Breaking News
Home / ನವದೆಹಲಿ (page 44)

ನವದೆಹಲಿ

ವಿದೇಶಿ ಕಂಪನಿಗಳನ್ನ ಭಾರತಕ್ಕೆ ಸೆಳೆಯಲು ಸಿದ್ಧರಾಗಿ :ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಕೊರೊನಾ ಆತಂಕ ಶುರುವಾದಾಗಿನಿಂದಲೂ ಅದನ್ನ ಮೆಟ್ಟಿ ನಿಲ್ಲುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮ ವಹಿಸುತ್ತಲೇ ಇವೆ. ಇದರ ಜೊತೆ ಜೊತೆಗೆ ಸರ್ಕಾರಗಳನ್ನ ಕಾಡುತ್ತಿರುವ ಮತ್ತೊಂದು ದೊಡ್ಡ ಸವಾಲು ಅಂದ್ರೆ ಅದು ಆರ್ಥಿಕತೆ. ಕೊರೊನಾದಿಂದಾಗಿ ಇಡೀ ದೇಶವೇ ಲಾಕ್​ಡೌನ್ ಆಗಿದ್ದು, ಇದು ಆರ್ಥಿಕತೆಗೂ ಪೆಟ್ಟು ನೀಡಿದೆ. ಈಗ ದೇಶದಲ್ಲಿ ಲಾಕ್​ಡೌನ್​ನ ಎರಡನೇ ಹಂತವೂ ಪೂರ್ಣಗೊಳ್ಳುತ್ತಿದ್ದು, ಆರ್ಥಿಕತೆಯನ್ನ ಹೆಚ್ಚಿಸುವ ಬಗ್ಗೆ ಸರ್ಕಾರಗಳು ಚಿಂತನೆ ನಡೆಸಿವೆ. ಈ ನಿಟ್ಟಿನಲ್ಲಿ ವಿದೇಶಿ …

Read More »

ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆ: (ಐಸಿಎಂಆರ್) ಸೂಚಿಸಿದೆ.

ನವದೆಹಲಿ: ಕೋವಿಡ್-19 ಪರೀಕ್ಷಿಸಲು ಚೀನಾದಿಂದ ಖರೀದಿಸಿದ್ದ ಕಿಟ್ ಗಳು ಕಳಪೆಯಾಗಿದ್ದು ಅವುಗಳನ್ನು ಬಳಸಬೇಡಿ ಎಂದು ರಾಜ್ಯ ಸರ್ಕಾರಗಳಿಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸೂಚಿಸಿದೆ. ಕಳಪೆ ಗುಣಮಟ್ಟದ ಕಿಟ್ ಗಳ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ಪೂರೈಸಿದ ಕಂಪನಿಗಳಿಗೆ ವಾಪಸ್ ಕಳುಹಿಸಿ ಎಂದು ಪತ್ರ ಬರೆದಿದೆ. ಚೀನಾದ ಗುವಾಂಗ್ಜೌ ವೊಂಡ್‍ಪೋ ಬಯೋಟೆಕ್ ಮತ್ತು ಲಿವ್ ಝೊನ್ ಡಯಾಗ್ನಿಸ್ಟಿಕ್ಸ್ ಕಂಪನಿಗಳಿಂದ ಭಾರತದ 5 ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ …

Read More »

ಕೊರೊನಾದಿಂದ ಕಂಗೆಟ್ಟ ವಲಯಗಳಿಗೆ 6 ತಿಂಗಳು ಜಿಎಸ್‍ಟಿ ರಿಲೀಫ್..?!

ನವದೆಹಲಿ, ಏ.27-ಕೊರೊನಾದಿಂದ ದೇಶದಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಇನ್ನೊಂದೆಡ ಆರ್ಥಿಕ ಚಟುವಟಿಕೆಗೆ ಭಾರೀ ಹೊಡೆತ ಬಿದ್ದಿದೆ. ಇದರಿಂದ ಎಲ್ಲಾ ಕ್ಷೇತ್ರಗಳು ಕಂಗೆಟ್ಟಿವೆ. ಪ್ರಸ್ತುತ ಆರ್ಥಿಕ ಸಂಕಷ್ಟ ಸ್ಥಿತಿಯನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ವಲಯಗಳಿಗೆ ಆರು ತಿಂಗಳ ಮಟ್ಟಿಗೆ ಸರಕುಗಳು ಮತ್ತು ಸೇವಾ ತೆರಿಗೆಗಳು (ಜಿಎಸ್‍ಟಿ) ವಿನಾಯಿತಿ ನೀಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ರಿಯಲ್ ಎಸ್ಟೇಟ್‍ಗಳು, ಏರ್‍ಲೈನ್ಸ್ …

Read More »

ಮೇ 15ರವರೆಗೂ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ – ರಾಜ್ಯಗಳ ಬೇಡಿಕೆ ಏನು?

ನವದೆಹಲಿ: ಲಾಕ್‍ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದು ಸಭೆ ಬಳಿಕ ಲಾಕ್‍ಡೌನ್ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. ಮತ್ತಷ್ಟು ವಿನಾಯ್ತಿಗಳೊಂದಿಗೆ ಮೇ 15ರವರೆಗೂ ಲಾಕ್‍ಡೌನ್ ಮುಂದುವರಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬರಬೇಕಿದೆ. ಈ ವಾರದ ಅಂತ್ಯದಲ್ಲಿ ಪ್ರಧಾನಿ ಮೋದಿ ದೇಶದ ಜನರನ್ನುದ್ದೇಶಿಸಿ ಐದನೇ ಬಾರಿ ಮಾತನಾಡಿಲಿದ್ದು, ಈ …

Read More »

ಎಲ್ಲ ರಾಜ್ಯಗಳನ್ನು ಕೇಂದ್ರ ಸರ್ಕಾರ ಏಕ ರೂಪದಲ್ಲಿ ನೋಡಲಿದ್ದು ಕೊರೊನಾ ಸಂಕಷ್ಟದಿಂದ ಶೀಘ್ರ ಹೊರ ಬರಲು ಪ್ರಯತ್ನಿಸೋಣ

ನವದೆಹಲಿ: ದೇಶದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಹೇರಲಾಗಿರುವ ಲಾಕ್‍ಡೌನ್‍ನಿಂದ ಸಾವಿರಾರು ಜೀವಗಳನ್ನು ರಕ್ಷಿಸಲಾಗಿದೆ ಆದರೆ ಕೊರೊನಾ ವೈರಸ್ ಮುಂದಿನಗಳಲ್ಲೂ ಕಂಡು ಬರುವ ಸಾಧ್ಯತೆಯಿದ್ದು, ಮಾಸ್ಕ್ ಜೀವನದ ಒಂದು ಭಾಗವಾಗಿರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆ ವೇಳೆ ಪ್ರಧಾನಿ ಮೋದಿ ಮಾಸ್ಕ್ ಬಳಕೆಯನ್ನು ಒತ್ತಿ ಹೇಳಿದ್ದಾರೆ.ಸಭೆಯಲ್ಲಿ ಎಲ್ಲ ರಾಜ್ಯದ ಸಿಎಂಗಳಿಗೆ ಎಚ್ಚರಿಕೆ ವಹಿಸಲು ಸೂಚಿಸಿರುವ ಪ್ರಧಾನಿ …

Read More »

ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖ

ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಒಂದು ಶುಭ ಸುದ್ದಿಯೊಂದು ಲಭ್ಯವಾಗಿದ್ದು, ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಭಾರತದಲ್ಲಿಯೇ ಮೊದಲ ಪ್ರಕರಣವಾಗಿದೆ. ದೆಹಲಿಯ 49 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಏಪ್ರಿಲ್ 4ರಂದು ದೃಢಪಟ್ಟಿತ್ತು. ರೋಗಿ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ಉಸಿರಾಡಲು ಸಹಾಯವಾಗಲಿ ಎಂದು ವೆಂಟಿಲೇಟರ್ ಅಳವಡಿಸಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ …

Read More »

ಭಾರತದಲ್ಲಿ ಲಾಕ್‍ಡೌನ್ 3.0 ಫಿಕ್ಸ್..! ವಿಸ್ತರಣೆಗೆ ಕೆಲವು ರಾಜ್ಯಗಳಿಂದ ಇಂಗಿತ …………

ನವದೆಹಲಿ-ಮುಂಬೈ, ಏ.24-ಲಾಕ್‍ಡೌನ್ ವಿಸ್ತರಣೆಯ ಎರಡನೇ ಹಂತದಲ್ಲೂ ಕೊರೊನಾ ಹಾವಳಿ ಕಳವಳಕಾರಿ ಮಟ್ಟದಲ್ಲಿ ಮುಂದುವರಿದಿದೆ. ಕೋವಿಡ್-19 ವೈರಸ್‍ನನ್ನು ನಿಯಂತ್ರಿಸಲು ಮತ್ತೆ ಲಾಕ್‍ಡೌನ್ ವಿಸ್ತರಿಸಬೇಕೆಂಬ ಇಂಗಿತವನ್ನು ಕೆಲವು ರಾಜ್ಯಗಳು ವ್ಯಕ್ತಪಡಿಸಿವೆ. ಆದರೆ ಕೆಲವು ರಾಜ್ಯಗಳು ವಿಸ್ತರಣೆ ಬಗ್ಗೆ ಭಿನ್ನ ನಿಲುವು ಹೊಂದಿವೆ. ಈ ಬೆಳವಣಿಗೆಯಿಂದಾಗಿ ಮೇ 3ರ ನಂತರವೂ ಲಾಕ್‍ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳು ಹೇಳುತ್ತಿವೆ. ಮಹಾರಾಷ್ಟ್ರ, ದೆಹಲಿ, ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಸೇರಿದಂತೆ …

Read More »

ಭಾರತದಲ್ಲಿ ಕೊರೋನಾಗೆ 825 ಮಂದಿ ಸಾವು, 26,496 ಸೋಂಕಿತರು..!

ನವದೆಹಲಿ/ಮುಂಬೈ,ಏ.26-ಕೊರೊನಾ ವೈರಸ್ ರಣಕೇಕೆ ಭಾರತದಲ್ಲಿ ಅವ್ಯಾಹತವಾಗಿ ಮುಂದುವರಿದಿದೆ. ಲಾಕ್‍ಡೌನ್ ನಡುವೆಯೂ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಳೆದ 24 ತಾಸುಗಳ ಅವಧಿಯಲ್ಲಿ ದೇಶದ ವಿವಿಧೆಡೆ ಒಟ್ಟು 49 ಮಂದಿಯನ್ನು ಕೊರೊನಾ ಬಲಿ ಪಡೆದಿದೆ. ಇದೇ ಅವಧಿಯಲ್ಲಿ 1,990 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಭಾರತದಲ್ಲಿ ಮೃತರ ಸಂಖ್ಯೆ 900 ತಲುಪುತ್ತಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ ಸೋಂಕು ಪೀಡಿತರ ಸಂಖ್ಯೆ 27,000 ಸನಿಹದಲ್ಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ …

Read More »

ಮಹಾರಾಷ್ಟ್ರದಲ್ಲಿ ಕೊರೋನಾಗೆ ಒಂದೇ ದಿನ 22 ಮಂದಿ ಸಾವು..!

ಮುಂಬೈ, ಏ.26- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ದಿನೇ ದಿನೇ ಶೋಚನೀಯವಾಗುತ್ತದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಂದೇ ದಿನ ಅವಧಿಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈ ಅಪಾಯಕಾರಿಯಾಗಿ ಪರಿಣಮಿಸಿದ್ದು, ಅಲ್ಲಿ 5000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಾಧಿತರಾಗಿದ್ದಾರೆ. ಅಲ್ಲಿ ಪ್ರತಿದಿನ ಹೊಸ ಸೋಂಕು ಪ್ರಕರಣಗಳು ದೃಢಪಡುತ್ತಲೇ ಇವೆ. ಮಹಾರಾಷ್ಟ್ರದಲ್ಲಿ …

Read More »

ಟಿಕ್‍ಟಾಕ್‍ನಲ್ಲಿ ನಾನು ನಿನ್ನನ್ನ ಬ್ಲಾಕ್ ಮಾಡ್ತೀನಿ: ಗೇಲ್…..

ನವದೆಹಲಿ: ನೀನು ತುಂಬ ಕಿರಿಕಿರಿ ಮಾಡುತ್ತೀಯಾ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಟೀಕಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಬೌಲರ್ ಆಗಿರುವ ಚಹಲ್ ಅವರು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುತ್ತಾರೆ. ಎಲ್ಲರನ್ನೂ ಕಾಲೆಳೆಯುವ ಕೆಲಸ ಮಾಡುತ್ತಾರೆ. ಹೀಗಾಗಿ ಗೇಲ್ ನೀನು ಸೋಶಿಯಲ್ ಮೀಡಿಯಾದಲ್ಲಿ ಕಿರಿಕಿರಿ ಮಾಡುತ್ತಿದ್ದೀಯ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ಚಹಲ್‍ಗೆ …

Read More »