ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಲ. ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಅವರು ನಗರದ ಕೌಲಬಜಾರ್ನ ಎಂ.ಆರ್. ಫಂಕ್ಷನ್ ಹಾಲ್ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು …
Read More »ಪೈಲೆಟ್ನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು ಸಚಿವರು
ಬೆಂಗಳೂರು,ಏ.28- ಪೈಲೆಟ್ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ …
Read More »ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಡಕಲ್ ಜಲಾಶಯದಿಂದ ಜಿಆರ್ಬಿಸಿ, ಜಿಎಲ್ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್ಎಫ್ ಅಧ್ಯಕ್ಷ ಬಾಲಚ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, …
Read More »ಮನೆ ಕಟ್ಟೋರಿಗೆ ಬಿಗ್ ಶಾಕ್ : ಶೀಘ್ರವೇ ಸಿಮೆಂಟ್ ಪ್ರತಿ ಚೀಲಕ್ಕೆ 50 ರೂ. ಏರಿಕೆ!
ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಟಿಪ್ಪು ಸುಲ್ತಾನ್ `ಮೈಸೂರು ಹುಲಿ’ ಬಿರುದು ಕೈಬಿಡಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ಉತ್ಪಾದನಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ದೇಶಿಯ ಸಿಮೆಂಟ್ ಕಂಪನಿಗಳು ಶೀಘ್ರವೇ ಸಿಮೆಂಟ್ ಬೆಲೆಯನ್ನು 25-50 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹಣಕಾಸು ಸೇವಾ ಸಂಸ್ಥೆ ಕ್ರಿಸಿಲ್ …
Read More »ಪಕ್ಷದ ಚಟುವಟಿಕೆಯಿಂದ ದೂರವಿದ್ದ ಜಮೀರ್.. ಖಾಸಗಿ ಹೋಟೆಲ್ ನಲ್ಲಿ ಸುರ್ಜೆವಾಲಾ ಭೇಟಿ, ಚರ್ಚೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಚಟುವಟಿಕೆಯಿಂದ ದೂರವೇ ಉಳಿದಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರು ಬುಧವಾರ ರಾತ್ರಿ ದಿಢೀರ್ ಆಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಮುಂದುವರೆದ ಜಮೀರ್ ಅಹ್ಮದ್ ಖಾನ್ ಅಸಮಾಧಾನ ಈ ಭೇಟಿ ಮೂಲಕ ಇನ್ನೊಂದು ಹಂತವನ್ನು ತಲುಪಿದೆ ಎಂಬ ಮಾಹಿತಿ ಇದ್ದು, ತಮ್ಮ ಬೇಸರ, ಅಸಮಾಧಾನ ಹಾಗೂ ಕೋಪವನ್ನು ಸುರ್ಜೇವಾಲಾ ಅವರಿಗೆ ವಿವರಿಸಿದ್ದಾರೆ ಎಂಬ ಮಾಹಿತಿ ಇದೆ. …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ
ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …
Read More »ಮಣಿಪುರದಲ್ಲಿ ಬಿರೆನ್ ಸಿಂಗ್, ಗೋವಾದಲ್ಲಿ ಸಾವಂತ್ ಸಿಎಂ ಆಗಿ ಮುಂದುವರಿಕೆ ಸಾಧ್ಯತೆ
ನವದೆಹಲಿ: ಮಣಿಪುರದಲ್ಲಿ ಎನ್. ಬಿರೆನ್ ಸಿಂಗ್ ಹಾಗೂ ಗೋವಾದಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಹೊಸ ಸರ್ಕಾರ ರಚನೆಯ ಸಂಬಂಧ ಪ್ರಮೋದ್ ಸಾವಂತ್ …
Read More »ಮುಂಬರುವ ದಿನಗಳಲ್ಲಿ ಕಾಂಗ್ರೆಸ್ಗೆ ಇನ್ನೂ ಹೀನಾಯ ಸ್ಥಿತಿ ಬರುತ್ತದೆ: ಗೋವಿಂದ ಕಾರಜೋಳ
ಬಾಗಲಕೋಟೆ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ಗೆ ಇನ್ನೂ ಹೀನಾಯ ಸ್ಥಿತಿ ಬರುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರು ವಿಶೇಷ ಫ್ಲೈಟ್ ಮಾಡಿಕೊಂಡು ಗೋವಾ, ಉತ್ತರಾಖಂಡ್ಗೆ ಹೋಗಿದ್ದರು. ಬಾಡಿಗೆ ಕೊಟ್ಟು ವಾಪಸ್ ಬಂದಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ಇನ್ನೂ ಹೀನಾಯವಾಗುತ್ತದೆ. ಇಲ್ಲವಾದಲ್ಲಿ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ ಎಂದು ಟಾಂಗ್ ನೀಡಿದರು. ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ: ಐದು …
Read More »ಕಳೆದ ಐದು ವರ್ಷಗಳಲ್ಲಿ ವಾಯು ಅಪಘಾತಗಳಲ್ಲಿ 42 ಸೇನಾ ಸಿಬ್ಬಂದಿ ಬಲಿ
ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಮೂರು ಸೇವೆಗಳಲ್ಲಿ ಹೆಲಿಕಾಪ್ಟರ್ಗಳು ಸೇರಿದಂತೆ ವಿಮಾನಗಳ ಅಪಘಾತಗಳಲ್ಲಿ 42 ರಕ್ಷಣಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ರಾಜ್ಯಸಭೆಯಲ್ಲಿ ಮಾಹಿತಿ ಒದಗಿಸಿದೆ. ರಾಜ್ಯಸಭೆಯಲ್ಲಿ ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಹಂಚಿಕೊಂಡ ವಿವರಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಒಟ್ಟು ವಿಮಾನ ಅಪಘಾತಗಳ ಸಂಖ್ಯೆ 45 ಆಗಿದ್ದು, ಐಎಎಫ್ ಗರಿಷ್ಠ 29 ಅವಘಡಗಳನ್ನು ವರದಿ ಮಾಡಿದೆ. ಕಳೆದ ಐದು ವರ್ಷಗಳಲ್ಲಿ ಭಾರತೀಯ …
Read More »10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …
Read More »