಯುರ್ವೇದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಆಲಿಘರ್ ನಿವಾಸಿಯಾಗಿದ್ದ ದೇವೇಂದರ್ ಶರ್ಮಾ(62) ಬಂಧಿತ. ಹಲವು ಅಪಹರಣ ಮತ್ತು ಕೊಲೆ ಪ್ರಕರಣಗಳಲ್ಲಿ ದೋಷಿ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಕಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದದ್ದಕ್ಕಾಗಿ ಬಂಧಿಸಲಾಗಿತ್ತು . ಕಿಡ್ನಿ ದಂಧೆ ಪ್ರಕರಣದಲ್ಲಿ ಜೈಪುರದ ಸೆಂಟ್ರಲ್ ಜೈಲಿನಲ್ಲಿ ಆತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಬಳಿ ತಪ್ಪಿಸಿಕೊಂಡಿದ್ದನು …
Read More »ಒಂದೇ ದಿನದಲ್ಲಿ 50 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು – 10 ಲಕ್ಷ ಮಂದಿ ಕೊರೊನಾದಿಂದ ಗುಣಮುಖ
ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದ 52,123 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈವರೆಗಿನ ಎಲ್ಲ ದಾಖಲೆಗಳನ್ನು ಪುಡಿಗಟ್ಟಿದೆ. ಇದೇ ಮೊದಲು ಬಾರಿಗೆ ಒಂದೇ ದಿನಕ್ಕೆ ಐವತ್ತು ಸಾವಿರ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಿನ್ನೆ 775 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 34,968ಕ್ಕೆ ಏರಿದೆ. ಸದ್ಯ 5,28,242 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ .ದಾಖಲೆಯ ಸೋಂಕಿತರ ಏರಿಕೆಯ ನಡುವೆ ಕೊರೊನಾದಿಂದ …
Read More »ಹೆಲ್ಮೆಟ್ ಹಾಕಿಲ್ಲವೆಂದು ಸವಾರನ ಹಣೆಗೆ ಕೀಯಿಂದ ಇರಿದೇ ಬಿಟ್ಟ ಪೊಲೀಸ್!
ಡೆಹ್ರಾಡೂನ್: ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದ್ದು, ಹಾಕದವರಿಗೆ ದಂಡ ವಿಧಿಸುವುದನ್ನು ಕೇಳಿದ್ದೇವೆ, ನೋಡಿದ್ದೇವೆ ಹಾಗೆ ದಂಡ ಕಟ್ಟಿಯೂ ಇದ್ದೇವೆ. ಆದರೆ ಉತ್ತರಾಖಂಡ್ ನಲ್ಲಿ ಹೆಲ್ಮೆಟ್ ಹಾಕದ ಯುವಕನೊಬ್ಬನಿಗೆ ವಿಚಿತ್ರ ಶಿಕ್ಷೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. ಉತ್ತರಾಖಂಡ್ನ ಉಧಮ್ ಸಿಂಗ್ ಜಿಲ್ಲೆಯ ರುದ್ರಾಪುರದಲ್ಲಿ ಪೊಲೀಸರು ಯುವಕನ ಹಣೆಗೆ ಕೀಯಿಂದ ತಿವಿದಿದ್ದಾರೆ. ಪರಿಣಾಮ ಯುವಕನ ಹಣೆಗೆ ಗಂಭೀರ ಗಾಯಗಳಾಗಿದ್ದು, ಘಟನೆ ಸಂಬಂಧ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ರುದ್ರಾಪುರ …
Read More »ರಾಮ ಮಂದಿರ ನಿರ್ಮಾಣಕ್ಕೆ ತಲಾ ಹತ್ತು ರೂ. ಮತ್ತು ಮನೆಯಿಂದ 100 ರೂ. ದೇಣಿಗೆ……….!
ಅಯೋಧ್ಯೆ,ಜು.27- ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳು ಮಾತ್ರವಲ್ಲದೆ ಎಲ್ಲಾ ಸಮುದಾಯಗಳಿಂದ ದೇಣಿಗೆಯನ್ನು ಸ್ವೀಕರಿಸಲಾಗುತ್ತದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರಾಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಇತ್ತೀಚೆಗೆ ನಡೆದ ಟ್ರಸ್ಟ್ನ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದ ಅವರು, ರಾಮ ಮಂದಿರ ನಿರ್ಮಾಣಕ್ಕೆ ತಲಾ ಹತ್ತು ರೂ. ಮತ್ತು ಮನೆಯಿಂದ 100 ರೂ. ದೇಣಿಗೆ ನೀಡಬಹುದಾಗಿದೆ. ಇದು ಕೇವಲ ಸಲಹೆ ಅಷ್ಟೇ. ತೆರಿಗೆಯಂತೆ ಅಲ್ಲ …
Read More »ಲಾಕ್ಡೌನ್ ಸಂಕಷ್ಟದಲ್ಲೂ ಸರ್ಕಾರಿ ನೌಕರರ ಹಿತ ಕಾದಿದೆ ಬಿಎಸ್ವೈ ಸರ್ಕಾರ: ಸವದಿ
ನವದೆಹಲಿ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲೂ ಸರ್ಕಾರಿ ಸೇರಿದಂತೆ ಸಾರಿಗೆ ನೌಕರರ ಹಿತ ಕಾಯುವ ಕೆಲಸವನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಢಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಆರಂಭದಲ್ಲಿ ಅತಿವೃಷ್ಠಿ-ಅನಾವೃಷ್ಠಿ ಕಾಡಿದ್ದು, ರಾಜ್ಯದ 20 ಜಿಲ್ಲೆಗಳು ಸಂಕಷ್ಟದಲ್ಲಿದ್ದವು. ಅದೆಲ್ಲ ಸಮಸ್ಯೆ ನಿಭಾಯಿಸುವ …
Read More »ಲೆಕ್ಕದ ವಿಚಾರದಲ್ಲಿ ಕಿತ್ತಾಟಕ್ಕಿಳಿದ ಕಾಂಗ್ರೆಸ್ ಮತ್ತು ಬಿಜೆಪಿಗೆ H.D.K.ಪಂಚ ಪ್ರಶ್ನೆ
ಬೆಂಗಳೂರು,-ಕೋವಿಡ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಕೊರೊನಾ ವೈರಸ್ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್ ಭ್ರಷ್ಟಾಚಾರದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ …
Read More »ದೇಶಿ ಕೊರೋನಾ ಲಸಿಕೆ ಕೊವ್ಯಾಕ್ಸಿನ್ ಮೊದಲ ಹಂತದ ಕ್ಲಿನಿಕಲ್ ಟಯಲ್ ಯಶಸ್ವಿ
ನವದೆಹಲಿ : ವಿಶ್ವವನ್ನೇ ಬೆಚ್ವಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕಿಗೆ ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಹಾಗೂ ಗೆ ಇಂಡಿಯನ್ ಕೌನ್ಸಿಲ್ ಅಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಸಹಯೋಗದಲ್ಲಿ ಉತ್ಪಾದನೆಯಾಗಿರುವ ದೇಶಿ ಲಸಿಕೆ ಕೊವ್ಯಾಕ್ಸಿನ್ ಮೊದಲ ಹಂತದ ಕ್ಲಿನಿಕಲ್ ಟಯಲ್ ಯಶಸ್ವಿಯಾಗಿ ಪೂರೈಸಿದೆ. ಕೊರೊನಾವೈರಸ್ ವಿರುದ್ಧ ಬಳಸಲು ಅತ್ಯಂತ ಪರಿಣಾಮಕಾರಿ ಔಷಧ ಇದು ಎಂದು ಪರಿಗಣಿಸಲಾಗಿದೆ.ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ‘ಕೊವ್ಯಾಕ್ಸಿನ್’ ಲಸಿಕೆಯ ಮೊದಲ ಹಂತದ …
Read More »
Laxmi News 24×7