ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ …
Read More »ನಂಗು ಬೇಕು ದ್ರಾಕ್ಷಿ ನಂಗೂ ಬೇಕು..! ರಸ್ತೆ ಬದಿ ಬಿದ್ದಿದ್ದ ದ್ರಾಕ್ಷಿಗಾಗಿ ಮುಗಿಬಿದ್ದ ಜನ!
ಮಂಡ್ಯ: ಯಾವುದೇ ವಸ್ತು ರಸ್ತೆಯಲ್ಲಿ ಬಿದ್ದಿದ್ದಾಗ ಎತ್ತಿಕೊಳ್ಳೋದಕ್ಕೆ ಹಿಂದೆ ಮುಂದೆ ನೋಡೋ ಜನರು ಮಾತ್ರ, ರಸ್ತೆ ಪಕ್ಕದಲ್ಲಿ ಬಿದ್ದಿದ್ದ ರಾಶಿ ರಾಶಿ ದ್ರಾಕ್ಷಿಯನ್ನು ನನಗೂ ಬೇಕು.. ನನಗೂ ಬೇಕು ಎಂಬುದಾಗಿ ನಾ ಮುಂದು, ತಾ ಮುಂದು ಎನ್ನುವಂತೆ ಮುಗಿಬಿದ್ದು ಬಾಚಿಕೊಂಡು ಹೋಗಿರೋ ಘಟನೆ, ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್ ಗೇಟ್ ಬಳಿಯ ರಸ್ತೆಯ ಪಕ್ಕದಲ್ಲಿಯೇ ರಾಶಿ ರಾಶಿ ದ್ರಾಕ್ಷಿಯನ್ನು ಯಾರೋ ಸುರಿದು ಹೋಗಿದ್ದರು. ಹೀಗೆ ರಸ್ತೆಯ …
Read More »ಅಸನಿ ಚಂಡಮಾರುತದಿಂದಾಗಿ ವಾತಾವರಣ ಕೂಲ್ ಕೂಲ್
ಬೆಂಗಳೂರು: ಅಸನಿ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರಿನ ವಾತಾವರಣ ಕಂಪ್ಲೀಟ್ ಕೂಲ್ ಆಗಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮೋಡದ ಮರೆಯಲ್ಲೇ ಸೂರ್ಯ ದೇವನ ಜಾರಿಹೋಗಲಿದ್ದಾನೆ. ಬಂಗಾಳಕೊಲ್ಲಿಯನ್ನ ತೀವ್ರ ವಾಯುಭಾರ ಕುಸಿತದಿಂದ ಉಂಟಾಗಿರುವ ಅಸನಿ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ಹಲವು ಕಡೆ ಜೋರು ಮಳೆ ಆಗ್ತಿದೆ. ಬೆಂಗಳೂರಿನಲ್ಲೂ ಚಂಡಮಾರುತದ ಪರಿಣಾಮ ಬೇಸಿಗೆ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದೆ. ನಗರದಲ್ಲಿ ನೆನ್ನೆಯಿಂದಲೂ ಸಹ ಮೋಡ ಕವಿದ ವಾತಾವರಣವಿದೆ. ನಿನ್ನೆ …
Read More »ಮತ್ತೆ ನಾಳೆಗೆ ಕ್ಯಾಬಿನೆಟ್ ಸಭೆ ಮುಂದೂಡಿಕೆಹೈಕಮಾಂಡ್ನಿಂದ ಬಿಗ್ ಸಂದೇಶ ನಿರೀಕ್ಷೆ
ನವದೆಹಲಿ/ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ. ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿ ವೇಳೆ ಹೈಕಮಾಂಡ್ನಿಂದ ಸ್ಪಷ್ಟ ಸಂದೇಶ ರವಾನಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚನೆ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಕುತೂಹಲ ಹುಟ್ಟಿಕೊಂಡಿದ್ದು, ಆ ಸಂದೇಶದಿಂದ ಯಾವ ಬದಲಾವಣೆ..? ಯಾರಿಗೆ ಶಾಕ್.. ಯಾರಿಗೆ ಲಕ್ ಎಂಬುದು ತಿಳಿದುಬರಲಿದೆ. …
Read More »16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್
ಚೀನಾ :ಅಪ್ರಾಪ್ತರ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಿಸಲು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದನ್ನು ನಿಷೇಧಿಸಲು ಚೀನಾ ಮುಂದಾಗಿದೆ. ಹೊಸ ನಿಯಮಗಳ ಪ್ರಕಾರ, 16 ವರ್ಷದೊಳಗಿನವರನ್ನು ಲೈವ್-ಸ್ಟ್ರೀಮಿಂಗ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 16 ಮತ್ತು 18 ರ ನಡುವಿನ ವಯಸ್ಸಿನ ಬಳಕೆದಾರರು ಲೈವ್ ಸ್ಟ್ರೀಮ್ ಮಾಡುವ ಮೊದಲು ತಮ್ಮ ಪೋಷಕರು ಅಥವಾ ಪೋಷಕರಿಂದ ಅನುಮತಿಯನ್ನು ಪಡೆಯಬೇಕು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. …
Read More »ಭಾರತೀಯ ರೈಲ್ವೆ ಹೊಸ ನಿಯಮ : ರಾತ್ರಿ ರೈಲಿನಲ್ಲಿ ಜೋರಾಗಿ ಮಾತನಾಡುವಂತಿಲ್ಲ
ನವದೆಹಲಿ: ರೈಲ್ವೆ ಪ್ರಯಾಣಿಕರು ರಾತ್ರಿ ಪ್ರಯಾಣದ ಸಂದರ್ಭದಲ್ಲಿ ಮೊಬೈಲ್ನಲ್ಲಿ ಏರಿದ ಧ್ವನಿಯಲ್ಲಿ ಮಾತನಾಡುವುದನ್ನು ಅಥವಾ ‘ಲೌಡ್ ಸ್ಪೀಕರ್’ನಲ್ಲಿ ಸಂಗೀತ ಕೇಳುವುದನ್ನು ಭಾರತೀಯ ರೈಲ್ವೆ ನಿಷೇಧಿಸಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ಖಾತರಿಪಡಿಸುವ ಉದ್ದೇಶ|ದಿಂದ ಭಾರತೀಯ ರೈಲ್ವೆ ಹೊಸದಾಗಿ ಪ್ರಯಾಣಿಕ ಸ್ನೇಹಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರ ಪ್ರಕಾರ, ಪ್ರಯಾಣಿಕರು ದೂರು ನೀಡಿದರೆ, ಆ ಸಮಸ್ಯೆ ಪರಿಹರಿಸುವ ಜವಾಬ್ದಾರಿ ರೈಲಿನಲ್ಲಿರುವ ಸಿಬ್ಬಂದಿಯದ್ದಾಗಿರುತ್ತದೆ. ರೈಲಿನಲ್ಲಿರುವ ರೈಲ್ವೆ ತಪಾಸಣೆ ಸಿಬ್ಬಂದಿ, ಆರ್ಪಿಎಫ್, ಎಲೆಕ್ಟ್ರಿಷಿಯನ್, ಅಡುಗೆ ಮತ್ತು …
Read More »ಅಶ್ವತ್ಥ ನಾರಾಯಣ ಎಂ.ಬಿ ಪಾಟೀಲರನ್ನು ಭೇಟಿಯಾಗಿದ್ದಾರೆ: ಡಿ.ಕೆ ಶಿವಕುಮಾರ್
ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ …
Read More »ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ
ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದರು. ಈ ಹಿಂದೆ ನಾನು ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು …
Read More »ಪುರುಷ ಮತ್ತು ಹೆಂಡತಿ ಕುಟುಂಬದ ಆಧಾರ ಸ್ತಂಭಗಳು, ಒಂದು ಮುರಿದರೆ ಇಡೀ ಮನೆ ಕುಸಿಯುತ್ತದೆ: ಹೈಕೋರ್ಟ
ನವದೆಹಲಿ: ಕೌಟುಂಬಿಕ ನ್ಯಾಯಾಲಯದ ಆದೇಶದ ವಿರುದ್ಧದ ಮೇಲ್ಮನವಿಯ ವಿಚಾರಣೆ ನಡೆಸಿದ ದಿಲ್ಲಿ ಹೈಕೋರ್ಟ್, ಪತಿ-ಪತ್ನಿ ಕುಟುಂಬದ ಎರಡು ಆಧಾರ ಸ್ತಂಭಗಳಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಒಟ್ಟಿಗೆ ನಿಭಾಯಿಸಬಹುದು, ಎಲ್ಲ ಸಂದರ್ಭಗಳಲ್ಲೂ ಕುಟುಂಬವನ್ನು ಸಮತೋಲನದಲ್ಲಿಡಬಹುದು ಎಂದು ಅಭಿಪ್ರಾಯಪಟ್ಟಿದೆ. ಒಂದು ಕಂಬ ದುರ್ಬಲವಾದರೆ ಅಥವಾ ಮುರಿದರೆ, ಇಡೀ ಮನೆ ಕುಸಿದು ಬೀಳುತ್ತದೆ ಇದೇ ವೇಳೇ ಹೇಳಿದೆ. ಗಂಡ ಹೆಂಡತಿ ಕುಟುಂಬದ ಎರಡು ಆಧಾರ ಸ್ತಂಭಗಳು, ಯಾವುದೇ ಪರಿಸ್ಥಿತಿಯನ್ನು ಒಟ್ಟಿಗೆ ನಿಭಾಯಿಸಬಹುದು, ಎಲ್ಲಾ ಸಂದರ್ಭಗಳಲ್ಲಿ ಕುಟುಂಬವನ್ನು …
Read More »ಹುಬ್ಬಳ್ಳಿ ಘಟನೆ: ಗಲಭೆಕೋರರಿಗೆ ಕಾಂಗ್ರೆಸ್ ನೆರವು ನೀಡಿದೆ ಎಂದ ಸಿಎಂ
ನವದೆಹಲಿ ಏಪ್ರಿಲ್ 30: ಹುಬ್ಬಳ್ಳಿ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹರಿಹಾಯದಿದ್ದಾರೆ. ‘ಹುಬ್ಬಳ್ಳಿ ಗಲಭೆ ಪ್ರಕಾರದಲ್ಲಿ ಬಂಧಿತರ ನೆರವಿಗೆ ಧಾವಿಸಿರುವುದು ಶಾಸಕ ಜಮೀರ್ ಅಹಮದ್ ಹಾಗೂ ಅವರ ಪಕ್ಷದ ನಿಲುವು ಆಗಿದೆ. ಗಲಭೆ ಮಾಡಿದವ ಜೊತೆ ನಿಲ್ಲುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡೇ ಬಂದಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಗೆ ಆಗಮಿಸಿ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಪ್ರಕರಣದಲ್ಲಿ ಶಾಸಕ ಜಮೀರ್ …
Read More »
Laxmi News 24×7