Breaking News
Home / ನವದೆಹಲಿ (page 6)

ನವದೆಹಲಿ

ಅಶ್ವತ್ಥ ನಾರಾಯಣ ಎಂ.ಬಿ ಪಾಟೀಲರನ್ನು ಭೇಟಿಯಾಗಿದ್ದಾರೆ: ಡಿ.ಕೆ ಶಿವಕುಮಾರ್

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ …

Read More »

ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ

ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದರು.   ಈ ಹಿಂದೆ ನಾನು‌ ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು …

Read More »

ಪುರುಷ ಮತ್ತು ಹೆಂಡತಿ ಕುಟುಂಬದ ಆಧಾರ ಸ್ತಂಭಗಳು, ಒಂದು ಮುರಿದರೆ ಇಡೀ ಮನೆ ಕುಸಿಯುತ್ತದೆ: ಹೈಕೋರ್ಟ

ನವದೆಹಲಿ: ಕೌಟುಂಬಿಕ ನ್ಯಾಯಾಲಯದ ಆದೇಶದ ವಿರುದ್ಧದ ಮೇಲ್ಮನವಿಯ ವಿಚಾರಣೆ ನಡೆಸಿದ ದಿಲ್ಲಿ ಹೈಕೋರ್ಟ್, ಪತಿ-ಪತ್ನಿ ಕುಟುಂಬದ ಎರಡು ಆಧಾರ ಸ್ತಂಭಗಳಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಒಟ್ಟಿಗೆ ನಿಭಾಯಿಸಬಹುದು, ಎಲ್ಲ ಸಂದರ್ಭಗಳಲ್ಲೂ ಕುಟುಂಬವನ್ನು ಸಮತೋಲನದಲ್ಲಿಡಬಹುದು ಎಂದು ಅಭಿಪ್ರಾಯಪಟ್ಟಿದೆ. ಒಂದು ಕಂಬ ದುರ್ಬಲವಾದರೆ ಅಥವಾ ಮುರಿದರೆ, ಇಡೀ ಮನೆ ಕುಸಿದು ಬೀಳುತ್ತದೆ ಇದೇ ವೇಳೇ ಹೇಳಿದೆ. ಗಂಡ ಹೆಂಡತಿ ಕುಟುಂಬದ ಎರಡು ಆಧಾರ ಸ್ತಂಭಗಳು, ಯಾವುದೇ ಪರಿಸ್ಥಿತಿಯನ್ನು ಒಟ್ಟಿಗೆ ನಿಭಾಯಿಸಬಹುದು, ಎಲ್ಲಾ ಸಂದರ್ಭಗಳಲ್ಲಿ ಕುಟುಂಬವನ್ನು …

Read More »

ಹುಬ್ಬಳ್ಳಿ ಘಟನೆ: ಗಲಭೆಕೋರರಿಗೆ ಕಾಂಗ್ರೆಸ್ ನೆರವು ನೀಡಿದೆ ಎಂದ ಸಿಎಂ

ನವದೆಹಲಿ ಏಪ್ರಿಲ್ 30: ಹುಬ್ಬಳ್ಳಿ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹರಿಹಾಯದಿದ್ದಾರೆ. ‘ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು ಆಗಿದೆ. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ …

Read More »

E-Shram Card : ಕೇಂದ್ರ ಸರ್ಕಾರ ಯಾವಾಗ? ಯಾರ ಖಾತೆಗೆ ‘ಹಣ’ ಕಳುಸುತ್ತೆ? ನೋಂದಾಯಿಸಿಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಪ್ರಸ್ತುತ, ಕೇಂದ್ರ ಸರ್ಕಾರವು ದೇಶದ ಬಡ ವರ್ಗಗಳ ಜನರಿಗಾಗಿ ಅನೇಕ ಯೋಜನೆಗಳನ್ನ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಜನರು ಅನೇಕ ರೀತಿಯ ಪರಿಹಾರ ಮತ್ತು ಪ್ರಯೋಜನಗಳನ್ನ ಪಡೆಯುತ್ತಾರೆ. ಇ-ಶ್ರಮ್ ಕಾರ್ಡ್ ಯೋಜನೆಯೂ ಇದೇ ರೀತಿಯ ಯೋಜನೆಯಾಗಿದ್ದು, ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರವು ಇದನ್ನ ಪರಿಚಯಿಸಿದೆ. ಕಾರ್ಮಿಕರನ್ನ ಸ್ವಾವಲಂಬಿಗಳನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ, ಈ ಯೋಜನೆಯು ಇಲ್ಲಿಯವರೆಗೆ ಲಕ್ಷಾಂತರ ಕಾರ್ಮಿಕರಿಗೆ ಪ್ರಯೋಜನವನ್ನ ನೀಡಿದೆ. …

Read More »

ದೇವೇಗೌಡರ ಪತ್ನಿ ಚನ್ನಮ್ಮಗೆ ಐಟಿ ನೋಟಿಸ್! ಕಬ್ಬಿನ ಗದ್ದೆಗೆ ಅಧಿಕಾರಿಗಳನ್ನ ಆಹ್ವಾನಿಸಿದ ರೇವಣ್ಣ

ಹಾಸನ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್​.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್​ ಬಂದಿದೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಹೀಗೆ ಮಾಡ್ತಾರಾ? ದೊಡ್ಡಪುರದ ಬಳಿ ನಮ್ಮ ತಾಯಿ ಹೆಸರಿನ ಜಮೀನಿನಲ್ಲಿ ಕಬ್ಬು ಬೆಳೆದಿದ್ದೀವಿ. ನಮ್ಮ ತಾಯಿಗೆ ಸೇರಿದ ಗದ್ದೆಯಲ್ಲಿ ಕಬ್ಬು ಬೆಳೆದಿದ್ದಕ್ಕೆ ಐಟಿ ನೋಟಿಸ್ ಜಾರಿ ಮಾಡಿದೆ. …

Read More »

ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ

ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ …

Read More »

ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು.

ಶ್ರೀನಗರ: 73ನೇ ಗಣರಾಜ್ಯೋತ್ಸವದ ಅಂಗವಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಶ್ರೀನಗರದ ಪ್ರಸಿದ್ಧ ಲಾಲ್ ಚೌಕ್ ಪ್ರದೇಶದ ಗಡಿಯಾರ ಗೋಪುರದ ಮೇಲೆ ಹಾರಿಸಲಾಯಿತು. ಭಾರತದ ಸ್ವಾತಂತ್ರ್ಯದ ನಂತರ ಗಡಿಯಾರ ಗೋಪುರದ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿರುವುದು ಇದೇ ಮೊದಲು ಭಾರತದ 73 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಇಬ್ಬರು ಸ್ಥಳೀಯ ಕಾರ್ಯಕರ್ತರಾದ ಸಾಜಿದ್ ಯೂಸುಫ್ ಶಾ ಮತ್ತು ಸಾಹಿಲ್ ಬಶೀರ್ ಅವರು ಸ್ಥಳೀಯರು ಎನ್‌ಜಿಒ ಮತ್ತು ಆಡಳಿತದೊಂದಿಗೆ ಲಾಲ್ ಚೌಕ್ ಪ್ರದೇಶದಲ್ಲಿ …

Read More »

ಕ್ರೀಡೆಯಲ್ಲಿ ಮಿಂಚಿ ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಿರುವ ಭಾರತದ ಮಹಿಳಾ ಕ್ರೀಡಾಪಟು

ಭಾರತದ ಮಹಿಳೆಯರು ಕ್ರೀಡಾ ಲೋಕದಲ್ಲೂ ಸಾಕಷ್ಟು ಸಾಧನೆ ಮಾಡಿದ್ದಾರೆ. ಭಾರತೀಯ ಮಹಿಳಾ ಆಟಗಾರ್ತಿಯರು ವಿವಿಧ ಕ್ರೀಡೆಗಳಲ್ಲಿ ದೇಶಕ್ಕೆ ಪ್ರಶಸ್ತಿಗಳನ್ನು ತಂದಿದ್ದಾರೆ. ಅದು ಬಾಕ್ಸಿಂಗ್ ಅಥವಾ ವೇಟ್ ಲಿಫ್ಟಿಂಗ್ ಅಥವಾ ಅಥ್ಲೆಟಿಕ್ಸ್ ಆಗಿರಲಿ. ಭಾರತದ ಮಹಿಳೆಯರು ಪ್ರತಿ ಪಂದ್ಯದಲ್ಲೂ ಮುಂದಿದ್ದಾರೆ. ಇದಕ್ಕಾಗಿ ಬಹುಮಾನವನ್ನೂ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದರ ಫಲವಾಗಿ ಹಲವಾರು ಮಹಿಳಾ ಆಟಗಾರ್ತಿಯರಿಗೆ ಭದ್ರತಾ ಪಡೆ ಸೇರುವ ಅವಕಾಶ ಸಿಕ್ಕಿತು. ಭದ್ರತಾ ಪಡೆಗೆ ಸೇರ್ಪಡೆಯಾದ ಅಂತಹ ಕೆಲವು ಭಾರತೀಯ …

Read More »

ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ

ನವದೆಹಲಿ : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆಮಾಡಿದೆ. 1949ರ ನವೆಂಬರ್ 26ರಂದು ರಚಿಸಲಾದ ದೇಶದ ಸಂವಿಧಾನವನ್ನು 1950ರ ಜನವರಿ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ದೇಶದ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ. ಭಾರತದ ಗಣರಾಜ್ಯೋತ್ಸವವು ಕೇವಲ ಆಚರಣೆಯಾಗಿರದೆ, ಅದು ದೇಶದ ರಾಜತಾಂತ್ರಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಬಾರಿ ಮಹಾಮಾರಿ ಕೊರೊನಾ ನಡುವೆಯೂ ಗಣತಂತ್ರ ದಿನದ ಆಚರಣೆಗೆ ಇಡೀ ದೇಶ ಸನ್ನದ್ಧವಾಗಿದೆ. ಈ ದಿನದ ಇಂದು ಭಾರತೀಯ ಸೇನಾ ಪಡೆಗಳು ಮತ್ತು …

Read More »