ಮಂಗಳೂರು: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತಿದೆ. ಈ ಮಾತು ಮಂಗಳೂರಿನಲ್ಲಿ ನಡೆದಿರೋ ಮನಕಲಕುವ ಘಟನೆಗೆ ಹೇಳಿ ಮಾಡಿಸಿದಂತಿದೆ. ಗಂಡ-ಹೆಂಡತಿಯ ಮಧ್ಯೆ ನಡೆದ ಜಗಳದಿಂದ ಮುದ್ದಾದ ಮಕ್ಕಳು ಪ್ರಾಣಬಿಟ್ಟಿವೆ. ಹೆತ್ತಪ್ಪನೇ ತನ್ನ ಕೈಯ್ಯಾರೆ ಮಕ್ಕಳನ್ನ ಸಾವಿನ ಕೂಪಕ್ಕೆ ತಳ್ಳಿದ್ದಾನೆ. ಕೌಟುಂಬಿಕ ಸಮಸ್ಯೆಗೆ ಅಮಾಯಕ ಮಕ್ಕಳು ಬಲಿ ಮೂವರು ಮಕ್ಕಳನ್ನ ಬಾವಿಗೆ ತಳ್ಳಿ ಕೊಂದ ತಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದು ಹೋಗಿದೆ. ಹೆತ್ತ ತಂದೆಯೇ …
Read More »ಮುಸ್ಲಿಮರಿಗೆ ದ್ರೋಹ ಮಾಡಿದರೆ ರಾಜಕೀಯ ನಿವೃತ್ತಿ : ಶಾಸಕ ಜಿ ಸೋಮಶೇಖರ ರೆಡ್ಡಿ
ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಲ. ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಅವರು ನಗರದ ಕೌಲಬಜಾರ್ನ ಎಂ.ಆರ್. ಫಂಕ್ಷನ್ ಹಾಲ್ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು …
Read More »ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …
Read More »ರಾಜ್ಯದಲ್ಲಿ ನಿಲ್ಲುತ್ತಿಲ್ಲ ಮಳೆರಾಯನ ಕಾಟ.. ಕರಾವಳಿ ಭಾಗಗಳಿಗೆ ಮತ್ತೆ ಎಚ್ಚರಿಕೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದೂ ಹೇಳಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಲ್ಲಿ ಭಾರೀ ಮಳೆಯ ಮುನ್ಸೂಚನೆಯೂ ನೀಡಲಾಗಿದೆ. ಇನ್ನು ಕೇರಳದಲ್ಲಿ ಭಯಾನಕ ಮಳೆಯಾಗುತ್ತಿದ್ದು, ಅಪಾರ …
Read More »ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ
ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ 112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು. “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್ಇನ್ಸ್ಪೆಕ್ಟರ್ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್ ಅಧಿಕಾರಿಗಳು, ಮಹಿಳಾ ಪೊಲೀಸ್ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …
Read More »ಸೆಪ್ಟೆಂಬರ್ನಲ್ಲಿ ದಿನವೂ 5 ಲಕ್ಷ ಜನರಿಗೆ ಲಸಿಕೆ: ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಹೇಳಿದರು. ರಾಜಭವನದಲ್ಲಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಹಾಗೂ ಗೀವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪ್ರತಿ ದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ …
Read More »ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್ಎಸ್ಎಲ್ಸಿ ತೇಗರ್ಡೆಯಾಗಿದ್ದಾಳೆ.
ಮಂಗಳೂರು, (ಆ.10): ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್ಎಸ್ಎಲ್ಸಿ ತೇಗರ್ಡೆಯಾಗಿದ್ದಾಳೆ. ಅಚ್ಚರಿ ಎನ್ನಿಸಿದರೂ ಸತ್ಯ. ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್ಎಸ್ಎಲ್ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ. ಒಂದೇ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ …
Read More »ಇಬ್ಬರು ಮಕ್ಕಳ ಮೇಲೆ ತಂದೆಯಿಂದಲೇ ನಿರಂತರ ಮಾನಭಂಗ
ಮಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ತಂದೆಯೇ ನಿರಂತರ ಮಾನಭಂಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದೀಗ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ವ್ಯಕ್ತಿ ಕೆಲವು ದಿನಗಳ ಹಿಂದೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ. ಇದಾದ ಬಳಿಕ ಪತ್ನಿ ತನ್ನ ಓರ್ವ ಪುತ್ರ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ತವರಿಗೆ ಹೋಗಿದ್ದಳು. ಈ ವೇಳೆ ಹೆಣ್ಣು ಮಕ್ಕಳ ತಂದೆಯ ಅನಾಚಾರದ ಬಗ್ಗೆ ಬಾಯ್ಬಿಟ್ಟಿದ್ದರು. ಕಳೆದೊಂದು ವರ್ಷದಿಂದ …
Read More »ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್ಐ ಕರೊನಾಗೆ ಬಲಿ!
ಮಂಗಳೂರು: ಅವರ ವಯಸ್ಸಿನ್ನೂ 24 ವರ್ಷ. ಚಿಕ್ಕ ವಯಸ್ಸಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಕೋಲಾರ ಮೂಲದ ಯುವತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದರು. 7 ತಿಂಗಳ ಗರ್ಭಿಣಿ ಆಗಿದ್ದ ಅವರು ಹೆರಿಗೆ ರಜೆ ಮೇಲೆ ತವರಿಗೆ ಹೋಗಿದ್ದರು. ಎಲ್ಲವೂ ಸರಿಯಾಗಿದ್ದರೆ ಇನ್ನೆರಡು ತಿಂಗಳಲ್ಲಿ ಆ ಮನೆಗೆ ಪುಟ್ಟ ಕಂದನ ಆಗಮನದ ಖುಷಿಯ ಹೂರಣವೇ ತುಂಬಿರುತ್ತಿತ್ತು. ಅಷ್ಟರಲ್ಲಿ ಕ್ರೂರಿ ಕರೊನಾ ಗರ್ಭಿಣಿ ಪಿಎಸ್ಐ ಅನ್ನು …
Read More »ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ
ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆತಂದಿದ್ದು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸಲು ಮೇ 9 ರಂದು ಹೊರಡಿಸಿದ ಪರಿಷ್ಕೃತ ಮಾರ್ಗ ಸೂಚಿಗಳು ಮೇ 10 ರ ಬೆಳಗ್ಗೆ 6 ರಿಂದ ಮೇ 24 ರ ಬೆಳಗ್ಗೆ 6 ಗಂಟೆ ತನಕ ಕಟ್ಟು ನಿಟ್ಟಾಗಿ …
Read More »