ಮೇಷ: ಈ ವಾರವು ನಿಧಾನ ಗತಿಯಲ್ಲಿ ಪ್ರಾರಂಭಗೊಳ್ಳಲಿದ್ದು, ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಗಮನ ನೀಡಬೇಕು. ಇಲ್ಲದಿದ್ದರೆ ನೀವು ಸಮಸ್ಯೆಗೆ ಈಡಾಗಬಹುದು. ನಿಮ್ಮ ವಿರುದ್ಧ ಯಾವುದೇ ಪ್ರಕರಣವು ಬಾಕಿ ಇದ್ದಲ್ಲಿ, ಈ ವಾರದಲ್ಲಿ ನಿರ್ಣಯವು ನಿಮ್ಮ ಪರವಾಗಿ ಬರಲಿದೆ. ಇದರಿಂದ ನಿಮಗೆ ಲಾಭವಾಗಲಿದೆ. ಆರ್ಥಿಕವಾಗಿ ಸಮಯವು ಅನುಕೂಲಕರವೆನಿಸಲಿದೆ. ಸರ್ಕಾರ ಮತ್ತು ಆಡಳಿತಕ್ಕೆ ಸಂಬಂಧಿಸ ಜನರೊಂದಿಗೆ ನೀವು ಪಾಲ್ಗೊಳ್ಳಲಿದ್ದೀರಿ. ಉದ್ಯೋಗದಲ್ಲಿರುವವರಿಗೆ ಇದು ಉತ್ತಮ ಕಾಲ. ನೀವು ಉತ್ತಮ ಸ್ಥಾನದಲ್ಲಿರಲಿದ್ದು ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. …
Read More »ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ರವಿ ಚನ್ನಣ್ಣನವರ್ ವರ್ಗಾವಣೆ
ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಅದ್ಧೂರಿ ಕಿಚಡಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ
ಬಾಗಲಕೋಟೆ: ಕಿಚಡಿ ಜಾತ್ರೆ ಎಂದೇ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಿಮ್ಮಡ ಗ್ರಾಮದ ಪ್ರಭುಲಿಂಗೇಶ್ವರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು ಬಂದಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಕಿಚಡಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಗುರುವಾರ ನಡೆದ ಈ ಜಾತ್ರೆಗೆ ಭಕ್ತ ಸಾಗರ ಸಾಕ್ಷಿಯಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡಿ …
Read More »ಶಕ್ತಿಸೌಧಕ್ಕೆ ತಟ್ಟಿದ ಕರ್ನಾಟಕ ಬಂದ್ ಬಿಸಿ: ಪ್ರತಿಭಟನೆಗೆ ಬೆಂಬಲ ಸೂಚಿಸಿದ 89ರ ವೃದ್ಧ
ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಖ್ಯೆ ವಿರಳವಾಗಿದೆ. ಹೀಗಾಗಿ, ಬಂದ್ ಬಿಸಿ ಶಕ್ತಿಸೌಧಕ್ಕೂ ತಟ್ಟಿದ್ದು, ಸಚಿವಾಲಯದ ಹಲವು ಸಿಬ್ಬಂದಿ ಇಂದು ಕೆಲಸಕ್ಕೆ ಗೈರಾಗಿದ್ದಾರೆ. ವಾರದಲ್ಲಿ ಎರಡನೇ ಬಂದ್ ಇದಾಗಿದ್ದು, ವಿಧಾನಸೌಧದ ಕಾರಿಡಾರ್ಗಳು ಖಾಲಿ ಖಾಲಿ ಇವೆ. ಕರ್ನಾಟಕ ಬಂದ್ ಹಿನ್ನೆಲೆ ಹಲವು ಸಿಬ್ಬಂದಿ ಕೆಲಸಕ್ಕೆ ಆಗಮಿಸಿಲ್ಲ. ನಿನ್ನೆ ಈದ್ ಮಿಲಾದ್ ಇದ್ದ ಕಾರಣ ಸರ್ಕಾರಿ ರಜೆ ಇದ್ದು, ಇಂದು ಬಂದ್ ಇರುವುದರಿಂದ ಸಚಿವಾಲಯದ ಸಿಬ್ಬಂದಿ ಕೆಲಸಕ್ಕೆ …
Read More »ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ದ ವಿಡಂಬನಾತ್ಮಕ ಪೋಸ್ಟರ್ವೊಂದನ್ನು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾ
ಬೆಂಗಳೂರು: ಕಾವೇರಿ ವಿವಾದ ಹಿನ್ನೆಲೆ ಪ್ರಧಾನಿ ಮೋದಿ ನಡೆದುಕೊಂಡು ಹೋಗುತ್ತಿರುವ ಪಯಣದ ದಿಕ್ಕಿನ ವಿಡಂಬನಾತ್ಮಕ ಪೋಸ್ಟರ್ ಪೋಸ್ಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಪ್ರಧಾನಿ ಮೋದಿ ಎಂದೂ ತುಳಿಯದ ಹಾದಿ ಎಂಬ ಶೀರ್ಷಿಕೆಯಡಿ ಚುನಾವಣೆ ಪ್ರಚಾರ ಮತ್ತು ಕಾವೇರಿ ಸಮಸ್ಯೆ ಇತ್ಯರ್ಥ ಎಂಬ ಪಯಣದ ದಿಕ್ಕಿನ ನಾಮಫಲಕ ಬಿಂಬಿಸುವ ಪೋಸ್ಟರ್ ಹಾಕಿದ್ದಾರೆ. ಪ್ರಧಾನಿ …
Read More »ಕಾವೇರಿ’ದ ಬಂದ್: ಸ್ಯಾಂಡಲ್ವುಡ್ ನಟ-ನಟಿಯರಿಂದ ಪ್ರತಿಭಟನೆ.
ಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಕಾವೇರಿಗಾಗಿ ಬೀದಿಗಿಳಿಯಲಿರುವ ಸ್ಯಾಂಡಲ್ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಾಥ್ ನೀಡಿದರು. ಈಗಾಗಲೇ ನಟರಾದ ಶಿವರಾಜ್ ಕುಮಾರ್, ಉಪೇಂದ್ರ, ಶ್ರೀಮುರಳಿ, ದರ್ಶನ್, ಲೂಸ್ ಮಾದ ಯೋಗಿ, ಚಿಕ್ಕಣ್ಣ, ಶ್ರೀನಾಥ್, ಓಂ ಸಾಯಿ ಪ್ರಕಾಶ್, ರಘು ಮುಖರ್ಜಿ, ತಬಲ ನಾಣಿ, ಶ್ರೀಮುರಳಿ ವಿಜಯರಾಘವೇಂದ್ರ, ಶ್ರೀನಿವಾಸ್ ಮೂರ್ತಿ, ನಟಿಯರಾದ …
Read More »ಬುರ್ಖಾ ಧರಿಸಿ, ಖಾಲಿ ಬಿಂದಿಗೆ ಹೊತ್ತು ಪ್ರತಿಭಟನೆಗೆ ಬಂದ ವಾಟಾಳ್ ನಾಗರಾಜ್..
ಬೆಂಗಳೂರು: ಕಾವೇರಿ ನೀರಿಗಾಗಿ ನಡೆಯುತ್ತಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಾಟಾಳ್ ನಾಗರಾಜ್, ಸಾ ರಾ ಗೋವಿಂದು ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂ ಪಾರ್ಕ್ಗೆ ಕರೆದೊಯ್ದಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮುಂದುವರಿಯಲಿದೆ. ಪ್ರತಿಭಟನೆಯಲ್ಲಿ ಭಾಗಿಯಾಗುವ ಮುನ್ನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಬುರ್ಖಾ ಧರಿಸಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಾಟಾಳ್ ನಾಗರಾಜ್, “ಇವತ್ತು ಎರಡು ಬಂದ್ ನಡೆಯುತ್ತಿದೆ. ಒಂದು ಕಾವೇರಿಗಾಗಿ ನಾವು ಕರೆ ಕೊಟ್ಟಿರುವ …
Read More »ವಿಜೃಂಭಣೆಯಿಂದ ಜರುಗಿದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ.
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ 10 ದಿನಗಳ ಕಾಲ ವಿಜೃಂಭಣೆಯಿಂದ ಜರುಗಿದ ಗಣೇಶೋತ್ಸವಕ್ಕೆ ತೆರೆ ಬಿದ್ದಿದೆ. ಗುರುವಾರ ಸಾರ್ವಜನಿಕ ಗಣೇಶ ಮಂಡಳಿಗಳ ಗಣೇಶ ಮೂರ್ತಿಗಳ ನಿಮಜ್ಜನ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ನಗರದ ಕಿರ್ಲೋಸ್ಕರ್ ರಸ್ತೆಯಲ್ಲಿರುವ ಹುತಾತ್ಮ ಚೌಕ್ನಲ್ಲಿ ಮೆರವಣಿಗೆಗೆ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಹಾಗೂ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ಗಣೇಶನಿಗೆ ಪೂಜೆ ಸಲ್ಲಿಸಿ, ಡೊಳ್ಳು ಬಾರಿಸಿ ಚಾಲನೆ ನೀಡಿದರು. ಇದೇ ವೇಳೆ ಗಣೇಶ …
Read More »ಬೆಳಗಾವಿಯಲ್ಲಿ ತಟ್ಟದ ಬಂದ್ ಬಿಸಿ, ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
ಬೆಳಗಾವಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಇಂದು ಕೆಲ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕರವೇ ಶಿವರಾಮೇಗೌಡ ಬಣದಿಂದ ಕೂಡ ಬೆಳ್ಳಂಬೆಳಗ್ಗೆ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಕರವೇ ಜಿಲ್ಲಾಧ್ಯಕ್ಷ ವಾಜೀದ ಹಿರೇಕೂಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. “ನಮ್ಮದು ನಮ್ಮದು ಕಾವೇರಿ ನಮ್ಮದು” ಎಂದು ಘೋಷಣೆ ಕೂಗಿದ ಕರವೇ ಕಾರ್ಯಕರ್ತರ ಪ್ರತಿಭಟನೆಗೆ ರೈತ …
Read More »
Laxmi News 24×7